Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಿಎಂ ಬದಲಾವಣೆ ಮತ್ತು ಶಾಸಕರ ಸಹಿ ಸಂಗ್ರಹದ ವದಂತಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಶಾಸಕರು ಸಹಿ ಸಂಗ್ರಹಿಸುತ್ತಿದ್ದಾರೆ ಎಂಬುದೆಲ್ಲ ಕೇವಲ ಊಹಾಪೋಹ ಮತ್ತು ಸುಳ್ಳು ಸುದ್ದಿಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ಒಪ್ಪಂದದ ಪ್ರಕಾರವೇ ಎಲ್ಲ ಪ್ರಕ್ರಿಯೆಗಳು ಶಾಂತಿಯುತವಾಗಿ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಾಯಕರು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಯಾರಿಗೂ ಮುಂಚಿತವಾಗಿ ಗೊತ್ತಿರಲಿಲ್ಲ. ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿರ್ಧಾರವನ್ನು ಯಾರನ್ನೂ ಕೇಳಿ ತೆಗೆದುಕೊಂಡಿದ್ದಲ್ಲ, ಬದಲಿಗೆ ಪಕ್ಷದ ಒಪ್ಪಂದದ ಭಾಗವಾಗಿಯೇ ಎಲ್ಲವೂ ನಡೆದಿದೆ. ಸದ್ಯದಲ್ಲೇ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲು ಆಗಮಿಸುತ್ತಿದ್ದು, ರಾಜಕೀಯದಲ್ಲಿ ಇಂತಹ ಬದಲಾವಣೆಗಳು ಸಹಜ ಎಂದು ಅವರು ಹೇಳಿದರು. ಇದೇ ವೇಳೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹೆಚ್ಚುವರಿ ಡಿಸಿಎಂ (ಉಪಮುಖ್ಯಮಂತ್ರಿ) ಹುದ್ದೆಗಳ ಸೃಷ್ಟಿಯ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವುದರಿಂದ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದು, ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಶಾಸಕಾಂಗ ಸಭೆಯು ನಡೆಯಲ್ಲಿದ್ದು, ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತಿದೆ. ಬಳಿಕ ಸರ್ಕಾರ ರಚನೆ ಹಕ್ಕು ಮಂಡಿಸಲಾಗುವುದು. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ತನ್ನ ಶಾಸಕರಿಗೆ ಸೂಚನೆ ನೀಡಿದೆ.ಸಂಪುಟ ವಿಸರ್ಜನೆ ಹಿನ್ನೆಲೆಯಲ್ಲಿ, ಮಾಜಿ ಸಚಿವರುಗಳು ಸರ್ಕಾರಿ ಕಾರುಗಳನ್ನು ವಾಪಸ್ ಮಾಡಿದ್ದು, ತಮ್ಮ ಖಾಸಗಿ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಇನ್ನು ನಾಳೆ ನಡೆಯುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರು ಘೋಷಣೆ ಆಗುವ…
ಭಗವಾನ್ ಶಿವನ 19 ಪ್ರಮುಖ ಅವತಾರಗಳಲ್ಲಿ ಅತ್ಯಂತ ತೇಜೋಮಯ, ನ್ಯಾಯಸ್ವರೂಪವಾದ ಅವತಾರವೇ ಪಿಪ್ಪಲಾದ ಅವತಾರ. ಅನೇಕ ಪ್ರದೇಶಗಳಲ್ಲಿ ಇವರು ಪಿಪ್ಲೇಶ್ವರ ಮಹಾದೇವರೆಂದು ಆರಾಧಿಸಲ್ಪಡುತ್ತಾರೆ. ಈ ಅವತಾರ ಕರುಣೆ, ತಪಸ್ಸು ಮತ್ತು ನ್ಯಾಯದ ಸಮನ್ವಯವಾಗಿದೆ. ಪುರಾಣಗಳ ಪ್ರಕಾರ ನವಗ್ರಹಗಳಲ್ಲಿ ಅತ್ಯಂತ ಕಠಿಣ ಫಲಗಳನ್ನು ನೀಡುವ ಶನಿದೇವರೂ ಪಿಪ್ಪಲಾದ ಮಹರ್ಷಿಗಳ ಮುಂದೆ ತಲೆಬಾಗಿದರೆಂದು ನಂಬಲಾಗಿದೆ. ಆದ್ದರಿಂದ ಶನಿ ಸಾಡೇಸಾತಿ, ಢಯ್ಯಾ ಅಥವಾ ಮಹಾದಶೆಯಿಂದ ಬಳಲುವವರು ಪಿಪ್ಪಲಾದ ಸ್ತೋತ್ರ ಪಾರಾಯಣ ಮಾಡಿ ಅಶ್ವತ್ಥ (ರಾವಿ) ಮರವನ್ನು ಪೂಜಿಸುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ━━━━━━━━━━━━━━━ 🔹 1. ಪಿಪ್ಪಲಾದ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚಲನವಲನಗಳು ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆಯಷ್ಟೇ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಇಂದು ರಾಜ್ಯಪಾಲರು ಅದನ್ನು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಸದ್ಯದ ಸಚಿವ ಸಂಪುಟವನ್ನು ಸಹ ವಿಸರ್ಜನೆಗೊಳಿಸಿ ರಾಜಭವನದಿಂದ ಮಹತ್ವದ ಆದೇಶ ಹೊರಬಿದ್ದಿದೆ. ನಿನ್ನೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳಿದ ಸಂದರ್ಭದಲ್ಲಿ ರಾಜ್ಯಪಾಲರು ಸ್ಥಳದಲ್ಲಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್ ಅವರಿಗೆ ಹಸ್ತಾಂತರಿಸಿದ್ದರು. ಇಂದು ಬೆಂಗಳೂರಿಗೆ ಮರಳಿದ ರಾಜ್ಯಪಾಲರು, ಕಾರ್ಯದರ್ಶಿಗಳಿಂದ ರಾಜೀನಾಮೆ ಪತ್ರವನ್ನು ಪಡೆದು ಪರಿಶೀಲಿಸಿ, ಅದಕ್ಕೆ ತಕ್ಷಣವೇ ಅಂಕಿತ ಹಾಕಿದ್ದಾರೆ. ರಾಜಭವನದ ಪ್ರಕಟಣೆ: “ಭಾರತದ ಸಂವಿಧಾನದ 164(1) ನೇ ವಿಧಿಯ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ನಾನು, ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಅವರ ನೇತೃತ್ವದ ಸಚಿವ ಸಂಪುಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ…
ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನೆಲ್ಲೆ, ಡಿಕೆ ಶಿವಕುಮಾರ್ ಮೊದಲ ಬಾರಿ ಪೋಸ್ಟ್ ಹಂಚಿಕೊಂಡಿದ್ದು , ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ. ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ…
ಬೆಂಗಳೂರು: ಕರ್ನಾಟಕ ರಾಜಕಾರಣದ ದೈತ್ಯ ನಾಯಕ, ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದರು. ರಾಜಕೀಯವಾಗಿ ‘ದುರ್ಗಾವಾದಿ ಮುಖ್ಯಮಂತ್ರಿ’ ಎಂದೇ ಖ್ಯಾತರಾಗಿದ್ದ ಸಿದ್ದರಾಮಯ್ಯ ಅವರ ಈ ದಿಢೀರ್ ರಾಜೀನಾಮೆ ನಿರ್ಧಾರ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಅತ್ಯಂತ ಸಾಮಾನ್ಯ ಹಿನ್ನೆಲೆಯಿಂದ ಬಂದು, ಕಠಿಣ ಪರಿಶ್ರಮ ಮತ್ತು ಜನಪರ ಕಾಳಜಿಯಿಂದ ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದ ಸಿದ್ದರಾಮಯ್ಯ ಅವರು ಎರಡು ಅವಧಿಗೆ ಯಶಸ್ವಿಯಾಗಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಈ ಗೌರವಯುತ ರಾಜೀನಾಮೆ ನಿರ್ಧಾರಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ (ಎಕ್ಸ್) ಮೂಲಕ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಮುಕ್ತಕಂಠದಿಂದ ಮೆಚ್ಚಿಕೊಂಡಿದ್ದಾರೆ. “ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವು ಸದಾ ಗೌರವ, ಕರುಣೆ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನಿನ್ನೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತೆರವಾಗಿರುವ ಸಿಎಂ ಗಾದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರು ಅಂತಿಮಗೊಂಡಿದೆ. ನಿನ್ನೆ ನಡೆದ ಮಹತ್ವದ ‘ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಘೋಷಣೆ ಮಾಡುವ ಮೂಲಕ ದಶಕಗಳ ರಾಜಕೀಯ ಹಗ್ಗಜಗ್ಗಾಟಕ್ಕೆ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ಅವರ ಅಧಿಕೃತ ಘೋಷಣೆ ಹೊರಬೀಳುತ್ತಿದ್ದಂತೆ ಇತ್ತ ಡಿ.ಕೆ. ಶಿವಕುಮಾರ್ ಅವರ ಪಡಸಾಲೆಯಲ್ಲಿ ಸಂಭ್ರಮ ಮನೆಮಾಡಿದ್ದು, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ಆರಂಭವಾಗಿವೆ. ರಾಜ್ಯದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕನಕಪುರ ಬಂಡೆ, ತಮ್ಮ ರಾಜಕೀಯ ಜೀವನದ ಅತ್ಯುನ್ನತ ಕ್ಷಣವನ್ನು ಅತ್ಯಂತ ವೈಭವ ಹಾಗೂ ಶಾಸ್ತ್ರೋಕ್ತವಾಗಿ ನೆರವೇರಿಸಲು ತೀರ್ಮಾನಿಸಿದ್ದಾರೆ. ರಾಜಭವನ ಹಾಗೂ ಕೆಪಿಸಿಸಿ ಕಚೇರಿಗಳಲ್ಲಿ ಈಗಾಗಲೇ ಪೂರ್ವಭಾವಿ ಸಿದ್ಧತೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ…
ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ನಿನ್ನೆ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಿಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಅವರು, ತಮ್ಮ ಅಧಿಕಾರಾವಧಿಯಲ್ಲಿ ನೀಡಿದ ಬೆಂಬಲಕ್ಕೆ ಧನ್ಯವಾದ ಸಮರ್ಪಿಸಿದರು. ದೆಹಲಿಯ ಪ್ರಸಿದ್ಧ ’10 ಜನಪಥ್’ ರಸ್ತೆಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ತಮಗೆ ಈವರೆಗೆ ನೀಡಿದ ಸಹಕಾರ ಮತ್ತು ನಾಯಕತ್ವಕ್ಕೆ ಅವರು ಹೃದಯಪೂರ್ವಕವಾಗಿ ಕೃತಜ್ಞತೆ ಸಲ್ಲಿಸಿದರು. ಕೇವಲ ಸೌಜನ್ಯದ ಭೇಟಿಯಾಗಷ್ಟೇ ಉಳಿಯದ ಈ ಹೈಕಮಾಂಡ್ ಸಭೆಯಲ್ಲಿ, ರಾಜ್ಯ ರಾಜಕಾರಣದ ಮುಂದಿನ ನಡೆಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆದಿದೆ. ರಾಜೀನಾಮೆ ನೀಡಿದ ನಂತರವೂ ರಾಜ್ಯ ರಾಜಕೀಯದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ…
ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಮಗು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಪತಿಯೇ ತನ್ನ ಪತ್ನಿಯನ್ನು ಕ್ರೂರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಚನ್ನರಾಯಪಟ್ಟಣದ ಟಿಪ್ಪು ನಗರದ ನಿವಾಸಿಯಾದ ಗುಲ್ಶೀರ್ ಭಾನು (31) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ. ಮೃತಳ ಪತಿ ಸೈಫುಲ್ಲಾ (37) ಹಾಗೂ ಆತನ ಕುಟುಂಬಸ್ಥರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆಯ ತವರು ಮನೆಯವರು ಗಂಭೀರ ಆರೋಪ ಮಾಡಿದ್ದಾರೆ. 13 ವರ್ಷಗಳ ದಾಂಪತ್ಯಕ್ಕೆ ಬಿದ್ದ ಬಿರುಕು ಮೃತ ಗುಲ್ಶೀರ್ ಭಾನು ಅವರನ್ನು ಸುಮಾರು 13 ವರ್ಷಗಳ ಹಿಂದೆ ಚನ್ನರಾಯಪಟ್ಟಣದ ಸೈಫುಲ್ಲಾ ಎಂಬಾತನಿಗೆ ನೀಡಿ ಮದುವೆ ಮಾಡಲಾಗಿತ್ತು. ದಾಂಪತ್ಯ ಜೀವನದ ಆರಂಭದ ಒಂದೆರಡು ವರ್ಷಗಳು ಇವರ ಸಂಸಾರ ಚೆನ್ನಾಗಿಯೇ ಇತ್ತು. ಆದರೆ, ಆ ಬಳಿಕ ಪತಿ ಸೈಫುಲ್ಲಾ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಎನ್ನಲಾಗಿದೆ. ಹಣದ ಹಣಾಹಣಿಯಿಂದಾಗಿ ಆತ ತಮಗಿದ್ದ ಗಂಡು ಮಗುವನ್ನೇ ಮಾರಾಟ ಮಾಡಿದ್ದ. ಮಗುವನ್ನು ಮಾರಾಟ ಮಾಡಿದ ದಿನದಿಂದ…
ಬೆಂಗಳೂರು : ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟ ಅಧಿಕೃತವಾಗಿ ವಿಸರ್ಜನೆಗೊಂಡಿದೆ. ನಿನ್ನೆ ಮುಖ್ಯಮಂತ್ರಿಗಳು ನೀಡಿದ್ದ ರಾಜೀನಾಮೆಯನ್ನು ಇಂದು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ಬೆನ್ನಲ್ಲೇ, ರಾಜಧಾನಿ ಬೆಂಗಳೂರಿನಲ್ಲಿ ಆಡಳಿತಾರೂಢ ಸಚಿವರ ಅಧಿಕೃತ ಸೌಲಭ್ಯಗಳನ್ನು ಹಿಂಪಡೆಯುವ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ. ಸಚಿವ ಸಂಪುಟ ವಿಸರ್ಜನೆಯಾಗುತ್ತಿದ್ದಂತೆ, ಈವರೆಗೆ ಸಚಿವರಿಗೆ ಹಂಚಿಕೆಯಾಗಿದ್ದ ಅಧಿಕೃತ ಸರ್ಕಾರಿ ವಾಹನಗಳನ್ನು ಸರ್ಕಾರ ತಕ್ಷಣವೇ ವಾಪಸ್ ಪಡೆದಿದೆ. ಇದರಿಂದಾಗಿ ಹಾಲಿ ಸಚಿವರಾಗಿದ್ದ ನಾಯಕರುಗಳು ಇದೀಗ ಮಾಜಿಗಳಾಗಿದ್ದು, ತಮ್ಮ ಅಧಿಕೃತ ಸರ್ಕಾರಿ ಕಾರುಗಳನ್ನು ಬಿಟ್ಟು ಖಾಸಗಿ ವಾಹನಗಳಿಗೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಿನ ಸಚಿವರ ನಿವಾಸಗಳ ಮುಂದೆ ನಿಲ್ಲುತ್ತಿದ್ದ ಸರ್ಕಾರಿ ವಾಹನಗಳು ಇದೀಗ ಸಿಬ್ಬಂದಿ ಹಾಗೂ ಸಚಿವಾಲಯದ ವಶಕ್ಕೆ ಮರಳಿವೆ. ಮತ್ತೊಂದೆಡೆ, ಸಚಿವರಿಗೆ ನೀಡಲಾಗಿದ್ದ ಸರ್ಕಾರಿ ನಿವಾಸಗಳ ಮುಂದಿದ್ದ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯವೂ ಸಾಗುತ್ತಿದೆ. ಸಚಿವರಾಗಿದ್ದ ನಾಯಕರುಗಳು ತಾವಾಗಿಯೇ ತಮ್ಮ ಹೆಸರಿನ ಬೋರ್ಡ್ಗಳನ್ನು ತೆಗೆಸುತ್ತಿದ್ದಾರೆ. ಪ್ರಮುಖವಾಗಿ, ಮಾಜಿ…












