Subscribe to Updates
Get the latest creative news from FooBar about art, design and business.
Author: kannadanewsnow05
ಚೈನ್ನೈ : ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಸರ್ವಪಕ್ಷಗಳ ತುರ್ತು ಸಭೆ ಕರೆದಿದ್ದು, ಈ ಒಂದು ಸಭೆಗೆ ಬಿಜೆಪಿ ಗೈರಾಗಿದೆ ಎಂದು ತಿಳಿದುಬಂದಿದೆ. ಸಿಎಂ ಸ್ಟಾಲನ್ ನೇತೃತ್ವದಲ್ಲಿ ಇದೀಗ ಸರ್ವ ಪಕ್ಷ ಸಭೆ ನಡೆಯುತ್ತಿದ್ದು, ಚೆನ್ನೈನಲ್ಲಿ ಸರ್ವಪಕ್ಷಗಳ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸ್ಟಾಲಿನ್ ತಮಿಳುನಾಡಿನ ಸರ್ವಪಕ್ಷಗಳ ಸಭೆಗೆ ಬಿಜೆಪಿ ಗೈರಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ನಟ ಕಮಲ್ ಹಾಸನ್ ಭಾಗವಹಿಸಿದ್ದಾರೆ. ಕ್ಷೇತ್ರಮರು ವಿಂಗಡಣೆಯಲ್ಲಿ 8 ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಸರ್ವ ಪಕ್ಷಗಳ ಸಭೆಗೆ ಆಹ್ವಾನಿಸಿದ್ದಾರೆ.
ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಅವರ ಮನೆಯಲ್ಲಿಯೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೋಮವಾರ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದ ಬಳಿಕ ಅವರು ವಾಸವಿದ್ದ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಫ್ಲ್ಯಾಟ್ನಲ್ಲಿ ಡಿಆರ್ಐ ಅಧಿಕಾರಿಗಳ ತಂಡ ಶೋಧ ನಡೆಸಿದ್ದು, ಈ ವೇಳೆ 2.06 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ 2.67 ಕೋಟಿ ರೂ. ನಗದು ಸೇರಿದಂತೆ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ರನ್ಯಾ ಬಂಧನ ಬಳಿಕ ಆಕೆ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ ನಲ್ಲಿರುವ ಫ್ಲಾಟ್ ಅನ್ನು ಅಧಿಕಾರಿಗಳ. ಪರಿಶೀಲನೇ ನಡೆಸಿದ್ದಾರೆ ಮೊನ್ನೆ ಸಹ ರಾತ್ರಿ ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 3 ದೊಡ್ಡ ಪೆಟ್ಟಿಗೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು ಎಂದು…
ಹಾವೇರಿ : ಪ್ರೀತಿಸಿದ ಹುಡುಗಿ ಮತ್ತೊಬ್ಬನ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು, ಕಳೆದ ಜನೆವರಿ 26 ರಂದು ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಶಶಿಧರ್ ಬೈರಾಪುರ (23) ಎಂದು ತಿಳಿದುಬಂದಿದೆ. ಮೊಬೈಲ್ ನಲ್ಲಿ ಯುವತಿ ಜೊತೆಗಿದ್ದ ಫೋಟೋ ಪತ್ತೆ ಆಗಿದ್ದು, ಈ ಹಿನ್ನೆಲೆ ಶಶಿಧರ ಸಾವಿಗೆ ಯುವತಿ ಪ್ರಚೋದನೆ ನೀಡಿದ್ದಾಳೆ ಎಂದು ಯುವತಿಯ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪ್ರೀತಿಯ ನಾಟಕವಾಡಿ ಶಶಿಧರ್ ತಲೆ ಕೆಡಿಸಿದ ಪ್ರಿಯತಮೆ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾಳೆ. ಜನವರಿ 26 ರಂದು ಶಶಿಧರ ಆತ್ಮಕ್ಕೆ ಶರಣಾಗಿದ್ದಾನೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಶಶಿಧರ್ ಪೋಷಕರು ದೂರು ದಾಖಲಿಸಿದ್ದಾರೆ. ಮೃತ ಶಶಿಧರ ತಾಯಿ ಹುಲಿಗೆಮ್ಮ ಅವರು ದೂರು ದಾಖಲಿಸಿದ್ದಾರೆ. ಮೊದಲು ಶಶಿಧರ್ ಆತ್ಮಹತ್ಯೆನಲ್ಲಿ ಯುಡಿಆರ್ ದಾಖಲಾಗಿತ್ತು. ಶಶಿಧರ್ ಮೊಬೈಲ್ ಪರಿಶೀಲಿಸಿದಾಗ ಪ್ರೀತಿಯ ವಿಚಾರ ಬಯಲಾಗಿದೆ. ಮೊಬೈಲಲ್ಲಿ ಇವತ್ತಿಗೆ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿವೆ. ಸಾವಿಗೆ…
ಬೆಳಗಾವಿ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ಇದುವರೆಗೂ ರಾಜ್ಯದ ಹಲವು ಕಡೆಗಳಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರಿಯುತ್ತಲೇ ಇದೆ ಇದೀಗ ಬೆಳಗಾವಿಯಲ್ಲಿ ಬಡ್ಡಿ ದಂಧೆಕೋರನೊಬ್ಬ ಯುವಕನೊಬ್ಬನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಿರುವ ಘಟನೆ ವರದಿಯಾಗಿದೆ. ಹೌದು ಬಡ್ಡಿ ಹಣಕ್ಕಾಗಿ ಯುವಕನನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಬೆಳಗಾವಿಯ ಸದಾಶಿವನಗರದ ನಿವಾಸಿ ವಿಶ್ವಜೀತ್ ಎನ್ನುವ ಯುವಕ ಕಿಡ್ನಾಪ್ ಆಗಿದ್ದಾನೆ. 2 ಲಕ್ಷ ಹಣವನ್ನು ವಿಶ್ವಜೀತ ಸಾಲದ ರೂಪದಲ್ಲಿ ಹಣ ಪಡೆದಿದ್ದ ಡ್ಯಾನಿ ಬೀಡಕರ್ ಎಂಬಾತನ ಬಳಿ 2 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದ. ಸಾಲದ ಅಸಲು ತೀರಿಸಿದ ಬಳಿಕವು ಬಡ್ಡಿ ಹಣಕ್ಕಾಗಿ ಡ್ಯಾನಿ ಕಿರುಕುಳ ನೀಡುತ್ತಿದ್ದ. ಈ ವೇಳೆ ಟೀ ಕುಡಿದು ಬರೋಣ ಬಾ ಎಂದು ವಿಶ್ವಜೀತ್ ನನ್ನು ಕರೆದೋಯ್ದಿದ್ದಾನೆ. ಬಳಿಕ ಹಣ ಕೊಡುವವರೆಗೂ ಬಿಡಲ್ಲ ಎಂದು ಕೂಡಿಹಾಕಿ ಚಿತ್ರಹಿಂಸೆ ಕೊಟ್ಟಿದ್ದಾನೆ. ಸಂತಿಬಸ್ತವಾಡ ಗ್ರಾಮದ ಫಾರ್ಮ್ ಹೌಸ್ ನಲ್ಲಿ…
ನವದೆಹಲಿ : ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಂದಿನ ಮಕ್ಕಳು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಡುಗೆ ಎಣ್ಣೆಯನ್ನು ಕಡಿಮೆ ಬಳಸುವುದರಿಂದ ಬೊಜ್ಜನ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದ್ದರು. ಇದೀಗ ವರದಿಯೊಂದರ ಪ್ರಕಾರ ಮುಂದಿನ 25 ವರ್ಷಗಳಲ್ಲಿ 44 ಕೋಟಿ ಭಾರತೀಯರಿಗೆ ಬೊಜ್ಜಿನ ಆತಂಕ ಎದುರಾಗಲಿದೆ ಎಂದು ತಿಳಿದುಬಂದಿದೆ. ಹೌದು ಮುಂದಿನ 25 ವರ್ಷಗಳಲ್ಲಿಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗಬಹುದು. ಈ ಕ ಬೊಜ್ಜು ಸಮಸ್ಯೆಯಲ್ಲಿ ಚೀನಾವನ್ನು ಮೂಲಕ ಬೊ ಭಾರತ ಮೀರಿಸಲಿದೆ ಎಂದು ‘ದಿ ಲ್ಯಾನ್ಸೆಟ್’ ವರದಿಯು ತನ್ನ ಜಾಗತಿಕ ವಿಶ್ಲೇಷಣೆಯಲ್ಲಿ ಬಹಿರಂಗಪಡಿಸಿದೆ. 2050ರ ವೇಳೆಗೆ ಭಾರತದಲ್ಲಿ 21.8 ಕೋಟಿ ಪುರುಷರು ಮತ್ತು 23.1 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 44.9 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗಲಿದ್ದು, ಒಟ್ಟಾರೆ ಜನಸಂಖ್ಯೆಯ ಸುಮಾರು ಮೂರನೇ ಒಂದು ಭಾಗದಷ್ಟು ಜನರು ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆ ಎದುರಿಸಲಿದ್ದಾರೆ. ಈ ಮೂಲಕ,…
ಚಾಮರಾಜನಗರ : ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ತಲೆಮರೆಸಿಕೊಂಡಿರುವ ಮೂವರ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳಾದ ಕೋಲಾರದ ಮಲ್ಲಿಕಾರ್ಜುನ(30), ಯಾದಗಿರಿಯ ಈರಣ್ಣ(32), ಸಿದ್ದರಾಮಯ್ಯ(40), ವಿಜಯಪುರದ ವಿಶ್ವನಾಥ(30) ಅವರನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಬಾಗಲಕೋಟೆಯ ಪುನೀತಾ, ಸ್ನೇಹಿತ್, ಭೀಮನಗೌಡ ಬಂಧನಕ್ಕಾಗಿ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ? ಮಾರ್ಚ್ 3 ರಂದು ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿತ್ತು. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲೇ ಇವೆ. ರೆಸಾರ್ಟ್ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಕಾರಿನಲ್ಲಿ ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇನ್ನು, ಕುಟುಂಬ ನಾಪತ್ತೆಯಾದ ವಿಚಾರ ತಿಳಿದು…
ಬೆಂಗಳೂರು : ದುಬೈ ನಿಂದ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಅವರನ್ನು ಇದೀಗ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಅವರ ಬಂಧನದ ಬೆನ್ನಲ್ಲೇ ಡಿ ಆರ್ ಐ ಅಧಿಕಾರಿಗಳು ಅವರ ಮನೆಯನ್ನು ಪರಿಶೀಲನೆ ಮಾಡುವ ವೇಳೆ ಬೆಚ್ಚಿ ಬಿದ್ದಿದ್ದಾರೆ ಎನ್ನಲಾಗಿದೆ. ಹೌದು ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ರನ್ಯಾ ಬಂಧನ ಬಳಿಕ ಆಕೆ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ ನಲ್ಲಿರುವ ಫ್ಲಾಟ್ ಅನ್ನು ಅಧಿಕಾರಿಗಳ. ಪರಿಶೀಲನೇ ನಡೆಸಿದ್ದಾರೆ ಮೊನ್ನೆ ಸಹ ರಾತ್ರಿ ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 3 ದೊಡ್ಡ ಪೆಟ್ಟಿಗೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಬರೋಬ್ಬರಿ 14.8 ಕೆಜಿ ಚಿನ್ನದೊಂದಿಗೆ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಾಗ ನಟಿ ರನ್ಯಾ ರಾವ್ ಡಿಆರ್ ಐ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು…
ಕಲಬುರ್ಗಿ : ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ವ್ಯಕ್ತಿಯೊಬ್ಬರ ಬಳಿ 30,000 ಲಂಚ ಸ್ವೀಕರಿಸುವ ವೇಳೆ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ತಾಲೂಕಿನ ಮೇಳಕುಂದ ಗ್ರಾಮದಲ್ಲಿ ನಡೆದಿದೆ. ಮೇಳಕುಂದಾ ಗ್ರಾಮದ ಗ್ರಾಮಾಧಿಕಾರಿ ಡಾ.ಕಾಂತೇಶ್ ಮತ್ತು ಅಖಾತರ್ ಪಟೇಲ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಕಂದಾಯ ಅಧಿಕಾರಿಗಳು ಎಂದು ತಿಳಿದುಬಂದಿದೆ. ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ಸಿದ್ದರಾಮಯ್ಯ ಎಂಬುವವರಿಗೆ 30 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ 20 ಸಾವಿರ ಮುಂಗಡ ಹಣ ಪಡೆಯುವಾಗ ಖಚಿತ ಮಾಹಿತಿ ಪಡೆದ ಪೊಲೀಸರು, ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.ಕಲಬುರಗಿ ಲೋಕಾಯುಕ್ತ ಎಸ್.ಪಿ ಬಿಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇಬ್ಬರು ಕಂದಾಯ ಅಧಿಕಾರಿಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನೆಲ್ಲೂರು ಮಠ ವರ್ಸಸ್ ಜಾಮಿಯಾ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಂಗಳೂರಿನ ಹನುಮಂತಪ್ಪ ಸರ್ಕಲ್ ಬಳಿ ಇರುವ ಮಸೀದಿ ವಿವಾದಿತ ಸ್ಥಳದ ಸುತ್ತಮುತ್ತಲು ಮಾರ್ಚ್ 10 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್ 10ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ತಹಶೀಲ್ದಾರ್ ಸುಮಂತ್ ಆದೇಶ ಹೊರಡಿಸಿದ್ದಾರೆ. ಕಟ್ಟಡ ನಿರ್ಮಾಣ ತೆರವು ಮಾಡದಂತೆ ತಹಶೀಲ್ದಾರ್ ಸೂಚನೆ ನೀಡಿದ್ದು, ಚಿಕ್ಕಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ ಮಾಡಲಾಗಿದೆ. ಪ್ರಕರಣ ಹಿನ್ನೆಲೆ ಏನು? ತಾಲೂಕು ಕಚೇರಿ ಮುಂಭಾಗದ ಬಡಾ ಮಕಾನ್ ಹಾಗೂ ನಲ್ಲೂರು ಮಠದ ಜಾಗದ ಕುರಿತು ಅನೇಕ ವರ್ಷಗಳಿಂದ ವಿವಾದ ನಡೆಯುತ್ತಿದೆ. ಆದರೆ, ಏಕಾಏಕಿ ವಕ್ಫ್ ಮಂಡಳಿ ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀಯಾ ಮಸೀದಿ ಕಮಿಟಿಯವರು ಬಡಾ ಮಕಾನ್ ಸಮೀಪದ ವಿವಾದಿತ ಸ್ಥಳದಲ್ಲಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ. ತೆರವು ಕಾರ್ಯಾಚರಣೆ ವಿಚಾರ ತಿಳಿಯುತ್ತಿದ್ದಂತೆ ನೆಲ್ಲೂರು ಮಠದವರು ಸ್ಥಳಕ್ಕೆ ಆಗಮಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಡಾ ಮಕಾನ್ ಕಮಿಟಿ ಸದಸ್ಯರು…