Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ ಸುಮಾರು 15ಕ್ಕೂ ಹೆಚ್ಚು ಸ್ಪೋಟಕ ವಸ್ತುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಮತ್ತು ಕಾರ್ಮಿಕರಲ್ಲಿ ಇದೀಗ ಆತಂಕ ಮನೆ ಮಾಡಿದೆ. ಸ್ಫೋಟಕ್ಕೆ ಬಳಸುವ 15 ಕ್ಕೂ ಹೆಚ್ಚು ಮದ್ದುಗಳ ಕಾಟ್ರಿಜ್ಗಳು ಚಿನ್ನದ ಗಣಿ ಕಂಪನಿ ಗೇಟ್ ಬಳಿ ಮುಖ್ಯರಸ್ತೆಯಲ್ಲಿ ಪತ್ತೆಯಾಗಿವೆ. ಸ್ಫೋಟಕ ವಸ್ತುಗಳು ಯಾರಿಗೆ ಸೇರಿದ್ದು ಅನ್ನೊದು ಇನ್ನೂ ತಿಳಿದು ಬಂದಿಲ್ಲ. ಹಟ್ಟಿ ಚಿನ್ನದಗಣಿ ಭದ್ರತಾ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪೊಲೀಸರು ಈಗ ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಹಟ್ಟಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಭದ್ರತಾ ದೃಷ್ಟಿಯಿಂದ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಹಟ್ಟಿ ಚಿನ್ನದಗಣಿ ದ್ವಾರದ ಬಳಿ ಮದ್ದುಗಳು ಪತ್ತೆಯಾಗಿದ್ದರಿಂದ ಪೊಲೀಸರು ಪರಿಶೀಲನೆ ಚುರುಕುಗೊಳಿಸಿದ್ದಾರೆ. ಹಟ್ಟಿ ಚಿನ್ನದಗಣಿಯಲ್ಲಿ ಚಿನ್ನದ ಗಣಿಗಾರಿಕೆಗೆ ಬಳಸುವ ಮದ್ದುಗಳಾ ,ಖಾಸಗಿ ಕಲ್ಲು ಕ್ವಾರೆಗಳಲ್ಲಿ ಕಲ್ಲು ಗಣಿಗಾರಿಕೆಗೆ ಬಳಸುವ ಮದ್ದುಗಳಾ. ಯಾರು ಎಲ್ಲಿಗೆ ಸಾಗಿಸುತ್ತಿದ್ದರು ಅನ್ನೋ ಬಗ್ಗೆ ತನಿಖೆ ಆರಂಭಗೊಂಡಿದೆ.
ಬಳ್ಳಾರಿ : ಕಾಲೇಜಲ್ಲಿ ಗಾಂಜಾ ಡ್ರಗ್ಸ್ ಸಪ್ಲೈ ಆರೋಪ ಕೇಳಿ ಬಂದಿದ್ದು,ಈ ಹಿನ್ನೆಲೆ ABVP ಕಾರ್ಯಕರ್ತರು ಕಾಲೇಜಿಗೆ ನುಗ್ಗಿ ಬಳ್ಳಾರಿಯ ಖಾಸಗಿ ಕಾಲೇಜಿನಲ್ಲಿ ಹೂವಿನ, ಪಾಟ್ ಕಿಟಕಿ ಕ್ಲಾಸ್ ಪೀಸ್ ಪೀಸ್ ಮಾಡಿದ್ದಾರೆ. ಬಳ್ಳಾರಿಯ ಖಾಸಗಿ ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗಲಾಟೆ ನಡೆದಿದೆ. ಓರ್ವ ಕಾರ್ಯಕರ್ತನ ಕೈಗೆ ಗಾಯವಾಗಿ ರಕ್ತ ಸುರಿತಿದೆ. ವಿದ್ಯಾರ್ಥಿನಿಯರು ಸ್ಮೋಕ್ ಮಾಡುತ್ತಿರುವ ದೃಶ್ಯ ಸರಿಯಾಗಿದೆ ಬಳ್ಳಾರಿಯ ಕಾಸಿಗೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಗಾಜಾ ಸೇವನೆ ಮಾಡುತ್ತಿರುವುದು ಸೆರೆಯಾಗಿದೆ. ಗಾಂಜಾ ಡ್ರಗ್ಸ್ ಸೇವಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಗಂಭೀರವಾಗಿ ಆರೋಪಿಸಿದ್ದಾರೆ. ಕಾಲೇಜಿನ ಎಡ ಭಾಗದಲ್ಲಿ ವಿದ್ಯಾರ್ಥಿನಿಯರು ಸ್ಮೋಕ್ ಮಾಡುತ್ತಿರುವ ದೃಶ್ಯ ವೈರಲಾಗಿದೆ.
BIG NEWS : ಪ್ರೇಮ ವೈಫಲ್ಯ ಹಿನ್ನೆಲೆ, ಬೆಂಗಳೂರಲ್ಲಿ ಜಿಮ್ ಟ್ರೈನರ್ ಗೆ ಪ್ರೇಯಸಿಯಿಂದ ಚಾಕು ಇರಿತ : ಯುವತಿ ಅರೆಸ್ಟ್!
ಬೆಂಗಳೂರು : ಬಿಡದಿಯಲ್ಲಿ ಪ್ರೇಯಸಿಯಿಂದ ಜಿಮ್ ಟ್ರೈನರ್ ಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಜಿಮ್ ಟ್ರೈನರ್ ಆದಂತಹ ವೇಣುಗೋಪಾಲ್ (27) ಗೆ ಪ್ರೇಯಸಿ ಚಾಕು ಇರಿದಿದ್ದಾಳೆ. ಪ್ರೇಯಸಿ ಸುಧಾ (30) ಲಿಂದ ಪ್ರಿಯಕಟ ವೇಣುಗೋಪಾಲ್ ಗೆ ಚಾಕು ಇರಿದಿದ್ದಾಳೆ. ವೇಣುಗೋಪಾಲ್ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲು ಆಗಿದ್ದಾನೆ. ನಿನ್ನೆ ರಾತ್ರಿ ರಾಮನಗರ ತಾಲೂಕಿನ ಬಿಡದಿಯಲ್ಲಿ ಒಂದು ಘಟನೆ ನಡೆದಿದೆ. ಕಳೆದರೆ 2 ವರ್ಷಗಳಿಂದ ಮತ್ತು ಸುಧಾ ಪ್ರೀತಿಸುತ್ತಿದ್ದರು ಪ್ರೇಮ ವೈಫಲ್ಯ ಹಿನ್ನೆಲೆ ವೇಣುಗೋಪಾಲ್ ಗೆ ಸುಧಾ ಚಾಕು ಇರಿದಿದ್ದಾಳೆ. ಆರೋಪಿತ ಮಹಿಳೆ ಸುಧಾಳನ್ನು ಬಿಡದಿ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಅಲ್ಲಿ ಈ ಒಂದು ಪ್ರಕರಣದ ವಿಚಾರಣೆ ನಡೆಯಿತು. ಆದಾಯ ಬಹಿರಂಗಪಡಿಸಿದರೆ ಸಾಕೆ? ವ್ಯವಹಾರವನ್ನು ಬಹಿರಂಗಪಡಿಸಬೇಕೇ? ಈ ಬಗ್ಗೆ ವಿಚಾರಣೆ ಅಗತ್ಯ ಬಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಸಿಮುನಿರಾಜುಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಎಸ್ ಎನ್ ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮತ್ತೆ ಜೀವ ನೀಡಿದ ಸುಪ್ರೀಂಕೋರ್ಟ್. ಸೆಪ್ಟೆಂಬರ್ ತಿಂಗಳಿಗೆ ವಿಚಾರಣೆಯನ್ನು ಇದೆ ವೇಳೆ ಸುಪ್ರೀಂ ಕೋರ್ಟ್ ಮುಂದೂಡಿತು.
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
BIG NEWS : ಅಧಿಕಾರದಲ್ಲಿದ್ದ ಸಿಎಂ ಅನ್ನು ಎಳೆದು ಬಂಧಿಸಿದ್ದಾರೆ : ಮೋದಿ, ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಷಾ ಅವರಿಂದ ದ್ವೇಷ ರಾಜಕಾರಣ ಮಾಡಿತ್ತಿದ್ದಾರೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಕೇಸ್ ಹಾಕುತ್ತಿದ್ದಾರೆ. ಅಧಿಕಾರಿಗಳಲ್ಲಿ ಇದ್ದ ಒಬ್ಬ ಮುಖ್ಯಮಂತ್ರಿಯನ್ನು ಎಳೆದು ಬಂಧಿಸಿದ್ದಾರೆ. ಅಧಿಕಾರದಲ್ಲಿದ್ದ ಸಿಎಂ ಅನ್ನು ಬಂಧಿಸಿದ್ದ ಇತಿಹಾಸ ದೇಶದಲ್ಲಿಯೇ ಇರಲಿಲ್ಲ. ಮೋದಿ ಅಮಿತ್ ಶಾ ವಿರುದ್ಧ ಮಾಜಿ ಸಿಎಂ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು. 2022 ರಲ್ಲಿ ನಡೆದ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ದೆಹಲಿ ರೌಸ್ ಅವೆನ್ಯೂ ಕೋರ್ಟ್, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿ ತಿಸೋಡಿಯ ಸೇರಿದಂತೆ 23 ಜನರು ಆರೋಪಮುಕ್ತ ಎಂದು ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಬೆನ್ನಲ್ಲೇ ಕೋರ್ಟಾವರಣದಲ್ಲಿ ಕೇಜ್ರಿವಾಲ್ ಕಣ್ಣೀರು ಹಾಕಿದರು. ತೀರ್ಪಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪ್ರಾಮಾಣಿಕ ವ್ಯಕ್ತಿ ನಿಯತ್ತಿನಿಂದ ಕೆಲಸ ಮಾಡಿದ್ದೇನೆ ಆದರೂ ನನ್ನ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಿದ್ದರು ಪ್ರಧಾನಿ ಮೋದಿ ಅವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ವಿಪಕ್ಷಗಳನ್ನು…
ಧಾರವಾಡ : ಸಾರಿಗೆ ಬಸ್ ನೌಕರನ ಪ್ರಕರಣ ಒಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಒಂದನ್ನು ನೀಡಿದ್ದು, ನೌಕರನ ಮೇಲೆ ಗಂಭೀರ ಆರೋಪಗಳಿದ್ದರೂ ಸೂಕ್ತ ಇಲಾಖಾ ವಿಚಾರಣೆ ನಡೆಸದೆ ಮತ್ತು ಆತನ ವಾದ ಆಲಿಸದೆ ಸೇವೆಯಿಂದ ವಜಾ ಮಾಡುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ತೀರ್ಪು ನೀಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKSRTC) ತನ್ನ ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಧಾರವಾಢ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ. ಬೆಳಗಾವಿಯ ಗೋಕಾಕ್ ತಾಲೂಕಿನ ಸಂಜುಕುಮಾರ್ ಎಂಬುವರು ನಿಗಮದ ನೌಕರರಾಗಿದ್ದ ತಂದೆಯ ನಿಧನದ ನಂತರ ಅನುಕಂಪದ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡಿದ್ದರು. ಕೆಲಸಕ್ಕೆ ಸೇರುವಾಗ ನಕಲಿ ಶೈಕ್ಷಣಿಕ ದಾಖಲೆಗಳನ್ನು ನೀಡಿದ್ದಾರೆ ಎಂಬ ಆರೋಪದಲ್ಲಿ ಅವರನ್ನು 2024ರ ಡಿ.13ರಂದು ಸೇವೆಯಿಂದ ವಜಾಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಪೀಠ, ನೌಕರನ ಮೇಲೆ…
ನವದೆಹಲಿ : 2022 ರಲ್ಲಿ ನಡೆದ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ದೆಹಲಿ ರೌಸ್ ಅವೆನ್ಯೂ ಕೋರ್ಟ್, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 23 ಜನರು ಆರೋಪಮುಕ್ತ ಎಂದು ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಬೆನ್ನಲ್ಲೇ ಕೋರ್ಟಾವರಣದಲ್ಲಿ ಕೇಜ್ರಿವಾಲ್ ಕಣ್ಣೀರು ಹಾಕಿದರು. ತೀರ್ಪಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪ್ರಾಮಾಣಿಕ ವ್ಯಕ್ತಿ ನಿಯತ್ತಿನಿಂದ ಕೆಲಸ ಮಾಡಿದ್ದೇನೆ ಆದರೂ ನನ್ನ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಿದ್ದರು ಪ್ರಧಾನಿ ಮೋದಿ ಅವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಕೇಸ್ ಹಾಕುತ್ತಿದ್ದಾರೆ. ನನ್ನ ಮೇಲೆ ಕೇಸ್ ಹಾಕಿದ್ರು. ನಮ್ಮ ವಿರುದ್ಧ ಸುಳ್ಳು ಭ್ರಷ್ಟಾಚಾರ ಆರೋಪ ಹೋರಿಸಿದ್ದರು. ಆಪ್ ಪಕ್ಷವನ್ನು ಮುಗಿಸಲು ಸಂಚು ರೂಪಿಸಿದ್ದರು. ಎಂದು ಕೋರ್ಟ್ ತೀರ್ಪಿನ ಬಳಿಕ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಣ್ಣೀರು ಹಾಕಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್…
ಪತಿಯ ಆರ್ಥಿಕ ಪ್ರಗತಿಗಾಗಿ ಹೆಂಡತಿ ಮಾಡಬೇಕಾದ ಪರಿಹಾರ ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ…
ಬೆಂಗಳೂರು : ಬೆಂಗಳೂರಲ್ಲಿ ಪಾಸ್ ಪೋರ್ಟ್ ವೆರಿಫಿಕೇಶನ್ ಗೆ ಇದೀಗ ಹೊಸ ನಿಯಮ ಜಾರಿ ಮಾಡಲಾಗಿದೆ. ಬೆಂಗಳೂರು ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್ಪೋರ್ಟ್ ವೆರಿಫಿಕೇಶನ್ಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಹೌದು ಈ ಕುರಿತು ಡಿಜಿ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ಪಾಸ್ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು. ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮೊದಲು ಎಸ್ಎಂಎಸ್ ಅಥವಾ ಕರೆ ಮಾಡುವ ಮೂಲಕ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: 1. ಬಾಡಿ-ವೋರ್ನ್ ಕ್ಯಾಮೆರಾ (Body-worn Camera) ಕಡ್ಡಾಯ ಪರಿಶೀಲನೆಗೆ ಬರುವ ಪೊಲೀಸ್ ಅಧಿಕಾರಿಗಳು ಕಡ್ಡಾಯವಾಗಿ ಬಾಡಿ-ವೋರ್ನ್ ಕ್ಯಾಮೆರಾ ಧರಿಸಿರಬೇಕು. ಪರಿಶೀಲನೆ…














