Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಶ್ರೀ ರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ ಭೇದಿ ಆಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟನಹಳ್ಳಿ ದೇವಸ್ಥಾನದಲ್ಲಿ ನಿನ್ನೆ ಜನರು ಶ್ರೀ ರಾಮನವಮಿ ಪ್ರಸಾದ ಸೇವಿಸಿದ್ದರು. ಪ್ರಸಾದ ಸೇವಿಸಿದ ಬಳಿಕ ಬಹುತೇಕ ಭಕ್ತರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಬೆಟ್ಟೇನಹಳ್ಳಿಯಲ್ಲಿಯೇ ವೈದ್ಯಕೀಯ ಸಿಬ್ಬಂದಿಗಳು ಚಿಕಿತ್ಸೆ ನೀಡುತ್ತಿದ್ದಾರೆ. ತೀವ್ರ ಅಸ್ವಸ್ಥರಾದವರನ್ನು ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪ್ರತಿ ವರ್ಷ ಶ್ರೀ ರಾಮನವಮಿಯಂದು ಅನ್ನಪ್ರಸಾದ ವಿನಿಯೋಗಿಸಲಾಗುತ್ತಿತ್ತು. ಈ ವರ್ಷ ಮಾತ್ರ ಪ್ರಸಾದ ಸೇವಿಸಿದ ಶ್ರೀ ರಾಮನ ಭಕ್ತರಿಗೆ ವಾಂತಿಭೇದಿ ಕಾಣಿಸಿಕೊಂಡಿದೆ.
ನವದೆಹಲಿ : ಇಸ್ರೇಲ್ ನಲ್ಲಿ ಅಮೆರಿಕದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಬೆನ್ ಗುರಿಯನ್ ಏರ್ಪೋರ್ಟ್ ನಲ್ಲಿ ಅಮೆರಿಕದ ವಿಮಾನ ತುರ್ತು ಭೂಸ್ಪರ್ಶವಾಗಿದೆ.ಅಮೆರಿಕಾದ KC-135R ವಿಮಾನ ತುರ್ತು ಬೋಸ್ಪರ್ಶ ಆಗಿದೆ. ಇನ್ನು ಟೆಹ್ರಾನ್ ಮೇಲೆ ಅಮೆರಿಕ, ಇಸ್ರೇಲ್ ಮಿಸೆಲ್ ದಾಳಿ ಮುಂದುವರೆದಿದ್ದು ಜನವಸತಿ ಕಟ್ಟಡಗಳ ಮೇಲೆ ಮಿಸೆಲ್ ದಾಳಿ ನಡೆಸಿದೆ. ಈ ವೇಳೆ ಅವಶೇಷಗಳ ಅಡಿಯಿಂದ 1 ವರ್ಷದ ಮಗುವನ್ನು ಇದೀಗ ರಕ್ಷಣೆ ಮಾಡಲಾಗಿದೆ. ನೋವಿನಿಂದ ಪುಟ್ಟ ಮಗು ಅಳುತ್ತಿರುವ ದೃಶ್ಯ ಇದೀಗ ಮನಕಲಕುವಂತಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಸಂತನಗರದ ವಕ್ಫ್ ಬೋರ್ಡ್ ಎದರು ತಡರಾತ್ರಿ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರರನ್ನು ಜುಬೇರ್ ಅಹಮದ್ (42) ಅಬ್ದುಲ್ ಮುನೀರ್ ಪಾಷಾ (16) ಎಂದು ತಿಳಿದು ಬಂದಿದೆ. ಒನ್ ವೇ ನಲ್ಲಿ ಬಂದು ಬೈಕ್ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಇದ್ದ ಇಬ್ಬರೂ ಸಾವನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಾಲಕ ಅಯ್ಯಪ್ಪ ಮಧ್ಯ ಸೇವಿಸಿ ಕಾರು ಚಲಾಯಿಸಿರುವುದು ಪತ್ತೆಯಾಗಿದ್ದು, ವೊಗ್ಸ್ ವ್ಯಾಗನ್ ಕಾರನ್ನು ಜಪ್ತಿ ಮಾಡಿಕೊಟ್ಟಿದ್ದು ಚಾಲಕ ಅಯ್ಯಪ್ಪನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಾಗಲಕೋಟೆ : ಏಪ್ರಿಲ್ 9 ರಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಬಾಗಲಕೋಟೆಯಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದ್ದು, ಎರಡು ಕ್ಷೇತ್ರಗಳು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಚುನಾವಣೆ ಆಗಿದೆ ಎಂದರು. ನಾವು ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಬಿಜೆಪಿಯವರು ಏನು ಮಾಡಿದ್ದಾರೆ ಹೇಳಲಿ? ಜನರೇ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಬಿಜೆಪಿಯಲ್ಲಿ ಏನಿದೆ? ಬಿಜೆಪಿಯಲ್ಲಿ ಯಾವ ಲೀಡರ್ ಗಳಿದ್ದಾರೆ? ಬಿಜೆಪಿಯಲ್ಲಿ ಯಾವುದೇ ಲೀಡರ್ಗಳು ಇಲ್ಲ. ಬಿಜೆಪಿಯಲ್ಲಿ 20 ಬಾಗಲುಗಳಿದ್ದು 20 ಗ್ರೂಪ್ ಗಳಾಗಿ ವಿಂಗಡನೆ ಆಗಿದೆ. ಆರ್ ಅಶೋಕ್ ಅವರದ್ದು ಒಂದು ಗ್ರೂಪ್ ಆದರೆ, ಬಿವೈ ವಿಜಯೇಂದ್ರ ಅವರದ್ದು ಮತ್ತೊಂದು ಗುಂಪು ಆಗಿದೆ. ಇನ್ನು ರಮೇಶ್ ಜಾರಕಿಹೊಳಿ ಅವರದು ಬೇರೆ ಗುಂಪುಗಳಾಗಿವೆ. ಹೀಗಾಗಿ ಬಿಜೆಪಿಯಲ್ಲಿ 20 ಗುಂಪುಗಳಾಗಿವೆ. ಅಲ್ಲಿ ಏನು ಉಳಿದಿಲ್ಲ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಬೆಂಗಳೂರು: ಬೆಂಗಳೂರಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಕೃತ್ಯವೊಂದು ನಡೆದಿದೆ. ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಅರಳೂರಿನಲ್ಲಿ 6 ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕಲ್ಲಿನಿಂದ ಜಜ್ಜಿ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಹಿನ್ನೆಲೆ ಮೃತ ಬಾಲಕಿಯ ಪೋಷಕರು ಮೂಲತಃ ಅಸ್ಸಾಂ ರಾಜ್ಯದವರಾಗಿದ್ದು, ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದು ಅರಳೂರಿನಲ್ಲಿ ನೆಲೆಸಿದ್ದರು. ವೃತ್ತಿಯಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಇವರು, ತಮ್ಮ ಪುಟ್ಟ ಮಗಳೊಂದಿಗೆ ವಾಸವಿದ್ದರು. ಕಳೆದ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಹಠಾತ್ತಾಗಿ ನಾಪತ್ತೆಯಾಗಿದ್ದಳು. ಗಾಬರಿಗೊಂಡ ಪೋಷಕರು ಅಕ್ಕಪಕ್ಕದ ಪ್ರದೇಶಗಳಲ್ಲಿ ಹುಡುಕಾಡಿದರೂ ಯಾವುದೇ ಸುಳಿವು ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೌರ್ಜನ್ಯದ ಭೀಕರತೆ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದಾಗ, ಶನಿವಾರ ಬೆಳಿಗ್ಗೆ ಮನೆಯ ಸಮೀಪದ ನಿರ್ಜನ ಪ್ರದೇಶದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಆರೋಪಿಗಳು ಮಗುವಿನ ಮೇಲೆ…
ಬೆಂಗಳೂರು : SSLC ಹಿಂದಿ ಭಾಷಾ ಪರೀಕ್ಷೆಗೆ ಗ್ರೇಡ್ ಮಾರ್ಕ್ಸ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದು, ಇದರಿಂದ ಏನು ಪ್ರಯೋಜನ ಅಂತ ಬಿಜೆಪಿಯವರು ಕೇಳುತ್ತಾರೆ. ಹಿಂದಿ ಭಾಷೆ ಹೇರಿಕೆಯಿಂದ ಏನು ಲಾಭ ಆಗುತ್ತೆ ಅಂತ ಬಿಜೆಪಿಯವರು ಹೇಳಲಿ. ಕೇಂದ್ರ ಸಚಿವ ಅಮಿತ್ ಶಾ ಮನವೊಲಿಸಲು ರಾಜ್ಯ ಬಿಜೆಪಿ ನಾಯಕರು ಮಾತನಾಡುತ್ತಾರೆ ಅಷ್ಟೇ. ಇವರು ಸಂಸ್ಕೃತಕ್ಕೆ ಸಾವಿರಾರು ಕೋಟಿ ಹಣ ಕೊಟ್ಟಿದ್ದಾರೆ. ಕನ್ನಡಕ್ಕೆ 10 ವರ್ಷದಿಂದ 20 ಕೋಟಿ ಕೂಡ ಕೊಟ್ಟಿಲ್ಲ ರಾಜ್ಯದ ಭಾಷೆ ಬೆಳೆಯಬೇಕು. ತುಳು ಭಾಷೆಗೂ ಸ್ನಾನಮಾನ ಸಿಗಬೇಕು ಎಂಬ ಬೇಡಿಕೆ ಇದೆ ಕೇಂದ್ರ ಸರ್ಕಾರಕ್ಕೆ ಈ ವಿಚಾರವಾಗಿ ನಾವು ಪ್ರಸ್ತಾವನೆ ಕಳಿಸಿದ್ದೇವೆ. ಕೇಂದ್ರದವರಿಗೆ ರಾಜ್ಯ ಭಾಷೆಯ ಮೇಲೆ ಜವಾಬ್ದಾರಿ ಇಲ್ವಾ? ನೆಲ ಜಲ ಭಾಷೆಗೆ ಎಂಪಿಗಳು ಹೋರಾಟ ಮಾಡಿದ್ದಾರ? ಎಂದು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.
ಯಾದಗಿರಿ : ರಾಜ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಈ ಒಂದು ಘೋರ ಘಟನೆ ಸಂಭವಿಸಿದೆ. ಮೃತ ಮಕ್ಕಳನ್ನು ಕಿರಣ್ (6) ಬಸಮ್ಮ (11), ಶರತ್ (6) ಹಾಗೂ ಹನುಮೇಶ್ (7) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಈಜಲು ಹೋಗಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಮೃತದೇಹಗಳನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳದಲ್ಲಿ ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನವದೆಹಲಿ : ದಕ್ಷಿಣ ಲೇಬನಾನ್ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್ ನಡೆಸಿದ್ದು ಇದರಲ್ಲಿ ನಾಗರಿಕರು ಸೇರಿದಂತೆ ಮೂವರು ಪತ್ರಕರ್ತರು ಬಲಿಯಾಗಿದ್ದಾರೆ. ಯುದ್ಧದ ವರದಿ ಮಾಡಲು ಪತ್ರಕರ್ತರು ತೆರಳಿದ್ದರು ಇಸ್ರೇಲ್ ಏರ್ ಸ್ಟ್ರೈಕ್ ಹೊಡೆತಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇಸ್ರೇಲ್ ಇರಾನ್ ಮೇಲೆ ತನ್ನ ದಾಳಿಯನ್ನು ಒಂದು ವರೆಸಿದೆ ದಕ್ಷಿಣ ಲೇಬನಾನ್ ಮೇಲೆ ಇಸ್ರೇಲ್ ಹೇರ್ ಸ್ಟೈಲ್ ಪರಿಣಾಮದಿಂದ ನಾಗರೀಕರು ಸೇರಿದಂತೆ ಮೂರು ಪತ್ರಕರ್ತರು ಬಲಿಯಾಗಿದ್ದಾರೆ. ಅಲಿ ಶೋಯೆಬ್ ಫಾತಿಮಾ ಮತ್ತು ಮೊಹಮ್ಮದ್ ಮೃತ ದುರ್ದೇವಿಗಳು ಎಂದು ತಿಳಿದುಬಂದಿದೆ.
ಮೈಸೂರು : ಕಳೆದ ಮೂರು ವರ್ಷಗಳಲ್ಲಿ 4,011 ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಈ ವರ್ಷ ಖಾಲಿ ಇರುವ 8000 ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುತ್ತೇವೆ ಎಂದು ಪಿ ಎಸ್ ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರು ಕರ್ತವದಲ್ಲಿ ಇದ್ದಾಗ ನಿಮ್ಮ ಕುಟುಂಬದ ಬಗ್ಗೆ ಯೋಚಿಸಬೇಡಿ. ಮನೆಯ ಸದಸ್ಯರ ಬಗ್ಗೆ ಯೋಚಿಸಬೇಡಿ. ನಿಮ್ಮ ರಕ್ಷಣೆಗೆ ಸರ್ಕಾರ ಇರುತ್ತದೆ. ಮಾದಕ ವಸ್ತು ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಪೊಲೀಸರು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾರು ಡ್ರಗ್ಸ್ ತಯಾರಿಸುತ್ತಾರೆ, ಯಾರು ಡ್ರಗ್ಸ್ ಮಾರಾಟ ಮಾಡುತ್ತಾರೆ, ಎಂಬುವುದು ನಿಮಗೆ ಗೊತ್ತಿರುತ್ತದೆ. ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳಿಗೆ ಗೊತ್ತಿರುತ್ತದೆ. ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸರು ಸಜ್ಜಾಗಬೇಕು. ಪೊಲೀಸ್ ಅಧಿಕಾರಿಗಳು ಮಾನವೀಯತೆಯಿಂದ ಕೆಲಸ ಮಾಡಬೇಕು. ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು…
ಮೈಸೂರು : ಪೊಲೀಸ್ ಎಂದರೆ ಶಿಸ್ತು ಧೈರ್ಯ ಮತ್ತು ಪ್ರಾಮಾಣಿಕತೆ ಇರುವ ಕೆಲಸ ಎಂದು ಪಿ ಎಸ್ ಐ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಧ್ಯರಾತ್ರಿ 12 ಗಂಟೆಗೆ ಮಹಿಳೆಯರು ನಿರ್ಭಯವಾಗಿ ಹೋರಾಡಬೇಕು ಅಂತ ಸಮಾಜ ನಿರ್ಮಾಣ ಆಗಬೇಕು ಎಂಬುವುದು ಮಹಾತ್ಮ ಗಾಂಧೀಜಿ ಆಶಯ. ಎಷ್ಟೇ ಕಷ್ಟವಾದರೂ ಸಹ ಪೊಲೀಸರು ನ್ಯಾಯ ಎತ್ತಿ ಹಿಡಿಯಬೇಕು. ಬಲಾಡ್ಯರ ಅಧಿಕಾರ ಇರಬಾರದು. ಬಲಾಡ್ಯರ ಕೈಯಲ್ಲಿ ಅಧಿಕಾರ ಇದ್ದರೆ ಸಮಾ ಸಮಾಜ ನಿರ್ಮಾಣ ಅಸಾಧ್ಯ. ಪೊಲೀಸರು ಶ್ರೀಮಂತರ ಆಸೆಗೆ ಆಮಿಷಗಳಿಗೆ ಒಳಗಾಗಬಾರದು ಶ್ರೀಮಂತರು ಪೊಲೀಸರನ್ನು ದುರುಪಯೋಗಪಡಿಸಿಕೊಡಲು ಯತ್ನಿಸುತ್ತಾರೆ ಎಂದು ಪಿಎಸ್ಐ ಗಳ ನಿರ್ಗಮನ ಪದ ಸಂಚಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.














