Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸಾಲಭಾಧೆ ತಾಳದೆ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಲಂಪಲ್ಲಿ ಗ್ರಾಮದ ಮನೆಯಲ್ಲಿ ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೂಲಂಪಲ್ಲಿ ಗ್ರಾಮದಲ್ಲಿ ಈ ಒಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಜಂಗಾಲ ಹಳ್ಳಿ ಮೂಲದ ಅಶ್ವತಪ್ಪ (70) ಹಾಗೂ ಹನುಮಕ್ಕ (65) ಆತ್ಮಹತ್ಯೆಗೆ ಶರಣಾಗಿದ್ದಾರೆ ಸಾಲ ಬಾಧೆಯಿಂದ ವೃದ್ಧ ದಂಪತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಗುಡಿಮಂಡೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೊಡಗು : ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಶ್ವಾನ ಒಂದು ಪತ್ತೆ ಹಚ್ಚಿರುವ ಘಟನೆ ಕೊಡಗು ನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಂಕಣ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಕೊಡಗು ಜಿಲ್ಲೆಯ ತಾಲೂಕಿನ ಕೊಂಗಣ ಗ್ರಾಮದಲ್ಲಿ ಎರಡು ವರ್ಷದ ಸುನನ್ಯ ಕಾಫಿ ತೋಟದಲ್ಲಿ ದಾರಿ ತಪ್ಪಿ ಕಣ್ಮರೆಯಾಗಿದ್ದಳು. ಕಾಫಿ ಕೊಯ್ಲು ಹಿನ್ನೆಲೆಯಲ್ಲಿ ಮಕ್ಕಳನ್ನು ಜೊತೆಯಲ್ಲಿಯೇ ಪೋಷಕರು ಕರೆದುಕೊಂಡು ಹೋಗಿದ್ದರು. ಈ ವೇಳೆ ಸುನನ್ಯ ದಾರಿತಪ್ಪಿ ಕಳೆದು ಹೋಗಿದ್ದಳು. ಆಗ ಗ್ರಾಮಸ್ಥರ ಸಹಾಯದಿಂದ ಹಾಗೂ ಶ್ವಾನದ ಸಹಾಯದಿಂದ ಸುನನ್ಯಾಳನ್ನು ಪತ್ತೆಹಚ್ಚಲಾಗಿದೆ. ಶ್ವಾನದ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Read More

ತುಮಕೂರು : ತುಮಕೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು, ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರ ಕೊಲೆ ಮಾಡಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೆಂಡಸಗೆರೆ ಗ್ರಾಮದಲ್ಲಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಜುಳಾ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ರಾತ್ರಿ ಮಂಜುಳಾ ಒಂಟಿಯಾಗಿ ಮಲಗಿದ್ದಾಗ ದುಷ್ಕರ್ಮಿಗಳು ಮನೆಗೆ ನುಗ್ಗಿ ಮಂಜುಳಾ ಕತ್ತು ಸೀಳಿ, ಭೀಕರ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಂಜುಳಾ ಪತಿ ನಿಧನರಾಗಿದ್ದು ನಂತರ ತೋಟದ ಮನೆಯಲ್ಲಿ ಮಂಜುಳಾ ಮಗನ ಜೊತೆ ವಾಸ ಮಾಡುತ್ತಿದ್ದರು. ಇತ್ತೀಚಿಗೆ ಅಷ್ಟೆ ಮಗನ ಮದುವೆ ಕೂಡ ಮಾಡಿದ್ದರು. ಮಗ ಪತ್ನಿಮನೆಗೆ ತೆರಳಿದ ವೇಳೆ ಮಂಜುಳಾ ಬರ್ಬರ ಕೊಲೆಯಾಗಿದೆ. ಬೆಳಿಗ್ಗೆ ಮೈದುನ ತೋಟದ ಮನೆಯ ಬಳಿ ತೆರಳಿದಾಗ ಕೊಲೆ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮೈದುನ ಘಟನೆಯ ಬಗ್ಗೆ ಸಿಎಸ್ ಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸಿಎಸ್ ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದ್ದು ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ತೋಟದ ಗುಡ್ಡದ ಹಳ್ಳಿಯಲ್ಲಿ ಈ ಒಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸೌಭಾಗ್ಯ (31) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಅಷ್ಟೇ ಸೌಭಾಗ್ಯಪತಿ ಮೃತಪಟ್ಟಿದ್ದರು. ಪತಿ ಕಳೆದುಕೊಂಡು ಸೌಭಾಗ್ಯ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೌಭಾಗ್ಯ ಇಬ್ಬರೂ ಮಕ್ಕಳ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೇವಸ್ಥಾನದಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಟ್ಟಿದ್ದರು. ದೇವಸ್ಥಾನ ಹಾಗೂ ಮನೆ ಬಿಟ್ಟರೆ ಎಲ್ಲೂ ಹೋಗುತ್ತಿರಲಿಲ್ಲ ಈ ಒಂದು ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ರಾಯಚೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹರಿದು ರಸ್ತೆ ಬದಿ ನಿಂತಿದ್ದ ತಂದೆ ಮಗ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬೈಪಾಸ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ತಂದೆ ನಾಗಪ್ಪ (65) ಹಾಗೂ ಪುತ್ರ ರಮೇಶ್ (46) ಸ್ಥಳದಲ್ಲಿ ಸಾವನಪ್ಪಿದ್ದಾರೆ. ರಸ್ತೆ ಬದಿ ಮೊಬೈಲ್ನಲ್ಲಿ ತಂದೆ ಭಾಗ ಮಾತನಾಡುತ್ತ ನಿಂತಿದ್ದರು. ಏಕಾಏಕಿ ವೇಗವಾಗಿ ಬಂದಂತಹ ಲಾರಿ ಇಬ್ಬರ ಮೇಲೆ ಹರಿದು ದೇಹಗಳು ಛಿದ್ರ ಛಿದ್ರವಾಗಿವೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು. ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ…

Read More

ಬಳ್ಳಾರಿ : ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.ಪೃಥ್ವಿ (10) ಮೃತ ಬಾಲಕ ಎಂದು ತಿಳಿದುಬಂದಿದೆ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಿಬಿಎಸ್‌ಇ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. ತರಗತಿಯ ಐದು ಜನ ಸ್ನೇಹಿತರೊಂದಿಗೆ ಸೇರಿ ಬಂಡಿಹಳ್ಳಿಯ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಪೃಥ್ವಿ ಹಾಗೂ ಇನ್ನೋರ್ವ ಬಾಲಕ ಆಕಾಶ್ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಕುರಿಗಾಹಿಗಳು ಆಕಾಶ್ ಅನ್ನು ರಕ್ಷಿಸಿದ್ದು, ಪೃಥ್ವಿ ಮೃತಪಟ್ಟಿದ್ದಾನೆ. ಈ ಸಂಬಂಧ ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ PHD ಪದವಿ ನೀಡದ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಸುಜಾತ ಬೆಂಡೆ (32) ಎಂದು ತಿಳಿದುಬಂದಿದೆ. ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಾಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಾಣಿ ಚೆನ್ನಮ್ಮ PHD ವಿದ್ಯಾರ್ಥಿನಿ ಸುಜಾತ ಅಸ್ವಸ್ಥ ವಿದ್ಯಾರ್ಥಿನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವ ವಿದ್ಯಾಲಯ ಘಾಟಿಕೋತ್ಸವದಲ್ಲಿ PHD ಪದವಿ ಪ್ರದಾನ ಮಾಡದ ಆರೋಪ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಾಯದ ಕುಲಪತಿ ಸಿಎಂ ತ್ಯಾಗರಾಜ್ ಕುಲಸಚಿವ ಸಂತೋಷ ಕಾಮೇಗೌಡ, ಗೈಡ್, KLN ಮೂರ್ತಿ ವಿರುದ್ಧ ಆರೋಪ ಕೇಳಿಬಂದಿದೆ. ರಾಯಭಾಗ ಪ್ರದೇಶದ ಸಮಗ್ರ ಚಾರಿತ್ರಿಕ ವಿಷಯದಲ್ಲಿ ಸಂಶೋಧನೆ 6 ತಿಂಗಳ ಹಿಂದೆ ಸಲ್ಲಿಕೆ ಮಾಡಿದ್ದ PHD ವಿದ್ಯಾರ್ಥಿನಿ ಸುಜಾತ. ಟಾರ್ಗೆಟ್ ಮಾಡಿ PHD ಪದವಿ ಕೊಡಲು ನಿರಾಕರಣೆ ಆರೋಪ ಕೇಳಿಬಂದಿದೆ. ಗೈಡ್ ಮೂರ್ತಿ ಕಿರುಕುಳ ಬಗ್ಗೆ ವಿಸಿ ಕುಲಸಚಿವರಿಗೆ…

Read More

ಹಾಸನ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಸಹೋದರನ ಭೀಕರ ಕೊಲೆ ಮಾಡಲಾಗಿದೆ. ಸೋಂಪುರ ಬಳಿ ಜಮೀನಿನಲ್ಲಿ ದಯಾಕರ್ (46) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸೋಂಪುರ ಗ್ರಾಮದಲ್ಲಿ ತಂದೆ ಕಾಲದ ಆಸ್ತಿಯಲ್ಲಿ ಪಾಲು ಸಂಬಂಧ ಸಹೋದರರ ನಡುವೆ ಗಲಾಟೆಯಾಗಿದೆ. ಆಸ್ತಿಯಲ್ಲಿ ಹೆಚ್ಚಿನ ಪಾಲು ಕೇಳಿ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಕೇಸ್ ವಿಚಾರಣೆ ಆಸ್ತಿ ಕೈ ತಪ್ಪುವ ಭೀತಿಯಿಂದ ದಯಾಕರ್ ನನ್ನ ಸಹೋದರ ಸಂಬಂಧಿ ಹಾಗು ಶಿಕ್ಷಕನಾಗಿರುವ ರಾಜಶೇಖರ್ ಕೊಲೆ ಮಾಡಿದ್ದಾನೆ. ತಮ್ಮ ವಶದಲ್ಲಿದ್ದ ಜಮೀನಿನಲ್ಲಿ ಬೆಳೆದಿದ್ದ ಸಿಲ್ವರ್ ಮರ ಕಡಿಸುತ್ತಿದ್ದ. ಕೋರ್ಟ್ನಲ್ಲಿ ಕೇಸ್ ನಡೆಯುತ್ತಿರುವ ಹಿನ್ನೆಲೆ ಮರ ಕಡಿಯದಂತೆ ದಯಾಕರ್ ಒತ್ತಾಯ ಮಾಡಿದ್ದಾರೆ. ಈ ವೇಳೆ ತಡೆಯಲು ಮುಂದಾದ ದಯಾಕರ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದೆ. ಜಮೀನಿನಲ್ಲಿಯೇ ದಯಾಕರನನ್ನು ಕೊಚ್ಚಿ ಸಹೋದರ ರಾಜಶೇಖರ್ ಕೊಲೆ ಮಾಡಿದ್ದಾನೆ. ದಯಾಕರ್ ನನ್ನ ಕೊಂದ ಬಳಿಕ ಶಿಕ್ಷಕ ರಾಜಶೇಖರ್ ಪರಾರಿಯಾಗಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಪೆರಾಂಡಪಲ್ಲಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಅಪಘಾತದಲ್ಲಿ ಗಾಯಗೊಂಡ ಐವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ ಮೂಲಕ ಕಾರುಗಳನ್ನು ತೆರವು ಮಾಡಲಾಗುತ್ತಿದೆ

Read More