Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ನಾಯಕತ್ವ ಬದಲಾವಣೆ ಕುರಿತು ಒಂದೆಡೆ ನಮ್ಮ ತಂದೆಯೇ 5 ವರ್ಷ ಸಿಎಂ ಎಂದು ಯತೀಂದ್ರ ಹೇಳುತ್ತಿದ್ದರೆ, ಮತ್ತೊಂದು ಕಡೆ ಯತೀಂದ್ರನೇ ನಮ್ಮ ಹೈಕಮಾಂಡ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದರ ಮಧ್ಯ ರಾಜ್ಯದ ಬಜೆಟ್ ಮಂಡನೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಂಭವವಿದ್ದು, ಈ ಕುರಿತು ಶೀಘ್ರದಲ್ಲಿಯೇ ವರಿಷ್ಠರು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ಶೇ.50ರಷ್ಟು ಸಚಿವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು. ಆ ಸ್ಥಾನಗಳನ್ನು ಹೊಸಬರಿಗೆ ನೀಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದನೆ ದೊರೆಯುವ ವಿಶ್ವಾಸವಿದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿ ದ್ದೇನೆ. ಕಳೆದ 22 ವರ್ಷದಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ಸಚಿವ ಸ್ಥಾನದ…
ಕೋಲಾರ : ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಮುನಿಯಮ್ಮ ವೆಂಕಟಪ್ಪ ಸೇರಿ ಮೂವರು ಸಾವನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಹತ್ತಿರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಈ ಒಂದು ದುರಂತ ಸಂಭವಿಸಿದೆ ಅಪಘಾತದ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ ಆಗಲಿರುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟ್ ನಲ್ಲಿ ಈ ಕುರಿತು ಆಕ್ರೋಶ ಹೊರಹಾಕಿದ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್…
ತುಮಕೂರು : ತುಮಕೂರಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವೇಸ್ಟೇಜ್ ರಿಸೈಕ್ಲಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ ಸಂಗ್ರಹಿಸಿ ಇಟ್ಟಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅವಗಡದಲ್ಲಿ ಯಾವುದೇ ರೀತಿಯ ಸಾವು ನೋವು ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು, ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಓರ್ವ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ನಾಗಣ್ಣ ಕ್ರಾಸ್ ಬಳಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಮಗಳು ಸ್ಥಳದಲ್ಲಿ ಸಾವನಪ್ಪಿದ್ದಾರೆ. ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ ಕರಟ್ಮಲ್ (40) ಪತ್ನಿ ಶಿಲ್ಪ (35) ಹಾಗೂ ಅವರ ಪುತ್ರಿ ರಕ್ಷಿತ (12) ಸ್ಥಳದಲ್ಲೆ ಸಾವನಪ್ಪಿದ್ದಾರೆ. ಇನ್ನು ಮಗ ದಿಗಂಬರ್ (15) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ನಿಂದರಾಜೇಶ್ವರ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ ನಾಲ್ವರು ಒಂದೇ ಬೈಕ್ನಲ್ಲಿ ಬರುವಾಗ ಈ ಅಪಘಾತ ಸಂಭವಿಸಿದೆ.
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನಿನ್ನೆ ಟಿಕೆಟ್ ದರ ಕಡಿಮೆ ಆಗಲಿದೆ ಎಂದು ಹೇಳಿಕೆ ನೀಡಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿಲ್ಲ ಕೇಂದ್ರದವರು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ. ಹಾಗಾಗಿ ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬಿಎಂಆರ್ಸಿಎಲ್ ಎಂಡಿ ರವಿಶಂಕರ್ ಅವರಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಮೂಲಕ ಸೂಚನೆ ಬಂದಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಬೇಡಿ ಎಂದು ಇ-ಮೇಲ್ ಬಂದಿದೆ ಹಾಗಾಗಿ…
ಬೆಂಗಳೂರು : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಜೊತೆಗಿನ ಅಕ್ರಮ ಸಂಬಂಧದ ಕುರಿತು ಮಗಳು ಬಯಲು ಮಾಡಿದ್ದರಿಂದ, ಪತಿಯ ಸಹೋದರನನ್ನೇ ಕೊಲೆ ಮಾಡಿ ಸದ್ಯ ಜೈಲಿನಲ್ಲಿ ಇರುವ ಸುಚಿತ್ರಾಳ ಕಾಮಪುರಾಣ ಇದೀಗ ಮತ್ತಷ್ಟು ಬಯಲಾಗಿದೆ. ಹೌದು ಕಲಬುರಗಿಯ ಜಮೀನ್ದಾರನ ಜೊತೆ ಮೂರು ವರ್ಷ ಲವ್ವಿಡವ್ವಿಯಲ್ಲಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಕಲಬುರಗಿಯ ಜಮೀನ್ದಾರ ಶರಣಬಸಪ್ಪ ಜೊತೆ ಮೂರು ವರ್ಷದಿಂದ ಲಿವ್-ಇನ್ನಲ್ಲಿದ್ದ ಸುಚಿತ್ರಾ, ಅಪ್ಪು ಮೆಲೋಡಿಸ್ ಗುಲ್ಬರ್ಗ ಎಂದು ಆತನ ಹಣದಿಂದ ಆರ್ಕೆಸ್ಟ್ರಾ ಮಾಡಿಕೊಂಡಿದ್ದಳು ಕೇವಲ ಶರಣಬಸಪ್ಪ ಅಷ್ಟೇ ಅಲ್ಲದೆ ಇನ್ನು ಎಷ್ಟೋ ಅನೇಕ ಯುವಕರ ತಲೆಕೆಡಿಸಿ ತನ್ನ ಗಾಳಕ್ಕೆ ಬೀಳಿಸಿಕೊಂಡಿದ್ದಳು ಎಂದು ತಿಳಿದುಬಂದಿದೆ. ಕಲಬುರಗಿಗೆ ಹೋಗಿ ಆತನೊಂದಿಗೆ ಸುಚಿತ್ರಾ ಸುತ್ತಾಡುತ್ತಿದ್ದಳು. ಗಂಡನಿಲ್ಲದ ಸಂದರ್ಭದಲ್ಲಿ ಆತನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆತ ನೀಡಿದ ಹಣದಲ್ಲಿ ಸಿದ್ದಾಪುರದಲ್ಲಿ ಬಡ್ಡಿಗೆ ಹಣ ನೀಡುತ್ತಿದ್ದಳು. ಈ ವಿಷಯ ಜ್ಯೋತಿಷಿ ಕಮಲಾಕರ್ ಭಟ್ಗೆ ತಿಳಿದು ಇಬ್ಬರ ನಡುವೆ ಮನಸ್ತಾಪ ಮೂಡಿತ್ತು. ಕೊನೆಗೆ ಜಮೀನ್ದಾರನ ಬಿಟ್ಟು ಜ್ಯೋತಿಷಿ ಕಮಲಾಕರ್ ಭಟ್ ಕೈ ಹಿಡಿದಿದ್ದಳು.…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನಿನ್ನೆ ಟಿಕೆಟ್ ದರ ಕಡಿಮೆ ಆಗಲಿದೆ ಎಂದು ಹೇಳಿಕೆ ನೀಡಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿಲ್ಲ ಕೇಂದ್ರದವರು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ. ಹಾಗಾಗಿ ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬಿಎಂಆರ್ಸಿಎಲ್ ಎಂಡಿ ರವಿಶಂಕರ್ ಅವರಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಮೂಲಕ ಸೂಚನೆ ಬಂದಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಬೇಡಿ ಎಂದು ಇ-ಮೇಲ್ ಬಂದಿದೆ ಹಾಗಾಗಿ…
ಮೈಸೂರು : ಸಿಎಂ ಸಿದ್ದರಾಮಯ್ಯಗೆ ಎಚ್ ಡಿ ದೇವೇಗೌಡ ಕುಮಾರ ಸ್ವಾಮಿಯೇ ಟಾರ್ಗೆಟ್ ಆಗಿದ್ದಾರೆ. ದೇವೇಗೌಡರು ಹಾಗೂ ನನ್ನನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ಯಾವ ರೀತಿ ದುರುಪಯೋಗ ಮಾಡಿಕೊಂಡರು ಎಂದು ಗೊತ್ತಿದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದರು. ಸಿನಿಮಾ ರಂಗದಲ್ಲಿ ದುಡಿದ ದುಡ್ಡಿನಲ್ಲಿ 43 ಎಕರೆ ತೆಗೆದುಕೊಂಡಿದ್ದೆ ನನಗೆ ಸೇರಿದ ನಾಲ್ಕು ಎಕರೆ ವಶಪಡಿಸಿಕೊಳ್ಳಲು SIT ರಚನೆ ಮಾಡುತ್ತೀರಾ? ಇಷ್ಟೊಂದು ಕಿರುಕುಳ ಕೊಡುತ್ತೀರಾ? ನ್ಯಾಯಾಲಯದಲ್ಲಿ ಇನ್ನೂ ಎರಡು ಕೇಸುಗಳು ಎದುರಿಸುತ್ತಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹೆಚ್ಡಿ ದೇವೇಗೌಡರ ಜೊತೆಗೆ ಬೆಳೆದು ಈ ರೀತಿ ಮಾಡುತ್ತಿದ್ದಾರೆ ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಮುಂದಿನ ಚುನಾವಣೆಯಲ್ಲಿ ಮೈಸೂರಿನ 11 ಕ್ಷೇತ್ರ ಗೆದ್ದರೂ ಆಶ್ಚರ್ಯವಿಲ್ಲ ಜೆಡಿಎಸ್ ಬಿಜೆಪಿ ಮೈತ್ರಿ 11ಕ್ಕೆ 11 ಸೀಟ್ ಗೆದ್ದರೂ ಆಶ್ಚರ್ಯ ಪಡಬೇಕಿಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ…
ಚಿಕ್ಕಬಳ್ಳಾಪುರ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹೊರವಲಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ನಾಗರಾಜು (68) ಹಾಗು ವೆಂಕಟರೆಡ್ಡಿ (50) ಮೃತ ದುರ್ದೈವಿಗಳು ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸುಮಾರು 200 ಮೀಟರ್ ವರೆಗೂ ಎಳೆದೊಯ್ದಿದೆ. ಅಪಘಾತ ನಂತರ ಕಾರು ನಿಲ್ಲಿಸಿ ಚಾಲಕ ಮತ್ತು ಇತರರು ಪರಾರಿಯಾಗಿದ್ದಾರೆ. ಅಪಘಾತದ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














