Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಆಸ್ತಿ ವಿವಾದ ಹಿನ್ನಲೆಯಲ್ಲಿ ಕುಟುಂಬ ಸಮೇತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ವರದಿಯಾಗಿದೆ.ಸ್ವಲ್ಪ ಎಚ್ಚರ ತಪ್ಪಿದ್ರೂ ಕುಟುಂಬ ಸಮೇತ ಮನೆ ಸುಡಲು ಯತ್ನಿಸಲಾಗಿದೆ. ಬೆಂಗಳೂರಿನ ಜಯನಗರದ ಭೈರಸಂದ್ರದಲ್ಲಿ ಸೋದರಿಯಿಂದ ಕೃತ್ಯ ನಡೆದಿದೆ. ಮನೆಯ ಕಿಟಕಿ ಬಾಗಿಲು ಮುರಿದು ಒಳಗೆ ನುಗ್ಗುಲು ಪ್ರಯತ್ನಿಸಲಾಗಿದೆ. ಅಲ್ಲದೇ ಮಚ್ಚು ದೊಣ್ಣೆಗಳಿಂದ ಹಲ್ಲೆ ನಡೆಸಿ ಜೀವಂತ ಸುಡುವುದಾಗಿ ಧಮ್ಕಿ ಹಾಕಲಾಗಿದೆ. ಮನೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾ ಒಡೆದು ಹಾಕಿ ದಬ್ಬಾಳಿಕೆ ಮಾಡಲಾಗಿದೆ. ಉಮೇಶ್ ಎನ್ನುವವರ ಸೋದರಿ ಮೀನಾಕ್ಷಿ, ಪತಿ ಹಾಗು ಮಕ್ಕಳಿಂದ ಬೆಂಕಿ ಹಚ್ಚಲು ಯತ್ನಿಸಲಾಗಿದೆ. ಜೀವ ಭಯದಿಂದ 112ಕ್ಕೆ ಕರೆ ಮಾಡಿದ್ದ ಉಮೇಶ್ ಪತ್ನಿ ಅಶ್ವಿನಿ ಕೂಡಲೇ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.ಗಲಾಟೆ ಮಾಡುತ್ತಿದ್ದವರನ್ನ ಕಳುಹಿಸಿದ್ದಾರೆ. ಈ ಬಗ್ಗೆ ಉಮೇಶ್ ಪತ್ನಿ ಸಿದ್ದಾಪುರ ಠಾಣೆಗೆ ದೂರು ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಒಂದು ಒಪ್ಪಂದವಾಗಿದೆ ಎಂಬ ವಿಚಾರ ಎಲ್ಲರ ತಲೆಯಲ್ಲೂ ಇದೆ. ಆದರೆ, ಆ ಒಪ್ಪಂದದ ಸ್ವರೂಪ ಏನು ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು. ಈ ಮೂಲಕ ಹೈಕಮಾಂಡ್ ಸದ್ಯ ಇರುವ ಗೊಂದಲವನ್ನು ಬಗೆಹರಿಸಬೇಕು. ಇದನ್ನು ನಾವಷ್ಟೇ ಅಲ್ಲ, ಎಲ್ಲರೂ ಹೇಳುತ್ತಿದ್ದಾರೆ ಎಂದು ಉತ್ತರಿಸಿದರು. ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು…

Read More

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿ ಒಂದು ಮನೆಗೆ ನುಗ್ಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡಿನ ಸಲಗೇರಿ ರಸ್ತೆಯಲ್ಲಿ ಘಟನೆ ನಡೆದಿದೆ. ರಂಗನಾಥ್ ಎಂಬುವವರಿಗೆ ಮಿನಿ ಲಾರಿ ನುಗ್ಗಿದೆ. ಲಾರಿಯಲ್ಲಿ ಸಿಲುಕಿದ್ದ ಚಾಲಕನನ್ನು ಹೊರತರಲು ಹರಸಾಹಸ ಪಡಲಾಯಿತು. ಲಾರಿ ಗುದ್ದಿದ ರಭಸಕ್ಕೆ ಮನೆಯ ಕಂಪೌಂಡ್, ಗೋಡೆ ಜಖಂಗೊಂಡಿದೆ. ಜೆಸಿಬಿ ಟ್ರಾಕ್ಟರ್ ಬಳಸಿ ಲಾರಿ ಚಾಲಕನನ್ನ ಹೊರಗಡೆ ತೆಗೆದಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಕರ್ನಾಟಕ ರಾಜ್ಯಪತ್ರದಲ್ಲಿ 18-04-2026ರಂದು ಹೊರಡಿಸಲಾದ ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ದಿನಾಂಕ:27-04-2026ರ ಏಪ್ರಿಲ್ 27ರಂದು ನಿಗದಿಪಡಿಸಲಾಗಿದ್ದ ಪರಿಶೀಲನಾ ಅದಾಲತ್ ಅನ್ನು ಮುಂದೂಡಲಾಗಿದ್ದು 2026ರ ಮೇ 5 (ಮಂಗಳವಾರ) ಪರಿಶೀಲನಾ ಅದಾಲತ್‌ನ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಪ್ರಕಟಣೆ ತಿಳಿಸಿದೆ. ಅದಾಲತ್‌ನ ಸಮಯ: ಬೆಳಿಗ್ಗೆ 11ರಿಂದ ಮಧ್ಯಾಹ್ನ 1:30 ರವರೆಗೆ ಕಲಬುರಗಿ, ಯಾದಗಿರಿ, ಬೀದ‌ರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಗಳು. ಮಧ್ಯಾಹ್ನ 2:30 ರಿಂದ ಸಂಜೆ 5ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೇವಲ ಸಂಸಾರಕ್ಕಷ್ಟೇ ಅಲ್ಲ, ಮಕ್ಕಳ ಭವಿಷ್ಯ ರೂಪಿಸುವ ಶಕ್ತಿಯಾಗಿಯೂ ಪರಿಣಮಿಸಿದೆ. ಮೈಸೂರಿನ ಮಾಧುರಿ ಆರ್. ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಗಳಿಸಿರುವುದೇ ಇದಕ್ಕೆ ತಾಜಾ ಉದಾಹರಣೆ. ಈ ಸಾಧಕ ಬಾಲಕಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು, ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಮಹತ್ತರವಾದ ಬದಲಾವಣೆ ತರುತ್ತಿವೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ. ಮಾಧುರಿ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಡಿ.ಕೆ. ಶಿವಕುಮಾರ್, “ನಮ್ಮ ಗ್ಯಾರಂಟಿ ಯೋಜನೆಗಳು ಇಂತಹ ಹತ್ತು ಹಲವು ಸಾಧನೆಗಳಿಗೆ ಮುನ್ನುಡಿ ಬರೆದಿವೆ. ಬಡವರ ಮನೆಯ ಮಗು ಇಂದು ಸ್ಟೇಟ್ ರ್ಯಾಂಕ್ ಪಡೆಯಲು ಗ್ಯಾರಂಟಿ ಹಣವೇ ಆಧಾರವಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ನಮ್ಮ ಸರ್ಕಾರ ನಮ್ಮ ಹೆಮ್ಮೆ (ಮೈ ಗವರ್ನಮೆಂಟ್-ಮೈ ಪ್ರೌಡ್), ನಮ್ಮ ಗ್ಯಾರಂಟಿ ನಮ್ಮ ಹೆಮ್ಮೆ (ಮೈ ಗ್ಯಾರಂಟಿ-ಮೈ ಪ್ರೌಡ್) ಎಂಬುದು ಈ ಮೂಲಕ…

Read More

ಬೆಂಗಳೂರು : ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ.30ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿಗೆ ಮೇ 5 ಕೊನೆ ದಿನವಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇಲೆ ದಿನಾಂಕ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 🗓️ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 30, 2026 (ಹಿಂದೆ ಇದು ಏಪ್ರಿಲ್ 20 ಆಗಿತ್ತು). ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಮೇ 5, 2026 (ಅಂದಾಜು). ಪ್ರವೇಶ ಪರೀಕ್ಷೆ ದಿನಾಂಕಗಳು: * M.E / M.Tech / M.Arch: ಮೇ 23, 2026 MBA / MCA: ಮೇ 24, 2026 📝 ಅರ್ಹತೆ ಮತ್ತು ಕೋರ್ಸ್‌ಗಳು ಈ ಪರೀಕ್ಷೆಯು ಈ ಕೆಳಗಿನ ಸ್ನಾತಕೋತ್ತರ ಪದವಿಗಳ…

Read More

ನವದೆಹಲಿ : ಕಳೆದ ಎರಡು ದಿನಗಳ ಹಿಂದೆ ರಾಘವ್ ಚೆಡ್ಡ ಸೇರಿದಂತೆ 7 ಜನ ಸಂಸದರು ಆಪ್ ಪಕ್ಷಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷವನ್ನು ಸೇರಿದ್ದರು. ಇದೀಗ ಬಿಜೆಪಿ ಜೊತೆಗೆ ಆಪ್ ನ 7 ಸಂಸದರು ವಿಲೀನಕ್ಕೆ ರಾಜ್ಯಸಭಾ ಸಭಾಪತಿ ಒಪ್ಪಿಗೆ ಸೂಚಿಸಿದ್ದಾರೆ. ರಾಜ್ಯಸಭೆಯ ಸಭಾಪತಿ ಸಿಪಿ ರಾಧಾಕೃಷ್ಣನ್ ಅವರು 7 ಸಂಸದರು ಬಿಜೆಪಿ ಪಕ್ಷಕ್ಕೆ ವಿಲೀನಕ್ಕೆ ಸಮ್ಮತಿ ಸೂಚಿಸಿದ್ದಾರೆ. ರಾಘವ್ ಚಡ್ಡಾ ಸೇರಿದಂತೆ ಏಳು ಸಂಸದರ ಮನವಿಗೆ ಒಪ್ಪಿಗೆ ನೀಡಿದ್ದಾರೆ ಹಾಗಾಗಿ ರಾಜ್ಯಸಭೆಯಲ್ಲಿ ಬಿಜೆಪಿಯ ಬಲ 113ಕ್ಕೆ ಏರಿದೆ. 7 ಸಂಸದರನ್ನು ಅನರ್ಹಗೊಳಿಸುವುದಕ್ಕೆ ಆಪ್ ಮುಂದಾಗಿತ್ತು. ಆದರೆ ಆ ಏಳು ಜನ ಸಂಸದರು ಬಿಜೆಪಿ ಜೊತೆಗೆ ವಿಲೀನರಾಗಿದ್ದಾರೆ. ಹಾಗಾಗಿ ರಾಜ್ಯಸಭಾ ಸಭಾಪತಿ ಸಿಪಿ ರಾಧಾಕೃಷ್ಣನ್ ಸಮ್ಮತಿ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಮಧ್ಯರಾತ್ರಿ ರಾಜಕುಮಾರ್ ಸಮಾಧಿ ಬಳಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ಯಾನರ್ ಫ್ಲೆಕ್ಸ್ ಶೇಖರಿಸಿ ಇಟ್ಟಿದ್ದ ಬೆಂಕಿ ಅವಘಡ ಸಂಭವಿಸಿದೆ. ಅಲ್ಲದೇ ಪಕ್ಕದಲ್ಲಿದ್ದ ಪಿಜಿಗು ಬೆಂಕಿ ತಗುಲಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ಕಾರವಾರ ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಹೆರಿಗೆ ಆಗಿದ್ದು ಮೈಸೂರಿನ ಪೊನ್ನಮ್ಮ ಎನ್ನುವ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಂಟ್ವಾಳ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೈಲು ಬಿಸಿ ರೋಡ್ ತಲುಪಿದಾಗ ಗರ್ಭಿಣಿಗೆ ರಕ್ತಸ್ರಾವ ಶುರುವಾಗಿದೆ. ತಕ್ಷಣವೇ ಸಿಬ್ಬಂದಿಗಳು ಬಿಸಿ ರೋಡ್ ನಲ್ಲಿ ರೈಲು ನಿಲ್ಲಿಸಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿ ರೈಲು ನಿಲ್ಲಿಸಿದ್ದಾರೆ. ಅರ್ಧ ಗಂಟೆಗಳ ಕಾಲ ವೈದ್ಯರು ಸ್ಥಳಕ್ಕೆ ಬರಲಿಲ್ಲ. ಈ ವೇಳೆ ರೈಲಿನಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ರೈಲು (ಸಂಖ್ಯೆ 16586, ಮುರ್ಡೇಶ್ವರ – ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್)ನಲ್ಲಿ ಸಾಮಾನ್ಯ ಬೋಗಿಯಲ್ಲಿ ಗರ್ಭಿಣಿ ಪೊನ್ನಮ್ಮ ಪ್ರಯಾಣಿಸುತ್ತಿದ್ದರು. ಬಂಟ್ವಾಳ ರೈಲು ನಿಲ್ದಾಣಕ್ಕೆ ಸಂಜೆ 07:22 ಗಂಟೆಗೆ ರೈಲು ಆಗಮಿಸಿದಾಗ ಪೊನ್ನಮ್ಮ ಅವರು ಗಂಭೀರ ಸ್ಥಿತಿಯಲ್ಲಿ ರಕ್ತಸ್ರಾವದಿಂದ ಬಳಲುತ್ತಿದ್ದರು. ಈ ವೇಳೆ ತಕ್ಷಣವೇ ರೈಲ್ವೆ ಸಿಬ್ಬಂದಿ ತುರ್ತು ವೈದ್ಯಕೀಯ ಸೇವೆಗಳಿಗೆ ಮಾಹಿತಿ ನೀಡಿ ಆಂಬುಲೆನ್ಸ್ ವ್ಯವಸ್ಥೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯಲ್ಲಿ ಕೃಪಾ ನಿಧಿ ಕಾಲೇಜಿನ ಕಳ್ಳಾಟ ಬಯಲಾಗಿದೆ. ಉದ್ದೇಶಪೂರ್ವಕವಾಗಿ ಜನಿವಾರ ತೆಗೆದಿರುವುದು ಬಯಲಾಗಿದೆ. ಹೌದು ಕೃಪಾ ನಿಧಿ ಕಾಲೇಜಿನಲ್ಲಿ ಮುಂದಿನ ವರ್ಷಗಳಲ್ಲಿ CET ಪರೀಕ್ಷೆಗಳು ಸೇರಿದಂತೆ ಯಾವುದೇ ಸರ್ಕಾರಿ ಪರೀಕ್ಷೆಗಳು ನಡೆಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸರ್ಕಾರಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದು, ಉದ್ದೇಶಪೂರ್ವಕವಾಗಿ ಜನಿವಾರ ತೆಗಿಸಲಾಗಿದೆ ಎನ್ನುವ ಮಾಹಿತಿ ಸಿಗುತ್ತಿದೆ. CET ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಾರೆ. ನಮ್ಮ ಅಧಿಕಾರಿಗಳನ್ನ ಸಿಇಟಿ ಕೇಂದ್ರಕ್ಕೆ ಕಳುಹಿಸಿ ತನಿಖೆ ಮಾಡಿಸಿದ್ದೇವೆ. ಸರ್ಕಾರ ಈ ವಿಷಯದಲ್ಲಿ ಬಹಳ ಗಂಭೀರವಾಗಿದ್ದು ಮೂರು ಜನರ ಮೇಲೆ ಕಳಿಸಿದ್ದು ಅಲ್ಲದೆ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಅಂತಹ ಘಟನೆಗಳು ಮತ್ತು ಮರು ಕಳಿಸಬಾರದು ಎನ್ನುವ ಕಾರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ ಕೂಡ ಇದೇ ತರಹ ಘಟನೆ ನಡೆದಿತ್ತು. ತನಿಖೆಯ ವರದಿ ಬಂದಿದ್ದು ಅಂತಹ ಕೇಂದ್ರದಲ್ಲಿ ಮುಂದಿನ ವರ್ಷಗಳಲ್ಲಿ ಕೆಇಎ…

Read More