Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಿನಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದೆ. ಕೈ ಕೈ ಮಿಲಾಯಿಸಿಕೊಂಡು ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾರಿ ಹೊಡೆದಾಟ ನಡೆದಿದೆ. ಒಬ್ಬರಿಗೊಬ್ಬರು ಬಡಿದಾಡಿಕೊಂಡು ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಮಜಾ ಮಾಡಿದ್ದರು. ವಜಾ ಮಾಡಿ ಆದೇಶಿಸಿದ್ದ ರಾಷ್ಟ್ರೀಯ ಯುವ ಕಾಂಗ್ರೆಸ್, ಅದೇ ವಿಚಾರಕ್ಕೆ ಸಂಬಂಧಪಟ್ಟಂತೆ ಹೊಡೆದಾಡಿಕೊಂಡಿದ್ದಾರೆ. ಇವತ್ತು ರಾಜ್ಯ ಕಾರ್ಯಕಾರಣಿ ಸಭೆ ಇತ್ತು. ಈ ಒಂದು ಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ಆಗಿರುವ ಮಂಜುನಾಥಗೌಡ ಹಾಗೂ ಉಪಾಧ್ಯಕ್ಷ ಸ್ಥಾನದಿಂದ ತೆರವಾದ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಹೊಡೆದಾಟ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಹೈಗ್ರೌಂಡ್ ಠಾಣೆ ಪೋಲಿಸರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಮಂಜುನಾಥ್ ಗೌಡ ಹಾಗು ದೀಪಿಕಾ ರೆಡ್ಡಿ ನಡುವೆ ಚರ್ಚೆ ನಡೆಯುತ್ತಿದೆ. ಮಂಜುನಾಥ್ ಗೌಡ ಸೂಚನೆ ಮೇರೆಗೆ ನಿನ್ನೆ ರಾಷ್ಟ್ರೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ವತಿಯಿಂದ ನಿನ್ನೆ ಸುಮಾರು 15ಕು ಹೆಚ್ಚು ಪದಾಧಿಕಾರಿಗಳನ್ನು…
ರಾಜ್ಯಾದ್ಯಂತ ತೀವ್ರ ಕುತೂಹಲ ಮತ್ತು ಸಂಚಲನ ಮೂಡಿಸಿರುವ ಬೆಳಗಾವಿಯ ಸುಮಾರು 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ಶಿವಾನಂದ ನೀಲಣ್ಣನವರ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಐಡಿ (CID) ಕಸ್ಟಡಿಗೆ ಒಪ್ಪಿಸಿ ಬೆಳಗಾವಿಯ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಂದು ಮಹತ್ವದ ಆದೇಶ ಹೊರಡಿಸಿದೆ. ಕೋಟಿಗಟ್ಟಲೆ ಹಣ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು, ಈ ದೂಸರ ಜಾಲದ ಹಿಂದಿರುವ ಆಳವಾದ ರಹಸ್ಯಗಳನ್ನು ಹಾಗೂ ಸಾರ್ವಜನಿಕರಿಂದ ಲೂಟಿ ಮಾಡಲಾದ ಕೋಟ್ಯಂತರ ರೂಪಾಯಿ ಹಣ ಎಲ್ಲಿಗೆ ಹೋಯಿತು ಎಂಬುದನ್ನು ಪತ್ತೆಹಚ್ಚಲು ತೀವ್ರ ವಿಚಾರಣೆ ನಡೆಸಲಿದ್ದಾರೆ. ಸಾಕ್ಷಿ ನಾಶಕ್ಕೆ ಯತ್ನಿಸಿದ ಮಹಾರಾಷ್ಟ್ರದ ಯುವಕನ ಬಂಧನ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಮಹಾವಂಚನೆ ಹಗರಣದ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸುತ್ತಿದ್ದ ಮಹಾರಾಷ್ಟ್ರ ಮೂಲದ ಓಂಕಾರ ಎಂಬ ಯುವಕನನ್ನು ಬೆಳಗಾವಿಯ ಮಾಳಮಾರುತಿ ಠಾಣೆಯ ಪೊಲೀಸರು…
ಕಲಬುರಗಿ: ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ವರದಕ್ಷಿಣೆ ಪದ್ಧತಿಯನ್ನು ಬೇರುಸಹಿತ ಕಿತ್ತೆಸೆಯಲು ಕಲಬುರಗಿ ಜಿಲ್ಲೆಯ ಲಂಬಾಣಿ ತಾಂಡಾಗಳ ನಿವಾಸಿಗಳು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ತಾಂಡಾಗಳ ಮುಖಂಡರು ಮತ್ತು ಗ್ರಾಮಸ್ಥರು ಒಟ್ಟಾಗಿ ಸೇರಿ, ಇನ್ಮುಂದೆ ತಮ್ಮ ಸಮುದಾಯದಲ್ಲಿ ವರದಕ್ಷಿಣೆ ಕೊಡುವುದು ಮತ್ತು ಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ. ಈ ನಿರ್ಧಾರವು ಸಮಾಜದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಬಂಜಾರ ಮಹಾಪಂಚಾಯಿತಿಯಲ್ಲಿ ಮಹತ್ವದ ಠರಾವು: ಚಿಂಚೋಳಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಬಂಜಾರ ಮಹಾಪಂಚಾಯಿತಿ’ಯಲ್ಲಿ ಈ ಕ್ರಾಂತಿಕಾರಿ ನಿರ್ಣಯವನ್ನು ಅಂಗೀಕರಿಸಲಾಗಿದೆ. ತಾಂಡಾಗಳ ಹಿರಿಯರು, ಧರ್ಮಗುರುಗಳು ಮತ್ತು ಯುವ ಮುಖಂಡರು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳನ್ನು ಸಾಲದ ಸುಳಿಗೆ ದೂಡುತ್ತಿರುವ ವರದಕ್ಷಿಣೆ ಪದ್ಧತಿಗೆ ಬ್ರೇಕ್ ಹಾಕಲೇಬೇಕು ಎಂದು ನಿರ್ಧರಿಸಿದರು. ಈ ಮಹಾಪಂಚಾಯಿತಿಯಲ್ಲಿ ತಾಂಡಾದ ಪ್ರತಿಯೊಬ್ಬ ನಾಗರಿಕನೂ ಈ ನಿಯಮಕ್ಕೆ ಬದ್ಧರಾಗಿರಬೇಕು ಎಂದು ಕಟ್ಟುನಿಟ್ಟಿನ ಠರಾವು ಪಾಸ್…
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶಾಲಾ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಬೀಳುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ಖಾಸಗಿ ಶಾಲಾ ವಾಹನಗಳ (ವ್ಯಾನ್ ಮತ್ತು ಬಸ್) ಪ್ರಯಾಣ ದರವನ್ನು ಶೇಕಡಾ 10 ರಿಂದ 15 ರಷ್ಟು ಹೆಚ್ಚಿಸಲು ಮಾಲೀಕರ ಸಂಘಟನೆಗಳು ನಿರ್ಧರಿಸಿವೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಬೆನ್ನಲ್ಲೇ ಈ ದರ ಏರಿಕೆ ಜಾರಿಗೆ ಬರಲಿದ್ದು, ಮಧ್ಯಮ ವರ್ಗದ ಪೋಷಕರಿಗೆ ಇದು ದೊಡ್ಡ ಹೊರೆಯಾಗಿ ಪರಿಣಮಿಸಲಿದೆ. ಇಂಧನ ಬೆಲೆ ಏರಿಕೆಯೇ ಪ್ರಮುಖ ಕಾರಣ: ಕಳೆದ ಕೆಲವು ಸಮಯದಿಂದ ಇಂಧನ ದರಗಳು ನಿರಂತರವಾಗಿ ಏರಿಕೆಯಾಗುತ್ತಿರುವುದು ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಶಾಲಾ ವಾಹನಗಳ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ವಾಹನಗಳ ದೈನಂದಿನ ನಿರ್ವಹಣಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹಳೆಯ ದರದಲ್ಲೇ ವಾಹನಗಳನ್ನು ಚಲಾಯಿಸಿದರೆ ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ. ಹಾಗಾಗಿ ಅನಿವಾರ್ಯವಾಗಿ ಶೇ.…
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಸದ್ಯದ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಅಧಿಕಾರಕ್ಕೆ ಬಂದು, ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ವಿಜಯ್ ನೇತೃತ್ವದ ಈ ಹೊಸ ಸರ್ಕಾರವು ಯಾವುದೇ ಕ್ಷಣದಲ್ಲಾದರೂ ಪತನಗೊಳ್ಳಬಹುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ (DMK) ನಾಯಕ ಎಂ.ಕೆ. ಸ್ಟಾಲಿನ್ ಅವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಸರ್ಕಾರ ಪತನದ ಭವಿಷ್ಯ: ರಾಜ್ಯದ ಸದ್ಯದ ರಾಜಕೀಯ ಪರಿಸ್ಥಿತಿಯ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ದಳಪತಿ ವಿಜಯ್ ಅವರ ನೇತೃತ್ವದ ಸರ್ಕಾರಕ್ಕೆ ಭದ್ರತೆ ಇಲ್ಲ. ಆಡಳಿತಾರೂಢ ಪಕ್ಷದಲ್ಲಿನ ಆಂತರಿಕ ಗೊಂದಲಗಳು ಹಾಗೂ ರಾಜಕೀಯ ಅಸ್ಥಿರತೆಯಿಂದಾಗಿ ಈ ಸರ್ಕಾರವು ದೀರ್ಘಕಾಲ ಉಳಿಯುವುದಿಲ್ಲ. ಯಾವುದೇ ಕ್ಷಣದಲ್ಲಾದರೂ ತಮಿಳುನಾಡು ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಭವಿಷ್ಯ ನುಡಿಯುವ ಮೂಲಕ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ.…
ಬೆಂಗಳೂರು: ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆ ಹಾಗೂ ಬಾಕಿ ಇರುವ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 20 ರಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರವನ್ನು ಪ್ರಶ್ನಿಸಿ ಮತ್ತು ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಆಗ್ರಹಿಸಿ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (ಹೈಕೋರ್ಟ್) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಸುದ್ದಗುಂಟೆ ಪಾಳ್ಯದ ನಿವಾಸಿ ವೇದಾವತಿ ಹಾಗೂ ಲಕ್ಕಸಂದ್ರದ ಶ್ರೀಧರ್ ಎಂಬುವರು ಈ ಜಂಟಿ ಅರ್ಜಿಯನ್ನು ಸಲ್ಲಿಸಿದ್ದಾರೆ. ನಿಯಮ ಉಲ್ಲಂಘಿಸಿ ಮುಷ್ಕರದ ಕರೆ: ಅರ್ಜಿದಾರರ ಆಕ್ಷೇಪ ಅರ್ಜಿದಾರರು ತಮ್ಮ ಪಿಐಎಲ್ನಲ್ಲಿ ಮೇ 20ರಂದು ನಡೆಯಲಿರುವ ಸಾರಿಗೆ ನೌಕರರ ಮುಷ್ಕರವನ್ನು ತಕ್ಷಣವೇ ನಿರ್ಬಂಧಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನಿಯಮಗಳ ಪ್ರಕಾರ ಮುಷ್ಕರ ಹೂಡುವ ಮುನ್ನ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕಿರುತ್ತದೆ. ಆದರೆ, ಸಾರಿಗೆ ನೌಕರರ ಸಂಘಟನೆಗಳು ಕೇವಲ 7 ದಿನಗಳ ಮುಂಚಿತವಾಗಿ ನೋಟಿಸ್ ನೀಡಿ ಮುಷ್ಕರಕ್ಕೆ ಮುಂದಾಗಿವೆ. ಇದು ಕಾನೂನು ಬಾಹಿರ ಮತ್ತು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ…
ಕೋಲಾರ : ಕೋಲಾರದಲ್ಲಿ ಘೋರ ಘಟನೆ ಒಂದು ನಡೆದಿದ್ದು ಎರಡು ವರ್ಷದ ಮಗು ಒಂದು ಬೆಟ್ಟದ ನೆಲ್ಲಿಕಾಯಿ ನುಂಗಿದೆ. ಈ ವೇಳೆ ನೆಲ್ಲಿಕಾಯಿ ಹೊರಗಡೆ ಬಾರದೆ ಗಂಟಲಲ್ಲಿ ಸಿಲುಕಿ ಮಗು ಸಾವನ್ನಪ್ಪಿರುವ ಘಟನೆ, ಕೋಲಾರ ಜಿಲ್ಲೆಯ ಮಾಲೂರಿನ ಗಾಂಧಿ ಸರ್ಕಲ್ ನಲ್ಲಿ ಒಂದು ಘಟನೆ ನಡೆದಿದೆ. ರವಿ ಮತ್ತು ಮಾಲಾ ದಂಪತಿಯ ಎರಡು ವರ್ಷದ ವಿಜಯೇಂದ್ರ ಎನ್ನುವ ಮಗುವಿನ ಗಂಟಲಲ್ಲಿ ನೆಲ್ಲಿಕಾಯಿ ಸಿಲುಕಿ ಸಾವನಪ್ಪಿದೆ ಬೆಟ್ಟದ ನೆಲ್ಲಿಕಾಯಿ ಗಂಟಲಿನಲ್ಲಿ ಸಿಲುಕಿದ ಕೊಡಲೇ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದರು. ಆದರೆ ಗಂಟಲಲ್ಲಿ ಸಿಲುಕಿದ ನೆಲ್ಲಿಕಾಯಿಯನ್ನು ಹೊರಗಡೆ ತೆಗೆಯಲಾಗದೆ ಮಗು ಸಾವನಪ್ಪಿದೆ.
ಬೆಳಗಾವಿ : ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶ ಮಾಡಲು ಯತ್ನಿಸಿದ್ದ ಆರೋಪಿಯನ್ನು ಇದೀಗ ಪೊಲೀಸ್ ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಓಂಕಾರ್ ಎಂಬ ಯುವಕನನ್ನಿ ಮಾಳ ಮಾರುತಿ ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆಕ್ಸ್ಯುಮಿನ್ ಆಪ್ ನ ತಾಂತ್ರಿಕ ವಿಭಾಗವನ್ನು ಓಂಕಾರ್ ನೋಡಿಕೊಳ್ಳುತ್ತಿದ್ದ ಈ ಒಂದು ಆಪ್ ನಲ್ಲಿರುವ ಡೇಟಾ ಅಳಿಸಿ ಹಾಕಲು ಓಂಕಾರ್ ಯತ್ನಿಸಿದ್ದಾನೆ. ಆರೋಪಿಯನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಮುಖ ಆರೋಪಿ ಶಿವಾನಂದ ನೀಲಣ್ಣನವರ್ ಎಲ್ಲಾ ಹಣದ ವ್ಯವಹಾರ ಹೂಡಿಕೆದಾರರ ಡೇಟಾ ನಿರ್ವಹಣೆ ಆರೋಪಿ ಓಂಕಾರ್ ಮಾಡುತ್ತಿದ್ದ. ಶಿವಾನಂದ ಮನೆಯ ಮೇಲೆ ದಾಳಿ ಆಗುತ್ತಿದ್ದಂತೆ ಈತ ಆಪ್ ಕ್ಲೋಸ್ ಮಾಡಲು ಯತ್ನಿಸಿದ್ದಾನೆ ಸಾಕ್ಷಿ ನಕ್ಷಕ್ಕೆ ಯತ್ನಿಸುತ್ತಿದ್ದ ಓಂಕಾರ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನಗರ : ರಾಮನಗರದಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ FDA FDA ನೌಕರನನ್ನು ಕೊಲೆ ಮಾಡಲಾಗಿದೆ. ರಾಮನಗರದ ವಿವೇಕಾನಂದ ನಗರದಲ್ಲಿ ತಡರಾತ್ರಿ ಈ ಒಂದು ಘಟನೆ ನಡೆದಿದೆ. ಯೋಗೇಶ್ (41) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಿ ದುಷ್ಪರಿಮಿಗಳು ಪರಾರಿಯಾಗಿದ್ದಾರೆ. ಚನ್ನಪಟ್ಟಣದಲ್ಲಿ ಎಫ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಯೋಗೇಶ್ ತಡರಾತ್ರಿ ಸ್ನೇಹಿತರ ಜೊತೆಗೆ ಪಾರ್ಟಿ ಮಾಡುವಾಗ ಗಲಾಟೆ ಆಗಿದೆ. ಇದೆ ವೇಳೆ ಸ್ನೇಹಿತರು ಯೋಗೇಶನ್ನು ಕೊಲೆ ಮಾಡಿರುವ ಸಂಖ್ಯೆ ವ್ಯಕ್ತವಾಗಿದೆ ರಾಮನಗರದ ನರಸಿಂಹಯ್ಯ ಲೇಔಟ್ ನಿವಾಸಿಯಾಗಿದ್ದು ಸ್ಥಳಕ್ಕೆ ಐಜೂರು ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
BREAKING : ಪತ್ನಿ, ಪುತ್ರನ ಜೈಲಿನ ಒಳಭೇಟಿಗೆ ಅವಕಾಶ ಕೋರಿ ಕಾರಾಗೃಹ SP ಗೆ ಪತ್ರ ಬರೆದ ನಟ ದರ್ಶನ್ | Actor Darshan
ಬೆಂಗಳೂರು :ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ, ಇದೀಗ ಜೈಲಿನ ಸೂಪರಿಂಟೆಂಡೆಂಟ್ಗೆ (ಎಸ್ಪಿ) ವಿಶೇಷ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಜೈಲಿನ ಒಳಗಡೆ ಭೇಟಿ ಮಾಡಲು (ಒಳ ಸಂದರ್ಶನ) ವಿಶೇಷ ಅವಕಾಶ ಕಲ್ಪಿಸಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕಾನೂನು ಹೋರಾಟದಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಕುಟುಂಬದವರನ್ನು ಖುದ್ದಾಗಿ ಭೇಟಿಯಾಗಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲು ದರ್ಶನ್ ಬಯಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 15 ರಂದು ಅವರು ಕಾರಾಗೃಹದ ಮುಖ್ಯ ಅಧೀಕ್ಷಕರಾದ ಅಂಶು ಕುಮಾರ್ ಅವರಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಜೈಲಿನ ನಿಯಮಾವಳಿಗಳ ಪ್ರಕಾರ ಸಾಮಾನ್ಯ ಸಂದರ್ಶನದ ಅವಧಿಯಲ್ಲಿ ಭೇಟಿಯಾಗುವ ಬದಲು, ಜೈಲಿನ ಒಳಗಿರುವ ಪ್ರತ್ಯೇಕ ಕೊಠಡಿಯಲ್ಲಿ ಪತ್ನಿ ಮತ್ತು…














