Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಧಾರವಾಡ : ಲವ್ ಜಿಹಾದ್ ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸಿಪಿಐ ಶಿವಕುಮಾರ್ ಲೋಹಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಧಾರವಾಡ ಗ್ರಾಮೀಣ ವೃತ್ತದ ಸಿಪಿಐ ಶಿವಕುಮಾರ್ ಅಮಾನತುಗೊಳಿಸಲಾಗಿದೆ. ಪ್ರೀತಿಸುವ ನಾಟಕವಾಡಿ ಲವ್ ಜಹಾದ್ಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಘಟನೆಯಿಂದ ನೊಂದಿದ್ದ ದಲಿತ ಸಮುದಾಯದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಹಾಗಾಗಿ ಕರ್ತವ ಲೋಪದ ಹಿನ್ನೆಲೆಯಲ್ಲಿ ಇದೀಗ ಶಿವಕುಮಾರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಘಟನೆ ಖಂಡಿಸಿ ಎಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪೊಲೀಸರ ನಿರ್ಲಕ್ಷದ ಬಗ್ಗೆ ಆರೋಪ ಮಾಡಲಾಗಿತ್ತು ಈ ಹಿನ್ನಲೆ ಸಿಪಿಐ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವರದಿ ಕೇಳಿರುವ ಬೆನ್ನಲ್ಲೇ ತನಿಖಾ ಪ್ರಕ್ರಿಯೆ ತೀವ್ರಗೊಂಡಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ವಿಶೇಷ ತನಿಖಾ ದಳದ (SIT) ಮುಖ್ಯಸ್ಥರಾದ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿರುವುದು ಈಗ ತನಿಖಾ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯು ಸುಮಾರು 20 ನಿಮಿಷಗಳ ಕಾಲ ಜರುಗಿತು. ಈ ವೇಳೆ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಪ್ರಕರಣದ ಇದುವರೆಗಿನ ತನಿಖಾ ಪ್ರಗತಿಯ ಸಂಪೂರ್ಣ ವಿವರಗಳನ್ನು ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ನ್ಯಾಯಾಲಯಕ್ಕೆ ಸಲ್ಲಿಸಬೇಕಾದ ವರದಿಯ ಸಿದ್ಧತೆಗಳ ಕುರಿತು ಸಚಿವರೊಂದಿಗೆ ಪ್ರಮುಖವಾಗಿ ಸಮಾಲೋಚನೆ ನಡೆಸಲಾಯಿತು. ವಿಶೇಷವೆಂದರೆ, ಎಸ್ಐಟಿ ಮುಖ್ಯಸ್ಥರು ಕೇವಲ ಮೌಖಿಕ ಮಾಹಿತಿ ನೀಡದೆ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಅತ್ಯಂತ ಪ್ರಮುಖ ಹಾಗೂ ಗೌಪ್ಯ ದಾಖಲೆಗಳೊಂದಿಗೆ ಗೃಹ ಸಚಿವರನ್ನು ಭೇಟಿಯಾಗಿದ್ದರು. ಈ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಪ್ರಕರಣದ…
ಬೆಂಗಳೂರು: ಬೆಳಗಾವಿಯಲ್ಲಿ ನಡೆದು ಇಡೀ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸುಮಾರು 4,500 ಕೋಟಿ ರೂಪಾಯಿಗಳ ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಶಿವಾನಂದ ನೀಲಣ್ಣನವರ್ಗೆ ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಆದೇಶವು ಪ್ರಕರಣದ ತನಿಖೆಯ ಹಂತದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯಾಗಿ ಹೊರಹೊಮ್ಮಿದೆ. ಬೆಂಗಳೂರಿನ 93ನೇ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಯ ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿತು. ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ನ್ಯಾಯಾಧೀಶರು ಕೆಲವು ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಆರೋಪಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಪ್ರಕಟಿಸಿದ್ದಾರೆ. ನ್ಯಾಯಾಲಯವು ಜಾಮೀನು ನೀಡುವಾಗ ಮುಖ್ಯವಾಗಿ ಆರ್ಥಿಕ ಶೂರಿಟಿಗೆ ಒತ್ತು ನೀಡಿದೆ. ಆರೋಪಿ ಶಿವಾನಂದ ನೀಲಣ್ಣನವರ್ 3 ಲಕ್ಷ ರೂಪಾಯಿ ಮೊತ್ತದ ಬಾಂಡ್ ಹಾಗೂ ಒಬ್ಬರ ಭದ್ರತೆ (ಶೂರಿಟಿ)ಯನ್ನು ಒದಗಿಸಬೇಕು ಎಂದು ಸೂಚಿಸಿದೆ. ಈ ಶರತ್ತನ್ನು ಪೂರೈಸಿದ ಬಳಿಕವಷ್ಟೇ ಆರೋಪಿಯ ಬಿಡುಗಡೆಗೆ ಕಾನೂನು ಪ್ರಕ್ರಿಯೆಗಳು ಚಾಲನೆ ಪಡೆಯಲಿವೆ. ನ್ಯಾಯಾಲಯದ ಪ್ರಮುಖ…
ಬೆಂಗಳೂರು : ಬೆಂಗಳೂರಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸಾವನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ರಸ್ತೆಯ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡಾದಿಡಿಯಾಗಿ ಚಾಲಕ ಇಕೋ ಕಾರನ್ನು ಚಲಾಯಿಸಿದ್ದಾನೆ. ಇಕೋ ಕಾರಿನಲ್ಲಿ ಇದ್ದ ಸುಖದೇವ್ ಸಾವನಪ್ಪಿದು ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎರಡು ಬೈಕ್ಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಮುಂದೆ ಹೋಗುತ್ತಿದ್ದ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಈ ವೇಳೆ ಹೊರಗೆ ಬಿದ್ದಿದ್ದ ಸುಖದೇವ್ ಮೇಲೆ ಇಕೋ ಕಾರು ಬಿದ್ದಿದೆ. ಎರಡು ಬೈಕ್ ಗಳಿದ್ದ ಮೂವರು ಸವಾರರಿಗೆ ಗಂಭೀರ ಗಾಯಗಳಾಗಿದ್ದು ಕಾರುಬಿದ್ದ ಪರಿಣಾಮ ಸುಖದೇವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಪಘಾತ ಸಂಭವಿಸಿದೆ.
ಬೆಂಗಳೂರು : ಬೆಂಗಳೂರಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮತ್ತೆ ವಿವಾದಕ್ಕೆ ಸಿಲುಕಿದ್ದು, ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ರ್ಯಾಶ್ ಡ್ರೈವಿಂಗ್ ಮಾಡಲಾಗಿದೆ. ಏರ್ಪೋರ್ಟ್ ರಸ್ತೆಯಲ್ಲಿ ರಿಕ್ಕಿ ಲ್ಯಾಂಬರ್ಗಿನಿ ಕಾರಿನಿಂದ ಪುಂಡಾಟ ಮೆರೆಯಲಾಗಿದೆ. ಸಾರ್ವಜನಿಕರಿಗೆ ಭಯ ಮತ್ತು ಆತಂಕ ಸೃಷ್ಟಿಸುವ ರೀತಿಯಲ್ಲಿ ಕಾರು ಚಾಲನೆ ಮಾಡಲಾಗಿದೆ. ಕಾರಿನ ಸೈಲೆನ್ಸರ್ ನಲ್ಲಿ ಬೆಂಕಿಯನ್ನು ಸಿಡಿಸಿ ಕರ್ಕಶವಾಗಿ ಶಬ್ದ ಮಾಡಿಕೊಂಡು ಕಾರು ಡ್ರೈವ್ ಮಾಡಲಾಗಿದೆ ಈ ಒಂದು ವಿಡಿಯೋ ಆದರಿಸಿ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ. ಅತಿ ವೇಗವಾಗಿ ಚಾಲನೆ ಮಾಡಿರುವ ವಿಡಿಯೋ ವೈರಲ್ ಆಗಿದೆ KA 05 NR 0009 ನಂಬರ್ನ ರಿಕ್ಕಿ ರಾಯ್ ಒಡೆತನದ ಲ್ಯಾಂಬೋರ್ಗಿನಿ ಕಾರು ಎಂದು ತಿಳಿದುಬಂದಿದೆ. ಕಾರು ಯಾರು ಚಾಲನೆ ಮಾಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ ಈ ವಿಡಿಯೋ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಮತ್ತು ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (UG-CET) ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಎರಡಕ್ಕೂ ಸೇರಿ ‘ಒಂದೇ ಅರ್ಜಿ’ ಸಲ್ಲಿಸುವ ಕ್ರಾಂತಿಕಾರಿ ಮತ್ತು ಹೊಸ ನಿಯಮವನ್ನು ಕೆಇಎ ಜಾರಿಗೊಳಿಸುತ್ತಿದೆ. ಈ ಹಿಂದೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಿದ್ಧತೆಯ ಭರದಲ್ಲೇ ಸಿಇಟಿಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿತ್ತು. ಇದರಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದರು. ಅಲ್ಲದೆ ಕೊನೆಯ ಕ್ಷಣದಲ್ಲಿ ಕೆಇಎ ವೆಬ್ಸೈಟ್ನಲ್ಲಿ ಸರ್ವರ್ ಸಮಸ್ಯೆ ಎದುರಾಗಿ, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಬಹುತೇಕ ವಿದ್ಯಾರ್ಥಿಗಳು ವಿಫಲರಾಗುತ್ತಿದ್ದರು. ಹೊಸ ನಿಯಮದ ಜಾರಿಯಿಂದಾಗಿ ವಿದ್ಯಾರ್ಥಿಗಳ ಈ ಎಲ್ಲಾ ಸರ್ವರ್ ಸಮಸ್ಯೆ ಹಾಗೂ ಮಾನಸಿಕ ಒತ್ತಡಕ್ಕೆ ಶಾಶ್ವತ ಪರಿಹಾರ ಸಿಗಲಿದೆ. ಸುಲಭ ಪ್ರಕ್ರಿಯೆ: ಪ್ರವೇಶದ ವೇಳೆಯೇ ಸಿಇಟಿ ಆಯ್ಕೆ ವಿದ್ಯಾರ್ಥಿಗಳಿಗೆ ಸಿಇಟಿ ಬಗ್ಗೆ ಸಮಗ್ರ…
ಬೆಂಗಳೂರು : ಬೈಕ್ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಕಾಲೇಜು ಬಳಿ ಡಿವೈಡರ್ಗೆ ಡಿಕ್ಕಿಯಾದ ಬೈಕ್ ನಲ್ಲಿ ಇದ್ದಂತಹ ಅತುಲ್ ಹಾಗೂ ಗೌರಿಶಂಕರ್ ಸಾವನಪ್ಪಿದ್ದಾರೆ. ಮೈಸೂರು ನಿಂದ ಇಬ್ಬರು ಬೆಂಗಳೂರು ಕಡೆಗೆ ಬರುತ್ತಿದ್ದರು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಇಬ್ಬರು ಬರುವಾಗ ಕಾಲೇಜು ಬಳಿ ಇರುವ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೇಣು ಬಿಗಿದು ಇಬ್ಬರು ಮಕ್ಕಳನ್ನ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!
ಮೈಸೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಮೈಸೂರಿನ ಸಾಲಿಗ್ರಾಮದಲ್ಲಿ ಘೋರ ದುರಂತ ಸಂಭವಿಸಿದೆ ತಾಯಿ ಒಬ್ಬಳು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲಿನಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ವರ್ಷದ ಧೃತಿ ಹಾಗೂ ಒಂದುವರೆ ವರ್ಷದ ದಿಶಾ ಎನ್ನುವ ಮಕ್ಕಳನ್ನು ಕೊಲೆ ಮಾಡಲಾಗಿದೆ. ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ಬಳಿಕ ತಾಯಿ ಪ್ರಿಯಾಂಕಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ವಿಷಯ ತಿಳಿದ ತಕ್ಷಣ ಸ್ಥಳೀಯರು ತಾಯಿ ಪ್ರಿಯಾಂಕಳನ್ನು ರಕ್ಷಣೆ ಮಾಡಿದ್ದಾರೆ ಮೈಸೂರಿನ ಖಾಸಗಿ ಹಾಸ್ಪಿಟಲ್ಗೆ ಶಿಫ್ಟ್ ಮಾಡಲಾಗಿದೆ. ಆರು ವರ್ಷದ ಹಿಂದೆ ಪ್ರಿಯಾಂಕ ಮತ್ತು ಅನಿಲ್ ಕುಮಾರ್ ಮದುವೆ ಆಗಿತ್ತು.ಆದರೆ ಈ ರೀತಿ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಪರಿಸ್ಥಿತಿ ಯಾವ ಕಾರಣಕ್ಕೆ ಬಂದಿತು ಎಂದು ತಿಳಿದು ಬಂದಿಲ್ಲ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಶಾಲಾ ವಾಹನ ಹರಿದು ತಾಯಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಬೆಂಗಳೂರಿನ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುವಾಗ ಈ ವೇಳೆ ಬೈಕ್ ಸ್ಕಿಡ್ ಆಗಿ ತಾಯಿ ಕಾಂತ ರಸ್ತೆಯಲ್ಲಿ ಬಿದ್ದಿದ್ದಾರೆ. ಈ ವೇಳೆ ಶಾಲಾ ವಾಹನ ಏಕಾಏಕಿ ಕಾಂತ ಅವರ ಮೇಲೆ ಹರಿದಿದೆ. ಘಟನೆಯಲ್ಲಿ ತಾಯಿ ಕಾಂತ ಸ್ಥಳದಲ್ಲಿ ಸಾವನ್ನಪ್ಪಿದ್ದು ಪುತ್ರಿ ನೇಹ ಬಚಾವ್ ಆಗಿದ್ದಾಳೆ. ಬೈಕ್ ನಲ್ಲಿ ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಮಾರತಹಳ್ಳಿಯಿಂದ ಸಿದ್ದಾಪುರ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ತಾಯಿಯ ಸಾವನ್ನು ಕಣ್ಣಾರೆ ಕಂಡ ನೇಹಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಬಗ್ಗೆ ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ವಿಜಯ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಆತ್ಮೀಯವಾಗಿ ಬರಮಾಡಿಕೊಂಡರು. ಅರ್ಧ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ವಿಜಯ್ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ದೇವಸ್ಥಾನದ ಗರ್ಭಗುಡಿಯ ಮುಂದೆ ಕುಳಿತು ಅತ್ಯಂತ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ ಅವರು, ದೇವಿಗೆ ವಿಶೇಷ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ವಿಜಯ್ ಅವರ ಕೈಗೆ ರಕ್ಷಾದಾರವನ್ನು ಕಟ್ಟಿ, ಪ್ರಸಾದ ನೀಡಿ ಆಶೀರ್ವದಿಸಿದರು. 2 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಸಮರ್ಪಣೆ ರಾಜಕೀಯದಲ್ಲಿ ಮಹತ್ತರ ಜಯ ಗಳಿಸಿ ನೂತನ…













