Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ನಸಿರ್ ಅಹಮದ್ ಅವರ ವಿರುದ್ಧ ಕೂಡ ಕಠಿಣ ಕ್ರಮ ತೆಗೆದುಕೊಂಡಿದ್ದು ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸಚಿವ ಸ್ಥಾನದ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಹೌದು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ, ನಸೀರ್ ಅಹಮದ್ ತಲೆದಂಡಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿರಲಿಲ್ಲ. ನಾನು ಪಾರ್ಟಿ ಕೆಲಸಕ್ಕೆ ಹೋಗಿದ್ದೆ ಒಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಕೆಲಸ ಮಾಡಲು ತಾನೇ ನಾನು ಕೇರಳಕ್ಕೆ ಹೋಗಿದ್ದು ಮೋಜು ಮಾಸ್ತಿ ಮಾಡಲು ಕಳ್ಳಾಟ ಆಡಲು ಹೋಗಿದ್ದಿನ? ಇಲ್ಲ ತಾನೇ? ಮೊಬೈಲ್ ಸ್ವಿಚ್ ಆಫ್ ಮಾಡಿ ಹಾಲಿಡೇಸ್…
ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ, ನಸೀರ್ ಅಹಮದ್ ತಲೆದಂಡಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿರಲಿಲ್ಲ. ನಾನು ಪಾರ್ಟಿ ಕೆಲಸಕ್ಕೆ ಹೋಗಿದ್ದೆ ಒಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಕೆಲಸ ಮಾಡಲು ತಾನೇ ನಾನು ಕೇರಳಕ್ಕೆ ಹೋಗಿದ್ದು ಮೋಜು ಮಾಸ್ತಿ ಮಾಡಲು ಕಳ್ಳಾಟ ಆಡಲು ಹೋಗಿದ್ದಿನ? ಇಲ್ಲ ತಾನೇ? ಮೊಬೈಲ್ ಸ್ವಿಚ್ ಆಫ್ ಮಾಡಿ ಹಾಲಿಡೇಸ್ ಹೋಗಿದ್ದರೆ ಅದು ತಪ್ಪು. ಹಗಲು ರಾತ್ರಿ ನಾನು ಕೆಲಸ ಮಾಡಿದ್ದೇನೆ ದಿನಕ್ಕೆ 350 ಕಿಲೋ ಮೀಟರ್ ಪ್ರಯಾಣ ಮಾಡಿ ಪ್ರಚಾರ ಮಾಡಿದ್ದೇನೆ ಈಗ ನನ್ನ ಮೇಲೆ ಒಂದಷ್ಟು ಆರೋಪ ಮಾಡುತ್ತಿದ್ದಾರೆ ಯಾಕೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಚಿವರ ಜೊತೆ ಸಭೆಯ ಬಳಿಕ ಅಸಮಾಧಾನ ಹೊರಹಾಕಿದ್ದಾರೆ. ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ ಮಾಧ್ಯಮಗಳಲ್ಲಿ ಈ ರೀತಿಯ ಚರ್ಚೆ ನಡೆಯುತ್ತಿದೆ…
ಬೆಂಗಳೂರು: ರಾಜಕೀಯವಾಗಿ ಹಾವು-ಏಣಿಯಾಟದಂತಿರುವ ರಾಜ್ಯ ಮತ್ತು ಕೇಂದ್ರದ ಇಬ್ಬರು ಪ್ರಬಲ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ಅಪರೂಪದ ಕ್ಷಣವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಏನಿದು ವಿಶೇಷ? ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನೋ ರಹಸ್ಯವಾಗಿ ಹೇಳುತ್ತಿರುವ ಫೋಟೋ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಿವಿಯಲ್ಲಿ ಗುಸುಗುಸು: ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಸಿಎಂ ಕಿವಿಯಲ್ಲಿ ಮಾತನಾಡುತ್ತಿದ್ದರೆ, ಸಿದ್ದರಾಮಯ್ಯ ಅವರು ಅಷ್ಟೇ ಗಂಭೀರವಾಗಿ ಆಲಿಸುತ್ತಿರುವುದು ಕಂಡುಬಂದಿದೆ. ಸಿಎಂ ರಿಂದಲೇ ಪೋಸ್ಟ್: ವಿಶೇಷವೆಂದರೆ, ಸ್ವತಃ ಮುಖ್ಯಮಂತ್ರಿಗಳೇ ಈ ಫೋಟೋವನ್ನು ತಮ್ಮ ಅಧಿಕೃತ ‘X’ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರ ಚರ್ಚೆ: ಪರಸ್ಪರ ರಾಜಕೀಯ ಟೀಕೆಗಳಲ್ಲಿ ತೊಡಗುವ ಈ ಇಬ್ಬರು ನಾಯಕರು…
ರಾಯಚೂರು : ರಾಯಚೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಸಿಂಧನೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಮೂಲದ ಸಂತ್ರಸ್ತ ಮಹಿಳೆಯನ್ನ ರಕ್ಷಿಸಲಾಗಿದೆ. ಇದಕ್ಕಾಗಿಯೇ ಮನೆಯನ್ನ ಬಾಡಿಗೆ ಪಡೆದಿದ್ದು, ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಹೆಣ್ಣುಮಕ್ಕಳನ್ನ ದಂಧೆಗೆ ಬಳಸುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿ ಅಭಿಷೇಕ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ : ಇಡೀ ದೇಶದಲ್ಲಿಯೇ ಬೆಚ್ಚಿ ಬೆಳಿಸುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 180ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಇದೀಗ ಕೇಳಿಬಂದಿದೆ. ಅಲ್ಲದೆ ಆರೋಪಿ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಲಭ್ಯವಾಗಿವೆ. ಹೌದು ಆರೋಪಿ ಅಯಾನ್ ಅಹಮದ್ ತನ್ವೀರ್ ಎನ್ನುವ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ಅಪ್ರಪ್ತ ಬಾಲಕಿಯರ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಅಮರಾವತಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಅಯಾನ್ ಮನೆ ಮೇಲೆ ಬುಲ್ಡೋಜರ್ ನಿಂದ ಆತನ ಮನೆ ತೆರುಗೊಳಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಅಮರಾವತಿಯ ಗ್ರಾಮೀಣ ಪೊಲೀಸ್ರಿಂದ ಇದೀಗ ತೀವ್ರ ತನಿಖೆ ನಡೆಯುತ್ತಿದೆ.
BREAKING : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು : ಡಿಸಿಎಂ ಡಿಕೆ ಶಿವಕುಮಾರ್ ಆದೇಶ
ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಅಮಾನತುಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ. ಹೌದು ಕಳೆದ ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪ ಅಬ್ದುಲ್ ಜಬ್ಬಾರ್ ಅವರ ಮೇಲೆ ಬಂದಿತ್ತು. ಅಬ್ದುಲ್ ಜಬ್ಬಾರ್ ವಿರುದ್ಧ ಮತ್ತಷ್ಟು ದಾಖಲೆ ಲಭ್ಯವಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬರ ವಿರುದ್ಧ ಈ ಒಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ಸಿನ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದಲೆ ಜಬ್ಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಇಂದು 3 ಗಂಟೆಗೆ ತೀರ್ಪು ಪ್ರಕಟಿಸಲಾಗುತ್ತೆ ಎಂದು ತಿಳಿಸಿದ್ದಾರೆ. 3 ಗಂಟೆ ಒಳಗೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ 10 ಗಂಟೆಗೆನೇ ಕೋರ್ಟು ತೀರ್ಪು ಪ್ರಕಟಿಸಬೇಕಾಗಿತ್ತು . ಆದರೆ ಮೊದಲಿಗೆ ವಿನಯ್ ಕುಲಕರಣಿ ಅಪರಾಧಿಯೋ ಅಥವಾ ನಿರಪರಾಧಿಯೋ ಎಂದು ಕೋರ್ಟ್ ನಿರ್ಧರಿಸಲಿದೆ ಅಪರಾಧಿ ಅಂತ ಎಂದಾದರೆ ಶಿಕ್ಷ ಪ್ರಮಾಣದ ಬಗ್ಗೆ ವಿಚಾರಣೆ ನಡೆಸಲಿದೆ ವಿಚಾರಣೆಯ ಬಳಿಕ ಶಿಕ್ಷೆ ಪ್ರಮಾಣ ಕೋರ್ಟ್ ಪ್ರಕಟಿಸಲಿದೆ. ಪ್ರಕರಣ ಹಿನ್ನೆಲೆ ಧಾರವಾಡದಲ್ಲಿ 2016 ಜೂನ್ನಲ್ಲಿ ಯೋಗಿಶ್ ಗೌಡ ಕೊಲೆಯಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಕೊಲೆಗೆ ಒಳಸಂಚು ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ ಪೊಲೀಸರ ಮುಂದೆ ಆರು ಜನ ಆರೋಪಿಗಳು ಶರಣಾಗಿದ್ದರು. ಯೋಗಿಶ್ ಗೌಡ ಕುಟುಂಬಸ್ಥರ ಮನವಿ ಮೇರೆಗೆ ಸಿಬಿಐಗೆ ನೀಡಲಾಗಿತ್ತು. 2019ರಲ್ಲಿ ಸಿಬಿಐ ಗೆ…
ಮಂಡ್ಯ : ಅರಣ್ಯ ಸಂರಕ್ಷಣೆ ಸ್ವಚ್ಛತಾ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಸ್ವದೇಶಿ ವಸ್ತುಗಳನ್ನು ಹೆಚ್ಚು ಬಳಕೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದರು. ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಪ್ರಧಾನಮಂತ್ರಿ ಮೋದಿ ಭಾಷಣದಲ್ಲಿ ಜನರಿಗೆ ಈ ಒಂದು ಕರೆ ನೀಡಿದರು. ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. ಆದಿಚುಂಚನಗಿರಿ ಮಠದ ಬಳಿ ಇರುವ ಕ್ರೀಡಾಂಗಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ 80 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಭೈರವೈಕ್ಯ ಮಂದಿರ ಉದ್ಘಾಟನೆಗೊಳಿಸಿ ಮಾತನಾಡಿದರು. ಇಂದು ನನ್ನ ಮನಸ್ಸಿನ ಭಾವನ ಕೇವಲ ಶಬ್ದಗಳಲ್ಲಿ ಹೇಳುವುದಕ್ಕೆ ಆಗಲ್ಲ ಅಂತಹ ಅನುಭೂತಿ ಈ ಮಠದಲ್ಲಿ ನನಗೆ ಸಿಕ್ಕಿದೆ ಸಕ್ಕರೆಗೆ ಮಂಡ್ಯ ನಗರ ಹಾಗೂ ಒಡೆಗೆ ಮದ್ದೂರು ಹೆಸರುವಾಸಿಯಾಗಿದೆ ಕರ್ನಾಟಕ ರಾಜ್ಯವು ತತ್ವಜ್ಞಾನ ಹಾಗೂ…
ಮಂಡ್ಯ : ಇಂದು ನನ್ನ ಮನಸ್ಸಿನ ಭಾವನ ಕೇವಲ ಶಬ್ದಗಳಲ್ಲಿ ಹೇಳುವುದಕ್ಕೆ ಆಗಲ್ಲ ಅಂತಹ ಅನುಭೂತಿ ಈ ಮಠದಲ್ಲಿ ನನಗೆ ಸಿಕ್ಕಿದೆ ಸಕ್ಕರೆಗೆ ಮಂಡ್ಯ ನಗರ ಹಾಗೂ ಒಡೆಗೆ ಮದ್ದೂರು ಹೆಸರುವಾಸಿಯಾಗಿದೆ ಕರ್ನಾಟಕ ರಾಜ್ಯವು ತತ್ವಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಮೃದ್ಧವಾಗಿದೆ ಆದಿಚುಂಚನಗಿರಿ ಮಠ ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು. ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. ಆದಿಚುಂಚನಗಿರಿ ಮಠದ ಬಳಿ ಇರುವ ಕ್ರೀಡಾಂಗಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ 80 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಭೈರವೈಕ್ಯ ಮಂದಿರ ಉದ್ಘಾಟನೆಗೊಳಿಸಿ ಮಾತನಾಡಿದರು. ಶ್ರೀಗಳು ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಮಾತ್ರ ಸೀಮಿತರಾಗಿಲ್ಲ ಅವರು ಜನರ ಸುಖ ಮತ್ತು ದುಃಖಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಜನರ ಸಂಘರ್ಷಗಳನ್ನು ಅರ್ಥ ಮಾಡಿಕೊಂಡು ಉತ್ತಮ…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಮಂತ್ರಿ ಭೇಟಿ ನೀಡಿ, ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ಒಂದು ಮಂದಿರ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದ್ದು ಚಾಲುಕ್ಯ, ಹೊಯ್ಸಳ, ಚೋಳರು ಹಾಗು ಗಂಗರ ಕಾಲದ ಶಿಲ್ಪ ಕಲೆಗಳ ಸಮಾಗಮವಾಗಿದೆ. ಹತ್ತು ವರ್ಷಗಳ ಹಿಂದೆ ಈ ಒಂದು ಮಂದಿರದ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಶಿಲ್ಪಿ ಶಂಕರ್ ಸ್ತಪತಿಅವರಿಂದ ಮಂದಿರದ ಕೆತ್ತನೆ ಕಾರ್ಯ ನೆರವೇರಿದ್ದು, ಬಾಲಗಂಗಾಧರನಾಥ ಶ್ರೀ ಗದ್ದುಗೆ ಸ್ಥಳದಲ್ಲಿ ಮಂದಿರ ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೊಟ್, ಕೇಂದ್ರ ಸಚಿವರಾದ ಹೆಚ್ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಸಿರಿದಂತೆ ಹಲವು ರಾಜಕೀಯ ಗಣ್ಯರು ಮಠಾಧೀಶರು ಉಪಸ್ಥಿತರಿದ್ದರು.













