Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಆತನಿಗೆ ಆನ್ಲೈನ್ ಗೇಮ್ ಆಡೋ ಚಟ. ಹಾಗಾಗಿ ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ, ಆದರೆ ಮಾಡಿದ ತೀರಿಸಲು ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿ, ದೋಚಿದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದ ಒಂಟಿ ವೃದ್ಧೆ ಕಮಲಮ್ಮ (64) ಅವರ ಮನೆಗೆ ಫೆಬ್ರವರಿ 2ರ ರಾತ್ರಿ ಆರೋಪಿ ಅಭಿಷೇಕ (23) ನುಗ್ಗಿದ್ದ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿಯಾದ ಅಭಿಷೇಕ ಎಂದು ತಿಳಿದುಬಂದಿದೆ. ತಡರಾತ್ರಿ ಕಮಲಮ್ಮ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿ, ಸುಮಾರು 8.44 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಅಭಿಷೇಕ ಆನ್ಲೈನ್ ಗೇಮ್ಗಳಲ್ಲಿ ಅತಿಯಾಗಿ ಮುಳುಗಿ 20 ರಿಂದ 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲಗಾರರ ಒತ್ತಡದಿಂದ ಮನೆ ಬಿಟ್ಟು ಓಡಾಡುತ್ತಿದ್ದ ಅವನು, ರಾತ್ರಿ ವೇಳೆ ಬಸ್ ನಿಲ್ದಾಣಗಳಲ್ಲಿ ವಾಸಿಸುತ್ತಿದ್ದ. ಹಬ್ಬದ ಸಂದರ್ಭದಲ್ಲಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಜಗಳ ಬಿಡಿಸಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಒಬ್ಬನನ್ನು ನಾಲ್ವರು ಆತನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮಾಹಿತಿ ನೀಡಿದ್ದಾರೆ. ಮೃತ ಸಂಕೇತ್ ಕುಟುಂಬಸ್ಥರ…
ಬೆಂಗಳೂರು : ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರ ರೋಗಿಗಳ (OPD) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರಿ ವೈದ್ಯಾಧಿ ಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಅವರು, ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆ ಗಳನ್ನು ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ದಿಷ್ಟಾವ ಧಿವರೆಗೆ ಗೈರಾಗುವ ಮೂಲಕ ಮುಷ್ಕರ ಮುಂದುವರೆಸುತ್ತೇವೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿದ್ದು ಸಮರ್ಪ ಕವಾಗಿ ಔಷಧ ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ಸರ್ಕಾರಿ ಆದೇಶ ಉಲ್ಲಂಘಿಸಿ 1973ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು…
ಬೆಂಗಳೂರು : ಬೆಂಗಳೂರು ನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯುವ ತರಕಾರಿಗಳಲ್ಲಿ ಅಪಾಯಕಾರಿ ಭಾರಿ ಲೋಹವಾಗಿರುವ ಸೀಸದ ಅಂಶ ಮತ್ತು ಕ್ರಿಮಿನಾಶಕಗಳ ಆವಶೇಷಗಳು ಕಂಡು ಬಂದಿದ್ದು, ಇವುಗಳನ್ನು ಸೇವಿಸಿದರೆ ಕಿಡ್ನಿ ಹಾಗೂ ಮಿದುಳು ಕಾಯಿಲೆ ಬರಲಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ನಗರದ ಅನೇಕ ತರಕಾರಿಗಳಲ್ಲಿ ಅಪಾಯಕಾರಿ ಅಂಶಗಳಿರುವ ಬಗ್ಗೆ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಸ್ವಯಂ ಪ್ರೇರಿತ ಪ್ರಕರಣ ಪ್ರಕರಣ ದಾಖಲಿಸಿಕೊಂಡಿತ್ತು. ದಾ ಎನ್ ಜಿಟಿ ನಿರ್ದೇಶನದಂತೆ ತರಕಾರಿಗಳ ಪರೀಕ್ಷೆ ನಡೆಸಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಐವರು ಸದಸ್ಯರ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯ ಸದಸ್ಯರು ಬೆಂಗಳೂರು ನಗರ, ನೆಲಮಂಗಲ, ಚಿಕ್ಕಬಳ್ಳಾಪುರದ ವಿವಿಧ ಎಪಿಎಂಸಿಗಳು, ಹಾಪ್ ಕಾಮ್ಸ್ಗಳು, ತರಕಾರಿ ಬೆಳೆಯುವ ಪ್ರದೇಶಗಳಿಂದ 72 ಮಾದರಿಯ ತರಕಾರಿಗಳನ್ನು ಪರೀಕ್ಷೆಯ ಭಾಗವಾಗಿ ಹೊಲಗಳಲ್ಲಿನ ಮಣ್ಣು ಮತ್ತು ಬೆಳೆಗಳಿಗೆ ಬಳಸುವ ಸಂಸ್ಕರಿಸಿದ ನೀರು, ಅಂತರ್ಜಲ ಕೂಡ ಸಂಗ್ರಹಿಸಿ ಎಫ್ಎಸ್ಎಸ್ಎಐ ಅನುಮೋದಿತ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ತರಕಾರಿಗಳನ್ನು ಸಂಗ್ರಹಿಸಿದರು.…
ಕೊಪ್ಪಳ : ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಐತಿಹಾಸಿಕ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಫೆಬ್ರವರಿ 24ರ ಸೋಮವಾರದಂದು ಕೊಪ್ಪಳ ಮತ್ತು ಭಾಗ್ಯನಗರ ಸೇರಿದಂತೆ ಜಿಲ್ಲಾದ್ಯಂತ ‘ಸ್ವಯಂಪ್ರೇರಿತ ಬಂದ್’ಗೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಕೇಂದ್ರದ ಎಲ್ಲಾ ಖಾಸಗಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ತಿಳಿಸಿದೆ. ಅಲ್ಲದೆ, ಕೊಪ್ಪಳ ವಿಶ್ವವಿದ್ಯಾಲಯವು ನಾಳೆ ನಡೆಯಬೇಕಿದ್ದ ಸ್ನಾತಕೋತ್ತರ (PG) ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ಮುಂದೂಡಲ್ಪಟ್ಟ ಪರೀಕ್ಷೆಗಳ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆ ಸಂಪೂರ್ಣ ಬಂದ್…
ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಿಲ್ಲೆಯ ಲಿಂಗಸುಗೂರು ತಾಲೂಕಿನ ಖೈರವಾಡಗಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದು, ಇಂದು ಯುವಕನ ಶವ ಪತ್ತೆಯಾಗಿದೆ. ಖೈರವಾಡಗಿ ಗ್ರಾಮದ ಪರಶುರಾಮ ಗುಂಡಪ್ಪ ಅಕ್ಕಿ (22) ಮೃತ ಯುವಕ. ಈತ ಸ್ನೇಹಿತರೊಂದಿಗೆ ಈಜಲು ಹೋಗಿ ದಡಕ್ಕೆ ಬಾರದೇ ನಾಪತ್ತೆಯಾಗಿದ್ದರು. ಇದರಿಂದ ಆತಂಕಗೊಂಡ ಗೆಳೆಯರು ಪೊಲೀಸರಿಗೆ ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದರು. ನಿರಂತರ ಶೋಧ ಕಾರ್ಯ ಕೈಗೊಂಡ ಹಿನ್ನೆಲೆ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬೆಟ್ಟಿಂಗ್ ಮತ್ತು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಸಿ ವೀರೇಂದ್ರ ಪಪ್ಪಿ ಸಹಚರರ ವಿರುದ್ಧ ED ಇಂದ ಇದೀಗ ಹೆಚ್ಚುವರಿ ದೂರು ಸಲ್ಲಿಸಲಾಗಿದೆ. ಚಿತ್ರದುರ್ಗ ಶಾಸಕ ಕೆಎಸಿ ವೀರೇಂದ್ರ ಪಪ್ಪಿ ಜೊತೆ ಅಕ್ರಮದಲ್ಲಿ ಶಾಮೀಲು ಆಗಿರುವ ಆರೋಪ ಕೇಳಿ ಬಂದಿದ್ದು, ಅಕ್ರಮದಲ್ಲಿ ಶಾಮಿಲು ಆದ ಆರೋಪದ ಅಡೆ ಇಡೀ ಹೆಚ್ಚುವರಿ ದೂರು ಸಲ್ಲಿಸಲಾಗಿದೆ. ಫೋನ್ ಪೈಸಾ ಪೇಮೆಂಟ್ ಸಲ್ಯೂಷನ್ ಪ್ರೈವೇಟ್, ಲಿಮಿಟೆಡ್ ಲಾಜಿಕ್ ಫೋರರ್ಜ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ಪೃಥ್ವಿ ಎನ್ ರಾಜ್, ಕೆ.ಸಿ ತಿಪ್ಪೇಸ್ವಾಮಿ ಮತ್ತಿತರರ ವಿರುದ್ಧ ಇಡೀ ದೂರು ಸಲ್ಲಿಸಿದೆ. ಕಿಂಗ್ 567, ಪ್ಲೇ 567, ಪ್ಲೇವಿನ್ 567 ಬೆಟ್ಟಿಂಗ್ ತಾಣಗಳ ಮೂಲಕ ಹೂಡಿಕೆ ಮಾಡಿದ್ದರು. ವ್ಯವಸ್ಥಿತವಾಗಿ ವಂಚನೆ ಮಾಡಿರುವ ಆರೋಪದ ಅಡಿ ದೂರು ದಾಖಲಾಗಿದೆ. 2025 ಆಗಸ್ಟ್ ರಲ್ಲಿ ವೀರೇಂದ್ರ ಪಪ್ಪಿ ಮನೆ ಸೇರಿ ಹಲವಡೆ ಇಡಿ ದಾಳಿ ಮಾಡಿತ್ತು.ಈ ವೇಳೆ ಕೋಟ್ಯಂತರ ನಗದು ಚಿನ್ನದ ಬಿಸ್ಕತ್ತು ಮತ್ತು ಐಷಾರಾಮಿ…
ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಅವರು ಇದೀಗ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾ ಸ್ವಾಮಿ ಧರಿಸಿದ್ದ ಚೈನ್ ಮತ್ತು ಉಂಗುರದ ಕಸ್ಟಡಿ ನೀಡಲು ಮನವಿ ಮಾಡಿದ್ದಾರೆ. ಒಡವೆ ರೇಣುಕಸ್ವಾಮಿ ತಾಯಿಕ ಕಸ್ಟಡಿಗೆ ನೀಡಲು ಕೋರ್ಟ್ ಒಪ್ಪಿಗೆ ನೀಡಿದ್ದು, ಕೆಲ ಷರತ್ತುಗಳನ್ನ ವಿಧಿಸಿ ಬೆಂಗಳೂರಿನ 57ನೇ ಸಿಸಿ ಹೆಚ್ಚು ಕೋರ್ಟ್ ಒಪ್ಪಿಗೆ ನೀಡಿದೆ. 2 ಲಕ್ಷದ ಬಾಂಡ್ ನೀಡಬೇಕು ಕೇಳಿದಾಗ ಹಾಜರುಪಡಿಸಬೇಕು. ಒಡವೆಯ ಸ್ವರೂಪ ಬದಲಿಸಬಾರದು, ಮಾರಾಟ ಮಾಡದಂತೆ ಷರತ್ತು ವಿಧಿಸಿದೆ. ಇನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಕ್ಕಾಗಿ A3 ಪವನ್ ಅರ್ಜಿ ಸಲ್ಲಿಸಿದ್ದು, ಆರೋಪಿಗಳ ಮೊಬೈಲ್ ಮಾಡಿದ ಸ್ಥಳದ ಬಗ್ಗೆ A3 ವಕೀಲರು ತಕರಾರು ತೆಗೆದಿದ್ದಾರೆ. A3 ಪರ ವಕೀಲರು ಠಾಣೆಗೆ ತೆರಳಿ ಪರಿಶೀಲನೆಗೆ ಕೋರ್ಟ್ ಅನುಮತಿ ನೀಡಿದೆ. ಇಂದಿನ ಸಿಸಿಟಿವಿ ದೃಶ್ಯ ಕಾಯ್ದು ಕಾಮಾಕ್ಷಿಪಾಳ್ಯ ಠಾಣೆಗೆ ಸೂಚನೆ ನೀಡಲಾಗಿದೆ.
ವಿಜಯಪುರ : ವಿಜಯಪುರ ನಗರ ಸೇರಿದಂತೆ ಹಲವಡೆ ಇಂದು ಅಕಾಲಿಕ ಮಳೆ ಆಯಿತು. ಕಳೆದ ಅರ್ಧ ಗಂಟೆಯಿಂದ ಅಕಾಲಿಕ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲೂ ಸ್ಥಗಿತವಾಗಿದೆ. ಒಂದು ಕಡೆ ಮಳೆಯಲ್ಲಿಯೇ ದ್ವಿಚಕ್ರ ವಾಹನ ಓಡಿಸಿ ಸವಾರರು ಖುಷಿ ಪಟ್ಟರು. ಆದರೆ ಮತ್ತೊಂದು ಕಡೆ ದ್ರಾಕ್ಷಿ ಬೆಳೆಗಾರರಲ್ಲಿ ಈ ಒಂದು ಅಕಾಲಿಕ ಮಳೆ ಆತಂಕ ಮೂಡಿಸಿದೆ. ಬಿರುಸಾದ ಮಳೆಯಿಂದ ದ್ರಾಕ್ಷಿ ಬೆಳೆ ಹಾಳಾಗುವ ಸಾಧ್ಯತೆ ಇದೆ. ಕಠಾವಿಗೆ ಬಂದಿದ್ದ ಹಿಂಗಾರು ಬೆಳೆ ಹಾನಿಯಾಗುವ ಆತಂಕ ಇದೆ.
ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು 5 ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ಕೊಡಿ ಎಂದು ಪತ್ರ ಬರೆದಿದ್ದಾರೆ. ಇದೆ ವೇಳೆ ನನಗೆ ಸಿಎಂ ಆಗುವ ಆಸೆ ಇಲ್ಲ. ಸಚಿವ ಸ್ಥಾನ ಕೊಡಿ ಸಾಕು ಎಂದು ಶಾಸಕ ಬೀಳೋರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಿಸುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ. ಸಿಎಂ ಆಗೋ ಅಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಕರ್ನಾಟಕ ರಾಜ್ಯದಲ್ಲಿ ಕೆಲವು ಹಿರಿಯ ನಾಯಕರು ಇದ್ದಾರೆ. ಕೆಲವರನ್ನು ಬದಲಾಯಿಸಿ ಯುವಕರಿಗೆ ಅವಕಾಶ ಕೊಡಬೇಕು. ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ. ನಮಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವುದು ಬೇಡ. ಹೈಕಮಾಂಡ್ ನಾಯಕರು ಏನಾದರೂ ಒಂದು ನಿರ್ಧಾರ ತೆಗೆದುಕೊಳ್ಳಬೇಕು. ನಾನು ಮೂರು ಬಾರಿ ಗೆದ್ದಿದ್ದೇನೆ ನಮಗೂ ಕೇಳುವ ಹಕ್ಕಿದೆ.…














