Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿ ನಡೆಯುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ ನನ್ನ ಮನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನು ಕರೆಯುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಅಗತ್ಯ ಬಿದ್ರೆ ನಮ್ಮ ಮನೆಗೂ ಬ್ರೇಕ್ಫಾಸ್ಟ್ ಗೆ ಕರೆಯುತ್ತೇನೆ. ಇಬ್ಬರನ್ನು ನನ್ನ ಮನೆಗೆ ಬ್ರೇಕ್ ಫಾಸ್ಟ್ ಗೆ ಯಾಕೆ ಕರೆಯಬಾರದು? ಪಕ್ಷದಲ್ಲಿ ಸದ್ಯ ಎಲ್ಲವೂ ತಿಳಿಯದೆ ಖುಷಿಯ ವಾತಾವರಣ ಇದೆ. 2ನೇ ಬಾರಿಯೂ ನನ್ನ ಕರೆದಿಲ್ಲ. ಬ್ರೇಕ್ ಫಾಸ್ಟ್ ಗೆ ನನ್ನ ಕರೆದಿದ್ದರೆ ಹೋಗುತ್ತಿದ್ದೆ ಎಂದು ತಿಳಿಸಿದರು. ಗೃಹ ಸಚಿವ ಜಿ.ಪರಮೇಶ್ವರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಮುಡಿ ವಿಚಾರವಾಗಿ ಎಲ್ಲ ನಾಯಕರ ಅಭಿಮಾನಿಗಳಿಗೆ ಸಿಎಂ ಆಗಲಿ ಅಂತ ಆಸೆ ಇರುತ್ತದೆ ತಮ್ಮ ನಾಯಕರು ಮುಖ್ಯಮಂತ್ರಿ ಆಗಲಿ ಅಂತ…
ನವದೆಹಲಿ : 2025-26ನೇ ಆರ್ಥಿಕ ವರ್ಷದ ಮೊದಲ 6 ತಿಂಗಳಲ್ಲಿ (ಏಪ್ರಿಲ್-ಸೆಪ್ಟೆಂಬರ್) ಭಾರತ ಹಾಗೂ ದೇಶದ ಯಾವ ರಾಜ್ಯಗಳಲ್ಲಿ ಎಷ್ಟು ವಿದೇಶಿ ನೇರ ಬಂಡವಾಳ (ಎಫ್ಡಿಐ) ಹರಿದು ಬಂದಿದೆ ಎಂಬ ಅಂಕಿ-ಅಂಶ ವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ದೇಶದಲ್ಲೇ ಕರ್ನಾಟಕ 2ನೇ ಸ್ಥಾನ ಪಡೆದಿದೆ. ರಾಜ್ಯಗಳ ಪೈಕಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು (95 ಸಾವಿರ ಕೋಟಿ ರು.) ಹೂಡಿಕೆ ಹರಿದುಬಂದಿದ್ದರೆ, 84.2 ಸಾವಿರ ಕೋಟಿ ರು. ಹೂಡಿಕೆ ಪಡೆಯುವ ಮೂಲಕ ಕರ್ನಾಟಕ 2ನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿರುವ ತಮಿಳುನಾಡು 32 ಸಾವಿರ ಕೋಟಿ ರು., ಹರ್ಯಾಣ 28.8 ಸಾವಿರ ಕೋಟಿ ರು., ದೆಹಲಿ 20.6 ಸಾವಿರ ಕೋಟಿ ರು., ಗುಜರಾತ್ 20 ಸಾವಿರ ಕೋಟಿ ರು. ಹಾಗೂ ತೆಲಂಗಾಣಕ್ಕೆ 10 ಸಾವಿರ ಕೋಟಿ ರು. ಹೂಡಿಕೆ ಆಕರ್ಷಿಸಿವೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು. ಇದೀಗ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರ ಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನೆಗೆ ಬರುವುದಾಗಿ ತಿಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ…
ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು. ಮತದ ಬಳಿಕ ಎಂದು ಬೆಂಗಳೂರಿನ ಸದಾಶಿವನಗರ್ದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು…
ಬೆಂಗಳೂರು : ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇಂದಿರಾ ಕಿಟ್ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ? ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಅಂದಾಜಿಸಲಾಗಿದೆ. ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ…
ಪರಿಚಯ: ವೈದಿಕ ಜ್ಯೋತಿಷದಲ್ಲಿ “#ಪಿತೃ #ದೋಷ” ಒಂದು ಅತ್ಯಂತ ಮಹತ್ವದ ಮತ್ತು ವ್ಯಾಪಕವಾಗಿ ಚರ್ಚಿತವಾದ ಪರಿಕಲ್ಪನೆಯಾಗಿದೆ. ಇದು ಕೇವಲ ಜ್ಯೋತಿಷ್ಯ ಯೋಗವಲ್ಲ, ಬದಲಿಗೆ ವೈದಿಕ ಸಂಸ್ಕೃತಿಯಲ್ಲಿ ವರ್ಣಿಸಲಾದ ಪಿತೃಗಳು, ಶ್ರಾದ್ಧ-ತರ್ಪಣ, ಋಣ-ತ್ರಯ (ದೇವ-ಋಷಿ-ಪಿತೃ) ಮತ್ತು ಕರ್ಮಬಂಧನದ ವಿಶಾಲ ದಾರ್ಶನಿಕ ಹಿನ್ನೆಲೆಯೊಂದಿಗೆ ಸಂಬಂಧ ಹೊಂದಿರುವ ಸಿದ್ಧಾಂತವಾಗಿದೆ. ಜನ್ಮಕುಂಡಲಿಯಲ್ಲಿ ನಿರ್ದಿಷ್ಟ ಗ್ರಹ ಸ್ಥಿತಿಗಳು, ವಿಶೇಷವಾಗಿ ಸೂರ್ಯ, ರಾಹು, ಶನಿ ಮತ್ತು ಹನ್ನೆರಡನೇ, ಒಂಬತ್ತನೇ, ಐದನೇ ಭಾವಗಳ ಸ್ಥಿತಿಗಳು ಪಿತೃ ದೋಷದ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳಲ್ಲಿ ಹೇಳಲಾಗಿದೆ, ಪಿತೃಗಳು ತೃಪ್ತರಾದರೆ ವಂಶದಲ್ಲಿ ಸಮೃದ್ಧಿ ಬರುತ್ತದೆ, ಮತ್ತು ಅಪ್ರಸನ್ನರಾದರೆ ವಂಶ-ರಕ್ಷಣೆ, ಸಂತಾನ-ಲಾಭ ಮತ್ತು ಪುರುಷಾರ್ಥಗಳಲ್ಲಿ ಅಡಚಣೆಗಳು ಉದ್ಭವಿಸುತ್ತವೆ. “ಪಿತೃಣಾಂ ತೃಪ್ತಿರಸ್ಯ ಲೋಕಸ್ಯ ಸ್ಥಿರತಾ” — (ಗೃಹ್ಯಸೂತ್ರ) ಅರ್ಥಾತ್, ಪಿತೃಗಳ ತೃಪ್ತಿಯಿಂದಲೇ ಕುಲದ ಸ್ಥಿರತೆ ಸಾಧ್ಯ. ಈ ಲೇಖನದಲ್ಲಿ ಪಿತೃ ದೋಷದ ಶಾಸ್ತ್ರೀಯ ವ್ಯಾಖ್ಯಾನ, ಕುಂಡಲಿ ಆಧಾರಿತ ಕಾರಣಗಳು, ಕರ್ಮ-ಹಿನ್ನೆಲೆ, ಪುರಾಣಗಳಲ್ಲಿ ನೀಡಲಾದ ಪುರಾವೆಗಳು ಮತ್ತು ಜ್ಯೋತಿಷ್ಯ ಪರಿಹಾರಗಳನ್ನು ವಿವರವಾಗಿ ವಿಶ್ಲೇಷಿಸಲಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ…
ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪಸಿದ್ದು, ನುಗ್ಗೆಕಾಯಿ ಕೆಜಿಗೆ 500-600 ರೂ.ಗೆ ಮಾರಾಟವಾಗುತ್ತಿದೆ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಯಾವ ತರಕಾರಿ ಬೆಲೆ ಎಷ್ಟು ಏರಿಕೆ ಹಸಿರು ಬಟಾಣಿ ಪ್ರತಿ ಕೆಜಿಗೆ 250 ರೂ. ಬೀನ್ಸ್ 60-80 ರೂ. ತೊಂಡೆಕಾಯಿ 80-100 ರೂ. ತೊಗರಿಕಾಯಿ 60-70 ರೂ. ಕ್ಯಾರೆಟ್ 60-80 ರೂ. ಬೀಟ್ರೂಟ್ 60-70 ರೂ. ಕ್ಯಾಪ್ಸಿಕಮ್ 50-60 ರೂ.…
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡುಯೂರಪ್ಪನವರಿಗೆ ಹೊಸ ಸಂಕಷ್ಟ ಎದುರಾಗಿದೆ. ಡಿಸೆಂಬರ್ 2ರಂದು ಅಂದರೆ ಇಂದು ಖುದ್ದು ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್ನ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಎಸ್ಪಿಪಿ ಅಶೋಕ್ ನಾಯ್ಕ್ ಅವರು ಅರ್ಜಿ ಸಲ್ಲಿಸಿದ್ದರು. ಅದರಂತೆ ಬಿಎಸ್ ಯಡಿಯೂರಪ್ಪನವರ ಜೊತೆಗೆ ಇತರೆ ಮೂವರು ಆರೋಪಿಗಳಾದ ವೈ.ಎಂ. ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ. ಪೋಕ್ಸೋ ಕೇಸ್ ಹಿನ್ನೆಲೆ ಸಮನ್ಸ್ ರದ್ದು ಕೋರಿದ್ದ ಬಿ.ಎಸ್ ಯಡಿಯೂರಪ್ಪ ಅರ್ಜಿ ಹೈಕೋರ್ಟ್ ನಿಂದ ವಜಾ ಹಿನ್ನೆಲೆ ಇಂದು ಕೋರ್ಟ್ ಗೆ ಯಡಿಯೂರಪ್ಪ ಖುದ್ದು ಹಾಜರಾಗಬೇಕಾಗಿದೆ. 1ನೇ ತ್ವರಿತ ಕೋರ್ಟ್ ಸಮನ್ಸ್ ಜಾರಿಗೋಳಿಸಿತ್ತು. ವೈ.ಎಂ ಅರುಣ್, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿಗೂ ಸಮನ್ಸ್ ನೀಡಲಾಗಿತ್ತು. ಹಾಗಾಗಿ ಇಂದು ಯಡಿಯೂರಪ್ಪ ಸೇರಿ ಇವರೆಲ್ಲರೂ ಕೋರ್ಟ್ ಗೆ ಹಾಜರಾಗಬೇಕು. ಏನಿದು ಪ್ರಕರಣ? 2024ರಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ…
ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಪ್ರಸಿದ್ಧ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಹಿನ್ನೆಲೆಯಲ್ಲಿ, ಸಂಪೂರ್ಣ ಹಿಂದೂ ಪೀಠಕ್ಕೆ ಆಗ್ರಹಿಸಿ ದತ್ತ ಜಯಂತಿ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರು ಜಿಲ್ಲೆಯಾದಂತ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಜನತಾ ಈಗಾಗಲೇ 28 ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಮಾಡಲಾಗಿದೆ ಜಿಲ್ಲೆಗೆ ಪ್ರವೇಶಿಸುವ ಪ್ರತಿಯೊಂದು ವಾಹನಗಳ ತಪಾಸಣೆ ನಡೆಯಲಿದೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬದ್ಧತೆ ನಿಯೋಜನೆಗೊಳಿಸಲಾಗಿದೆ. ಕೊಟ್ಟಿಗೆಹಾರ ಬಳಿ ಸುಮಾರು 20ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜಿಸಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಹಾರದಲ್ಲಿ ಭದ್ರತೆ ನಿಯೋಜಿಸಲಾಗಿದೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿ ನಡೆಯುತ್ತಿರುವಾಗಲೇ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದ ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಿದ್ದರು.ಇದೀಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಮನೆಗೆ ಬ್ರೇಕ್ ಫಾಸ್ಟ್ ಗೆ ಇಂದು ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಡಿಸಿಎಂ ಹಾಗೂ ಸಿಎಂ ಇಬ್ಬರು ಒಟ್ಟಿಗೆ ಉಪಹಾರ ಮಾಡಿ ತಮ್ಮ ಮಧ್ಯ ಭಿನ್ನಾಭಿಪ್ರಾಯ ಇಲ್ಲ. ತಾವು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ತಿಳಿಸಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದರು. ಅದರ ಬೆನ್ನಲ್ಲೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಮನೆಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ…














