Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಕು ಇರದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಹೇಳಿಕೆ ನೀಡಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ್, ಮೌನಪ್ಪ ಮತ್ತು ಸಂಪತ್ ಎಂದು ತಿಳಿದುಬಂದಿದೆ. ಕಾರು ಚಾಲಕ ಬಸವಂತ ಕಡಲೇಕರ್ ಸ್ನೇಹಿತ ಮದನ್ ಈ ಕುರಿತು ದೂರು ನೀಡಿದರು. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಮದನ್ ನೀಡಿದ ದೂರಿನ ಮೇಲೆ ನಾಲ್ವರು ಆರೋಪಿಗಳನ್ನು ಬಂದಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ತಿಳಿಸಿದರು. ಜನವರಿ 6ರಂದು ಚಾಲಕ ಬಸವನೊಂದಿಗೆ ಚಾಕು ಇರಿದು ನಾಲ್ವರು ಪರಾರಿಯಾಗಿದ್ದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು.
ತುಮಕೂರು : ಅತ್ತೆ ಮಾವ ಹಾಗು ಪತಿಯ ಕಿರುಕುಳಕ್ಕೆ ಬೇಸತ್ತು ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ನೋಡಿದ್ದೇವೆ ಕೇಳಿದ್ದೇವೆ. ಆದರೆ ಇದೀಗ ತುಮಕೂರಲ್ಲಿ ಕಾರೆಕುರ್ಚಿ ಗ್ರಾಮದಲ್ಲಿ ಸೊಸೆ ಕಾಟಕ್ಕೆ ಬೇಸತ್ತು ಅತ್ತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೆಕುರ್ಚಿ ಗ್ರಾಮದಲ್ಲಿ ಮಗನನ್ನು ತನ್ನಿಂದ ದೂರ ಮಾಡ್ತಾರೆಂಬ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಬೆಳಿಗ್ಗೆ ಅನುಮಾನಸ್ಪದ ಸ್ಥಿತಿಯಲ್ಲಿ ಭ್ರಮರಾಂಬಿಕ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಭ್ರಮರಂಭಿಕ (60) ಶವ ಪತ್ತೆಯಾಗಿದೆ. ಬಳಿಕ ಚೇಳೂರು ಠಾಣೆ ಪೊಲೀಸರಿಗೆ ಕುಟುಂಬ ಮಾಹಿತಿ ನೀಡಿದೆ. ಅತ್ತೆ ಭ್ರಮರಂಭಿಕ ಸಾವಿಗೆ ಸೊಸೆಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು. ಅಡುಗೆ ಸೇರಿ ಎಲ್ಲವನ್ನು ಪ್ರತ್ಯೇಕವಾಗಿ ಮಾಡಿಕೊಳ್ತೀದ್ದಳು. ಗಂಡನನ್ನು ಬೆಂಗಳೂರಿಗೆ ಕರೆದೋಯ್ಯಲು ಮಾತನಾಡುತ್ತಿದ್ದ ಆರೋಪ ಸಹ ಕೇಳಿಬಂದಿದೆ. ಈ ಮಾತಿನಿಂದ ನೊಂದು ಅತ್ತೆ ಭ್ರಮರಂಭಿಕ ಆತ್ಮಹತ್ಯೆ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಪ್ರೇರಣೆ ಪ್ರಕಾರಣದಡಿ ಸೊಸೆ ಕಾವ್ಯಶ್ರೀ ವಿರುದ್ಧ ಚೇಳೂರು ಠಾಣೆಯಲ್ಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾನೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ. ಪರಮೇಶ್ವರ್, ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐ ಗೆ ಕೊಡುವ ಅಗತ್ಯ ಇಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಮ್ಮ ಪೊಲೀಸರಿಗೆ ತನಿಖೆ ಮಾಡುವ ಸಾಮರ್ಥ್ಯ ಇದೆ ನಮ್ಮ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಅವರಿಂದ ಇದರ ತನಿಖೆ ಆಗಲ್ಲ ಅನ್ನೋ ಸಂದರ್ಭ ಬಂದಾಗ ಸಿಬಿಐ ತನಿಖೆಯ ಮತ್ತೊಂದು ಅಂತ ನೋಡಬಹುದು. ಇಂತಹ ಪ್ರಕರಣಗಳು ಸಿಬಿಐಗೆ ಕೊಡಲ್ಲ ಅಂತ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆಯೇ ತೀರ್ಮಾನಿಸಿದ್ದೇವೆ. ಕೆಲವು ಪ್ರಕರಣಗಳಲ್ಲಿ ಸೆಲೆಕ್ಟಿವ್ ನಿರ್ಧಾರ ಮಾಡುತ್ತೇವೆ ನ್ಯಾಯಾಲಯದಿಂದ ಆದೇಶ ಬಂದಾಗ ಅಥವಾ ಇನ್ಯಾವುದೋ ಸನ್ನಿವೇಶ ಬಂದಾಗಷ್ಟೇ ಸಿಬಿಐ ಗೆ ಕೊಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ಹಾಗಾಗಿ ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಾನಸಗೇರಿಯಲ್ಲಿ ನಡೆದಿದೆ. ಕಲಘಟಗಿಯಿಂದ ಹಳಿಯಾಳಕ್ಕೆ ತೆರಳ್ತಿದ್ದ KSRTC ಬಸ್ ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸೇರಿ 20 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಚಾಲಕ 8 ವಿದ್ಯಾರ್ಥಿನಿಯರು, ಇಬ್ಬರು ಶಾಲಾ ಮಕ್ಕಳಿಗೆ ಗಾಯಗಳಾಗಿವೆ.
ನವದೆಹಲಿ : ಭಾರತಕ್ಕೆ ದಂಡ ವಿಧಿಸುವ ಮಸೂದೆಗೆ ಟ್ರಂಪ್ ಇದೀಗ ಗ್ರೀನ್ ಸಿಗ್ನಲ್ ನೀಡಿದ್ದಾರೆ ಹರ್ಷದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ದಂಡಪಿಸುವ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ಖಚಿತಪಡಿಸಿದೆ. ಭಾರತ, ಚೀನಾ ಹಾಗು ಬ್ರೆಜಿಲ್ ಗೆ ದಂಡ ವಿಧಿಸಲು ಡೊನಾಲ್ಡ್ ಟ್ರಂಪ್ ಇದೀಗ ಸಮ್ಮತಿ ಸೂಚಿಸಿದ್ದಾರೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ಮೂರು ದೇಶಗಳು ತೈಲ ಖರೀದಿಸುತ್ತಿವೆ ಭಾರತದ ಜೊತೆಗೆ ಚೀನಾ ಮತ್ತು ಬ್ರೆಜಿಲ್ ದೇಶಗಳಿಗೆ ದಂಡ ವಿಧಿಸುವ ಮಸೂದೆಗೆ ಡೊನಾಲ್ಡ್ ಟ್ರಂಪ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಗ್ಗೆ ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ಖಚಿತಪಡಿಸಿದೆ. ಡೊನಾಲ್ಡ್ ಟ್ರಂಪ್ ನಡೆಸಿದ ಸಭೆಯ ನಂತರ ಈ ಒಂದು ನಿರ್ಧಾರ ಹೊರ ಬಿದ್ದಿದೆ. ಪೆಟ್ರೋಲಿಯಂ ಉತ್ಪನ್ನ ಮತ್ತು ಯುರೇನಿಯಂ ಖರೀದಿಸುವ ರಾಷ್ಟ್ರಗಳಿಗೆ ದಂಡ ವಿಧಿಸಲಾಗಿದೆ. ‘ತಿಳಿದು ಖರೀದಿಸುವ’ ರಾಷ್ಟ್ರಗಳ ಮೇಲೆ 500 ರಷ್ಟು ಸುಂಕ ಹೇರಲಾಗುತ್ತದೆ. ಶೇ.500 ರಷ್ಟು ಸುಂಕ ವಿಧಿಸಲು…
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು ಮದುವೆ ಮಾಡದಿದ್ದಕ್ಕೆ ಹೆತ್ತ ತಂದೆಯನ್ನೇ ಭೀಕರವಾಗಿ ಮಗನೊಬ್ಬ ಕೊಲೆ ನಡೆದಿದ್ದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಮದುವೆ ಮಾಡಲಿಲ್ಲ ಎಂದು ಉತ್ತರ ತಂದೆ ಜೊತೆ ಜಗಳ ಮಾಡಿದ್ದಾನೆ ತಂದೆ ಸಣ್ಣ ಲಿಂಗಪ್ಪ (65) ಜೊತೆಗೆ ಆರೋಪಿ ನಿಂಗರಾಜ ಜಗಳ ಮಾಡಿದ್ದಾನೆ. ಮಲಗಿದ್ದಾಗ ರಾಡ್ ನಿಂದ ತಲೆಗೆ ಹೊಡೆದು ಸಣ್ಣ ನಿಂಗಪ್ಪನನ್ನು ಪುತ್ರ ನಿಂಗರಾಜ್ ಕೊಲೆ ಮಾಡಿದ್ದಾನೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭಾವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಪ್ಪಲ್ಲಿ ಎಂಬಲ್ಲಿ ಒಂದು ಅಪಘಾತ ಸಂಭವಿಸಿದೆ ಕಾರಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಿವಾಸಿ ಕುಶಾಲ್ (25) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ನಂಬಿರುವಾಗಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಗೌಣಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರಲ್ಲಿ ಪ್ರೀತ್ಸೆ ಪ್ರೀತ್ಸೆ ಎಂದು ಯುವಕನೊಬ್ಬ ಅಪ್ರಾಪ್ತೆ ಬಾಲಕಿಯ ಬೆನ್ನುಬಿದ್ದಿದ್ದಾನೆ. ಇದರಿಂದ ಕಿರುಕುಳದಿಂದ ಮನನೊಂದ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂಜನಗೂಡು ಪಟ್ಟಣದಲ್ಲಿ ಆದಿತ್ಯ ವಿರುದ್ಧ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ನಂಜನಗೂಡು ಪಟ್ಟಣದಲ್ಲಿ 17 ವರ್ಷದ ಬಾಳಿಕೆ ಆತ್ಮಹತ್ಯೆಗೆ ಶರಣಾಗಿದ್ದು ಪೋಷಕರು ಆದಿತ್ಯ ಎನ್ನುವ ಯುವಕನ ವಿರುದ್ಧ ಕಿರುಕುಳ ನೀಡಿದ್ದಾನೆ ಎಂದು ಆರಂಭಿಸಿದ್ದಾರೆ. ಕಿರುಕುಳ ಕೊಡುತ್ತಿರುವ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದಾಳೆ. ಬಾಲಕಿಯ ತಂದೆ ಆದಿತ್ಯನಿಗೆ ಕರೆದು ಬುದ್ಧಿ ಮಾತು ಹೇಳಿದ್ದಾರೆ. ಆದರೂ ಕೂಡ ಆದಿತ್ಯ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಇದರಿಂದ ಮನನೊಂದು ಮನೆಯಲ್ಲಿಯೇ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂಜನಗೂಡು ಠಾಣೆಯಲ್ಲಿ ಆದಿತ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಪೊಲೀಸ್ ಠಾಣೆಯಲ್ಲಿಯೇ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಂಚಾರಿ ಠಾಣೆಯಲ್ಲಿ ನಡೆದಿದೆ ಮೊಹಮ್ಮದ್ ಝಕ್ರಿಯ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕಳೆದ ಕೆಲವು ದಿನಗಳಿಂದ ಅವರು ರಜೆಯಲ್ಲಿ ಇದ್ದರು. ಮೂರು ದಿನದ ಹಿಂದೆ ಅಷ್ಟೇ ಮೊಹಮ್ಮದ್ ಡ್ಯೂಟಿಗೆ ಹಾಜರಾಗಿದ್ದರು. ಬಸ್ ನಿಲ್ದಾಣದ ಬಳಿ ಡ್ಯೂಟಿ ಮುಗಿಸಿ ಬಂದು ಪೊಲೀಸ್ ಠಾಣೆಯ ಹಿಂಬದಿಯ ಸೆಲ್ ಇರುವ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಪ್ರಕರಣದ ಚಾರ್ಜ್ ಶೀಟ್ ತಯಾರಿಸಿದ್ದಾರೆ. ನಾಳೆ ಬೆಂಗಳೂರಿನ ACJM ಕೋರ್ಟ್ ಗೆ ಸುಮಾರು 1,200 ಪುಟಗಳ ಚಾರ್ಜ್ ಶೀಟ್ ಅನ್ನು ಪೊಲೀಸರು ಸಲ್ಲಿಸಲಿದ್ದಾರೆ. ಕೃತಿಕಾ ಪತಿ ಮಹೇಂದ್ರ ರೆಡ್ಡಿ ವಿರುದ್ಧ ಚಾರ್ಜ್ ಶೀಟ್ ತಯಾರಿಸಿದ್ದು ಶುಕ್ರವಾರ ಅಂದರೆ ನಾಳೆ ಎಸಿಜೆಎಂ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಸುಮಾರು 1,200 ಪುಟಗಳ ಚಾರ್ಜಿಶೀಟ್ ಇದೀಗ ಪೊಲೀಸರು ಸಿದ್ಧಪಡಿಸಿದ್ದಾರೆ. ಮಾರತಹಳ್ಳಿ ಪೊಲೀಸರಿಂದ ಚಾರ್ಜ್ ಶೀಟ್ ರೆಡಿ ಮಾಡಿದ್ದು ಎಸ್ಟಿಪಿ ಪ್ರಸನ್ನ ಕುಮಾರ್ ಅದನ್ನು ಪರಿಶೀಲನೆ ಮಾಡಲಿದ್ದಾರೆ. ಹಲವು ಅಂಶಗಳು ಈ ಒಂದು ವಿಚಾರ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಚಾರ್ಜ್ ಶೀಟ್ ನಲ್ಲಿ ಹಲವು ಪ್ರಮುಖ ಅಂಶಗಳ ಉಲ್ಲೇಖ ಆಗಿದ್ದು 72ಕ್ಕೂ ಹೆಚ್ಚು ಸಾಕ್ಷಿಗಳನ್ನು ಸಂಗ್ರಹಿಸಿದ ಬಗ್ಗೆ ಉಲ್ಲೇಖವಾಗಿದೆ. ಕೃತಿಕಾಗೆ ನೀಡಿದ್ದ ಅನಸ್ತೇಷಿಯ ಖರೀದಿಸಿದ ಮಾಹಿತಿ, ಮೆಡಿಕಲ್ ಸ್ಟೋರ್ ಗೆ ಹೋಗಿದ್ದ ಸಿಸಿಟಿವಿ ದೃಶ್ಯಾವಳಿ, ಆರೋಪಿ ಮಹೇಂದ್ರ ರೆಡ್ಡಿ…














