Author: kannadanewsnow05

ಚಾಮರಾಜನಗರ : ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದಾನೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹೌದು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿಗಳಿಗೆ ರಾತ್ರಿ ವೇಳೆ ಹೊರಬರಲು ಭಯವಾಗುತ್ತಿದೆ. ಒಳಉಡುಪು ಕದ್ದು ಅದನ್ನು ಧರಿಸುವ ಇಂತಹ ಸೈಕೋ ವ್ಯಕ್ತಿಗಳು ಮುಂದೆ ಮತ್ತಷ್ಟು ದೊಡ್ಡ ಅನಾಹುತಗಳನ್ನು ಮಾಡಬಹುದೇ ಎಂಬ ಆತಂಕ ಮನೆಮಾಡಿದೆ. ಆರೋಪಿಯ ವಿಕೃತ ಚಟುವಟಿಕೆಯ ವಿಡಿಯೋ ತುಣುಕುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಈ ದೃಶ್ಯಗಳನ್ನು ನೋಡಿ ಸಾರ್ವಜನಿಕರು ಆತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೂಡಲೇ ಆತನನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಮನೆಯ ಮುಂದೆ ಒಣಗಲು ಹಾಕಿದ್ದ ಒಳಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿರುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದೆ. ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ಚಾಮರಾಜನಗರ ಪೊಲೀಸರು ಸ್ಥಳಕ್ಕೆ ಭೇಟಿ…

Read More

ನವದೆಹಲಿ : ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ ಸರ್ಕಾರದ ವಿದೇಶಾಂಗ ನೀತಿ ಬಗ್ಗೆ ತೀವ್ರ ಟೀಕಿಸಿದ್ದು, ಪಾಕಿಸ್ತಾನವನ್ನು ಜಾಗತಿಕವಾಗಿ ಏಕಾಂಗಿಯಾಗಿಸುವಲ್ಲಿ ಮೋದಿ ವಿಫಲ, ಇದು ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ‘X’ ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಜೈರಾಮ್ ರಮೇಶ್, ‘ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಎರಡು ವಾರಗಳ ಕದನ ವಿರಾಮವನ್ನು ಇಡೀ ಜಗತ್ತು ಸ್ವಾಗತಿಸುತ್ತಿದೆ. ಆದರೆ ಈ ಇಡೀ ಪ್ರಕ್ರಿಯೆಯಲ್ಲಿ ಭಾರತದ ಸ್ಥಾನಮಾನಕ್ಕೆ ಪೆಟ್ಟು ಬಿದ್ದಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿಯವರ ಇಸ್ರೇಲ್ ಭೇಟಿಯ ನಂತರ ನಡೆದ ಹತ್ಯೆಗಳು ಭಾರತದ ಜಾಗತಿಕ ಖ್ಯಾತಿಗೆ ಕಳಂಕ ತಂದಿವೆ ಎಂದು ಅವರು ಆರೋಪಿಸಿದ್ದಾರೆ. ಪಾಕಿಸ್ತಾನವನ್ನು ಜಗತ್ತಿನಿಂದ ಪ್ರತ್ಯೇಕಿಸುವ ಮೋದಿ ಸರ್ಕಾರದ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನ ಇದೀಗ ಎರಡು ಬಲಾಢ್ಯ ದೇಶಗಳ ನಡುವೆ ಶಾಂತಿ ಸಂಧಾನದಲ್ಲಿ ಪಾತ್ರ ವಹಿಸಿರುವುದು ಪ್ರಧಾನಿ ಮೋದಿಯವರ ರಾಜತಾಂತ್ರಿಕತೆಗೆ ಬಿದ್ದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಯುವ ರಂಗಭೂಮಿ ಕಲಾವಿದ ಮುರಳಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಿರುಚಿತ್ರಗಳಲ್ಲಿಯೂ ನಟಿಸಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಈ ಘಟನೆ ಕನ್ನಡ ರಂಗಭೂಮಿ ವಲಯದಲ್ಲಿ ತೀವ್ರ ಆಘಾತ ಉಂಟು ಮಾಡಿದೆ. ಹೌದು ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಯುವ ಕಲಾವಿದ ಮುರಳಿ ಎಂಬಾತ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಸಾರಕ್ಕಿ ಸಮೀಪದ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮುರಳಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಕೆಲ ಕಿರುಚಿತ್ರಗಳಲ್ಲಿ ನಟಿಸುವ ಮೂಲಕವೂ ಗಮನಸೆಳೆದಿದ್ದರು. ಕಲೆಯ ಮೇಲಿನ ಅಪಾರ ಆಸಕ್ತಿ ಹೊಂದಿದ್ದ ಅವರು, ತಮ್ಮ ಅಭಿನಯದ ಮೂಲಕ ಸ್ನೇಹಿತರು ಹಾಗೂ ಸಹ ಕಲಾವಿದರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದರು. ಕಿರಣ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು : ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ ಮಾಹಿತಿ ಇದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಕಡಿಮೆಯಾಗಿ ಕದನ ವಿರಾಮದ ಬೆನ್ನಲ್ಲೆ, ಆಶ್ಚರ್ಯಕರ ಎಂಬಂತೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಸಾಮಾನ್ಯವಾಗಿ ಯುದ್ಧದಂತಹ ಪರಿಸ್ಥಿತಿ ತಿಳಿಯಾದಾಗ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದಿಂದ ಹಣವನ್ನು ಹೊರತೆಗೆದು ಶೇರು ಮಾರುಕಟ್ಟೆಗೆ ಹಾಕುತ್ತಾರೆ, ಇದರಿಂದ ಚಿನ್ನದ ಬೆಲೆ ಇಳಿಯಬೇಕಿತ್ತು. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ: ಏಪ್ರಿಲ್ 8 ರಂದು…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರ ನಡುವೆ ವೈಮನಸ್ಸು ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪವಿತ್ರಾ (19) ನೇಣಿಗೆ ಶರಣಾಗಿದ್ದು, ಆಸ್ಕಿ ಗ್ರಾಮದಲ್ಲಿ ಪ್ರಿಯಕರ ಕಾರ್ತೀಕ ನಾಯಕ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಿಯತಮೆ ಆತ್ಮಹತ್ಯೆ ವಿಚಾರ ತಿಳಿದು ನೇಣಿಗೆ ಶರಣಾದ ಕಾರ್ತೀಕ, ನಿನ್ನೆ ಇಬ್ಬರ ಮಧ್ಯೆಯು ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪವಿತ್ರಾ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯಕರ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕಲಬುರ್ಗಿ : ಇತ್ತೀಚಿಗೆ ತಾನೇ5 ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿಯಲ್ಲಿ ಶರಣಬಸವೇಶ್ವರ ರಥೋತ್ಸವದಲ್ಲಿ ಮಹಿಳೆ ಮೇಲೆ ಚಕ್ರ ಹರಿದು ಕಾಲು ಕಳೆದುಕೊಂಡ ಘಟನೆ ನಡೆದಿತ್ತು. ಇದೀಗ ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ. ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಅದ್ದೂರಿಯಾಗಿ ನಡೆಯುತ್ತಿತ್ತು. ಸಾವಿರಾರು ಭಕ್ತರು ಆಗಮಿಸಿದ್ದರು. ಜಯಘೋಷ ಹಾಕುತ್ತಾ ರಥವನ್ನು ಎಳೆಯುತ್ತಿದ್ದಾಗ ನಡೆದುಹೋಯ್ತು ದುರಂತ. ರಥ ಎಳೆಯುವ ಸಂದರ್ಭದಲ್ಲಿ ಭಕ್ತರ ನೂಕುನುಗ್ಗಲಿನಲ್ಲಿ ಮೃತ ವಿನೋದ ರೆಡ್ಡಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಚಲಿಸುತ್ತಿದ್ದ ರಥದ ಬೃಹತ್ ಚಕ್ರವು ನೇರವಾಗಿ ವಿನೋದ ರೆಡ್ಡಿ ತೊಡೆಯ ಮೇಲಿಂದ ಹರಿದು ಹೋಗಿದೆ. ಚಕ್ರದಡಿ ಸಿಲುಕಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ವಿನೋದ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಹಾಲಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಹಾಲಿ ಶಾಸಕ ಲಕ್ಷ್ಮಣ್ ಸವದಿ ಮರಳಿ ಬಿಜೆಪಿಗೆ ಬರುತ್ತಾರೆ ಎಂಬ ವದಂತಿಗಳ ಬಗ್ಗೆ ನಮ್ಮ ಕಾರ್ಯಕರ್ತರು ತಲೆಕೆಡಿಸಿಕೊಳ್ಳುವುದು ಬೇಡ. ಸದ್ಯ ಹಾಲಿ ಶಾಸಕರು ಕ್ಷೇತ್ರದಲ್ಲಿ ಅಂತದೊಂದು ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದಿದ್ದಾರೆ. ಅಥಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸವದಿ ಕ್ಷೇತ್ರದಲ್ಲಿ ಬಿಜೆಪಿಗೆ ಮರಳಿ ಬರುವ ವಾತಾವರಣ ಸೃಷ್ಟಿ ಮಾಡಿದ್ದಾರೆ. ಯಾರನ್ನೇ ಕೇಳಿದ್ರೂ ಮುಂದೆ ಸವದಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆಂದು ಹೇಳುತ್ತಿದ್ದಾರೆ. ಅಂತಹ ಪ್ರಸಂಗ ಬರುವುದಿಲ್ಲ, ಬರೋದಕ್ಕೆ ನಾವು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಸವದಿ ಬಿಜೆಪಿಗೆ ಬರುವುದಿಲ್ಲ. ಬಂದರೂ ಅವತ್ತು ದೇವರು ಯಾವ ರೀತಿ ಬುದ್ದಿ ಕೊಡುತ್ತಾನೆ. ಆ ರೀತಿ ನಾವು ಪ್ರತಿಕ್ರಿಯೆ ಕೊಡುತ್ತೇವೆ ಎಂದರು. ​ನಮ್ಮ ಕಾರ್ಯಕರ್ತರು ಗಟ್ಟಿಯಾಗಿ ಕೆಲಸ ಮಾಡಬೇಕು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯೇ ಗಂಡನಿಗೆ ಚಾಕು ಇರಿದು ಕೊಲೆ ಮಾಡಿದ್ದಾಳೆ, ಘಟನೆ ಸಂಭಂದ ಹೆಂಡತಿಯ ತಂದೆ, ತಾಯಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ಈ ಕೊಲೆ ನಡೆದಿದ್ದು, ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಹೆಂಡತಿ, ಅತ್ತೆ, ಮಾವನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ವರ್ಷ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಮೃತಪಟ್ಟಿದ್ದರು. ಈ ಒಂದು ಘಟನೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗಾಗಿ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಕ್ರೀಡಾಂಗಣ ಬಹಳ ಚಿಕ್ಕದಿದ್ದು ದೊಡ್ಡದಾಗಿ ನಿರ್ಮಾಣ ಮಾಡುವಂತೆ ಬೇಡಿಕೆ ಇಟ್ಟಿದ್ದರು. ಅದರ ಬೆನ್ನಲ್ಲೆ, ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ಕೆಎಸ್‌ಸಿಎ ಸಿಹಿ ಸುದ್ದಿ ಒಂದನ್ನು ನೀಡಿದೆ. ಹೌದು ನಗರದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಐಪಿಎಲ್‌ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳನ್ನು ಮರಳಿ ತಂದಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಈಗ ಸ್ಟೇಡಿಯಂ ನವೀಕರಣಕ್ಕೆ ಮುಂದಾಗಿದೆ. ಕ್ರೀಡಾಂಗಣದ ಆಸನ ಸಾಮರ್ಥ್ಯವನ್ನು 20000ದಷ್ಟು ಹೆಚ್ಚಿಸಲು ಚಿಂತನೆ ನಡೆಸಿರುವ ಕೆಎಸ್‌ಸಿಎ, ಇದಕ್ಕಾಗಿ ಟೆಂಡರ್‌ನ ಆರಂಭಿಕ ಪ್ರಕ್ರಿಯೆಯನ್ನೂ ಆರಂಭಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವೆಂಕಟೇಶ್‌ ಪ್ರಸಾದ್‌, ‘ನವೀಕರಣ ಕಾರ್ಯ ಪೂರ್ಣಗೊಳಿಸಲು ನಾವು ಯಾವುದೇ ಸಮಯ ನಿಗದಿಪಡಿಸಿಲ್ಲ. ಏಕೆಂದರೆ ಇದು ದೀರ್ಘ ಪ್ರಕ್ರಿಯೆ. ಅನುಮೋದನೆ ಪಡೆಯಲು ನಾವು ಬಿಡ್‌ ಆಹ್ವಾನಿಸಬೇಕು ಮತ್ತು ಹಲವು ಸುತ್ತಿನ ಸಭೆ ನಡೆಸಬೇಕಿದೆ. ಅದಕ್ಕೆ…

Read More

ಬೆಂಗಳೂರು : ನಿನ್ನೆ ಹೆಬ್ಬಗೋಡಿ ಠಾಣೆ ಪೊಲೀಸರು ಕಳೆದ 12 ವರ್ಷಗಳಿಂದ ಬೆಂಗಳೂರಿನಲ್ಲಿ ಇದ್ದು ಟ್ರಕ್ಸ್ ದಂತೆ ಮಾಡುತ್ತಿದ್ದ ನೈಜೀರಿಯಾ ಏನು ಅರೆಸ್ಟ್ ಮಾಡಿದ್ದು 14 ಕೋಟಿಗೂ ಹೆಚ್ಚು ಡ್ರಗ್ಸ್ ಅನ್ನು ಜತ್ತಿ ಮಾಡಿದರು ಇದೀಗ ಬೆಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, 2 ಪ್ರತ್ಯೇಕ ಕೇಸ್ ಗಳಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿತ್ತು. ಇದರ ಮಾರುಕಟ್ಟೆ ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು. ಆರೋಪಿಯನ್ನು ತಕ್ಷಣವೇ ವಶಕ್ಕೆ ಪಡೆದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇನ್ನೊಂದು ಪ್ರಕರಣದಲ್ಲಿ, ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಮಾದಕ ವಸ್ತುವಾದ ಚರಸ್/ಹಶೀಶ್ ಸಾಗಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ವೇಳೆ ಸುಮಾರು 1.7…

Read More