Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು ಜೈಲು ಸಿಬ್ಬಂದಿ ವಿರುದ್ಧ ವಾಗ್ವಾದ ನಡೆಸಿ, ಪುಂಡಾಟಿಕೆ ಮೆರೆದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ನಿಯಮ ಉಲ್ಲಂಘನೆಯನ್ನು ಪ್ರಶ್ನಿಸಿದ ಜೈಲು ವಾರ್ಡರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ 50ಕ್ಕೂ ಹೆಚ್ಚು ಕೈದಿಗಳು ಒಟ್ಟಾಗಿ ಸೇರಿ ಜೈಲಿನೊಳಗೇ ಧರ್ಮದ ಪರ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿರುವುದು ತೀವ್ರ ಸಂಚಲನ ಸೃಷ್ಟಿಸಿದೆ. ನಕಲಿ ಹೆಸರಿನಲ್ಲಿ ಆಸ್ಪತ್ರೆಗೆ ದಾಖಲಾಗಲು ಯತ್ನ: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಕೈದಿಗಳು (ಉಗ್ರರು) ಚಿಕಿತ್ಸೆಗಾಗಿ ಜೈಲಿನ ಆಸ್ಪತ್ರೆಗೆ ಬಂದಿದ್ದರು. ಆದರೆ, ಅವರು ನಿಯಮಗಳನ್ನು ಗಾಳಿಗೆ ತೂರಿ, ತಮ್ಮ ನಿಜವಾದ ಗುರುತನ್ನು ಮರೆಮಾಚಿ ಬೇರೆ ಕೈದಿಯ ಹೆಸರಿನಲ್ಲಿ ಆಸ್ಪತ್ರೆಗೆ ದಾಖಲಾಗಲು ಯತ್ನಿಸಿದ್ದಾರೆ. ಈ ವೇಳೆ ಅಲ್ಲೇ ಕರ್ತವ್ಯದಲ್ಲಿದ್ದ ಜೈಲು ವಾರ್ಡರ್ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಇವರಿಬ್ಬರ ಅಸಲಿ ಗುರುತು ಪತ್ತೆಯಾಗಿದೆ. ಪ್ರಶ್ನಿಸಿದ ವಾರ್ಡರ್ ಜೊತೆ ತೀವ್ರ ವಾಗ್ವಾದ: ಬೇರೆ ಕೈದಿಯ ಹೆಸರಿನಲ್ಲಿ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಆನೇಕಲ್‌ನಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಸಂಚು ರೂಪಿಸಿದ್ದ ಭಾರಿ ಕಳ್ಳಬೇಟೆಗಾರರ ಜಾಲವೊಂದನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಆನೇಕಲ್ ವಲಯ ಅರಣ್ಯಾಧಿಕಾರಿಗಳ (RFO) ನೇತೃತ್ವದ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ, ಒಟ್ಟು 7 ಮಂದಿ ಖತರ್ನಾಕ್ ಕಳ್ಳಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ತಟ್ಟೆಕೆರೆ ಅರಣ್ಯ ಪ್ರದೇಶದಲ್ಲಿ ದಾಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಆನೇಕಲ್ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತಂಡವು, ತಟ್ಟೆಕೆರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೊಂಚು ಹಾಕಿ ಕುಳಿತಿದ್ದರು. ಈ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ಅನುಮಾನಾಸ್ಪದವಾಗಿ ಬಂದಿಳಿದ 7 ಮಂದಿಯ ತಂಡವನ್ನು ಸುತ್ತುವರೆದು ವಶಕ್ಕೆ ಪಡೆದಿದ್ದಾರೆ. ಅರಣ್ಯದೊಳಗೆ ನುಗ್ಗಿ ಮೂಕ ಪ್ರಾಣಿಗಳನ್ನು ಬೇಟೆಯಾಡಲು ಇವರು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಸುರಿ ಕಾರು, ಬೇಟೆ ಪರಿಕರಗಳು ವಶಕ್ಕೆ ಬಂಧಿತರಿಂದ ಬೇಟೆಯಾಡಲು ಬಳಸುತ್ತಿದ್ದ ಸ್ಕಾರ್ಪಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ವನ್ಯಜೀವಿಗಳನ್ನು ಕೊಲ್ಲಲು ಅಕ್ರಮವಾಗಿ ತಂದಿದ್ದ ಮಾರಕಾಸ್ತ್ರಗಳು ಹಾಗೂ ಬೇಟೆಗೆ ಬಳಸುವ ಇತರ ನಿಷೇಧಿತ ವಸ್ತುಗಳನ್ನು ಅರಣ್ಯ…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದೆ. ಎರಡೂ ಸದನಗಳ ಟಿಕೆಟ್ ಆಕಾಂಕ್ಷಿಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಸ್ತುತ ಲಭ್ಯವಿರುವ ಮಾಹಿತಿ ಪ್ರಕಾರ, ರಾಜ್ಯಸಭೆಯ ಒಂದು ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಮೂವರು ಪ್ರಮುಖ ನಾಯಕರ ನಡುವೆ ತೀವ್ರ ಪೈಪೋಟಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಪಕ್ಷದ ಹಿರಿಯ ನಾಯಕ ನಿರ್ಮಲ್ ಕುಮಾರ್ ಸುರಾನಾ ಅವರು ರೇಸ್‌ನಲ್ಲಿದ್ದಾರೆ. ಅನುಭವ ಮತ್ತು ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಈ ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಹೈಕಮಾಂಡ್ ಗಂಭೀರ ಕಸರತ್ತು ನಡೆಸಿದೆ. ಇನ್ನೊಂದೆಡೆ, ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇದೆ. ಪ್ರಮುಖವಾಗಿ ನಟಿ…

Read More

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಹೆತ್ತ ತಂದೆ ಹಾಗೂ ಒಡಹುಟ್ಟಿದ ಅಕ್ಕನನ್ನೇ ಯುವಕನೊಬ್ಬ ಚಾಕುವಿನಿಂದ ಇರಿದು ಅತ್ಯಂತ ಕ್ರೂರವಾಗಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಗಂಗಾವತಿ ತಾಲೂಕಿನ ಹೊಸ ಅಯೋಧ್ಯಾ ಗ್ರಾಮದಲ್ಲಿ ಈ ರಕ್ತಸಿಕ್ತ ಅಧ್ಯಾಯ ನಡೆದಿದ್ದು, ಸದ್ಯ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಹೊಸ ಅಯೋಧ್ಯಾ ಗ್ರಾಮದ ನಿವಾಸಿಯಾದ ಸಾಯಿಮಣಿ ಎಂಬ ಯುವಕನೇ ತನ್ನ ಸ್ವಂತ ಕುಟುಂಬದವರ ಮೇಲೆಯೇ ಮರಣಾಂತಿಕ ದಾಳಿ ನಡೆಸಿದ ನರಹಂತಕ. ಈತನ ದಾಳಿಗೆ ತಂದೆ ವೆಂಕಟನಾಯ್ಡು (45) ಹಾಗೂ ಅಕ್ಕ ಪ್ರಗತಿ (19) ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ. ದಾಳಿಯ ವೇಳೆ ತಾಯಿ ಸೌಜನ್ಯ ಅವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಬಳಿಕ ಆರೋಪಿ ಸಾಯಿಮಣಿ ತನಗೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆನ್‌ಲೈನ್ ಗೇಮಿಂಗ್ ವ್ಯಸನದ ಶಂಕೆ: ಪ್ರಾಥಮಿಕ ಮೂಲಗಳ ಪ್ರಕಾರ, ಆರೋಪಿ ಸಾಯಿಮಣಿ ತೀವ್ರವಾಗಿ ಆನ್‌ಲೈನ್ ಗೇಮ್‌ಗಳಿಗೆ ದಾಸನಾಗಿದ್ದ…

Read More

ಒಡಿಶಾ : ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಡೆರಾಬಿಶ್ ಪ್ರದೇಶದಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವಂತಹ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಜನದಟ್ಟಣೆ ಇರುವ ಕಾಲೇಜು ಮುಂಭಾಗದಲ್ಲೇ ಯುವಕನೊಬ್ಬ ಮಾರಕಾಸ್ತ್ರ ಹಿಡಿದು ಯುವತಿಯೊಬ್ಬಳ ಜೀವಕ್ಕೆ ಸಂಚಕಾರ ತಂದಿರುವ ದೃಶ್ಯ ಇಡೀ ರಾಜ್ಯವನ್ನೇ ನಡುಗಿಸಿದೆ. ಹಗಲು ಹೊತ್ತಿನಲ್ಲೇ ನಡೆದ ಈ ಹೈಡ್ರಾಮಾದಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಾಲೇಜು ಎದುರೇ ನಡೆದ ಹೈಡ್ರಾಮಾ ಡೆರಾಬಿಶ್ ಕಾಲೇಜಿನ ಮುಂಭಾಗದಲ್ಲಿ ಎಂದಿನಂತೆ ಸಾರ್ವಜನಿಕರ ಓಡಾಟವಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಪ್ರತ್ಯಕ್ಷನಾದ ಯುವಕನೊಬ್ಬ, ಕೈಯಲ್ಲಿ ಮಚ್ಚು (ಲಾಂಗ್) ಹಿಡಿದು ಸಾರ್ವಜನಿಕರ ಮೇಲೆರಗಲು ಯತ್ನಿಸಿದ್ದಾನೆ. ತದನಂತರ ಅಲ್ಲೇ ಇದ್ದ ಯುವತಿಯೊಬ್ಬಳನ್ನು ಬಲವಂತವಾಗಿ ಹಿಡಿದು, ಆಕೆಯ ಕುತ್ತಿಗೆಗೆ ನೇರವಾಗಿ ಮಚ್ಚು ಇಟ್ಟು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ರಸ್ತೆಯ ಮಧ್ಯದಲ್ಲೇ ನಡೆದ ಈ ಭೀಕರ ದೃಶ್ಯವನ್ನು ಕಂಡು ಸುತ್ತಮುತ್ತಲಿನ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಯುವತಿ ಪ್ರಾಣಭಯದಿಂದ ಕಿರುಚಾಡುತ್ತಿದ್ದರೂ, ಯುವಕ ಮಾತ್ರ ಆಕೆಯನ್ನು ಬಿಡದೆ ಅಟ್ಟಹಾಸ ಮೆರೆದಿದ್ದಾನೆ.…

Read More

ಮಧ್ಯಪ್ರದೇಶ : ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿ ಒಂಟಿಯಾಗಿದ್ದ ಸಂದರ್ಭವನ್ನು ಬಳಸಿಕೊಂಡ ದುಷ್ಕರ್ಮಿಯೊಬ್ಬ, ಆಕೆಯ ಮೇಲೆ ಪ್ರಾಣಾಂತಿಕ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಕೊಡಲಿಯಿಂದ ಹಲ್ಲೆ, ಪ್ರಾಣ ಉಳಿಸಿಕೊಳ್ಳಲು ಓಡಿದ ಬಾಲಕಿ: ವರದಿಗಳ ಪ್ರಕಾರ, ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿ ಆರೋಪಿಯು ಅಕ್ರಮವಾಗಿ ಮನೆಗೆ ನುಗ್ಗಿದ್ದಾನೆ. ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಬಂದಿದ್ದ ಆತ, ಬಾಲಕಿಯ ಮೇಲೆ ಏಕಾಏಕಿ ಭೀಕರವಾಗಿ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾನೆ. ಈ ರಕ್ತಸಿಕ್ತ ದಾಳಿಯಿಂದ ತತ್ತರಿಸಿದ ಬಾಲಕಿ, ಹೇಗಾದರೂ ಮಾಡಿ ತನ್ನ ಜೀವವನ್ನು ಉಳಿಸಿಕೊಳ್ಳಬೇಕೆಂಬ ಆತುರದಲ್ಲಿ ಮನೆಯ ಮೇಲ್ಛಾವಣಿಯ (ಟೆರೇಸ್) ಕಡೆಗೆ ಓಡಿದ್ದಾಳೆ. ಮೇಲ್ಛಾವಣಿಯಲ್ಲೂ ಬೆನ್ನಟ್ಟಿದ ಕ್ರೂರಿ, ಕುತ್ತಿಗೆಗೆ ಉರುಲು: ಆದರೆ, ರಕ್ತಪಿಪಾಸುವಿನಂತಿದ್ದ ಆರೋಪಿಯು ಬಾಲಕಿಯನ್ನು ಅಲ್ಲಿಗೂ…

Read More

ಬೀದರ್ : ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಹೌದು ಕೋರ್ಟ್ ವಿಚಾರಣೆಗೆ ಗೈರು ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗಾರಗೆ ಬಂಧನದ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶರಣು ಸಲಗಾರ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಶರಣು ಸಲ್ಗಾರ ಬಂಧನಕ್ಕೆ ಮುಂದಾಗಿದ್ದಾರೆ. ಹಾಗಾಗಿ ಶಾಸಕ ಶರಣು ಸಲಗರ ಮನೆಗೆ ಪೋಲಿಸರು ಆಗಮಿಸಿದ್ದು ಸಿ.ಪಿ.ಐ ಅಲಿಸಬ್ ಹಾಗು ಪಿ ಎಸ್ ಐ ಚಂದ್ರಶೇಖರ್ ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಮನೆಗೆ ಭೇಟಿ ನೀಡಿದ್ದಾರೆ. ಅಕ್ರಮವಾಗಿ ಗೋಹತ್ಯೆ ಆರೋಪ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಸಲಗರ್ ಗೈರಾಗಿದ್ದು, ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ನಿಂದ ವಾರಂಟ್ ಜಾರಿಯಾಗಿದೆ.2023ರ ಜು.1ರಂದು ಬಕ್ರೀದ್ ಹಬ್ಬದ ವೇಳೆ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದ್ದು, ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಪ್ರಯಾಣಿಕರನ್ನ ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಶಿವಮೊಗ್ಗದ ಹುಲಿಕಲ್‌ನಿಂದ ಉಡುಪಿಗೆ ತೆರಳುತ್ತಿತ್ತು. ಹುಲಿಕಲ್ ಘಾಟ್ ಕುಸಿತದ ನಂತರ ಬಸ್‌ಗಳು ಕನೆಕ್ಟಿಂಗ್ ಆಗಿ ಕಾರ್ಯನಿರ್ವಹಿಸುತ್ತಿತ್ತು. ಹುಲಿಕಲ್‌ನಿಂದ ಹೊರಟ ಬಸ್ ಕೆಲವು ಕಿ.ಮೀ ಸಾಗುವಷ್ಟರಲ್ಲೇ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದಿಂದ ಹುಲಿಕಲ್ ಘಾಟ್‌ನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಅಸಮಾಧಾನಗೊಂಡ ಸಚಿವ ಸ್ಥಾನಕ್ಕೆ ನಿನ್ನೆ ರಾಮಲಿಂಗಾರೆಡ್ಡಿ ರಾಜಿನಾಮೆ ನೀಡಿದ್ದರು. ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಜೊತೆಗೆ ರಾಮಲಿಂಗಾರೆಡ್ಡಿ ಸುಧೀರ್ಘವಾಗಿ ಚರ್ಚೆ ನಡೆಸಿದರು. ಚರ್ಚೆ ಬಳಿಕ ಸುರ್ಜೆವಾಲಾ ರಾಮಲಿಂಗ ರೆಡ್ಡಿ ರಾಜಿನಾಮೆ ವಾಪಸ್ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸಿಂಗ್ ಸುರ್ಜೆವಾಲಾ, ರಾಮಲಿಂಗ ರೆಡ್ಡಿ ಪಕ್ಷದ ಹಿರಿಯ ನಾಯಕರು ಹಲವು ಸಲ ಸಚಿವರಾಗಿ ಅವರು ಕೆಲಸ ಮಾಡಿದ್ದಾರೆ ಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ರಾಮಲಿಂಗಾರೆಡ್ಡಿ ವಿಚಾರದಲ್ಲಿ ಬಿಜೆಪಿ ಸುಳ್ಳುಸುದ್ದಿ ಹಬ್ಬಿಸುತ್ತಿದೆ ಎಂದು ಬಿ ವೈ ವಿಜಯೇಂದ್ರ ಹಾಗೂ ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಮಲಿಂಗ ರೆಡ್ಡಿ ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ. ಹರಿಪ್ರಸಾದ್ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿಯವರು ಗೊಂದಲ ಆಗುವುದನ್ನು ಕಾಯುತ್ತಿದ್ದಾರೆ. ಈ ಮೂಲಕ ರಾಜಕೀಯ ಮೈಲೇಜ್ ಪಡೆಯಲು ಯತ್ನಿಸುತ್ತಿದ್ದಾರೆ. ಬಿವೈ…

Read More

ವಿಜಯಪುರ: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾಲುವೆ ಕಾಮಗಾರಿಯೊಂದರ ಬಾಕಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಹಣದ ಸಮೇತ ಲೋಕಾಯುಕ್ತ ಪೊಲೀಸರ ರೆಡ್ ಹ್ಯಾಂಡ್ ದಾಳಿಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾಲೋಟಗಿಯಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ರೂ. 18 ಸಾವಿರ ಲಂಚಕ್ಕೆ ಬೇಡಿಕೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು ರೂ. 3,71,419 ಮೊತ್ತದ ಬಿಲ್ ಬಿಡುಗಡೆ ಮಾಡಲು ಅಧಿಕಾರಿಗಳು ತೊಂದರೆ ಕೊಡುತ್ತಿದ್ದರು ಎನ್ನಲಾಗಿದೆ. ಈ ಅಧಿಕೃತ ಬಿಲ್ ಪಾವತಿಗಾಗಿ ಇಬ್ಬರೂ ಅಧಿಕಾರಿಗಳು ಒಟ್ಟಾಗಿ ರೂ. 18,000 ಲಂಚದ ಹಣ ನೀಡುವಂತೆ ಗುತ್ತಿಗೆದಾರರಿಗೆ ಕಡ್ಡಾಯ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಭ್ರಷ್ಟ ಅಧಿಕಾರಿಗಳ ವಿವರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳನ್ನು ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (AEE) ಸೇವುಲಾಲ್ ಚವ್ಹಾಣ ಹಾಗೂ ಮತ್ತೊಂದು ಉಪವಿಭಾಗದ ಕಿರಿಯ ಅಭಿಯಂತರ (JE) ಸಾತಲಿಂಗಪ್ಪ ರೂಡಗಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸೇವುಲಾಲ್…

Read More