Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಪತ್ನಿಯನ್ನು ಕೊಂದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಬ್ರಮಣ್ಯಪುರದ ಚಿಕ್ಕ ಗೌಡನಪಾಳ್ಯದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಬೇಬಿ (65) ಕೊಂದು ಪತಿ ವೆಂಕಟೇಶನ್ (65) ಆತ್ಮಹತ್ಯೆಗೆ ಶರಣಾಗಿದ್ದಾರೆ ವೆಂಕಟೇಶ್ ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಪತ್ನಿಗೆ ಸ್ಟ್ರೋಕ್ ಆಗಿ ವೀಲ್ ಚೇರ್ ನಲ್ಲಿ ಜೀವನ ಸಾಗಿಸುತ್ತಿದ್ದರು. ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯ ಆದಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು. ಅದೇ ರೀತಿ ನವೆಂಬರ್ 2ರಂದು ಮಂಗಳವಾರ ಇಬ್ಬರು ಜಗಳ ಮಾಡಿಕೊಂಡಿದ್ದಾರೆ ಗಲಾಟೆ ವಿಕೋಪಕ್ಕೆ ಹೋಗಿ ವೈರಿನಿಂದ ಪತ್ನಿಯ ಕುತ್ತಿಗೆ ಬಿಗಿದು ವೆಂಕಟೇಶನ್ ಕೊಲೆ ಮಾಡಿದ್ದಾರೆ. ನಂತರ ಅದೇ ವೈರ್ ನಲ್ಲಿ ತಾನು ಸಹ ನೇಣು ಬಿಗಿದುಕೊಂಡು ವೆಂಕಟೇಶನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಪ್ರೀತಿಸಿ ಮದುವೆಯಾದ ಮೂರೇ ತಿಂಗಳಿಗೆ ನವ ವಿವಾಹಿತೆ ಒಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಪೋಲಿಸರು ಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ಅಮೂಲ್ಯ (23) ಗಂಡ ಅಭಿಷೇಕ್‌ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ ಎಂದು ತಿಳಿದುಬಂದಿದೆ. ಅಮೂಲ್ಯ-ಅಭಿಷೇಕ್‌ ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಕೊನೆಗೆ ಹೇಗೋ ಇಬ್ಬರು ಕುಟುಂಬದವರನ್ನ ಒಪ್ಪಿಸಿ ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೃತ ಅಮೂಲ್ಯ ಕುಟುಂಬಸ್ಥರು ಮಗಳ ಸಾವಿಗೆ ಪತಿ ಅಭಿಷೇಕ್‌ ಕಾರಣ ಅಂತ ಆರೋಪಿಸಿದ್ದಾರೆ. ಪತಿಗೆ ಪತ್ನಿಯ ಮೇಲೆ ಅನುಮಾನ ಇತ್ತು, ಯಾರ ಜೊತೆಗೂ ಮಾತಾಡೋಕೆ ಬಿಡ್ತಾ ಇರಲಿಲ್ಲ. ಆಡುಗೆ ಮಾಡೋಕೆ ಬರಲ್ಲ ಅಂತಾ ಕಿರುಕುಳ ಕೊಡ್ತಾ ಇದ್ರು. ಅವ್ರೇ ಹೊಡೆದು ಕೊಲೆ ಮಾಡಿದ್ದಾರೆ ಅಂತಲೂ ಆರೋಪಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸ್ರು ಸ್ಥಳಕ್ಕೆ ಭೇಟಿ…

Read More

ಬೆಂಗಳೂರು : ಬೆಂಗಳೂರಿನ ವಿವಿಧ ಠಾಣೆಗಳ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ನಾಲ್ವರನ್ನು ಅಮಾನತುಗೊಳಿಸಿ ಉತ್ತರ ವಿಭಾಗ ಡಿಸಿಪಿ ನೇಮಗೌಡ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ್ದ ಆರೋಪ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನ ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯ ASI ಶ್ರೀನಿವಾಸ, ಸುಬ್ರಮಣ್ಯ ನಗರ ಠಾಣೆಯ ASI ಜಯ ರಾಮೇಗೌಡ, ಹೆಡ್ ಕಾನ್ಸ್ಟೇಬಲ್ ಧರ್ಮ ಹಾಗು ಸಂಜಯ ನಗರ ಠಾಣೆ ಕಾನ್ಸ್ಟೇಬಲ್ ನಜೀರ್ ಎನ್ನುವ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಕರ್ತವ ಲೋಪ ಹಿನ್ನೆಲೆಯಲ್ಲಿ ನಾಲ್ವರನ್ನು ಅಮಾನತುಗೊಳಿಸಿ ಡಿಸಿಪಿ ಆದೇಶ ಹೊರಡಿಸಿದ್ದಾರೆ

Read More

ಬೆಂಗಳೂರು : ದೆಹಲಿಯಲ್ಲಿ ಕೆಂಪುಕೋಟೆಯ ಬಳಿ ಕಾರುಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ತನಿಖೆ ಚುರುಕುಗೊಳಿಸಿದ್ದು ಇದೀಗ ಮತ್ತೊಂದು ಸ್ಫೋಟಕ ಅಂಶ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ ಮೊಬೈಲ್ ಬಳಕೆ ವಿಡಿಯೋ ವೈರಲ್ ಆದ ನಂತರ ಎನ್‌ಐಎ ತನಿಖೆ ಚುರುಕುಗೊಂಡಿದೆ. ಉಗ್ರ ಜುಹಾದ್ ಶಕೀಲ್ ಮನ್ನಾ ಜೈಲಿನಲ್ಲಿದ್ದುಕೊಂಡು ಮೊಬೈಲ್ ಬಳಸಿದ್ದ ವಿಡಿಯೋ ಬೆಳಕಿಗೆ ಬಂದಿದ್ದು, ದೆಹಲಿ ಬ್ಲಾಸ್ಟ್‌ಗೂ ಈತನ ಸಂಪರ್ಕ ಇರುವ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಅಧಿಕಾರಿಗಳು ಈಗಾಗಲೇ ಜೈಲಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.ಈ ಬ್ಲಾಸ್ಟ್​ಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಮತ್ತೆ ಎನ್​​​ಐಎ ಜೈಲಿಗೆ ಭೇಟಿ ನೀಡಿದ್ದಾರೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆಯನ್ನು ನಡೆಸುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರು ಹಾಗೂ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್ 17 ರಿಂದ ಸಾಕ್ಷಿ ವಿಚಾರಣೆಗೆ ಕೋರ್ಟ್ ಇದೀಗ ನಿರ್ಧರಿಸಿದೆ. ಈ ವಿಚಾರವಾಗಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ ಪರ ವಕೀಲ ಬಾಲನ್ ಅವರಿಗೆ ಕೋರ್ಟ್ ಈ ಕುರಿತು ಮಾಹಿತಿ ನೀಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರೋಪಿಗಳು ಕೂಡ ಸಾಕ್ಷ್ಯಗೆ ಸಂಬಂಧಪಟ್ಟಂತೆ ಹಾಗು ಸಾಕ್ಷಿಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಆತ್ಮಹತ್ಯೆ ಘಟನೆ ನಡೆದಿದೆ. ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಜಿಗಿದು ಮುರಳಿ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುರುಳಿಗಿ ಗ್ರೇಟರ್, ಬೆಂಗಳೂರು ಅಥಾರಿಟಿ ನೋಟಿಸ್ ನೀಡಿತ್ತು. ತನಗೆ ಜಿಬಿಎಯಿಂದ ನೋಟಿಸ್ ಕೊಡಿಸಲು ಪಕ್ಕದ ಮನೆಯ ಉಷಾ ನಾಯಕ್ ಕಾರಣ ಆಗಿದ್ದಾರೆ ಎಂದು ಉಲ್ಲೇಖಿಸಿ ಮುರುಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯಘಟ್ಟನ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಯಾವಕರಣಕ್ಕೆ ಮುರುಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ಫುಲ್ ಸ್ಟಾಪ್ ಹಾಕಿದ್ದಾರೆ. ಅಲ್ಲದೆ ಇಂದು ಮಂಗಳೂರಿನ ಕಾವೇರಿ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್ ನಡೆಸಿದರು. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಅಧಿಕಾರ ಶಾಶ್ವತ ಅಲ್ಲ ಯಾವತ್ತಿದ್ದರೂ ಬಿಡಲೇಬೇಕು 10 ವರ್ಷದ ನಂತರವಾದರೂ ಕೂಡ ಅಧಿಕಾರ ಬಿಡಬೇಕು ಆದರೆ ಯಾವಾಗ ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.ಇನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆಸಿ ವೇಣುಗೋಪಾಲ್ ಆಗಮಿಸಿದಾಗ ಡಿಕೆ ಶಿವಕುಮಾರ್ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು. ಈ ವಿಚಾರವಾಗಿ ಜೈಕಾರದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಲ್ಲವೂ ತಿಳಿಯದೆ ಉಭಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಕೆಸಿ ವೇಣುಗೋಪಾಲ್ ಕಾರ್ಯಕ್ರಮಕ್ಕೆ ಬಂದಿದ್ದರು ಅಷ್ಟೇ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಸಿಎಂ ಜೊತೆಗೆ…

Read More

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ. ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ…

Read More

ಬೆಂಗಳೂರು : ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಪೋಸ್ಟ್ ಗೆ ಎಂದು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈಯಲ್ಲಿ ಇರುವ ಒಂದೇ ಬ್ರಾಂಡ್ ವಾಚ್ ಎಲ್ಲರ ಗಮನ ಸೆಳೆದಿತ್ತು. ಇನ್ನು ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಟೀಕೆ ಮಾಡಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು 24 ಲಕ್ಷ ರೂಪಾಯಿ ಕೊಟ್ಟು ಈ ಗಡಿಯಾರ ನಾನೇ ಖರೀದಿ ಮಾಡಿದ್ದೇನೆ ನನ್ನದೇ ಕ್ರೆಡಿಟ್ ಕಾರ್ಡ್ ಕೊಟ್ಟು ಖರೀದಿಸಿದ್ದೇನೆ ಚೆಕ್ ಮಾಡಬಹುದು ಎಲೆಕ್ಷನ್ ಅಫೀಡಿವೇಟ್ ನಲ್ಲೂ ಕೂಡ ತೋರಿಸಿದ್ದೇನೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಗುರಿಯಾಗಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ನನಗೆ ಅದರ ಬಗ್ಗೆ ಗೊತ್ತಿಲ್ಲ ಸಿಎಂ ಸಿದ್ದರಾಮಯ್ಯ ಅವರಿಗೆ ವಾಚ್ ಹಾಕಿಕೊಳ್ಳುವ ಅಧಿಕಾರವಿದೆ ಸಿಎಂ ಸಿದ್ದರಾಮಯ್ಯ ಅವರಿಗೆ ವಾಜ್ ಖರೀದಿಸುವ ತಾಕತ್ತು ಕೂಡ ಇದೆ ನನ್ನ ತಂದೆ…

Read More

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಜಾಲದ ಸಂಬಂಧ ತಾಂಜೇನಿಯಾ ಮೂಲದ ನ್ಯಾನ್ಸಿ ಮತ್ತು ನೈಜೀರಿಯಾ ಮೂಲದ ಎಮುನಲ್ ಅರೆಂಜಿ ಇಡಿಕೋ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ನ್ಯಾನ್ಸಿ ಮೂರು ವರ್ಷಗಳ ಹಿಂದೆ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದಳು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಈಕೆ ಡ್ರಗ್ ಪೆಡ್ಲಿಂಗ್‌ನಲ್ಲಿ ಸಕ್ರಿಯಳಾಗಿದ್ದಳು. ಈಕೆಗೆ ಸಹಕರಿಸುತ್ತಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳು ಸ್ಥಳೀಯರು, ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಇನ್ನೊಬ್ಬ ಆರೋಪಿ ಎಮುನಲ್ ಅರೆಂಜಿ ಇಡಿಕೋ ನಾಲ್ಕು ವರ್ಷಗಳ ಹಿಂದೆ ವ್ಯಾಪಾರ ವೀಸಾದಡಿ ಭಾರತಕ್ಕೆ ಬಂದಿದ್ದ. ಸಿದ್ದಾಪುರ ಪೊಲೀಸ್…

Read More