Author: kannadanewsnow05

ಕಲಬುರ್ಗಿ : ಡಿಸಿಎಂ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕಲಬುರ್ಗಿಯಲ್ಲಿ ಪ್ರಣಮಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ಸಂಕ್ರಾಂತಿ, ಯುಗಾದಿ ಆಗಲಿ ಐದು ರಾಜ್ಯ ಚುನಾವಣೆ ಆಗಲಿ ಎಂದಿದ್ದರು. ಅದೆಲ್ಲ ಮುಗಿದು ಹೋಗಿದೆ. ಈಗಲಾದರೂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಅತಿ ಹಿಂದುಳಿದ ವರ್ಗದ ಮಠಾಧೀಶರು ಇದ್ದಾರೆ. ಸಿಎಂ ಸಿದ್ದರಾಮಯ್ಯ 8 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಅನುಭವಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಯಾವ ಕೊಡುಗೆಯೂ ನೀಡಿಲ್ಲ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಒತ್ತಾಯಿಸುತ್ತೇನೆ. ನಾಳೆ ನಾವು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದರು.

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಆಗಿ ಕೆಲವು ವಿಚಾರಗಳ ಕುರಿತು ಚರ್ಚೆ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಯಾವಾಗ ಏನು ಆಗಬೇಕೋ ಅದು ಆಗೇ ಆಗುತ್ತೆ ಎಂದು ಮಾರ್ಮಿಕವಾಗಿ ನುಡಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ಮುಂದೆ ರಾಜಕೀಯ ವಿಚಾರ ಮಧ್ಯಮಗಳ ಮುಂದೆ ಮಾತನಾಡಲ್ಲ, ಸಮಯ ಬಂದಾಗ ಅದಾಗಿ ಅದೇ ಗೊತ್ತಾಗುತ್ತೆ. ನಮ್ಮಲಿ ಯಾವುದೇ ಸಮಸ್ಯೆ ಇಲ್ಲ, ಯಾವ ರಾಜಕೀಯವು ಇಲ್ಲ. ಯಾವಾಗ ಏನೇನು ಆಗಬೇಕೋ ಅದು ಆಗೇ ಆಗುತ್ತೆ ಏನೇನೋ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರುತ್ತವೆ ಎಂದು ತಿಳಿಸಿದರು. ಇನ್ನು ಪಕ್ಷದಲ್ಲಿ ಗೊಂದಲವಿದೆ. ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ, ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಅನ್ನದಾನೆಶ್ವರ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಫ್ಲೈ 19 ವಿಮಾನಕ್ಕೆ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿದ್ದು, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಆಕಾಶದಲ್ಲಿ ಸುಮಾರು 40 ನಿಮಿಷಗಳ ಹಾರಾಟ ನಡೆಸಿದೆ. ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಬಂದ ವಿಮಾನಕ್ಕೆ ಲ್ಯಾಂಡಿಂಗ್ ನಲ್ಲಿ ಸಮಸ್ಯೆ ಉಂಟಾಗಿತ್ತು. Fly 91 ಸಂಸ್ಥೆಯ GOA 3401 ವಿಮಾನಕ್ಕೆ ಲ್ಯಾಂಡಿಂಗ್ ವೇಳೆ ತೊಂದರೆ ಉಂಟಾಗಿತ್ತು. ನೆನ್ನೆ ಮಧ್ಯಾಹ್ನ 3.13ರಲ್ಲಿ ಹೈದರಾಬಾದ್ ನಿಂದ ಈ ಒಂದು ವಿಮಾನ ಹೊರಟಿತ್ತು ಸಂಜೆ 4:30ಕ್ಕೆ ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡ್ ಆಗಬೇಕಿತ್ತು, ಆದರೆ ಸಂಜೆ 5. 09 ನಿಮಿಷಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ. ಹೆಚ್ಚು 40 ನಿಮಿಷ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದೆ.ಕಳೆದ ಬಾರಿ ಕೂಡ ಎರಡು ಬಾರಿ ಲ್ಯಾಂಡಿಂಗ್ ಗೆ ಸಮಸ್ಯೆ ಆಗಿತ್ತು.

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಸಾಂಬಾರ್ ಮಾಡಿಲ್ಲವೆಂದು ತಂದೆ ಬೈಯ್ದಿದಕ್ಕೆ ಪುತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಂಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಸೌಜನ್ಯ ಪೂಜಾರಿ (22) ಎನ್ನುವ ಯುವತಿ ನೇಣಿಗೆ ಶರಣಾಗಿದ್ದಾಳೆ. ನಿನ್ನೆ ತರಕಾರಿ ತಂದು ಸಾಂಬರ್ ಮಾಡಲು ಸೌಜನ್ಯ ತಂದೆ ನಟೇಶ್ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಸಾಂಬರ್ ಮಾಡಿಲ್ಲವೆಂದು ತಂದೆ ನಟೇಶ್ ಸೌಜನ್ಯಾಗೆ ಬೈದಿದ್ದಾರೆ. ಬಳಿಕ ನಟೇಶ್ ಪಕ್ಕದ ಮನೆಗೆ ಸಾಂಬಾರ್ ತರಲು ತೆರಳಿದ್ದಾಗ ಸೌಜನ್ಯ ನೇಣಿಗೆ ಶರಣಾಗಿದ್ದಾಳೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಅಮೆರಿಕಾದ ವಾಷಿಂಗ್ಟನ್ ಹಿಲ್ಟನ್ಸ್ ಹೋಟೆಲ್ ನಲ್ಲಿ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಟವಶಾತ್ ಡೊನಾಲ್ಡ್ ಟ್ರಂಪ್ ಪ್ರಾಣಪಾಯದಿಂದ ಪಾರಾಗಿದ್ದು ಸದ್ಯ ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ವಿಚಾರವನ್ನು ಖಂಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ. ಯಾವುದೇ ಅನಾಹುತವಾಗಿಲ್ಲ ಎಂದು ತಿಳಿದು ನನಗೆ ಸಮಾಧಾನವಾಯಿತು. ಹಿಂಸಾಚಾರಕ್ಕೆ ಸ್ಥಾನವಿಲ್ಲ ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಟ್ವೀಟ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪೋಸ್ಟ್ ಹಂಚಿಕೊಂಡಿದ್ದಾರೆ. ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ಭದ್ರತಾ ಘಟನೆಯ ನಂತರ ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಮತ್ತು ಯಾವುದೇ ಹಾನಿಗೊಳಗಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಅವರ ನಿರಂತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು…

Read More

ಬೆಂಗಳೂರು : ನಿರ್ಮಲಾನಂದನಾಥ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಕನ್ನಡ ಚೇತನ್ ಗೌಡ ಎಂಬಾತನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಚೇತನ್ ಗೌಡ ಎಂಬಾತನ ವಿರುದ್ಧ FIR ದಾಖಲಾಗಿದೆ. ಪುಟ್ಟರಾಜು ಎಂಬುವವರು ಈ ವಿಚಾರವಾಗಿ ದೂರು ನೀಡಿದರು. ಅವರ ದೂರನ್ನು ಆಧರಿಸಿ ಪೊಲೀಸರು ಇದೀಗ ಚೇತನ್ ಗೌಡನ ವಿರುದ್ಧ ಕೆಎಸ್ ದಾಖಲಿಸಿದ್ದಾರೆ. ಅಶ್ಲೀಲ ಪದ ಬಳಕೆ ಮಾಡಿ ಶ್ರೀಗಳ ತೇಜೋವಧೆ ಮಾಡಿರುವ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಸ್ವಾಮೀಜಿಯ ಬಗ್ಗೆ ವಿದೇಶ ಪ್ರವಾಸದ ಫೋಟೋ ಬಳಸಿ ಅವಹೇಳನಕಾರಿ ಪದ ಬಳಕೆ ಮಾಡಿದನೆಂದು ಆರೋಪಿಸಿದ್ದು ಎಫ್ಐಆರ್ ನಲ್ಲಿ ರಾಜೇಶ್ ಎಂಬತನ ಹೆಸರು ಕೂಡ ಪುಟ್ಟರಾಜು ಉಲ್ಲೇಖಿಸಿದ್ದಾರೆ.

Read More

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಭಾಷಾ ಕೌಶಲ್ಯ ಹಾಗೂ ಸಾಮಾನ್ಯ ಜ್ಞಾನ ಹೆಚ್ಚಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಿದ್ದು, ಅದರ ಮುಂದಿನ ಭಾಗವಾಗಿ ಈ ಶೈಕ್ಷಣಿಕ ಸುಧಾರಣೆ ಜಾರಿಗೆ ಬಂದಿದೆ. ಈ ನೂತನ ನಿಯಮವು ಮಕ್ಕಳನ್ನು ಬಾಹ್ಯ ಜಗತ್ತಿನ ವಿದ್ಯಮಾನಗಳೊಂದಿಗೆ ಸಂಪರ್ಕಿಸಲು ಮತ್ತು ಅವರಲ್ಲಿ ಓದುವ ಆಸಕ್ತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ. ಆದೇಶದ ಹಿನ್ನೆಲೆ ಮತ್ತು ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPCR) ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸೋಶಿಯಲ್ ಮೀಡಿಯಾ ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ತಡೆಯುವುದು…

Read More

ಪುಣೆ : ಮಹಾರಾಷ್ಟ್ರದಲ್ಲಿ ಹೃದಯಸ್ಪರ್ಶಿ ಘಟನೆ ಒಂದು ನಡೆದಿದ್ದು, ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಹೌದು ಪುಣೆ ರಸ್ತೆಯಲ್ಲಿ ಅಚ್ಚರಿ ಘಟನೆ ನಡೆದಿದ್ದು, ರಸ್ತೆಯಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿ ಡಾಕ್ಟರ್ ಸಮಯಕ್ಕೆ ಬಂದು ತಾಯಿ-ಮಗುವಿನ ಜೀವ ಉಳಿಸಿರುವ ಘಟನೆ ವರದಿಯಾಗಿದೆ. ಹೌದು ಪುಣೆಯೊಂದರ ರಸ್ತೆಯಲ್ಲಿ ನಡೆದ ಈ ಘಟನೆ ಎಲ್ಲರ ಮನಸೂರೆಗೊಂಡಿದೆ, ಅಕಸ್ಮಿಕವಾಗಿ ಒಬ್ಬ ಮಹಿಳೆಗೆ ಹೆರಿಗೆ ನೋವು ಆರಂಭವಾಗಿದ್ದು, ಸುತ್ತಮುತ್ತಲಿದ್ದ ಜನರು ತಕ್ಷಣ ಸಹಾಯಕ್ಕೆ ಧಾವಿಸಿದರು. ಅದೇ ವೇಳೆ ಒಬ್ಬ ವೈದ್ಯರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಬಂದು, ಸುರಕ್ಷಿತ ವಾತಾವರಣ ನಿರ್ಮಿಸಿ ಶಾಂತವಾಗಿ ಹೆರಿಗೆ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಿದರು. ಜನರ ಸಹಕಾರ, ವೈದ್ಯರ ತಕ್ಷಣದ ಸ್ಪಂದನೆ ಮತ್ತು ಮಾನವೀಯತೆ ಸೇರಿ ತಾಯಿ ಹಾಗೂ ಮಗುವಿನ ಜೀವವನ್ನು ಸುರಕ್ಷಿತವಾಗಿಟ್ಟವು. ಈ ಹೃದಯಸ್ಪರ್ಶಿ ಘಟನೆ ಸಂಕಷ್ಟದ ಕ್ಷಣದಲ್ಲಿ ಮಾನವೀಯತೆ ಎಷ್ಟು ದೊಡ್ಡ ಶಕ್ತಿ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ. ಸಮಯೋಚಿತ ಸಹಾಯ ಮತ್ತು ಒಗ್ಗಟ್ಟು ಇದ್ದರೆ ಯಾವುದೇ ಸಂಕಷ್ಟವನ್ನೂ ಜಯಿಸಬಹುದು ಎಂಬ ಸಂದೇಶವನ್ನು…

Read More

ತಿರುಪತಿಗೆ ಹೋಗಿ ತಿಮ್ಮಪ್ಪನ ದರ್ಶನ ಮಾಡಿ ಪ್ರಸಾದ ಸವಿಯಲೇಬೇಕು ಎಂಬ ಹಂಬಲ ಎಲ್ಲರ ಮನಸ್ಸಿನಲ್ಲಿ ಬೇರೂರುವಷ್ಟು ‘ಪ್ರಸಾದ’ ಪ್ರಸಿದ್ದಿಯಾಗಿದೆ. ತಿರುಪತಿ ಪ್ರಸಾದ ಅಷ್ಟು ಸುಲಭದಲ್ಲಿ ದೊರೆಯುವುದಿಲ್ಲ. ತಿಮ್ಮಪ್ಪನ ದರ್ಶನ ಮಾಡುವಷ್ಟೇ ಕಾಯಬೇಕು. ಅದಕ್ಕಾಗಿ ಮೊದಲೇ ಕೌಂಟರ್ನಲ್ಲಿ ಹಣ ಕೊಟ್ಟು ಟಿಕೆಟ್ ಪಡೆದಿರಬೇಕು. ಒಬ್ಬರಿಗೆ ಒಂದೇ ಟಿಕೆಟ್, ಸರದಿಯಲ್ಲಿ ನಿಂತು ಗಂಟೆ ಗಟ್ಟಲೆ ಕಾಯಬೇಕು. ಇಂಥ ಭಾರಿ ಜನಜಂಗುಳಿಯ ನಿತ್ಯ ಜಾತ್ರೆಯಂತಿರುವ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಲಾಡು ಪ್ರಸಾದ ತೆಗೆದುಕೊಂಡು ಬರುವುದು ಎಂದರೆ, ವೈಕುಂಠಕ್ಕೆ ಹೋಗಿ ವಿಷ್ಣುವಿನ ದರ್ಶನ ಮಾಡಿ ಬಂದ ಪ್ಟೇ ಸಂಭ್ರಮ ಸಡಗರ ಮುಖದಲ್ಲಿ ತುಂಬಿ ತುಳುಕಾಡುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…

Read More

ನವದೆಹಲಿ : ಅಮೆರಿಕದ ವಾಷಿಂಗ್ಟನ್ ನಲ್ಲಿ ಹಿಲ್ಟನ್ ಹೋಟೆಲ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಗುಂಡಿನ ದಾಳಿ ನಡೆಸಿದ್ದ. ತಕ್ಷಣ ಭದ್ರತಾ ಸಿಬ್ಬಂದಿಗಳು ಅವರನ್ನು ರಕ್ಷಣೆ ಮಾಡಿದ್ದಾರೆ. ಈ ಒಂದು ಗುಂಡಿನ ದಾಳಿಯ ಕುರಿತಂತೆ ಡೊನಾಲ್ಡ್ ಟ್ರಂಪ್ ವೈಟ್ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಗುಂಡಿನ ದಾಳಿಯ ಬಗ್ಗೆ ಡೊನಾಲ್ಡ್ ಟ್ರಂಪ್ ಮಾತನಾಡಿದರು. ಭದ್ರತಾ ತಪಾಸಣೆ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ ಸಿಬ್ಬಂದಿಗಳು ತಕ್ಷಣ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೀಕ್ರೆಟ್ ಸರ್ವಿಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಒಬ್ಬ ಸಿಬ್ಬಂದಿಗೆ ಗುಂಡು ತಗುಲಿದ್ದು ಅವರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಬಚಾವ್ ಆಗಿದ್ದಾರೆ ಎಂದು ತಿಳಿಸಿದರು. ಪೆನ್ಸಿಲ್ವೆನಿಯಾದಲ್ಲಿ ನನ್ನ ಮೇಲೆ ದಾಳಿ ನಡೆದಿತ್ತು. ಜೆಡಿ ವ್ಯಾನ್ಸ್ ಸೇರಿದಂತೆ ಹಲವರು ಇದ್ದರು. ಇಂತಹ ದಾಳಿ ಮೊದಲಲ್ಲ. ದಾಳಿಕೊರನ ಬಳಿ ಹಲವು ಶಾಸ್ತ್ರಾಸ್ತ್ರಗಳು ಇದ್ದವು. ಈ ಕಾರ್ಯಕ್ರಮವನ್ನು ಅರಿತುಕೊಂಡೆ ದಾಳಿ ಮಾಡುವ…

Read More