Author: kannadanewsnow05

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಪಟ್ಟರೆಹಳ್ಳಿ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿಯಾಗಿದ್ದಾರೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ಟರೆಹಳ್ಳಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಕಟ್ಟಿದ್ದರಿಂದ ರಸ್ತೆ ಬದಿ ನಾಲ್ವರು ರಿಪೇರಿಗಾಗಿ ನಿಂತಿದ್ದರು. ಈ ವೇಳೆ ಅಪಚಿತವಾ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದರೆ,  ಇಬ್ಬರಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಅವರಿಗೆ ಮಾತೃ ವಿಯೋಗ. ಸಚಿವ ಶಿವಾನಂದ್ ಪಾಟೀಲ್ ಗಂಗಾಬಾಯಿ (84) ಇಂದು ವಿಧಿವಶರಾಗಿದ್ದಾರೆ. ಗಂಗಾಬಾಯಿ ಅವರಿಗೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿಯರು ಇದ್ದಾರೆ. ಸಂಜೆ 4:30ಕ್ಕೆ ಗಂಗಾಬಾಯಿ ಸಿದ್ದರಾಮಯ್ಯ ಪಾಟೀಲ ಅವರ ಅಂತ್ಯಕ್ರಿಯೆ ನಡೆಯಲಿದೆ. ವಿಜಯಪುರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ವಿವಿಧ ಮಠಾಧೀಶರು ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More

ಹುಬ್ಬಳ್ಳಿ : ಅಮೆಜಾನ್ ಅಥವಾ ಹಲವು ಆನ್ಲೈನ್ ಶಾಪಿಂಗ್ ಮಾಡುವಾಗ ನಾವು ಮಾಡಿರುವ ಆರ್ಡರ್ ಬೇರೆ ಆದರೆ ಅಲ್ಲಿ ಬರುವ ವಸ್ತುಗಳೆ ಬೇರೆ, ಈ ರೀತಿ ಅನೇಕ ಘಟನೆಗಳು ಈ ಹಿಂದೆ ನಡೆಯಲಿವೆ. ಅದರಂತೆ ಇದೀಗ ಮತ್ತೊಂದು ಘಟನೆ ನಡೆದಿದ್ದು ಹುಬ್ಬಳ್ಳಿ ಉದ್ಯಮಿಯೊಬ್ಬರು ಅಮೆಜಾನ್ ನಲ್ಲಿ ಕ್ಯಾಮೆರಾ ಆರ್ಡರ್ ಮಾಡಿದರೆ ಅವರಿಗೆ ಡೆಲಿವರಿ ಆಗಿದ್ದು ಎರಡು ವಾಷಿಂಗ್ ಪೌಡರ್ ಪ್ಯಾಕೆಟ್. ಹೌದು ಕ್ಯಾಮರಾ ಆರ್ಡರ್ ಮಾಡಿದ್ದಕ್ಕೆ ವಾಷಿಂಗ್ ಪೌಡರ್ ಡೆಲಿವರಿ ಆಗಿದೆ. ಅಮೆಜಾನ್ ಕಂಪನಿ ವಿರುದ್ಧ ಉದ್ಯಮಿ ಆಲ್ಫ್ರೈಡ್ ಝೆವಿಯರ್ ಗಂಭೀರವಾದ ಆರೋಪ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಅಲ್ಫ್ರೈಡ್ ಝೆವಿಯರ್ ಶಾರ್ಜಾದಲ್ಲಿ ನೆಲೆಸಿದ್ದಾರೆ. ಡಿಜೆಐ ಹೊಸ ಪಾಕೆಟ್ ಮೂರು ಕ್ಯಾಮರಾ ಬುಕ್ ಮಾಡಿದ್ದರು. ಆತ್ಮೀಯರೊಬ್ಬರಿಗೆ ಹುಡುಗರಿಗೆ ನೀಡಲು ಕ್ಯಾಮೆರಾ ಬುಕ್ ಮಾಡಿದ್ದರು. ಅಮೆಜಾನ್ ನಲ್ಲಿ ಕ್ಯಾಮೆರಾ ಆರ್ಡರ್ ಮಾಡಿದ್ದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್ ವಿಳಾಸಕ್ಕೆ ನಿನ್ನ ಕೊರಿಯರ್ ಬಂದಿದೆ, ಕೋರಿಯರ್ ತೆರೆದು ನೋಡಿದಾಗ ಎರಡು ಪಾಕೆಟ್ ವಾಷಿಂಗ್ ಪೌಡರ್ ಪತ್ತೆಯಾಗಿದೆ. ಅಮೆಜಾನ್…

Read More

ದಾವಣಗೆರೆ : ಅಗ್ನಿ ಅವಘಡಕ್ಕೆ ಬೆಣ್ಣೆ ದೋಸೆ ಹೋಟೆಲ್ ಸುಟ್ಟು ಭಸ್ಮವಾಗಿದೆ. ಪ್ರಸಿದ್ದ ಶ್ರೀ ಕೊಟ್ಟೂರೇಶ್ವರ ಹೋಟೆಲ್, ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ. ದಾವಣಗೆರೆಯ ಡೆಂಟಲ್ ಕಾಲೇಜು ಬಳಿ ಈ ಒಂದು ಘಟನೆ ನಡೆದಿದೆ. ಹೋಟೆಲ್ ಕ್ಲೋಸ್ ಆಗಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಹೋಟೆಲ್ ನಲ್ಲಿ ಇದ್ದಂತಹ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿವೆ. ದಾವಣಗೆರೆ ನಗರದಲ್ಲಿರುವ ಅತ್ಯಂತ ಹಳೆಯ ಹೋಟೆಲ್ ಎಂದು ಪ್ರಸಿದ್ಧವಾಗಿದ್ದು, ಕೊಟ್ಟೂರೇಶ್ವರ ಹೋಟೆಲ್ ಇದೀಗ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.

Read More

ಬೆಂಗಳೂರು : ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಹಾಗೂ ಬೈರನಕುಂಟೆ ನಿವಾಸಿ ಮಹಮ್ಮದ್ ಜಹಂಗೀರ್(43) ಬಂಧಿತ. ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರುದಾರೆ ಹಾಗೂ ಆರೋಪಿ ಬಿಹಾರ ಮೂಲದವರಾ ಗಿದ್ದು, ನಗರದ ಬೈರನಕುಂಟೆಯಲ್ಲಿ ವಾಸವಾಗಿದ್ದರು. ಮಹಿ ಳೆಯ ಪತಿ ಹಾಗೂ ಆರೋಪಿ ಸ್ನೇಹಿತರಾಗಿದ್ದರು. ಆರೋಪಿಯ ಪತ್ನಿ ಬಿಹಾರದಲ್ಲಿದ್ದ ಕಾರಣ ಮಹಿಳೆ ಈತನ ಮನೆಗೆ ಬಂದು ಅಡುಗೆ ಮಾಡಿ ಕೊಟ್ಟು ಹೋಗುತ್ತಿದ್ದರು. ಆರೋಪಿಯು 2023ರಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡಿದ್ದ. ನಂತರ ಆ ವಿಡಿಯೋ ತೋರಿಸಿ ಈ ವಿಚಾರ ಬಹಿರಂಗಪಡಿಸಿದರೆ ಅದನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಬಿಹಾರಕ್ಕೆ ತೆರಳಿದ್ದರು. 3 ವರ್ಷಗಳ ಬಳಿಕ ಮಹಿಳೆ ಮತ್ತೆ ಬೆಂಗಳೂರಿಗೆ ವಾಪಾಸ್ ಬಂದಿದ್ದಾರೆ. ಊಟ ಕೊಡಲು ಹೋದಾಗ ಸೆಕ್ಸ್ಗೆ ಸಹಕರಿಸದಿದ್ದರೆ 5 ಲಕ್ಷ ಹಣ…

Read More

ದಕ್ಷಿಣಕನ್ನಡ : ಲೂಡೋ ಬೋರ್ಡ್ ಕಾಯಿನ್ ನುಂಗಿ ಬಾಲಕಿ ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ಲಾಸ್ಟಿಕ್ ಕಾಯಿನ್ ನುಂಗಿ 8 ವರ್ಷದ ತನುಷ್ಕ ಸಾವನ್ನಪ್ಪಿದ್ದಾಳೆ ಸಹೋದರರ ಜೊತೆ ಲೂಡೋ ಆಡುವಾಗ ಈ ಒಂದು ಘಟನೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಯಾಗಿರುವ ತನುಷ್ಕ ಗಂಟಲಲ್ಲಿ ಲೂಡೋ ಕಾಯಿನ್ ಸಿಲುಕಿ ಸಾವನ್ನಪ್ಪಿದ್ದಾಳೆ. ಆಟ ಆಡುವ ಸಂದರ್ಭದಲ್ಲಿ ಲೂಡೋ ಕಾಯಿನ್ ಬಾಯಲ್ಲಿ ಇಟ್ಟುಕೊಂಡಿರುತ್ತಾಳೆ. 20 ನಿಮಿಷಗಳ ಕಾಲ ಗಂಟಲಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೆ ನರಳಾಡಿದ್ದಾಳೆ. ತಕ್ಷಣ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಗಲಿ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿದೆ.

Read More

ರಾಜ್ಯದ ಸರ್ಕಾರಿ ಕಾಲೇಜು ಇಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನ ಈಗಾಗಲೇ ಆರಂಭಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳೆದ 2 ದಶಕಗಳಿಂದ ಕಾಲಕಾಲಕ್ಕೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ನೇಮಕಾತಿ ಸರಿಯಾಗಿ ಆಗದಿರುವುದರಿಂದ ಶಿಕ್ಷಕರ ಕೊರತೆ ಕಾಡುತ್ತಿದೆ. ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಶೇ. 60-70 ರಷ್ಟು ಶಿಕ್ಷಕರ ಹುದ್ದೆಗಳು ಖಾಲಿಯಿರುವುದು ಸರ್ಕಾರದ ಗಮನದಲ್ಲಿದೆ. ಈ ಹಿನ್ನೆಲೆಯಲ್ಲಿ ನಾವು ಸರ್ಕಾರಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನ ಈಗಾಗಲೇ ಆರಂಭಿಸಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಅನುಪಾತ [GER) ರಾಷ್ಟೀಯ ಸರಾಸರಿಗಿಂತ ಹೆಚ್ಚಾಗಿದೆ. ಇದು ಎಲ್ಲರನ್ನೂ ಒಳಗೊಂಡ ಸಾಮಾಜಿಕ ವ್ಯವಸ್ಥೆಯನ್ನು ಪಾಲಿಸುತ್ತಿರುವುದರ ನಿದರ್ಶನವಾಗಿದೆ. 2030 ರ ವೇಳೆಗೆ 50% ಒಟ್ಟು…

Read More

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಇಂದು ನಡೆದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ವಿವಿ ಕುಲಪತಿಗಳೂ ಒಪ್ಪಿಗೆ ಸೂಚಿಸಿದ್ದಾರೆ. ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್‌, ಸೋಷಿಯಲ್ ಮೀಡಿಯಾ (Social Media) ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಹಿಂದೆಲ್ಲಾ ಮಕ್ಕಳಿಗೆ ಚಂದಮಾಮನನ್ನ ತೋರಿಸಿ ಊಟ ಮಾಡಿಸುತ್ತಿದ್ದರು. ಶಾಲೆಯಲ್ಲಿ ಮಕ್ಕಳು ಪಾಠಪ್ರವಚನ, ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಈಗ ಮೊಬೈಲ್, ಆನ್‌ಲೈನ್ ಗೇಮಿಂಗ್, ಸೋಷಿಯಲ್ ಮೀಡಿಯಾ ಇವುಗಳೇ ಅವರ ಪ್ರಪಂಚವಾಗಿಬಿಟ್ಟಿದೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಾಗಾಗಿ ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್…

Read More

ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆ ಮೂಲಕ ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ5 ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು. ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂದೇಶಗಳುಳ್ಳ ಸಿನಿಮಾಗಳು ವಿರಳ ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು. ರಂಗಭೂಮಿ ಹಿನ್ನೆಲೆಯ…

Read More

ಬಾಗಲಕೋಟೆ : ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಜಿಲ್ಲಾಡಳಿತವು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್‌ಗೆ ಒಂದು ತಿಂಗಳ ಕಾಲ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಹೌದು ಕಳೆದ 2 ದಿನಗಳ ಹಿಂದೆ ನಗರದಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಗಪ್ಪ (ಬಾ.ಆ.ಸೇ) ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. “ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (BNSS) ಸೆಕ್ಷನ್ 163” ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಜಿಲ್ಲಾಧಿಕಾರಿಗಳು, ಫೆಬ್ರವರಿ…

Read More