Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಎಂಬಂತೆ ಸ್ಫೋಟಕ ವಸ್ತುಗಳು ಪತ್ತೆಯಾಗುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯ ಮಾರ್ಗದಲ್ಲಿ ಸ್ಫೋಟಕ ಪತ್ತೆಯಾಗಿದ್ದ ಘಟನೆಯ ಬೆನ್ನಲ್ಲೇ, ಇದೀಗ ನಗರದ ಹೊರವಲಯದಲ್ಲಿ ಮತ್ತೊಮ್ಮೆ ಭಾರಿ ಪ್ರಮಾಣದ ಜಿಲೇಟಿನ್ ಕಡ್ಡಿ ಹಾಗೂ ಡಿಟೋನೇಟರ್‌ಗಳು ಸಿಕ್ಕಿಬಿದ್ದಿರುವುದು ಭದ್ರತಾ ವಿಭಾಗವನ್ನು ಜಾಗೃತಗೊಳಿಸಿದೆ. ಅವಲಹಳ್ಳಿ ಸಮೀಪ ಸಾರ್ವಜನಿಕರ ದೂರು, ಪೊಲೀಸರ ದಾಳಿ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡು ಅಗ್ರಹಾರದ ಬಳಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಸ್ಥಳಕ್ಕೆ ಧಾವಿಸಿ ಜಂಟಿ ಕಾರ್ಯಾಚರಣೆ ನಡೆಸಿದೆ. 50 ಡಿಟೋನೇಟರ್, 225 ಜಿಲೇಟಿನ್ ಕಡ್ಡಿಗಳು ವಶಕ್ಕೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ತಪಾಸಣೆ ನಡೆಸಿದಾಗ ಭಾರಿ ಪ್ರಮಾಣದ ಸ್ಫೋಟಕ…

Read More

ಬೆಳಗಾವಿ: ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ ಆರೋಪದ ಮೇಲೆ ಈಗಾಗಲೇ ಜೈಲು ಪಾಲಾಗಿರುವ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣ, ಇದೀಗ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಲಗ್ಗೆ ಇಟ್ಟಿದೆ. ಆರೋಪಿ ಶಿವಾನಂದ ತನ್ನ ಸಂಸ್ಥೆಯ ಪ್ರಚಾರಕ್ಕಾಗಿ ಹೂಡಿಕೆದಾರರ ಕಷ್ಟದ ಹಣವನ್ನು ಬಳಸಿ ಸ್ಟಾರ್ ನಟ-ನಟಿಯರನ್ನು ಕರೆಸಿ ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದೇ ಈಗ ಚಿತ್ರರಂಗದ ಗಣ್ಯರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಅಕ್ರಮ ಹಣದ ವಹಿವಾಟಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸ್ಯಾಂಡಲ್‌ವುಡ್ ತಾರೆಯರಿಗೆ ನೋಟಿಸ್ ನೀಡಲು ಸಜ್ಜಾಗಿದ್ದಾರೆ. ‘ಬೆಳಗಾವಿ ಹಬ್ಬ’ದ ಹೆಸರಲ್ಲಿ ಅದ್ದೂರಿ ಕಾರ್ಯಕ್ರಮ: ಕಳೆದ ವರ್ಷ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ನೇತೃತ್ವದಲ್ಲಿ ‘ಬೆಳಗಾವಿ ಹಬ್ಬ’ ಎಂಬ ಅದ್ದೂರಿ ಉತ್ಸವವನ್ನು ಆಯೋಜಿಸಲಾಗಿತ್ತು. ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ಹಾಗೂ ಸಿನಿಮಾ ನಟ ಎಂದು ಹೇಳಿಕೊಳ್ಳುವ ಅಭಿಲಾಷ್ ನೇತೃತ್ವದಲ್ಲಿ ಈ ಇಡೀ ಕಾರ್ಯಕ್ರಮ ನಡೆದಿತ್ತು. ಸಾರ್ವಜನಿಕರನ್ನು ಸೆಳೆಯಲು ಹಾಗೂ ತಾನೊಬ್ಬ ದೊಡ್ಡ ಉದ್ಯಮಿ ಎಂದು ಬಿಂಬಿಸಿಕೊಳ್ಳಲು ಆರೋಪಿ ಶಿವಾನಂದ ಈ…

Read More

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಸುಟ್ಟುಹಾಕಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಐದನೇ ವಾರ್ಡ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಹೌದು ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸಂಗಪ್ಪ ಎಂಬುವವರ ಮೂರನೇ ಮಹಡಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಈ ಒಂದು ಅಪರಿಚಿತ ಮಹಿಳೆ ಶವ ಕುರಿತು ಏಕೆ ಯಾರು ಹೀಗೆಯನ್ನು ಕೊಲೆ ಮಾಡಲು ಕಾರಣವೇನು ಎನ್ನುವುದರ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ ವ್ಯಕ್ತವಾಗಿದ್ದು, 10 ಯುವಕರು ಇದೀಗ ಅರೆಸ್ಟ್ ಆಗಿದ್ದಾರೆ. ಜೂನ್ 3 ರಂದು ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಿಡಿಗೇಡಿಗಳು ವಿಡಿಯೋ ಹರಿಬಿಟ್ಟಿದ್ದಾರೆ. ವಿಡಿಯೋ ಹರಿಬಿಟ್ಟವರನ್ನು ಚೆನ್ನಗಿರಿಯ ಬಸವಪಟ್ಟಣ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಘಟನಾ ಸ್ಥಳಕ್ಕೆ ಎಸ್ಪಿ ಎಚ್‌ಟಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಿರುವ ಪೊಲೀಸರು ವೈದ್ಯಕೀಯ ವರದಿ ಬಂದ ಬಳಿಕ ಗ್ಯಾಂಗ್ ರೇಪ್ ಬಗ್ಗೆ ಸತ್ಯಾ ಸತ್ಯತೆ ತಿಳಿದು ಬರಲಿದೆ.

Read More

ಬೆಂಗಳೂರು : ಈಗ ಒಳ್ಳೆಯ ಆಡಳಿತ ಕೊಟ್ಟರೆ ಮುಂದೆ ಪಕ್ಷಕ್ಕೆ ಅನುಕೂಲ ಆಗಲಿದೆ. 2028 ರ ಚುನಾವಣೆಗೆ ಈಗಿನ ಒಳ್ಳೆಯ ಆಡಳಿತ ಅನುಕೂಲ ಆಗಲಿದೆ ಅಕಸ್ಮಾತ್ ಒಳ್ಳೆಯ ಆಡಳಿತ ಕೊಡಲಿಲ್ಲ ಅಂದರೆ ರಾಜಕಾರಣಿಗಳ ಭವಿಷ್ಯ ಜನರ ಕೈಯಲ್ಲಿ ಇರುತ್ತದೆ ಎಂದು ಕೆ.ಎನ್ ರಾಜಣ್ಣ ಸಿಎಂ ಡಿಕೆ ಶಿವಕುಮಾರ್ ಗೆ ಸಲಹೆ ಕೊಟ್ಟಿದ್ದರೆ. ಖಾತೆ ಕ್ಯಾತೆಯ ಬಗ್ಗೆ ಮಾರಿ ಸಚಿವ ಕೆ ಎನ್ ರಾಜಣ್ಣ ಕೆಂಡಮಂಡಲವಾಗಿದ್ದು, BDA BMRDA ಇಲ್ಲಾಂದ್ರೆ ಖಾತೆ ಬೇಡ ಅಧಿಕಾರ ವಹಿಸಿಕೊಳ್ಳಲ್ಲ ಅಂತ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಯಾರಿಗೆ ಯಾವ ಕಾಯಿಲೆ ಇದೆಯೋ ಅದಕ್ಕೆ ಏನೇನು ಔಷಧಿಗಳು ಬರುತ್ತವೆಯೋ ನೋಡೋಣ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಡಿಕೆ ಶಿವಕುಮಾರ್ ಗೆ ಸಾಕಷ್ಟು ಸವಾಲಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುತ್ತದೆ ಅನುದಾನ ವಿಷಯದಲ್ಲಿ ರಾಜ್ಯಕ್ಕೆ ಮೊದಲಿನಿಂದಲೂ ಅನ್ಯಾಯ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಲೇಬೇಕು. ಸ್ಥಳೀಯ ಸಂಸ್ಥೆ ಚುನಾವಣೆ…

Read More

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಪ್ರಸಿದ್ಧ ಉಕ್ಕು ಕಾರ್ಖಾನೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕರಗಿದ ಉಕ್ಕು ಮೈಮೇಲೆ ಬಿದ್ದ ಪರಿಣಾಮ ಎಂಟು ಜನ ಕಾರ್ಮಿಕರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯ ಆವರಣದಲ್ಲಿ ಎಂದಿನಂತೆ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಇಡೀ ಕೈಗಾರಿಕಾ ಪ್ರದೇಶದಲ್ಲಿ ಪ್ರಸ್ತುತ ಶೋಕದ ವಾತಾವರಣ ನಿರ್ಮಾಣವಾಗಿದೆ. ಕಾರ್ಖಾನೆಯಲ್ಲಿ ಕರಗಿದ ದ್ರವರೂಪದ ಉಕ್ಕನ್ನು ಸಾಗಿಸುತ್ತಿದ್ದ ಬೃಹತ್ ಕ್ರೇನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕ್ರೇನ್‌ನಿಂದ ನಿಯಂತ್ರಣ ತಪ್ಪಿ ಭಾರಿ ಪ್ರಮಾಣದ ಬಿಸಿ ಲೋಹವು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬಿದ್ದಿದೆ. ಇದರ ತೀವ್ರತೆಗೆ ಎಂಟು ಜನ ಕಾರ್ಮಿಕರು ಕ್ಷಣಾರ್ಧದಲ್ಲಿ ಬೂದಿಯಾಗಿದ್ದು, ಘಟನೆಯ ಭೀಕರತೆ ಎಲ್ಲರನ್ನು ನಡುಗಿಸುವಂತಿದೆ. ಹಲವರ ಸ್ಥಿತಿ ಗಂಭೀರ: ಹೆಚ್ಚಾಗುವ ಸಾಧ್ಯತೆ ಇರುವ ಸಾವಿನ ಸಂಖ್ಯೆ ಈ ದುರಂತದಲ್ಲಿ ಕೇವಲ ಸಾವು ಮಾತ್ರವಲ್ಲದೆ, ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣವೇ ಎಚ್ಚೆತ್ತ ಸಹೋದ್ಯೋಗಿಗಳು ಮತ್ತು…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ್ ಅರಸು ಅವರ ಮೊಮ್ಮಗ ಸೂರಜ್ ಹೆಗಡೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಲ್ಲಿರುವ ಸೂರಜ್ ಹೆಗಡೆ ಅವರ ಮನೆಯಲ್ಲಿ ರಾಹುಲ್ ಗಾಂಧಿ ಸೂರಜ್ ಹೆಗಡೆ ಅವರ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನದ ಬಳಿಕ ಕುಟುಂಬದ ಸದಸ್ಯರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ, ಕೆ.ಸಿ ವೇಣುಗೋಪಾಲ್ ಅವರು ಸಹ ಸೂರಜ್ ಹೆಗಡೆ ಅಂತಿಮ ದರ್ಶನ ಪಡೆದರು ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಸಾತ್ ಕೊಟ್ಟಿದ್ದಾರೆ

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ವಿದ್ಯಮಾನ ನಡೆದಿದೆ. ಕಾಂಗ್ರೆಸ್‌ನ ‘ಚುನಾವಣಾ ಚಾಣಕ್ಯ’ ಎಂದೇ ಖ್ಯಾತರಾಗಿರುವ ಪ್ರಸಿದ್ಧ ರಾಜಕೀಯ ತಂತ್ರಗಾರ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ನೇಮಕಾತಿ ಇರಲಿದ್ದು, ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಸಿದ್ದರಾಮಯ್ಯ ಬಳಿಕ ಈಗ ಡಿ.ಕೆ.ಶಿವಕುಮಾರ್‌ಗೆ ಸಾರಥಿ ಸುನೀಲ್ ಕನುಗೋಳು ಅವರು ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲೂ ಸಿಎಂ ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ರಾಜ್ಯ ರಾಜಕೀಯದ ಬದಲಾದ ಸಮೀಕರಣಗಳ ಹಿನ್ನೆಲೆಯಲ್ಲಿ, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಡಳಿತ ಹಾಗೂ ರಾಜಕೀಯ ನಡೆಗಳಿಗೆ ಹೊಸ ರೂಪ ನೀಡಲು ಇವರನ್ನು ಮತ್ತೊಮ್ಮೆ ಅದೇ ಅತ್ಯುನ್ನತ ಹುದ್ದೆಗೆ ನಿಯೋಜಿಸಲಾಗಿದೆ. ಸರ್ಕಾರದ ಆಡಳಿತ ಯಂತ್ರಕ್ಕೆ ವೇಗ ನೀಡುವುದು ಮತ್ತು ಮುಂಬರುವ ದಿನಗಳಲ್ಲಿ ಪಕ್ಷ ಹಾಗೂ ಸರ್ಕಾರದ…

Read More

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 25,540 ಮಂಜೂರಾದ ಹುದ್ದೆಗಳಿದ್ದು, ಈ ಪೈಕಿ ಖಾಲಿ ಇರುವ 8,770 ಹುದ್ದೆ ಪೈಕಿ 4 ಸಾವಿರ ಹುದ್ದೆಯ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಎ ವರ್ಗದ 268, ಬಿ ವರ್ಗದ 1,079, ಸಿ ವರ್ಗದ 5,294, ಡಿ ವರ್ಗದ 2,129 ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಎಲ್ಲ ವರ್ಗದ ಹುದ್ದೆಗಳ ಪೈಕಿ 4 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಖಂಡ್ರೆ ತಿಳಿಸಿದರು. ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಎಲ್ಲ ಹುದ್ದೆಗಳನ್ನು ಪಾರದರ್ಶಕವಾಗಿ ಭರ್ತಿ ಮಾಡಲು ಸೂಚಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ…

Read More

ಚಿಕ್ಕಮಗಳೂರು : ಅನ್ಯಕೋಮಿನ ಯುವಕನ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಮಪುರ ಪಟ್ಟಣದಲ್ಲಿ ನಡೆದಿದೆ ವೇಗವಾಗಿ ಬೈಕೋಡಿಸಿದ ಅಂತ ಜಹೀದ್ (18) ಎನ್ನುವ ಯುವಕನ ಮೇಲೆ ಬಿಜೆಪಿ ಮುಖಂಡ ಸಂತೋಷ್ ಮನಸ್ಸು ಇಚ್ಛೆ ಹಲ್ಲೆ ಮಾಡಿದ್ದಾನೆ. ಅಜ್ಜಂಪುರ ಪಟ್ಟಣ ಪಂಚಾಯಿತಿ ಸದಸ್ಯ ಶೋಭಾ ಪತಿ ಸಂತೋಷ್ ಎಂದು ತಿಳಿದುಬಂದಿದ್ದು, ಗಂಭೀರ ಗಾಯಗೊಂಡ ಜಹೀದ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈತುಂಬ ಬಾಸುಂಡೆ ಬರುವ ಹಾಗೆ ಹೊಡೆದಿದ್ದು ಅಲ್ಲದೇ ಕೊಲೆ ಮಾಡೋದಾಗಿ ಬೆದರಿಕೆ ಆರೋಪ ಸಹ ಕೇಳಿ ಬಂದಿದೆ. ಬಿಜೆಪಿ ಮುಖಂಡ ಸಂತೋಷ್ ವಿರುದ್ಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಅಪಾಯ ದಾಖಲಾಗಿದೆ.

Read More