Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು, ಫೆ.19 : ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು. ಏನಾದರೂ ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ” ಎಂದರು. “ನಾವು ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸಾವಿರಾರು ಕೋಟಿಯನ್ನು ಎಷ್ಟು ಎಂದು ಕೊಡಲು ಆಗುತ್ತದೆ. 20, 30 ಕೋಟಿ ಸೇರಿದಂತೆ 50- 100 ಕೋಟಿ ಹಣವನ್ನು ಅಭಿವೃದ್ಧಿಗೆ…
ಬೆಂಗಳೂರು, ಫೆ.19: ಸಾರಿಗೆ ನೌಕರರ ಬೇಡಿಕೆಗಿಂತ ಕಡಿಮೆ ಹಿಂಬಾಕಿ ನೀಡಿರುವ ಬಗ್ಗೆ ಸದ್ಯ ಅಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಪ್ರಿಯಾಂಕಾ ಗಾಂಧಿ ಅವರ ಜೊತೆ ಅಸ್ಸಾಂ ಭೇಟಿ ಪ್ರಿಯಾಂಕಾ ಗಾಂಧಿ ಅವರು, ನಾನು, ಭೂಪೇಶ್ ಬಘೇಲ ಅವರು ಹಾಗೂ ತಂಡ ಅಸ್ಸಾಂಗೆ ತೆರಳುತ್ತಿದ್ದೇವೆ. ಹಲವು ವಿಚಾರಗಳ ಕುರಿತು ಸರಣಿ ಸಭೆಗಳನ್ನು ನಡೆಸುತ್ತೇವೆ. ಅಸ್ಸಾಂ ಚುನಾವಣೆ ವಿಚಾರವಾಗಿ ದೆಹಲಿಯಲ್ಲಿ 3-4 ಸಭೆಗಳನ್ನು ನಡೆಸಿದ್ದೇವೆ. ಬೇಕಾದ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ. ತಂತ್ರಗಾರಿಕೆ ಸೇರಿದಂತೆ ಇನ್ನಿತರೇ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ ಬದಲಾವಣೆ ಆಗುತ್ತದೆ ಎನ್ನುವ ಭರವಸೆಯಿದೆ. ಕಾಮಾಕ್ಯ ದೇವಿ ದೇವಾಲಯಕ್ಕೂ ಭೇಟಿ ನೀಡುತ್ತೇನೆ. ಎರಡು ದಿನಗಳ ಪ್ರವಾಸ ಇದಾಗಿದೆ” ಎಂದು ಹೇಳಿದರು.
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರು ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಹಾಸನ ತಾಲೂಕಿನ ಯಲಗುಂದ ಗ್ರಾಮದಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಪರಿಣಾಮ ಕಾರಲ್ಲಿದ್ದ ಐದು ಜನ ಯುವಕರು ಗಾಯಗೊಂಡಿದ್ದಾರೆ. ಅತೀ ವೇಗದಲ್ಲಿ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಾಂಪೌಂಡ್ ಹಾರಿ ಮನೆಗೆ ಕಾರು ಗುದ್ದಿದೆ. ಪರಿಣಾಮ ಮನೆಯ ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಘಟನೆ ಬಳಿಕ ಸ್ಥಳೀಯರು ಆಗಮಿಸಿ, ಗಾಯಾಳುಗಳನ್ನು ರಕ್ಷಿಸಿದ್ದಾರೆ.
ಬೆಂಗಳೂರು : ನಿರ್ಮಾಪಕ ಸಾರಾ ಗೋವಿಂದು ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ. ಫೋನ್ ನಂಬರ್ ಹ್ಯಾಕ್ ಮಾಡಿದ ಹ್ಯಾಕರ್ಸ್ ಗಳು ಸಾರಾ ಗೋವಿಂದು ಅವರ ಕಾಂಟಾಕ್ಟ್ ನಲ್ಲಿ ಇದ್ದವರಿಗೆ 45 ಸಾವಿರ ಕಳುಹಿಸಲು ಮೆಸೇಜ್ ಮಾಡಿದ್ದಾರೆ. ಹೌದು ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ಮಾಪಕ ಸಾರಾ ಗೋವಿಂದ ಅವರ ಫೋನ್ ಅನ್ನು ಹ್ಯಾಕ್ ಮಾಡಿದ್ದಾರೆ.ಅಲ್ಲದೆ ಅವರ ಮೊಬೈಲ್ ನಲ್ಲಿ ಇರುವ ಎಲ್ಲಾ ಕಾಂಟಾಕ್ಟ್ ಗಳ ನಂಬರ್ ಗಳಿಗೆ ಮೆಸೇಜ್ ಮಾಡಿ 45,000 ಹಣ ಹಾಕುವಂತೆ ಮೆಸೇಜ್ ಮಾಡಿದ್ದಾರೆ. ಈ ಕುರಿತು ನಿರ್ಮಾಪಕ ಸಾರಾಗುವ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಹ್ಯಾಕರ್ಸ್ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ
ಮೈಸೂರು : ಇಂದಿನಿಂದ ನಾಗರಹೊಳೆ ಮತ್ತು ಬಂಡಿಪುರದಲ್ಲಿ ಸಫಾರಿಗೆ ಅವಕಾಶ ಮಾಡಿಕೊಡಲಾಗಿದ್ದು ಸಫಾರಿ ಆರಂಭ ವಿರೋಧಿಸಿ ರೈತರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಚೇರಿ ಮುತ್ತಿಗೆಗೆ ರೈತರು ಯತ್ನಿಸಿದ್ದಾರೆ. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ಈ ವೇಳೆ ಪೊಲೀಸರು ರೈತರನ್ನು ತಡೆದು ನಿಲ್ಲಿಸಿದ್ದಾರೆ. ಆಗ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಮುಂದೆ ಸಚಿವ ಮಲ್ಲಿಕಾರ್ಜುನ್ ರಾಜಿನಾಮೆ ಪ್ರಸ್ತಾಪ ಇಟ್ಟಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಹೌದು ವ್ಯವಹಾರಿಕವಾದ ಮತ್ತು ಕ್ಷೇತ್ರದ ಕೆಲಸ ಹಿನ್ನೆಲೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ ಮಾಡಿದ್ದಾರೆ. ಕಳೆದ ವಾರ ಸಿಎಂ ಸಿದ್ದರಾಮಯ್ಯ ಎದುರು ಸಚಿವ ಮಲ್ಲಿಕಾರ್ಜುನ ಕುರಿತು ಪ್ರಸ್ತಾಪ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಎಸ್ ಎಸ್ ಮಲ್ಲಿಕಾರ್ಜುನ್ ಈ ನಡೆ ಬಹಳ ಮಹತ್ವ ಪಡೆದಿದೆ. ಅಲ್ಲದೇ ತಮ್ಮ ಪುತ್ರನಿಗೆ ಮಲ್ಲಿಕಾರ್ಜುನ್ ಟಿಕೆಟ್ ಕೇಳುತ್ತಿದ್ದಾರೆ. ರಾಜಕೀಯ ಭಾಗವಾಗಿ ಎಸ್. ಎಸ್ ಮಲ್ಲಿಕಾರ್ಜುನ್ ಈ ಒಂದು ದಾಳ ಉರುಳಿಸಿದರಾ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಇತ್ತೀಚಿಗೆ ಕಾಂಗ್ರೆಸ್ಸಿನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಹೊಂದಿದ ನಂತರ ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣೆಗೆ ತಮ್ಮ ಪುತ್ರನಿಗೆ ಎಸ್ಸೆಸ್ ಮಲ್ಲಿಕಾರ್ಜುನ್…
ಕಲಬುರ್ಗಿ : ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿಯ ವೇಳೆ ಇಬ್ಬರು ಕಾನ್ಸ್ಟೇಬಲ್ ಗಳು ಸೇರಿದಂತೆ 9 ಜನರು ಪರಾರಿಯಾಗಿದ್ದಾರೆ. ಕಲ್ಬುರ್ಗಿಯ ಎಂ ಬಿ ನಗರ ಠಾಣೆ ಕಾನ್ಸ್ಟೇಬಲ್ ಗುರುನಾಥ್ ನಗರ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೇಬಲ್ ಮಡಿವಾಳಪ್ಪ ಪರಾರಿಯಾಗಿದ್ದಾರೆ. ದಿಗ್ಗಾವ್ ಹೊರವಲಯದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗವ್ ಗ್ರಾಮದ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದಾರೆ. ಇಬ್ಬರು ಕಾನ್ಸ್ಟೇಬಲ್ ಗಳು ಸೇರಿ 12 ಜನ ಇಸ್ಪೀಟ್ ಆಡುತ್ತಿದ್ದರು. ಚಿತಾಪುರ ಪೊಲೀಸರ ದಾಳಿಯ ವೇಳೆ 9 ಜೂಜು ಕೊರರು ಪರಾರಿಯಾಗಿದ್ದಾರೆ. ಮೂವರು ಜೂಜುಕೋರರನ್ನು ಪೊಲೀಸರು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಕಾನ್ಸ್ಟೇಬಲ್ ಗಳು ಜೂಜಾಟದಲ್ಲಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮಡಿವಾಳಪ್ಪ ಕಲ್ಬುರ್ಗಿಯಿಂದ ಕಾರಲ್ಲಿ ದಿಗ್ಗಾಂವ್ ಗೆ ಬಂದು ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ದಾಳಿ ವೇಳೆ ಮಡಿವಾಳಪ್ಪ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಚಿತಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಬಿಜೆಪಿ ಬಂದರೆ ಲಿಂಗಾಯತರು ಮುಖ್ಯಮಂತ್ರಿ ಅಂದರೆ? ಜೆಡಿಎಸ್ ಬಂದ್ರೆ ಒಕ್ಕಲಿಗರು ಮುಖ್ಯಮಂತ್ರಿ ಅಂದರೆ? ಬೇರೆ ಸಮುದಾಯಕ್ಕೆ ನ್ಯಾಯ ಎಲ್ಲಿ ಕೊಟ್ಟಂಗೆ ಆಗುತ್ತದೆ? ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ಅಲ್ಪಸಂಖ್ಯಾತರು ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ದಲಿತ ಸಿಎಂ ಕುರಿತು ಮತ್ತೆ ಮಾಜಿ ಸಚಿವ ಕೆ ಎನ್ ರಾಜಣ್ಣ ಪುನರುಚ್ಚಿಸಿದ್ದಾರೆ. ಈ ವಿಚಾರವಾಗಿ ವಾಸ್ತವಂಶ ಹೇಳಿದರೆ ಬಹಳ ಜನಕ್ಕೆ ಹಿಡಿಸುವುದಿಲ್ಲ. ದಲಿತರು ಅಲ್ಪಸಂಖ್ಯಾತರು ಯಾಕೆ ಸಿಎಂ ಆಗಬಾರದು? ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯದವರಿಗು ನ್ಯಾಯ ಕೊಡುವಂತಹ ಪಕ್ಷ. ನಾನು ಬೇರೆ ಬೇರೆ ವಿಚಾರಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಬೈಯುತ್ತೇನೆ ಅದು ಬೇರೆ ವಿಚಾರ. ದೇವರಾಜ್ ಅರಸು ಅವರು 1982 ರಲ್ಲಿ ಎಂಎಲ್ಎ ಇರಲಿಲ್ಲ ಅವರನ್ನ ಮುಖ್ಯಮಂತ್ರಿ ಮಾಡುತ್ತಾರೆ. ದೇವರಾಜು ಅರಸು ಅವರಿಗೆ ಇನ್ನೊಬ್ಬ ಅರಸು ಜಾತಿಯ ಎಂಎಲ್ಎ ಇಲ್ಲ. ಅದೇ ರೀತಿ ವಿರಪ್ಪ ಮೊಯ್ಲಿಯವರಿಗೆ ಕೂಡ ಇನ್ನೊಬ್ಬ ಸಮುದಾಯದವನು ಇಲ್ಲ. ಅದೇ ರೀತಿ ಧರ್ಮಸಿಂಗ್ ಅವರಿಗೂ ಇನ್ನೊಬ್ಬ ಜಾತಿಯವರಿರಲಿಲ್ಲ. ಹಾಗಾಗಿ ಕಾಂಗ್ರೆಸ್…
ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು ಶೀಘ್ರದಲ್ಲಿಯೇ ವಿದ್ಯುತ್ ದರ ಏರಿಕೆ ಆಗುವ ಸಾಧ್ಯತೆಗಳು ಕಂಡುಬರುತ್ತಿವೆ. ಈ ಕುರಿತು ಕೆ ಇ ಆರ್ ಸಿ ಚಿಂತನೆ ನಡೆಸಿದ್ದು, ನಾಳೆ ಈ ಕುರಿತು ಸಭೆ ನಡೆಯಲಿದೆ. ಈ ಕುರಿತು ನಾಳೆ ಕೆಇಆರ್ಸಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಪರ್ಯಾಯ ಮಾರ್ಗಕ್ಕಾಗಿ ಕೆಇಆರ್ಸಿ, ಮೊರೆ ಹೋಗಿರುವ ಬೆಸ್ಕಾಂ ಸದ್ಯ ಮುಂದಿನ ಎರಡು ಆರ್ಥಿಕ ವರ್ಷಗಳಿಗೂ ವಿದ್ಯುತ್ ದರ ಏರಿಸಿರುವ ಕೆ ಆರ್ ಸಿ, ಇದೀಗ ಮಧ್ಯಂತರ ವಿದ್ಯುತ್ ತರ ಏರಿಗೆ ಮಾಡಲು ಚಿಂತನೆ ನಡೆಸಿದೆ. ದರ ಏರಿಕೆ ಸಂಬಂಧಪಟ್ಟ ಗ್ರಾಹಕರು ಮತ್ತು ಉದ್ಯಮಿಗಳು ತೀವ್ರ ಅಸಮಾಧಾನ ಹೊರಹಾಕಿದ್ದಾರೆ 2024 ಮತ್ತು 25ರಲ್ಲಿ 2800 ಕೋಟಿ ನಷ್ಟ ಅನುಭವಿಸಿರುವ ಬೆಸ್ಕಾಂ, ಇದನ್ನು ಸರಿದೂಗಿಸಲು ಬೆಸ್ಕಾಂ ಕೆಇಆರ್ಸಿ ಮೊರೆ ಹೋಗಿದ್ದಾರೆ. ಹಾಗಾಗಿ ನಾಳೆ ಕೆಇಆರ್ಸಿಸ್ ಪಂಗಡದಲ್ಲಿ ಅಧಿಕಾರಿಗಳು ಸಭೆ ಕರೆದಿದ್ದು ಈ ಬೆಳೆ ಗ್ರಾಹಕರ ಆವಾಲುಗಳನ್ನು ಸ್ವೀಕರಿಸಲಿದ್ದಾರೆ.
ಹಾಸನ : ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಆದರೆ ಕುಟುಂಬಸ್ಥರು ಇದು ಅಸಹಜ ಸಾವಲ್ಲ ಇದೊಂದು ಕೊಲೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಮೃತ ಯುವಕನನ್ನ ಪುನೀತ್ (27) ಎಂದು ಗುರುತಿಸಲಾಗಿದೆ. ಪುನೀತ್ ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಬುಧವಾರ ಎಂದಿನಂತೆಯೇ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದ. ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶವಾಗಾರದ ಬಳಿ ನೂರಾರು ಮಂದಿ ಜಮಾಯಿಸಿದ್ದಾರೆ. ಕಾರ್ಖಾನೆಯ ನೀರಿನ ಸಂಪ್ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಪುನೀತ್ ಮೃತದೇಹ ಪತ್ತೆಯಾಗಿದೆ. ಆದರೂ ಮಾಹಿತಿ ನೀಡಿಲ್ಲ ಎಂದು ಕಾರ್ಖಾನೆ ಮೇಲಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪುನೀತ್ ಬೆಳಗ್ಗೆ ಸಮವಸ್ತ್ರದಲ್ಲೇ ಕೆಲಸಕ್ಕೆ ಹೋಗಿದ್ದು, ಮೃತಪಟ್ಟ ಬಳಿಕ ಸಮವಸ್ತ್ರ ಬದಲಿಸಲಾಗಿದೆ. ಪುನೀತ್ ಅವರದ್ದು ಸಹಜ ಸಾವಲ್ಲ, ಕೊಲೆ ಎಂದು ಕುಟುಂಬಸ್ಥರು ಹಾಗೂ ಸ್ನೇಹಿತರು ಆರೋಪಿಸಿದ್ದಾರೆ. ಶೇ.80ಕ್ಕೂ…














