Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶಿಕ್ಷೆ ಪ್ರಕಟ ಮಾಡಿತ್ತು. ಶಿಕ್ಷೆ ಪ್ರಕಟ ಬೆನ್ನಲ್ಲೆ, ಶಾಸಕ ವಿನಯ್ ಕುಲಕರಣಿ ಕೋರ್ಟ್ ನಲ್ಲಿಯೇ ಕಣ್ಣೀರು ಹಾಕಿದ್ದರು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ, ನಿನ್ನೆ ರಾತ್ರಿ ಊಟ ನಿದ್ದೆ ಇಲ್ಲದೆ ಕಣ್ಣೀರು ಹಾಕಿದ್ದಾರೆ. ಅಷ್ಟೆ ಅಲ್ಲದೆ ನಟ ದರ್ಶನ್ ಇರುವ ಬ್ಯಾರಕ್ ಸಮೀಪದಲ್ಲಿಯೇ ಶಾಸಕ ವಿನಯ್ ಕುಲಕರ್ಣಿ ಅವರ ಬ್ಯಾರಕ್ ಕೂಡ ಇದ್ದು, ಒಂದೇ ಕಡೆ ಇದೀಗ ಇಬ್ಬರು ಇದ್ದಾರೆ. ಆದರೆ ವಿನಯ್ ಕುಲಕರ್ಣಿಗೆ ರಾಜಕೀಯ ಭವಿಷ್ಯದ ಜೊತೆಗೆ ಇನ್ನೊಂದು ಬಹುದೊಡ್ಡ ಚಿಂತೆ ಕಾಡುತ್ತಿದೆ. ಹೌದು ವಿನಯ್ ಕುಲಕರ್ಣಿಗೆ ವಿಶೇಷವಾಗಿ ರಾಜಕೀಯ ಭವಿಷ್ಯವೇ ದೊಡ್ಡ ಪ್ರಶ್ನೆಯಾಗಿದ್ದು,ಅತ್ತ ಮತ್ತೊಂದು ದೊಡ್ಡ ಚಿಂತೆ ಎಂದರೆ ಕುಟುಂಬ, ಕುಟುಂಬದ ಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಏನಾಗಬಹುದು…
ಬೆಂಗಳೂರು : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹಾಗೂ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದು ಮಸೂದೆ ಸೋಲು ಎನ್ ಡಿ ಎ ಗೆ ಮುಖಭಂಗ ಅಲ್ಲ. ಇದು ಮಹಿಳೆಯರಿಗೆ ಕಾಂಗ್ರೆಸ್ ಮಾಡಿರುವ ಅವಮಾನ ಎಂದು ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಆರ್.ಅಶೋಕ್ ಕಾಂಗ್ರೆಸ್ ಮಹಿಳೆಯರಿಗೆ ಮಾಡಿರುವ ಅನ್ಯಾಯ ಇದು. ಮಸೂದೆಗೆ ಸೋಲಾಗಿದ್ದು ಕೆಲವು ರಾಜಕೀಯ ಪಕ್ಷಗಳ ಪಿತ್ತೂರಿ ಮತ್ತು ಮಹಿಳಾ ವಿರೋಧಿ ಭಾವನೆಯ ಸ್ಪಷ್ಟ ಸಂಕೇತವಾಗಿದೆ. ಮಹಿಳೆಯರ ಬಗ್ಗೆ ಮಾತನಾಡುವ ಅರ್ಹತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಮಹಿಳಾ ಘಟಕವನ್ನು ರದ್ದು ಮಾಡಿಬಿಡಿ. ಇನ್ನೆಷ್ಟು ವರ್ಷ ಮಹಿಳೆಯರನ್ನು ಕೇವಲ ಮತದಾರರನ್ನಾಗಿ ಬಳಸುತ್ತೀರಿ? ಮಹಿಳೆಯರು ದುರ್ಬಲರು ಎಂದು ಕಾಂಗ್ರೆಸ್ 60 ವರ್ಷ ಆಡಳಿತ ಮಾಡಿತು. ದೇಶದ 70 ಕೋಟಿ ಮಹಿಳೆಯರಿಗೆ ದ್ರೋಹ ಬಗೆಯಲಾಗಿದೆ. ಕಾಂಗ್ರೆಸ್ ನಿಂದ…
ಬೆಂಗಳೂರು : ಹಿಂದಿ ಅಂಕದ ವಿಷಯದಲ್ಲಿ ಕೋರ್ಟ್ ಆದೇಶದ ವಿಚಾರಕ್ಕೆ ಸಂಬಂಧಪಟ್ಟಂತೆ ಶಿಕ್ಷಕರು ಪಿಐಎಲ್ ಹಾಕಿರುವುದಕ್ಕೆ ಕೋರ್ಟ್ ಆದೇಶ ಮಾಡಿದೆ. ಶಿಕ್ಷಕರು ಇದೀಗ ಪಿಐಎಲ್ ವಾಪಸ್ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಿ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದರು. ಕೋಟ್ ಆದೇಶವನ್ನು ಪಾಲನೆ ಮಾಡುತ್ತೇವೆ. ಮರುಪರಿಶೀಲನೆ ಮಾಡಿ ಅಂತ ಕೋರ್ಟ್ ಎಲ್ಲೂ ಹೇಳಿಲ್ಲ 2025-26ರಲ್ಲಿ ಏನು ಮಾಡಿದ್ರಿ ಅದನ್ನು ಮಾಡಿ ಅಂತ ಕೋರ್ಟ್ ಹೇಳಿದೆ. ಪಿಐಎಲ್ ಹಾಕಿದ ಮಗು ವಿಚಾರದ ಬಗ್ಗೆ ಮಾತ್ರ ಮರುಪರಿಶೀಲನೆ ಮಾಡಿ ಅಂತ ಕೋರ್ಟ್ ಹೇಳಿದೆ. ಈ ವಿಚಾರದ ಬಗ್ಗೆ ಕೋರ್ಟ್ ಮಂಗಳವಾರ ಸಮಯ ನೀಡಿದೆ. ಅಂದು ಕೋರ್ಟ್ ಆದೇಶದ ಮೇಲೆ ಎಜಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು.
ಮಂಡ್ಯ :- ಮದ್ದೂರು ನಗರಸಭಾ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಗ್ರಾಮ ಪಂಚಾಯಿತಿ ಕಛೇರಿಗಳಲ್ಲೆ ( ಉಪ ಕಛೇರಿ ) ಇ – ಖಾತಾ ಸೇವೆಯನ್ನು ಪ್ರಾರಂಭಿಸಿರುವುದಾಗಿ ನಗರಸಭೆಯ ಪೌರಾಯುಕ್ತೆ ಎಸ್.ಎನ್. ರಾಧಿಕಾ ಶುಕ್ರವಾರ ಹೇಳಿದರು. ನಗರದ ನಗರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಈ ಹಿಂದೆ ಗ್ರಾಮ ಪಂಚಾಯಿತಿಗಳಾಗಿದ್ದ ಸೋಮನಹಳ್ಳಿ ಹಾಗೂ ಚಾಮನಹಳ್ಳಿಗಳನ್ನು ನಗರಸಭಾ ವ್ಯಾಪ್ತಿಗೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಸ್ಥಳಿಯ ಸಾರ್ವಜನಿಕರು ಇನ್ನು ಮುಂದೆ ಪ್ರತಿಯೊಂದು ಕೆಲಸ ಕಾರ್ಯಗಳಿಗೂ ನಗರಸಭಾ ಕಛೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕದಲ್ಲಿದ್ದರು. ಆದರೆ, ಸಾರ್ವಜನಿಕರು ನಗರಸಭಾ ಕಛೇರಿಗೆ ಅಲೆದಾಟ ಮಾಡುವ ಸನ್ನಿವೇಶ ಎದುರಾಗಬಾರದು ಎಂಬ ಉದ್ದೇಶದಿಂದ ಈ ಸೇವೆಯನ್ನು ಆರಂಭಗೊಳಿಸಲಾಗಿದ್ದು, ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಮನೆ ಕಟ್ಟಲು ಪರವಾನಗಿ ಸೇರಿದಂತೆ ಹಲವು ಸೇವೆಗಳನ್ನು ಕೂಡ ಉಪ ಕಛೇರಿಯಲ್ಲೆ ಆರಂಭಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಇ – ಖಾತಾ ಸೇವೆಯನ್ನು ಪಡೆಯಲು 50 ರೂ…
ಬೆಂಗಳೂರು : ಕಾಂಗ್ರೆಸ್ ಶಾಸಕರ ಪಾಲಿಗೆ ಜಿಲ್ಲಾ ಉಸ್ತುವಾರಿ ಸಚಿವರ ಇದೀಗ ವಿಲನ್ ಆಗಿದ್ದಾರೆ. ಹೌದು ಕಾಂಗ್ರೆಸ್ ಶಾಸಕರ ಕ್ಷೇತ್ರದ ಅನುದಾನದ ಮೇಲೆ ಸಚಿವರಿಗೆ ಕಣ್ಣು ಬಿದ್ದಿದ್ದು, ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ಸಚಿವರು ತಮ್ಮ ಕ್ಷೇತ್ರಕ್ಕೆ ಡೈವರ್ಟ್ ಮಾಡಿಕೊಂಡಿದ್ದಾರೆ ಶಾಸಕರ ಕ್ಷೇತ್ರಕ್ಕೆ ಮಂಜೂರಾದ ಅನುದಾನಕ್ಕೆ ಸಚಿವರಿಂದಲೇ ಇದೀಗ ಕತ್ತರಿ ಬಿದ್ದಿದೆ. ಮಂಜೂರು ಆದ ಅನುದಾನದ ಆದೇಶಕ್ಕೆ ಸಚಿವರು ತಿದ್ದುಪಡಿ ಮಾಡಿದ್ದಾರೆ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಸಚಿವರು ಕೊಂಡೊಯ್ಯುತ್ತಿದ್ದಾರೆ ಸಚಿವರ ನಡೆಯಿಂದ ಶಾಸಕರು ಇದೀಗ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಶಾಸಕರ ದೆಹಲಿ ಭೇಟಿ ವೇಳೆಯೂ ಹೈಕಮಾಂಡ್ ಮುಂದೆ ಈ ಒಂದು ವಿಷಯ ಪ್ರಸ್ತಾಪವಾಗಿದೆ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಪ್ರಗತಿ ಕಾಲೋನಿ ಅನುದಾನ 3 ಕೋಟಿ ರೂಪಾಯಿ ದಾನದಲ್ಲಿ 99 ಲಕ್ಷ ಹಣ ಬಿಡುಗಡೆಯಾಗಿದ್ದು ಹಣ ಬಿಡುಗಡೆ ಬಳಿಕ ಆದೇಶವನ್ನೇ ಉಸ್ತುವಾರಿ ಸಚಿವರು ಮಾರ್ಪಾಡು ಮಾಡಿದ್ದಾರೆ ಆದೇಶದಲ್ಲಿ ಕ್ಷೇತ್ರದ ಹೆಸರನ್ನೇ ತಿದ್ದುಪಡಿ ಮಾಡಿ ಅನುದಾನ ಡೈವರ್ಟ್ ಮಾಡಿದ್ದಾರೆ. ಆದೇಶದಲ್ಲಿ ಕ್ಷೇತ್ರದ ಹೆಸರಿನ ತಿದ್ದುಪಡಿ…
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳು ಬರುತ್ತಿದ್ದ 2,000 ರೂಪಾಯಿಗಳನ್ನು ಉಳಿತಾಯ ಮಾಡುವ ಮೂಲಕ ಮಹಿಳೆಯೊಬ್ಬರು ಸ್ವಂತ ಐಸ್ಕ್ರೀಮ್ ಅಂಗಡಿ ತೆರೆದು ಮಹಿಳಾ ಸಬಲೀಕರಣಕ್ಕೆ ಮಾದರಿಯಾಗಿದ್ದಾರೆ. ಹೌದು ಪ್ರತಿ ತಿಂಗಳು ತಮಗೆ ಸಿಗುತ್ತಿದ್ದ ಹಣವನ್ನು ಅನಗತ್ಯ ಖರ್ಚು ಮಾಡದೆ, ಹನಿ ಹನಿ ಕೂಡಿದರೆ ಹಳ್ಳ ಎಂಬಂತೆ ಸಂಗ್ರಹಿಸಿ ಇಂದು ಉದ್ಯಮಿಯಗಿ ಬೆಳೆದು ನಿಂತಿದ್ದಾರೆ. ಇವರ ಈ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದ ಎನ್.ವಿಶಾಲಾಕ್ಷಿ ಐಸ್ಕ್ರೀಮ್ ಅಂಗಡಿ ತೆರೆದು, ಸ್ವಾವಲಂಬಿ ಬದುಕು ಕಟ್ಟಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಧ್ಯಮ ವರ್ಗದ ಕುಟುಂಬದ ವಿಶಾಲಾಕ್ಷಿ ನಿತ್ಯ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ, ಪ್ರತಿ ತಿಂಗಳು 2,000 ರೂ.ನಂತೆ ಬರುವ ಗೃಹಲಕ್ಷ್ಮೀ ಹಣ ಕೂಡಿಟ್ಟು ಐಸ್ಕ್ರೀಂ ಅಂಗಡಿ ಓಪನ್ ಮಾಡಿದ್ದಾರೆ. ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್ ಕ್ಯಾಂಡಿ, ಕುಲ್ಫಿ ಐಸ್,…
ಹೈದ್ರಾಬಾದ್ : ನಿನ್ನೆ ತಾನೆ ಯಾದಗಿರಿಯಲ್ಲಿ ಖಾಸಗಿ ಬಸ್ಗೆ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಆರು ಜನರು ಸಜೀವ ದಹನಗೊಂಡಿದ್ದ ಘಟನೆ ನಡೆದಿತ್ತು. ಇದೀಗ ಹೈದರಾಬಾದ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ನಡುರಸ್ತೆಯಲ್ಲಿಯೇ ಖಾಸಗಿ ಬಸ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹೌದು ಹೈದರಾಬಾದ್ ನಲ್ಲಿ ರಸ್ತೆ ಮಧ್ಯೆ ಖಾಸಗಿ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ನಲ್ಲಿ ಇದ್ದ 18 ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ನಿಂದ ಪಲಕಲ್ಲುಗೆ ಈ ಒಂದು ಖಾಸಗಿ ಬಸ್ ತೆರಳುತ್ತಿತ್ತು. ನಿನ್ನೆ ರಾತ್ರಿ ಕುಕಟ್ ಪಲ್ಲಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಬಸ್ ನ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಎಚ್ಚತ್ತುಕೊಂಡು ಸಮಯಪ್ರಜ್ಞೆ ಮೆರೆದಿದ್ದಾನೆ. ಹಾಗಾಗಿ ಪ್ರಯಾಣಿಕರು ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ ಆದರೆ ಬಸ್ ಮಾತ್ರ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಳಗಾವಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಅಚ್ಚರಿ ಹೇಳಿಕೆ ಒಂದನ್ನು ನೀಡಿದ್ದಾರೆ. ಕರ್ನಾಟಕ ಸಿಎಂ ಸ್ಥಾನಕ್ಕೆ ಅರ್ಜಿ ಕರೆದರೆ ಹಾಕಬಹುದು, ಆದರೆ ಅರ್ಜಿಯೇ ಕರೆಯುವುದಿಲ್ಲವಲ್ಲ ಎಂದು ಪರೋಕ್ಷವಾಗಿ ಗೃಹ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, ನಾವು ಏನೇನೋ ಆಸೆ ಇಟ್ಟುಕೊಳ್ಳಬಹುದು. ಆದರೆ, ತೀರ್ಮಾನ ಮಾಡೋದು ಹೈಕಮಾಂಡ್. ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ಹಾಕಬಹುದು. ಆದರೆ, ಅರ್ಜಿಯನ್ನೇ ಕರೆಯೋದಿಲ್ಲವಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಇಂಗಿತ ಹೊರಹಾಕಿದರು. ಶಾಸಕರಿಗೆ ಮಂತ್ರಿ ಆಗುವ ಆಸೆ ಇದ್ದರೆ, ಗೃಹ ಸಚಿವರಿಗೆ ಸಿಎಂ ಆಗುವ ಆಸೆ ಇಲ್ಲವೇ ಎಂದು ಪ್ರಶ್ನೆ ಕೇಳಿದಾಗ, ನನಗೆ ಆಸೆ ಇದೆ ಅಂತಾ ನಿಮಗೆ ಯಾರು ಹೇಳಿದರು? ನಮ್ಮ ಪಕ್ಷದಲ್ಲಿ ಏನೇ ತೀರ್ಮಾನ…
ಬೆಂಗಳೂರು : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. 1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ @INCIndia ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು. ಅಂದು: ಶ್ರೀ @H_D_Devegowda ಅವರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ. ಮಹಿಳಾ ಮೀಸಲು…
ಬೆಂಗಳೂರು : ಬೆಸ್ಕಾಂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು (ಸೆಸ್ಕ್ ಮೈಸೂರು) ಗ್ರಾಹಕರಿಗೆ ದರ ಏರಿಕೆಯ ಶಾಕ್ ನೀಡಲಾಗಿದೆ. 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಪ್ರತಿ ಯುನಿಟ್ಗೆ 56 ಪೈಸೆ ಹಾಗೂ ಸೆಸ್ಕ್ ಪ್ರತಿ ಯುನಿಟ್ಗೆ 15 ಪೈಸೆಯಂತೆ ಗ್ರಾಹಕರಿಂದ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ. 2026-27ನೇ ಸಾಲಿಗೆ ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯುನಿಟ್ಗೆ 56 ಪೈಸೆ ಹಾಗೂ ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರರಬಾಜು ಕಂಪೆನಿ ಗ್ರಾಹಕರಿಗೆ 15 ಪೈಸೆ ಹೊರೆ ಬಿದ್ದಿದೆ. ಬೆಸ್ಕಾಂ ಹಾಗೂ ಸೆಸ್ಕ್ನ ಗೃಹ ಜ್ಯೋತಿ ಫಲಾನುಭವಿಗಳಿಗೆ ಈ ಹೊರೆ ಬೀಳುವುದಿಲ್ಲ. ಆದರೆ, ಇತರೆ ಗ್ರಾಹಕರಿಗೆ ದರ ಏರಿಕೆಯ ಹೊರೆ ಆಗಲಿದೆ. ಗೃಹ ಜ್ಯೋತಿ ಗ್ರಾಹಕರ ಪರವಾಗಿ ಈ ಹೆಚ್ಚುವರಿ ದರ ಏರಿಕೆ ಹೊರೆ ಸರ್ಕಾರದ ಮೇಲೆ ಬೀಳಲಿದೆ. ಈ ಆದೇಶ 2026 ಮೇ 1ರಿಂದ 2027ರ ಏಪ್ರಿಲ್ 31ರವರೆಗೆ ಬಳಕೆಯಾಗುವ ವಿದ್ಯುತ್ ಬಿಲ್ಗೆ ಅನ್ವಯವಾಗಲಿದೆ. ಇತ್ತ, 2024-25ರಲ್ಲಿ…














