Author: kannadanewsnow05

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಹಾಸನದಲ್ಲಿ ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ ಬಳಿಕ ಕೊಲೆ ಮಾಡಿದ ನಂತರ ಶವದ ಎದುರು ಸೆಲ್ಫಿ ವಿಡಿಯೋ ಮಾಡಿ ನಾವು ಕೊಲೆ ಮಾಡಿದ್ದೇವೆ ಎಂದು ವಿಡಿಯೋ ಹರಿ ಬಿಟ್ಟಿದ್ದಾರೆ. ಹಾಸನದಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು ನೋಡಿ ನಾವು ಇವನನ್ನು ಮರ್ಡರ್ ಮಾಡಿದ್ದೇವೆ. ನಾವೇ ಹೊಡೆದು ಕೊಂಡಿದ್ದೇವೆ ಎಂದು ಯುವಕನ ಶವ ತೋರಿಸಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂತಕರು ಅಪ್ಲೋಡ್ ಮಾಡಿದ್ದಾರೆ. ಸದ್ಯಕ್ಕೆ ಪೊಲೀಸರು ವಿಡಿಯೋ ಆದರಿಸಿ ಶವಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಹಾಸನದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಇಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಬೆಟ್ಟಿಂಗ್ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಸಿಎಂ ಸ್ಥಾನದ ಬಗ್ಗೆ ಬೆಟ್ಟಿಂಗ್ ನಡಿತಿದೆ ಎಂದು ವ್ಯಂಗ್ಯವಾಡಿದರು. ಅಧಿವೇಶನದಲ್ಲಿ ಬೆಟ್ಟಿಂಗ್ ಚರ್ಚೆಯ ವೇಳೆ ಬಿಜೆಪಿ ಶಾಸಕ ಸುನಿಲ್ ಕುಮಾರ್ ಮಾತನಾಡಿ ಮುಂದಿನ ಸಿಎಂ ಯಾರು ಎಂಬ ಬೆಟ್ಟಿಂಗ್ ಜೋರಾಗಿದೆ ರಾಜ್ಯದಲ್ಲಿ ಸಿಎಂ ಸ್ಥಾನದ ಬಗ್ಗೆ ಬೆಟ್ಟಿಂಗ್ ನಡೆಯುತ್ತಿದೆ. ಆನ್ಲೈನ್ ಬೆಟ್ಟಿಂಗ್ ಬಗ್ಗೆ ಮಂಜುನಾಥ್ ಪ್ರಸ್ತಾಪಿಸಿದರು. ಈ ವೇಳೆ ಸುನಿಲ್ ಕುಮಾರ್ ಮಧ್ಯಪ್ರವೇಶಿಸಿ ಇತ್ತೀಚಿಗೆ ಮುಂದಿನ ತಿಂಗಳು ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಬೆಟ್ಟಿಂಗ್ ಕೂಡ ಜೋರಾಗಿದೆ ಇದರ ಬಗ್ಗೆ ಸರ್ಕಾರ ಏನಾದ್ರೂ ಕ್ರಮ ತೆಗೆದುಕೊಂಡಿದೆಯಾ ಅಂತ ವ್ಯಂಗ್ಯವಾಡಿದರು.

Read More

ಬೆಳಗಾವಿ : ಸದ್ಯಕ್ಕೆ ರಾಜಕಾರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಸಿದ್ದರಾಮಯ್ಯರ 5 ವರ್ಷ ಸಿಎಂ ಎನ್ನುವ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಇದರ ಮಧ್ಯ ಸಚಿವ ಭೈರತಿ ಸುರೇಶ್ ‘King is Alive’ ಸಿಎಂ ಸಿದ್ದರಾಮಯ್ಯನವರೇ ನಮ್ಮ ನಾಯಕ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್, ಮುಂದಿನ ನಾಯಕತ್ವದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಮುಂದಿನ ನಾಯಕತ್ವದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧರಿಸುತ್ತಾರೆ ಇಲ್ಲದಿದ್ದರೆ ಹೈಕಮಾಂಡ್ ಈ ವಿಚಾರವಾಗಿ ತೀರ್ಮಾನ ಮಾಡುತ್ತದೆ ಎಂದು ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಮುಂದಿನ ನಾಯಕನ ಕುರಿತು ಯಾವುದೇ ಚರ್ಚೆ ಇಲ್ಲ ಸಿದ್ದರಾಮಯ್ಯ ನಮ್ಮ ಲೀಡರ್ ಅವರೇ ಮುಂದೆ ಯಾರು ನಾಯಕರು ಆಗುತ್ತಾರೆ ಎನ್ನುವುದು ತೀರ್ಮಾನ ಮಾಡುತ್ತಾರೆ ಅಥವಾ ಹೈಕಮಾಂಡ್ ಮುಂದಿನ ನಾಯಕ ಯಾರು ಎಂದು ತೀರ್ಮಾನ ಮಾಡುತ್ತಾರೆ. ಎಲ್ಲರೂ ಅವರವರ ಅಭಿಪ್ರಾಯ ಹೇಳಬಹುದು. ಹೈಕಮಾಂಡ್ ಯಾರೇ ನಾಯಕ ಮಾಡಿದರು…

Read More

ಬೆಂಗಳೂರು : ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್ ಗಳಿಗೆ ಸಮಸ್ಯೆ ಆಗಿದೆ ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದರು. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿದೆಯ? ಎಂದು ಜಡ್ಜ್ ಪ್ರಶ್ನಿಸಿದರು. ಈ ವೇಳೆ ಅಸೋಸಿಯೇಷನ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದರು. ಬಳಿಕ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಿತು. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ ಎಂದು ಇದೆ ವೇಳೆ ಹೈಕೋರ್ಟ್ ಏಕ ಸದಸ್ಯ…

Read More

ಮಂಗಳೂರು : ನಟ ರಿಶಬ್ ಶೆಟ್ಟಿ ಹರಕೆಯ ಕೋಲ ಇದೀಗ ವಿವಾದಕ್ಕೆ ಕಾರಣವಾಗಿದೆ. ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ ಅದು ದೈವವಲ್ಲ ಬದಲಾಗಿ ನರ್ತಕ ಎಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು ಕಾಂತಾರ ಚಾಪ್ಟರ್ 1 ಚಲನಚಿತ್ರ ಯಶಸ್ವಿಯಾದ ಹಿನ್ನೆಲೆ ಹರಕೆ ತೀರಿಸಲು ರಿಷಬ್ ಶೆಟ್ಟಿ ತೆರಳಿದಾಗ, ದೈವ ರಿಷಬ್ ಶೆಟ್ಟಿ ಅವರ ತೊಡೆಯ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿತ್ತು. ಡಿಸೆಂಬರ್ 4ರಂದು ಮಂಗಳೂರಿನ ಬಂಟ ದೇವಸ್ಥಾನದಲ್ಲಿ ಹರಕೆ ಕೋಲ ನಡೆದಿತ್ತು. ಕೋಲದ ವೇಳೆ ರಿಷಬ್ ತೊಡೆಯ ಮೇಲೆ ದೈವ ನರ್ತಕ ಮಲಗಿದ್ದರು. ಈಗ ರಿಷಬ್ ಶೆಟ್ಟಿ ನೀಡಿದ ಹರಕೆಯ ಕೋಲದ ವಿವಾದಕ್ಕೆ ಕಾರಣವಾಗಿದೆ. ಚಿತ್ರತಂಡದ ಭಾಗವಾಗಿದ್ದ ಮುಕೇಶ್ ಪಂಪದ ವಿರುದ್ಧ ಟೀಕೆಗಳು ಬಂದಿವೆ ದೈವರಾದನೆಯಲ್ಲಿ ದೈವಗಳು ಈ ರೀತಿ ವರ್ತಿಸುವುದಿಲ್ಲ ಎಂದು ಟೀಕೆಗಳು ಬರುತ್ತವೆ ವೈರಲ್ ವಿಡಿಯೋ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. https://youtube.com/shorts/bDVXlx03Euo?si=9m61MJGYT42QuH5W

Read More

ಬೆಳಗಾವಿ : ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಅನಗತ್ಯ ಹೇಳಿಕೆ ಕೊಡಬೇಡ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಯತೀಂದ್ರ ಸಿದ್ದರಾಮಯ್ಯ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ಹೇಳಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತಿಗೆ ಬದ್ಧ ಅಂತ ಹೇಳಿದ್ದಾರೆ ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಅಪ್ರಸ್ತುತ ಎಂದು ತಿಳಿಸಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಅನಗತ್ಯ ಹೇಳಿಕೆ ಕೊಡಬೇಡ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಇನ್ನು ಇದೆ ವಿಚಾರವಾಗಿ ಈ ಹಿಂದೆ ಸಿಎಂ ವಿಚಾರವಾಗಿ ಮಾತನಾಡಿದ ಶಾಸಕರಿಗೆ ನೋಟಿಸ್ ಕೊಟ್ಟಿದ್ದೀರಿ ಈಗ ಯತೀಂದ್ರ ಅವರು ಮಾತನಾಡಿದ್ದಾರೆ ಅವರಿಗೂ ನೋಟಿಸ್ ಕೊಡುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ನಾನು ಯತೀಂದ್ರ ಅವರ…

Read More

ಮಂಡ್ಯ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಡ್ಡರಹಳ್ಳಿ ಬಳಿ ಶಾಲಾ ಬಸ್ ತಡೆದು ಯುವಕರಿಬ್ಬರ ಪುಂಡಾಟ ನಡೆಸಿರುವ ಘಟನೆ ವರದಿಯಾಗಿದೆ. ಶಾಲಾ ಬಸ್ ಗೆ ಬೈಕ್ ಅಡ್ಡ ನಿಲ್ಲಿಸಿ ಬಸ್ ಚಾಲಕನಿಗೆ ಯುವಕರಿಬ್ಬರ ಆವಾಜ್ ಹಾಕಿದ್ದಾರೆ. ವಡ್ಡಹಳ್ಳಿ ಗ್ರಾಮದ ಕಿರಣ್ ಹಾಗು ಗಿರೀಶ್ ಎಂಬುವರಿಂದ ಬಸ್ ಅಡ್ಡಗಟ್ಟಿ ಕಿರಿಕ್ ಮಾಡಿದ್ದಾರೆ. ವಿದ್ಯಾರ್ಥಿನಿ ಕೆಳಗಿಳಿಸದಿದ್ದಕ್ಕೆ ಬಸ್ ಚಾಲಕನಿಗೆ ಬಸ್ ನಿಲ್ಲಿಸಿ ಆವಾಜ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.ಮದ್ಯ ಕುಡಿದು ಶಾಲಾ ಬಸ್ ಅಡ್ಡಗಟ್ಟಿ ಬೆದರಿಕೆ ಹಾಕಿರೋ ಬಗ್ಗೆ ಚಾಲಕ ಆರೋಪ ಕೇಳಿಬಂದಿದೆ. ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿ ಕೆಳಗಿಸುವಂತೆ ಪುಂಡರ ಬೆದರಿಕೆ ಹಾಕಿದ್ದಾರೆ. ಪುಂಡರಿಬ್ಬರ ಪುಂಡಾಟಿಕೆ ವಿಡಿಯೋದೊಂದಿಗೆ ಪೊಲೀಸರಿಗೆ ದೂರು ನೀಡಲಾಗಿದೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ಪುಂಡಾಟಿಕೆಯ ವಿಡಿಯೋ ವೈರಲ್ ಆಗ್ತಿದ್ದಂತೆ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಗಳ ಬಂಧಿಸಿ ಕ್ರಮ ವಹಿಸಿರುವುದಾಗಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರಕಟಣೆ ಮೂಲಕ ಸ್ಪಷ್ಟನೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇಂದು ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದರು. ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ವೇಳೆ ಸಿಎಂ ಸಿದ್ದರಾಮಯ್ಯ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದರು ಅವರ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೀಕರ್ ಯುಟಿ ಖಾದರ್ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು. https://twitter.com/INCKarnataka/status/1998270056611061987?t=qX-R5WCfE74sqB1E8d4Uow&s=19

Read More

ಬೆಳಗಾವಿ : ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯತಿಂದ್ರ ಅವರನ್ನು ಕರೆದು ಈ ಕುರಿತು ಮಾತನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳು ಈ ಹಿಂದೆ ಸಿಎಂ ವಿಚಾರವಾಗಿ ಮಾತನಾಡಿದ ಶಾಸಕರಿಗೆ ನೋಟಿಸ್ ಕೊಟ್ಟಿದ್ದೀರಿ ಈಗ ಯತೀಂದ್ರ ಅವರು ಮಾತನಾಡಿದ್ದಾರೆ ಅವರಿಗೂ ನೋಟಿಸ್ ಕೊಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನಾನು ಯತೀಂದ್ರ ಅವರ ಹತ್ತಿರ ಮಾತನಾಡುತ್ತೇನೆ ಹೈಕಮಾಂಡ್ ಕರೆದಿದ್ದು ಮಾತನಾಡಿದ್ದು ಬಹಿರಂಗಪಡಿಸಲು ಆಗಲ್ಲ ಎಂದರು. ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅವರು ಏನು ಹೇಳಿಕೆ ಕೊಟ್ಟಿದ್ದಾರೆ ನನಗೆ ಅರ್ಥ ಆಗಿಲ್ಲ. ಹೈಕಮಾಂಡ್ ಯಾವಾಗ ಕರೀತಾರೆ ನನ್ನ ಹತ್ರ ಮಾತಾಡೋದು ಯಾವುದನ್ನು ಬಹಿರಂಗಪಡಿಸುವುದಿಲ್ಲ. ಹಾಗಾಗಿ ಯತೀಂದ್ರ ಅವರನ್ನು ಕರೆದು ಅವರ ಜೊತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು. ಯತೀಂದ್ರ ಹೇಳಿದ್ದೇನು? ನಿನ್ನೆ ಯತೀಂದ್ರ…

Read More

ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ…

Read More