Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ನಿಂದ ದಿಢೀರ್ ಕರೆ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿರುವ ಸಿಎಂ, ಇಂದು ಸಂಜೆ 7 ಗಂಟೆಗೆ ರಾಷ್ಟ್ರ ರಾಜಧಾನಿಗೆ ತೆರಳುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ವೇಣುಗೋಪಾಲ್ ಕರೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನಿನ್ನೆ ರಾತ್ರಿ ತಮಗೆ ಕರೆ ಮಾಡಿದ್ದರು ಎಂದು ಸಿಎಂ ತಿಳಿಸಿದ್ದಾರೆ. “ನಿನ್ನೆ ರಾತ್ರಿ ವೇಣುಗೋಪಾಲ್ ಅವರು ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. ನಾಳೆ (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ ಎಂದು ತಿಳಿಸಿದ್ದಾರೆ” ಎಂದು ಸಿದ್ದರಾಮಯ್ಯ ಸಭೆಯ ಸಮಯವನ್ನು ಬಹಿರಂಗಪಡಿಸಿದರು. ಸಭೆಯ ಅಜೆಂಡಾ ಸಸ್ಪೆನ್ಸ್: ಇದೇ ವೇಳೆ ಹೈಕಮಾಂಡ್ ಕರೆ ನೀಡಿರುವ ಸಭೆಯ ನಿಖರ ಉದ್ದೇಶದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. “ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇರುವುದು ನಿಜ. ಆದರೆ, ಸಭೆಯಲ್ಲಿ ಚರ್ಚೆಯಾಗಲಿರುವ…
ನವದೆಹಲಿ: ಮೇ 3ರಂದು ದೇಶಾದ್ಯಂತ ನಡೆದಿದ್ದ ನೀಟ್ ಯುಜಿ (NEET UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ವಿಚಾರಣೆ ನಡೆಸಿತು. ದೇಶದ ಅತ್ಯುನ್ನತ ನ್ಯಾಯಾಲಯವು ಈ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹಾಗೂ ಇತರ ಸಂಬಂಧಿತ ಪಾಲುದಾರರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಕಾರ್ಯವೈಖರಿಯ ವಿರುದ್ಧ ತೀವ್ರ ಬೇಸರ ಮತ್ತು ಅಸಮಾಧಾನ ವ್ಯಕ್ತಪಡಿಸಿತು. ಈ ಹಿಂದೆಯೂ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಎಚ್ಚೆತ್ತುಕೊಂಡಿಲ್ಲ. ಇಷ್ಟೆಲ್ಲಾ ವಿವಾದಗಳಾದರೂ ಕೇಂದ್ರ ಸರ್ಕಾರ ಮತ್ತು ಎನ್ಟಿಎ ಇನ್ನು ಕೂಡ ಪಾಠ ಕಲಿಯದಿರುವುದು ನಿಜಕ್ಕೂ ವಿಷಾದಕರ ಸಂಗತಿ ಎಂದು ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿತು. ಮೇಲ್ವಿಚಾರಣಾ ಸಮಿತಿಯಿದ್ದರೂ ವೈಫಲ್ಯ ಕಳೆದ ಬಾರಿ…
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು , ಅಂಗನವಾಡಿ ಕೇಂದ್ರದಲ್ಲಿ ಮಚ್ಚಿನಿಂದ ಕೊಚ್ಚಿ ಆಯಾಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿಯ ಶಿಗ್ಗಾವಿ ಪಟ್ಟಣದ ಗುಡ್ಡದ ಓಣಿ ಕೇಂದ್ರದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಅಂಗನವಾಡಿ ಆಯಾ ಪ್ರೇಮ ಎಂಬಾಕೆಯನ್ನು ಒಡಹುಟ್ಟಿದ ತಮ್ಮನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಪ್ರೇಮಳ ಚಿರಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ಓಡೋಡಿ ಬಂದಿದ್ದಾರೆ. ಆರೋಪಿ ಸಂಜೀವನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯಾಕೆ ಆರೋಪಿ ಸಂಜೀವ್ ತನ್ನ ಅಕ್ಕನ್ನ ಈ ರೀತಿ ಭೀಕರವಾಗಿ ಕೊಲೆ ಮಾಡಿದ ಎನ್ನುವುದು ತಿಳಿದುಬಂದಿಲ್ಲ.
ಕಾರ್ಕಳ, ಮೇ 25: ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದ್ದು, ಅವರ ಸುರಕ್ಷತೆಗಾಗಿ ವಿದ್ಯುತ್ ಪ್ರವಹಿಸುವ ಕೈಗೋಲು (ಸ್ಟಿಕ್), ಮಳೆಯಿಂದ ರಕ್ಷಿಸುವ ಜಾಕೆಟ್, ಶೂ ಇತ್ಯಾದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟಿಸಿದ ತರುವಾಯ ಅರಣ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಒದಗಿಸಲಾಗಿರುವ ಆಧುನಿಕ ಮತ್ತು ಹಗುರ ಬಂದೂಕುಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಂಚೂಣಿ ಸಿಬ್ಬಂದಿಯ ಸುರಕ್ಷತೆಗೂ ಗಮನ ಹರಿಸುವಂತೆ ತಿಳಿಸಿದರು. ಆನೆ ಕಾರ್ಯಪಡೆ, ಕಳ್ಳಬೇಟೆ ನಿಗ್ರಹ ಪಡೆ, ಮುಂಜೂಣಿ ಸಿಬ್ಬಂದಿಗಳಿಗೆ ವಸತಿಗೃಹಗಳನ್ನು ನೀಡಲಾಗಿದೆಯೇ ಎಂದೂ ಪ್ರಶ್ನಿಸಿದ ಸಚಿವರು, ಕಷ್ಟಪಟ್ಟು ಅಪಾಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಅಪಾಯಭತ್ಯೆ (ರಿಸ್ಕ್ ಅಲೊಯನ್ಸ್) ನೀಡಲಾಗುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ತಿಳಿಸಿದರು. ನಂತರ ಪ್ರವಾಸಿ ಮಂದಿರಕ್ಕೆ ತೆರಳಿದ ಸಚಿವರು ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅಹವಾಲು ಆಲಿಸಿದರು.
ಕಾರ್ಕಳ, ಮೇ 25: ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ನೂತನ ಕಟ್ಟಡ ಉದ್ಘಾಟಿಸಿ, ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸಮಸ್ಯೆ ಪರಿಹರಿಸಲು ಕೊನೆಯ ಅವಕಾಶ ದೊರೆತಿದ್ದು, ಸರ್ವೋನ್ನತ ನ್ಯಾಯಾಲಯಕ್ಕೆ ಮರು ಮನವಿ ಸಲ್ಲಿಸುವ ಸಲುವಾಗಿ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದರು. ಮೊದಲಿಗೆ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದಾಗ 9 ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಎಂದು ಗುರುತಿಸಲಾಗಿತ್ತು, ನಂತರ 2022ರಲ್ಲಿ ಪ್ರಮಾಣಪತ್ರ ಸಲ್ಲಿಸಿದಾಗ 3 ಲಕ್ಷ 33 ಸಾವಿರ ಹೆಕ್ಟೇರ್ ಜಮೀನು ಎಂದು ಪರಿಷ್ಕರಿಸಲಾಯಿತು. ಆಗ ಸಮರ್ಪಕವಾಗಿ ಸರ್ವೆ ನಡೆಸದೆ, ಖುದ್ದು ಪರಿಶೀಲಿಸದ ಕಾರಣ ಸರ್ಕಾರಿ ಕಟ್ಟಡ,…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ದಿಢೀರ್ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಗಂಭೀರ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಹೈಪ್ರೊಫೈಲ್ ಸಭೆಯಲ್ಲಿ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಭಾಗಿಯಾಗುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ ಚುನಾವಣೆಗಳ ನಂತರದ ರಾಜಕೀಯ ಪರಿಸ್ಥಿತಿ ಹಾಗೂ ರಾಜ್ಯ ಸರ್ಕಾರದ ಆಡಳಿತಾತ್ಮಕ ವಿಷಯಗಳ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ಅವರು ಲೋಕಸಭೆಯ ವಿರೋಧ ಪಕ್ಷದ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಸಿಸಿಎಚ್ ಕೋರ್ಟ್ನಿಂದ ನಗರದ 59ನೇ ಸೆಷನ್ ಕೋರ್ಟ್ಗೆ ವರ್ಗಾವಣೆಯಾಗಿದೆ. ಪ್ರಕರಣದ ಕನಿಷ್ಠ ಪ್ರಮುಖ 60 ಪ್ರಮುಖ ಸಾಕ್ಷಿ ಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಕಡ್ಡಾಯವಾಗಿ ಮುಗಿಸಬೇಕು. ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಬೆಂಗಳೂರಿನ ಸೆಷನ್ ಕೋರ್ಟ್ಗೆ ಸಲ್ಲಿಸಿದ್ದಾರೆ. ಈ ಆದೇಶದ ಅನ್ವಯ, ಪ್ರಕರಣದ ತ್ವರಿತಗತಿ ವಿಚಾರಣೆ ನಡೆಸುವ ಹಾಗೂ ಆರೋಪಿಗಳಿಗೆ ಒದಗಿಸಬೇಕಾದ ಕನಿಷ್ಠ ಸೌಲಭ್ಯಗಳ ಮಾರ್ಗಸೂಚಿಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಸುಜಾತಾ ಎಂ.ಸಾಮ್ರಾಣಿ ಅವರು ಕೊಲೆ ನ್ಯಾಯಾಲಯ ನಿರ್ಧರಿಸಲಿದೆ. ನ್ಯಾ. ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದು ಹೊರಗಿರುವ 5 ಆರೋಪಿಗಳ ಜಾಮೀನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾ ರಣೆ ನಡೆಸಿರುವ ಹೈಕೋರ್ಟ್, ಸದ್ಯ ತನ್ನ ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಹೈಕೋಟ್ ೯ಗೂ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರತಿಯನ್ನು ಸಲ್ಲಿಸಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಢೀರ್ ದೆಹಲಿ ಭೇಟಿಯ ಕುರಿತು ತೀವ್ರ ಚರ್ಚೆಗಳು ಮತ್ತು ವದಂತಿಗಳು ಎದ್ದಿರುವ ಬೆನ್ನಲ್ಲೇ, ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ ಎಂಬ ವಿಚಾರದ ಬಗ್ಗೆ ತಮಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಕುರಿತು ಹರಡಿರುವ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. “ನಾನು ಈಗಷ್ಟೇ ಪ್ರಮುಖ ಸಭೆಯೊಂದನ್ನು ಮುಗಿಸಿಕೊಂಡು ಹೊರಗೆ ಬಂದಿದ್ದೇನೆ. ಸದ್ಯಕ್ಕೆ ಈ ವಿಷಯದ ಕುರಿತು ನನಗಂತೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ” ಎಂದು ಹೇಳುವ ಮೂಲಕ ಸದ್ಯಕ್ಕೆ ಹರಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂಬ ಸೂಕ್ಷ್ಮ ಸಂದೇಶ ರವಾನಿಸಿದರು. ರಾಜ್ಯ ರಾಜಕೀಯ ವಲಯದಲ್ಲಿ ಈ ಭೇಟಿಯ ಸುತ್ತ ಹಲವು ಹೂಹಾಪೋಹಗಳು…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದ ಬಗರ್ ಹುಕುಂ ಭೂಮಿ ಮಂಜೂರಾತಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭಾರಿ ಹಗರಣ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯಮಗಳನ್ನು ಗಾಳಿಗೆ ತೂರಿ, ಬರೋಬ್ಬರಿ 1,000 ಎಕರೆಗೂ ಅಧಿಕ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಗಂಭೀರ ಆರೋಪ ಕೇಳಿಬಂದಿದೆ. ಅರ್ಹ ಬಡ ರೈತರಿಗೆ ಸಿಗಬೇಕಾಗಿದ್ದ ಭೂಮಿಯನ್ನು ಲಂಚದ ಆಮಿಷಕ್ಕೆ ಒಳಗಾಗಿ ಅನರ್ಹರ ಪಾಲಾಗಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲಿಗೆ ಕೇವಲ 238 ಎಕರೆ ಭೂಮಿಯ ಅಕ್ರಮ ಮಂಜೂರಾತಿಯಷ್ಟೇ ಮೇಲ್ನೋಟಕ್ಕೆ ಕಂಡುಬಂದಿತ್ತು. ಸುಮಾರು ಮೂರು ತಿಂಗಳ ಹಿಂದೆ ಲೋಕಾಯುಕ್ತ ಪೊಲೀಸರು ಈ ವ್ಯವಹಾರದ ಬೆನ್ನತ್ತಿದಾಗ ಆರಂಭಿಕ ಹಗರಣದ ಸುಳಿವು ಸಿಕ್ಕಿತ್ತು. ಲೋಕಾಯುಕ್ತರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಕಂದಾಯ ಇಲಾಖೆಯ ದಾಖಲೆಗಳಲ್ಲಿದ್ದ ತಾರತಮ್ಯ ಮತ್ತು ಅಕ್ರಮಗಳು ಸಾಬೀತಾಗಿದ್ದವು. ಕೇವಲ ಹಣದ ಆಸೆಗಾಗಿ ಅಧಿಕಾರಿಗಳು ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ವರ್ಗಾವಣೆ ಮಾಡಿರುವುದು ಸ್ಪಷ್ಟವಾಗಿತ್ತು. ಈ ಹಗರಣದ ಆಳ…
ಬೆಂಗಳೂರು : ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಿಸಲು ನಿರ್ಧರಿಸಿದೆ. ಮೃತಪಟ್ಟವರು, ಆದಾಯ ತೆರಿಗೆ ಪಾವತಿದಾರರು ಮತ್ತು ಒಂದೇ ಮನೆಯಲ್ಲಿ ಇಬ್ಬರು ಲಾಭ ಪಡೆಯುವ ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕಿ, ಅರ್ಹ ಬಡವರಿಗೆ ಮಾತ್ರ ಯೋಜನೆ ತಲುಪಿಸಲು ಮುಂದಾಗಿದೆ. ಹೌದು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ (ಮಹಿಳೆಯರಿಗೆ ಮಾಸಿಕ 2,000 ರೂ.) ಹಾಗೂ ಗೃಹ ಜ್ಯೋತಿ (ಉಚಿತ ವಿದ್ಯುತ್) ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಪರಿಷ್ಕರಣೆಗೆ ಪ್ರಮುಖ ಕಾರಣ ಪರಿಷ್ಕರಣೆಗೆ ಪ್ರಮುಖ ಕಾರಣ ಎಂದರೆ, ಮೃತಪಟ್ಟ ಫಲಾನುಭವಿಗಳಿಗೂ ಸಹ ಹಣ ಸಂದಾಯವಾಗುತ್ತಿದೆ. ಅಲ್ಲದೇ ತೆರಿಗೆ ಕಟ್ಟುವವರು ಸಹ ಗ್ಯಾರಂಟಿ ಯೋಜನೆ ಪಡೆಯುತ್ತಿದ್ದಾರೆ.ಹಾಗು ಒಂದೇ…














