Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಹಾವೇರಿಯಲ್ಲಿ ಬೀದಿ ನಾಯಿಗಳಿಗೆ ಅಟ್ಯಾಕ್ ನಡೆಸಿದ್ದು ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾವೇರಿ ನಗರದ ಶಿವಾಜಿನಗರ, ನೆಲೋಗಲ್ಲ, ಗುತ್ತಲ, ದೇವಗಿರಿ ಹಾಗೂ ಬ್ಯಾಡಗಿ ತಾಲೂಕಿನ ಹಿರೇಹಳ್ಳಿಯಲ್ಲಿ ನಡೆದಿದೆ. ಹತ್ತಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಒಂದೇ ದಿನ ಆರು ಮಕ್ಕಳು ಓರ್ವ ವಿರುದ್ಧ ಸೇರಿದಂತೆ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಪೃಥ್ವಿಕ್ (7) ಯಶವಂತ (3) ಫಾತಿಮಾ (5) ಅಹ್ಮದ್ ಅಲಿ (4) ಭುವನ್ (2) ಕಾರ್ತಿಕ್ (6) ಇನ್ನು 70 ವರ್ಷದ ನಿಂಗಮ್ಮ ಎನ್ನುವ ವೃದ್ದೆಗೆ ಗಂಭೀರವಾದ ಗಾಯಗಳಾಗಿವೆ. ದಾಳಿ ಮಾಡಿದ ಬೀದಿ ನಾಯಿಗಳಿಗೆ ರೇಬಿಸ್ ಸೋಂಕು ಇರುವ ಶಂಕೆ ವ್ಯಕ್ತವಾಗಿದ್ದು, ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳು ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಪಿಪಿಇ ಕಿಟ್ ಹಾಗೂ ಕೆಲವು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ 167 ಕೋಟಿ ರೂ. ಹಗರಣ ಸಂಬಂಧ ಆರೋಪಿತರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಮತ್ತು ದೋಷಾರೂಪ ಪಟ್ಟಿ ಸಲ್ಲಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಹಗರಣದ ಆರೋಪ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಲೆಕ್ಕಾಧಿಕಾರಿ ಮತ್ತು ಹಣಕಾಸು ಸಲಹೆಗಾರ ಡಾ. ವಿಷ್ಣುಪ್ರಸಾದ್ ಅವರು 2024ರ ಡಿ.12ರಂದು ನೀಡಿದ್ದ ದೂರಿನ ಆಧಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಪಿಪಿಇ ಕಿಟ್ ಪೂರೈಸಿದ್ದ ಲಾಜ್ ಎಕ್ಸಪೋರ್ಟ್ ಲಿಮಿಟೆಡ್ ಹಾಗೂ ಪ್ರೂಡಂಟ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಕಂಪನಿಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, ಇದು ಹಣ ದುರುಪಯೋಗದ ಪ್ರಕರಣವಾಗಿದೆ.…
ಬೆಂಗಳೂರು : ಒಳ ಮೀಸಲಾತಿ ಅಧಿಸೂಚನೆ ಪ್ರಕಟ ವಿಚಾರಕ್ಕೆ ಸಂಬಂಧಪಟ್ಟಂತೆ ತೀರ್ಮಾನಕ್ಕೆ ತಕ್ಕಂತೆ ಅಧಿಸೂಚನೆ ಬಂದಿದೆ ಹಾಗಾಗಿ ರಾಜ್ಯದಲ್ಲಿ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಐವತ್ತಾರು ಸಾವಿರ ಹುದ್ದೆಗಳ ನೇಮಕಾತಿ ಆಗಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್. ನಮ್ಮ ಇಲಾಖೆಯಲ್ಲೂ ಖಾಲಿ ಹುದ್ದೆಗಳು ಇದ್ದು ನೇಮಕಾತಿ ಮಾಡಿಕೊಳ್ಳುತ್ತೇವೆ ಇಲಾಖೆಗಳಿಗೂ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಲಿದೆ ಖಾಲಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ ಕೊಟ್ಟಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಪ್ರಮುಖ ಅಂಶಗಳು: ನೇಮಕಾತಿ ಪ್ರಮಾಣ: ಸುಮಾರು 56,000 ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ. ಒಳ ಮೀಸಲಾತಿ ಅನ್ವಯ: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಒಳ ಮೀಸಲಾತಿ ಅಧಿಸೂಚನೆಯಂತೆ ನೇಮಕಾತಿ ನಡೆಯಲಿದೆ. ವಿವಿಧ ಇಲಾಖೆಗಳು: ಕೇವಲ ಪೊಲೀಸ್ ಇಲಾಖೆಯಷ್ಟೇ ಅಲ್ಲದೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು ಒಂದೇ ವಾರದಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್ ಸಿಜ್ ಮಾಡಿದ್ದಾರೆ ಬೆಂಗಳೂರಿನ ಬಾಗಲೂರು ಪೊಲೀಸರು 16 ಕೋಟಿ ಮೌಲ್ಯದ ಎಲ್ಎಸ್ಡಿ ಪಕ್ಷಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರಿಂದ 17.5 ಕೋಟಿ ಮೌಲ್ಯದ ಎಂ ಡಿ ಎಂ ಎ ವಶಕ್ಕೆ ಪಡೆಯಲಾಗಿದೆ. ಯಶವಂತಪುರ ಜಾಲಹಳ್ಳಿಯಲ್ಲಿ 6.47 ಕೋಟಿ ಮಾಡಿದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಹಾಡುಗೋಡಿ ಪೊಲೀಸ್ರಿಂದ 1.5 ಕೋಟಿ ಮೌಲ್ಯದ ಗ್ರೌಂಡ್ ಶುಗರ್ ಜಪ್ತಿ ಮಾಡಲಾಗಿದ್ದು ಚಿಕ್ಕಜಾಲ ಪೋಲಿಸರಿಂದ 1.6 ಕೋಟಿ ಮಾಡಿದ ವರ್ಷಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಚಟಬೇರಿ ಅಂಬ್ರೋಸ್ ಮತ್ತು ನವೆಬಿಲಿ ವ್ಯಾಲೆಂಟೈನ್ ಬಂದಿದ್ದ ಆರೋಪಿಗಳು ಎಂದು ತಿಳಿದು ಬಂದಿದೆ. ವಿದೇಶಿ ಪೋಸ್ಟ್ ಆಫೀಸ್ ಹೆಸರಿನಲ್ಲಿ ಮಾದಕ ವಸ್ತುಗಳು ಬಂದಿದ್ದವು ಭಾರತದವರು ಯಾರೆಂದು ಇದುವರೆಗೂ ಪತ್ತೆಯಾಗಿಲ್ಲ. ಯಾವ ದೇಶದಿಂದ ಡ್ರಗ್ಸ್ ಪಾರ್ಸಲ್ ಬಂದಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2016ರಲ್ಲಿ…
ಬೆಳಗಾವಿ : ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ ಕಿರಣ ಡೊಕ್ಕಣ್ಣನವರ್ ಹಾಗೂ ಸಯ್ಯದ್ ತಹಶೀಲ್ದಾರ್ ಸಸ್ಪೆಂಡ್ ಆಗಿದ್ದಾರೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಪೇದೆಗಳು ಅಮಾನತು ಆಗಿದ್ದಾರೆ. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದ. ಶನಿವಾರ ಆದಿತ್ಯ ಮತ್ತು ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಗಾಂಜಾ ಸೇವನೆ ಆರೋಪದಲ್ಲಿ ವಶಕ್ಕೆ ಪಡೆದಿರುತ್ತಾರೆ. ಆಮೇಲೆ ಆದಿತ್ಯನನ್ನು ಪರಿಶೀಲನೆ ಮಾಡಿದಾಗ ವರದಿ ನೆಗೆಟಿವ್ ಬಂದಿತ್ತು. ಪಾಸಿಟಿವ್ ಬಂದಂತಹ ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿದ ಆರೋಪ ಕೇಳಿ ಬಂದಿದ್ದು ನೆಗೆಟಿವ್ ಬಂದಿದ್ದ ಆದಿತ್ಯನ ಬಳಿ ಕೂಡ ಇವರು 2 ಸಾವಿರ ಹಣ ಕೇಳಿದ್ದರು. ಹಣಕೊಡಲು ಆದಿತ್ಯನ ತಾಯಿ ನಿರಾಕರಿಸಿದ್ದಾರೆ. ಈ ಹಿನೆಲೆಯಲ್ಲಿ ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದೀಗ ಮೂವರನ್ನು ಸಸ್ಪೆಂಡ್ ಮಾಡಿ ಪೊಲೀಸ್ ಕುಮಾರ್ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಜಾಮೀನು ಕೋರಿ ಇದೀಗ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿರುವುದರಿಂದ ನಟ ದರ್ಶನ್ ಜಾಮೀನು ಕೋರಿ ಮನವಿ ಸಲ್ಲಿಸಿದ್ದಾರೆ ಏಪ್ರಿಲ್ 14 ರಂದು ನಟ ದರ್ಶನ್ ಸುಪ್ರೀಂ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ಪ್ರಮುಖ ಅಂಶಗಳು ವಿಳಂಬದ ಆಧಾರ: ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಕೋರಲಾಗಿದೆ. ಅರ್ಜಿ ಸಲ್ಲಿಕೆ: ಏಪ್ರಿಲ್ 14 ರಂದು ಸುಪ್ರೀಂ ಕೋರ್ಟ್ನಲ್ಲಿ ಈ ವಿಶೇಷ ಮೇಲ್ಮನವಿ ಅರ್ಜಿ (Special Leave Petition) ಸಲ್ಲಿಕೆಯಾಗಿದೆ. ಹಿಂದಿನ ಹಿನ್ನೆಲೆ: ಈ ಹಿಂದೆ ಕರ್ನಾಟಕ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ, ಇದೀಗ ದೇಶದ ಅತ್ಯುನ್ನತ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂದಿನ ಹಂತವೇನು? ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾದ ನಂತರ, ಅದು ವಿಚಾರಣೆಗೆ ಪಟ್ಟಿಯಾಗಲು (Listing) ಕೆಲವು ದಿನಗಳ…
ಚಾಮರಾಜನಗರ : ಮದುವೆ ಮನೆಯಲ್ಲಿ ಚಿನ್ನದ ವಿಚಾರವಾಗಿ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆರ್ಎಸ್ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ ಇಂದು ಮುದಾಸಿರ ಜೊತೆಗೆ ಗುಲ್ರಾಜ್ ಭಾನು ವಿವಾಹ ನಿಶ್ಚಯ ಆಗಿತ್ತು. ಆದರೆ ನಿನ್ನೆ ಚಿನ್ನಾಭರಣಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ವಧುವಿನ ಸಂಬಂಧಿಕರು ಇರಿದಿದ್ದಾರೆ. ಮಾತುಕತೆಯಂತೆ ವರನಿಗೆ ಚಿನ್ನಾಭರಣ ವನ್ನು ವಧುವಿನ ಕುಟುಂಬಸ್ಥರು ನೀಡಿದ್ದರು. ಆದರೆ ವಧುವಿಗೆ ನೀಡಬೇಕಿದೆ ಚಿನ್ನಾಭರಣ ವರನ ಕಡೆಯವರು ನೀಡಿಲ್ಲ ಹಾಗಾಗಿ ವಧು ಮತ್ತು ವರನ ಕುಟುಂಬಸ್ಥರ ನಡುವೆ ಗಲಾಟೆ ಶುರುವಾಗಿದೆ. ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯಬ್ ಮೇಲೆ ಹಲ್ಲೆ ನಡೆಸಲಾಗಿದೆ. ರೊಚ್ಚಿಗೆದ್ದ ವರನ ಸಂಬಂಧಿಗಳಿಂದ ಮಧುವಿನ ಸಂಬಂಧಿ ಮೇಲು ಹಲ್ಲೆ ನಡೆದಿದೆ. ಫೈರೋಜ್ ಖಾನ್, ಅಬ್ದುಲ್ ವಾಹಿದ್, ಅಬ್ದುಲ್ ಆರಿಫ್ ಮೇಲೆ ಹಲ್ಲೆ ನಡೆದಿದೆ. ಸದ್ಯ ಗಾಯಾಳುಗಳಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ರಿಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆತನ ವಿರುದ್ಧ fir ದಾಖಲಿಸಲು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರ ಪೊಲೀಸ್ ಠಾಣೆ ಪೊಲೀಸರು ಕಾನೂನು ತಜ್ಞರ ಸಲಹೆಯನ್ನು ಪಡೆಯುತ್ತಿದ್ದು, FIR ದಾಖಲಿಸಿ ಬಳಿಕ ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು, ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಕಿಶನ್ (ಬುಜ್ಜಿ) ಅವರು ಸಾರ್ವಜನಿಕ ರಸ್ತೆಯಲ್ಲಿ ‘ಪೆಟ್ರೋಲ್ ಬಾಂಬ್’ ಮಾದರಿಯ ಸ್ಫೋಟದ ವಿಡಿಯೋ (ರೀಲ್ಸ್) ಮಾಡುವ ಮೂಲಕ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತಾದ ಪ್ರಮುಖ ಮಾಹಿತಿ ಇಲ್ಲಿದೆ: ಏನಿದು ಪ್ರಕರಣ? ಅಪಾಯಕಾರಿ ಸ್ಟಂಟ್: ರಜತ್ ಅವರು ಪ್ಲಾಸ್ಟಿಕ್ ಕವರ್ವೊಂದರಲ್ಲಿ ಪೆಟ್ರೋಲ್ ತುಂಬಿಸಿ, ಸಾರ್ವಜನಿಕರು ಓಡಾಡುವ ರಸ್ತೆಯಲ್ಲೇ ಬೆಂಕಿ ಹಚ್ಚಿ ಸ್ಫೋಟಿಸುವಂತೆ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.…
ಬೆಂಗಳೂರು : ನಟ ಯಶ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಚಿತ್ರ ಬಿಡುಗಡೆ ಇದೀಗ ಮತ್ತೆ ಮುಂದೂಡಲಾಗಿದೆ. ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಯಶ್ ನಟನೆಯ ಟಾಕ್ಸಿಕ್ ಚಿತ್ರ ಮತ್ತೆ ಮುಂದೂಡಲಾಗಿದೆ ಹಾಗಾಗಿ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಲಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಯಶ್ ಪೋಸ್ಟ್ ಮಾಡಿದ್ದಾರೆ. ಹೌದು, ‘ಟಾಕ್ಸಿಕ್’ (Toxic) ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿರುವ ಸುದ್ದಿ ಯಶ್ ಅಭಿಮಾನಿಗಳಲ್ಲಿ ಸ್ವಲ್ಪ ನಿರಾಸೆ ಮೂಡಿಸಿರುವುದು ನಿಜ. ಆದರೆ, ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಬಿಡುಗಡೆ ವಿಳಂಬಕ್ಕೆ ಕಾರಣಗಳೇನು? ಬೃಹತ್ ಸೆಟ್ಗಳು ಮತ್ತು ನಿರ್ಮಾಣ: ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ಅಂತರಾಷ್ಟ್ರೀಯ ಮಟ್ಟದ ಮೇಕಿಂಗ್ ಹೊಂದಿದ್ದು, ಚಿತ್ರೀಕರಣಕ್ಕೆ ಹೆಚ್ಚಿನ ಸಮಯ ಬೇಕಾಗಿದೆ. ತಾರಾಗಣದ ಆಯ್ಕೆ: ಚಿತ್ರದಲ್ಲಿ ಕೇವಲ ಯಶ್ ಮಾತ್ರವಲ್ಲದೆ, ಬಾಲಿವುಡ್ ಮತ್ತು ಮಲಯಾಳಂ ಚಿತ್ರರಂಗದ ಖ್ಯಾತ ನಟ-ನಟಿಯರು ನಟಿಸುತ್ತಿರುವುದರಿಂದ ಎಲ್ಲರ ಡೇಟ್ಸ್…
ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಪಾದ ಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಪಾದಚಾರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಕಾರು ಚಾಲಕನೋರ್ವ ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು 48 ವರ್ಷದ ಶಿವಾನಂದ ಹುಲಕೋಟಿ ಹಾಗೂ 40 ವರ್ಷದ ಅಶೋಕ್ ಸರ್ವಿ ಎಂದು ಗುರುತಿಸಲಾಗಿದೆ. ಈ ಕಾರು ಮಹಾರಾಷ್ಟ್ರದಿಂದ ಲಕ್ಷೇಶ್ವರಕ್ಕೆ ಬರುತ್ತಿತ್ತು. ಚನ್ನಮ್ಮ ಸರ್ಕಲ್ಗೆ ಬರುತ್ತಿದ್ದಂತೆ ಕಾರು ಚಾಲಕನಿಗೆ ನಿದ್ದೆ ಮಂಪರು ಆಗಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗಳ ಮೇಲೆ ಹತ್ತಿದೆ. ಅಪಘಾತದಲ್ಲಿ ಮೃತರಾದ ಅಶೋಕ್ ಹಾಗೂ ಶಿವಾನಂದ ಬೆಳಗಿನ ಜಾವ ಅಂಬೇಡ್ಕರ್ ಬಡಾವಣೆಯಿಂದ ವಾಕ್ ಬಂದಿದ್ದರು. ಅವರು ನಡೆದು ಬರುತ್ತಿದ್ದಾಗಲೇ ಏಕಾಏಕಿ ಎದುರಿಗೆ ಬಂದ ಹುಂಡೈ ಕಾರು ಅವರಿಗೆ…














