Author: kannadanewsnow05

ಮಂಡ್ಯ :- ಆಟೋಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಎಆರ್‌ಎಐ) ಪರೀಕ್ಷಾ ಕೇಂದ್ರ ಸ್ಥಾಪಿಸುವ ಕುರಿತಂತೆ ಚರ್ಚಿಸಲು ಏ.13ರಂದು ವಿಧಾನಸೌಧದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಿಗಧಿಯಾಗಿದೆ ಇತ್ತಿಚೆಗೆ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಎಆರ್ ಎಐ ಪರೀಕ್ಷಾ ಕೇಂದ್ರಕ್ಕೆ ಜಾಗ ಕೊಟ್ಟರೆ ಸಾಲದು ಅಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಹೀಗಾಗಿ ಅಭಿವೃದ್ಧಿಪಡಿಸಿ ಕೊಡುವಂತೆ ಜಟಾಪಟಿ ನಡೆದಿತ್ತು. ನೀವು ಯಾವ ಯೋಜನೆಯನ್ನು ತರುತ್ತಿರಿ ಹೇಳಿ ನಿಮಗೆ ಯಾವ ಜಾಗ ಬೇಕು ಅದನ್ನು ರಾಜ್ಯ ಸರ್ಕಾರದಿಂದ ಅಭಿವೃದ್ಧಿಪಡಿಸಿ ಕೊಡುತ್ತೇನೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿಕೆ ನೀಡಿದ್ದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೊಂಡಿಯಾಗಿ ನೀವೇ ಒಂದು ಸಭೆ ಆಯೋಜಿಸಿ ಎಂದು ಸಲಹೆ ನೀಡಿದ್ದರು. ಹೀಗಾಗಿ ಸಭೆಯನ್ನು ವಿಧಾನಸೌಧದಲ್ಲೆ ಮಾಡೋಣ ಅಲ್ಲಿ ರಾಜ್ಯದ ಕೈಗಾರಿಕಾ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು…

Read More

ಬೆಂಗಳೂರು : ಐಸ್ ಕ್ರೀಮ್ ತಿನ್ನುವ ಮೊದಲು ಇದೀಗ ಎಚ್ಚರದಿಂದ ಇರುವುದು ಒಳ್ಳೆಯದು. ಏಕೆಂದರೆ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಒಂದು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು, ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ನೋಡಿ ಗ್ರಾಹಕರು ಒಬ್ಬರು ಹೌಹಾರಿದ್ದಾರೆ. ಉಡುಪಿಯ ಗ್ರಾಂಡ್ ಹೋಟೆಲ್ ನಲ್ಲಿ ಈ ರೀತಿ ಐಸ್ ಕ್ರೀಮ್ ನಲ್ಲಿ ರಬ್ಬರ್ ಪತ್ತೆಯಾಗಿದೆ. ಬೆಂಗಳೂರಿನ ನೆಲಮಂಗಲ ನಗರದ ಸೊಂಡೆಕೊಪ್ಪ ಬೈಪಾಸ್ ನಲ್ಲಿ ಐಸ್ ಕ್ರೀಂ ತಿನ್ನುವ ಸಂದರ್ಭದಲ್ಲಿ ಬಾಯಿಗೆ ರಬ್ಬರ್ ಸಿಕ್ಕಿದೆ. ಇದನ್ನ ಪ್ರಶ್ನೆ ಮಾಡಿದಕ್ಕೆ ಕೆಲವೊಂದು ಸಲ ಕಾಮನ್ ಬಿಡಿ ಎಂದು ಹೋಟೆಲ್ ಮಾಲೀಕ ಉಡಾಫೆ ಆಗಿ ಹೇಳಿಕೆ ನೀಡಿದ್ದು, ಗ್ರಾಹಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದು ಈ ವಿಚಾರವಾಗಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Read More

ರಾಯಚೂರು : ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತು ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ, ಆರ್ ಎಸ್ ಎಸ್ ಬಿಜೆಪಿಯವರು ಕೆಲವು ಹುಚ್ಚು ನಾಯಿಗಳನ್ನು ಸಾಕಿದ್ದಾರೆ. ಹುಚ್ಚು ನಾಯಿಗಳನ್ನ ಸಾಕುವ ಮೂಲಕ ವಿಪಕ್ಷಗಳ ನಾಯಕರ ತೇಜೋವಧೆ ಮಾಡುತ್ತಿದ್ದಾರೆ ಎಂದು ರಾಯಚೂರಲ್ಲಿ ಎಂಎಲ್ ಸಿ ವಸಂತಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವ್ಯಕ್ತಿಗಳ ತೇಜೋವಧೆ ಮಾಡಲು ಇಂತಹ ಹುಚ್ಚು ನಾಯಿಗಳನ್ನು ಸಾಕಿದ್ದಾರೆ. ವ್ಯವಸ್ಥಿತವಾಗಿ ನಮ್ಮ ಪಕ್ಷದ ನಾಯಕರ ತೇಜೋವಧೆ ಮಾಡುತ್ತಿದ್ದಾರೆ. ಇಂತಹ ನಾಯಿಗಳು ಬೊಗಳುವುದರಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಗೆ ಯಾವುದೇ ಧಕ್ಕೆ ಆಗಲ್ಲ. ದೇಶದ ಜನರಿಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಸೇವೆ, ಅನುಭವ ಗೊತ್ತಿದೆ ಎಂದು ರಾಯಚೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ವಸಂತಕುಮಾರ್ ಹೇಳಿಕೆ ನೀಡಿದ್ದಾರೆ.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಗೆ ಧಕ್ಕೆ ತರುವಂತಹ ಬೆದರಿಕೆ ಸಂದೇಶ ಕಳುಹಿಸಿದ ಆರೋಪದ ಮೇಲೆ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಅಮೆರಿಕದ ಗುಪ್ತಚರ ಎಜೆನ್ಸಿ CIA ಗೆ ಸಂದೇಶ ಕಳುಹಿಸಿದ್ದ. ಬಂಧಿತ ಆರೋಪಿಯನ್ನು ಸಿಮ್ರಿ ಪ್ರದೇಶದ ಅಮಲ್ ಕುಮಾರ್ ತಿವಾರಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿ, ಆತನ ಕಚೇರಿಯಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು ಮತ್ತು ಇತರ ಡಿಜಿಟಲ್ ಪುರಾವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ನಲ್ಲಿ, ಬಹು ವರ್ಚುವಲ್ ಖಾಸಗಿ ನೆಟ್‌ವರ್ಕ್‌ಗಳು ಮತ್ತು ಕೆಲವು ಅಪ್ಲಿಕೇಶನ್‌ಗಳು ಪತ್ತೆಯಾಗಿವೆ. ಇವುಗಳನ್ನು ಡಾರ್ಕ್ ವೆಬ್ ಪ್ರವೇಶಿಸಲು ಬಳಸಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಕೆಲವು ಸಮಯದಿಂದ ಇಂಟರ್ನೆಟ್ ಮೂಲಕ ವಿದೇಶದಲ್ಲಿರುವ ಅನುಮಾನಾಸ್ಪದ ವ್ಯಕ್ತಿಗಳೊಂದಿಗೆ ಆರೋಪಿ ಸಂಪರ್ಕದಲ್ಲಿದ್ದ. ಅವರು ಪ್ರಧಾನಿ ಮತ್ತು ಅವರ ಕಚೇರಿಗೆ (ಪಿಎಂಒ) ಸಂಬಂಧಿಸಿದ ಮಾಹಿತಿಯನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ. ಇದು ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ನಿರ್ಣಾಯಕ ಪ್ರಾಮುಖ್ಯತೆಯನ್ನು ಹೊಂದಿದೆ. ವಿಚಾರಣೆಯ ಸಮಯದಲ್ಲಿ,…

Read More

ಬೆಂಗಳೂರು : ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್ 16ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ  ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್‌ ಠಾಣಾ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಮಾರ್ಚ್​​ 13ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಿಸಿದ್ದರು. ಈ ಆದೇಶ ರದ್ದುಪಡಿಸಬೇಕು ಎಂದು ಕೋರಿ ಮಹೇಶ್‌ ತಿಮರೋಡಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಂ ಅವರಿದ್ದ ಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ  ರಾಜ್ಯ ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ಇದು ಮೂರನೇ ಸುತ್ತಿನ ವ್ಯಾಜ್ಯವಾಗಿದೆ.…

Read More

ಬೆಂಗಳೂರು : ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಲೋಡ್ ಟೆಸ್ಟಿಂಗ್ ನಡೆಯಲಿರುವ ಹಿನ್ನೆಲೆಯಲ್ಲಿ ಏ.13ರಿಂದ ಏ.17ರವರೆಗೆ ಫ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.​ ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಕೇಬಲ್ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಅಂತಿಮ ಹಂತದ ‘ಲೋಡ್ ಟೆಸ್ಟಿಂಗ್’ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.13ರಿಂದ ಏ.17ರವರೆಗೆ ಫ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.​ ಸಂಚಾರ ಮಾರ್ಗ ಬದಲಾವಣೆ ಏ.13ರ ಬೆಳಗ್ಗೆ 5 ಗಂಟೆಯಿಂದ ಏ.17ರ ಬೆಳಗ್ಗೆ 11ಗಂಟೆಯವರೆಗೆ ​ಕೆನ್ನಮೆಟಲ್ ವಿಡಿಯಾ ಅಪ್ಪರ್ ರಾಂಪ್‌ನಿಂದ ಎಸ್‌ಆರ್‌ಎಸ್ ಡೌನ್ ರಾಂಪ್‌ವರೆಗೆ ಫ್ಲೈಓವರ್‌ನ ಎರಡು ಕಡೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯವಾಗಿ ನೆಲಮಂಗಲದಿಂದ ಬೆಂಗಳೂರು ನಗರದ ಕಡೆಗೆ ಬರುವವರು ​ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಗಿನ ಎನ್.ಹೆಚ್.-4 ರಸ್ತೆ ಮತ್ತು ಸರ್ವಿಸ್ ರಸ್ತೆಯನ್ನು ಬಳಸಿ 8ನೇ ಮೈಲಿ ದಾಸರಹಳ್ಳಿ → ಜಾಲಹಳ್ಳಿ ಕ್ರಾಸ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ → ಎಸ್‌ಆರ್‌ಎಸ್…

Read More

ಹಾಸನ : ಹಾಸನದಲ್ಲಿ ಭೀಕರ ಅಪಘಾತ ಸಂಬಂಧಿಸಿದ್ದು, ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿಯಲ್ಲಿ ಬೆಂಗಳೂರಿನಿಂದ ಹಾಸನದ ಕಡೆಗೆ ಲಾರಿ ಹಾಗೂ ಬಸ್ ಬರುತ್ತಿತ್ತು. ಸಾರಿಗೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಲಾರಿಗೆ ಡಿಕ್ಕಿ ಹೊಡೆದ ಶಂಕೆ ವ್ಯಕ್ತವಾಗಿದ್ದು, ಗಾಯಗೊಂಡ ಪ್ರಯಾಣಿಕರಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಧಾರವಾಡ: ಶಾಂತಿಯುತ ನಗರವಾಗಿರುವ ವಿದ್ಯಾಕಾಶಿ ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ​ನಡೆದಿದ್ದೇನು? ಮನೆಗೇ ನುಗ್ಗಿದ ಹಂತಕರು! ​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ಇಂದು ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ. ​ಸಕ್ರಿಯ ರಾಜಕಾರಣದಲ್ಲಿದ್ದ ಫೈರೋಜ್‌ ​ಹತ್ಯೆಗೀಡಾದ ಫೈರೋಜ್‌ ಪಠಾಣ್‌ ಅವರು ಧಾರವಾಡದ ಮುಂಚೂಣಿಯ ಯುವ ನಾಯಕರಾಗಿದ್ದರು. ​NSUI: ಆರಂಭದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ​ಯುವ ಕಾಂಗ್ರೆಸ್‌: ಪ್ರಸ್ತುತ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ​ಪೊಲೀಸ್‌ ತನಿಖೆ ಚುರುಕು: ವಿಶೇಷ ತಂಡ ರಚನೆ…

Read More

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಹಣವನ್ನು ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಬಾಕಿ ನೆಪದಲ್ಲಿ ಕಡಿತಗೊಳಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಹಣವನ್ನು ಫಲಾನುಭವಿಗಳಿಗೆ ಗೊತ್ತಿಲ್ಲದಂತೆ ಅವರ ಖಾತೆಯಿಂದ ಫೈನಾನ್ಸ್ ಕಂಪನಿಗಳು ಕಡಿತ ಮಾಡಿಕೊಳ್ಳುತ್ತಿರುವ ಬಗ್ಗೆ ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ, ಶಾಸಕ ದಿನೇಶ್ ಗೂಳಿಗೌಡ, ಸಿಎಂ ಮತ್ತು ಡಿಸಿಎಂಗೆ ಪತ್ರ ಬರೆದು ಗಮನಕ್ಕೆ ತಂದಿದ್ದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚನೆ ನೀಡಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶಿಸಿದ್ದಾರೆ. ಸಿಎಂ ಸೂಚನೆ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಶಾಲಿನಿ ರಜನೀಶ್, ಗೃಹ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳಿಗೆ ಪತ್ರ ಬರೆದು ತುರ್ತು ಕ್ರಮಕ್ಕೆ ಸೂಚಿಸಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆ ಜಾರಿಗೆ…

Read More

ನವದೆಹಲಿ : ಇಂದು ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಇರಾನ್ ಮತ್ತು ಅಮೆರಿಕದ ನಡುವೆ ಶಾಂತಿ ಮಾತುಕತೆ ಹಿನ್ನೆಲೆ, ಶಾಂತಿ ಮಾತುಕತೆಗೂ ಇರಾನ್ ನಿಂದ ಎರಡು ಷರತ್ತು ಕೇಳಿ ಬಂದಿದ್ದು, ಕದನ ವಿರಾಮ ಲೇಬನಾನ್ ಗು ಅನ್ವಯ ಆಗಬೇಕು ಎಂದು ಪಟ್ಟು ಹಿಡಿದಿದೆ. ಅಲ್ಲದೆ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವು ಮಾಡಬೇಕು ಎಂದು ಇರಾನ್ ತನ್ನ ಎರಡು ಷರತ್ತು ಹೇಳಿದೆ. ಈ ಕುರಿತು ಇರಾನನ ಸ್ಪೀಕರ್ ಮೊಹಮ್ಮದ್ ಬಕರ್ ಗಾಲಿಬಾಫ್ ಪೋಸ್ಟ್ ಮಾಡಿದ್ದಾರೆ. ಇರಾನ್ ಷರತ್ತಿಗೆ ಡೊನಾಲ್ಡ್ ಟ್ರಂಪ್ ಇದೀಗ ತಿರುಗೇಟು ಕೊಟ್ಟಿದ್ದು, ಒಪ್ಪಂದಕ್ಕೆ ಇರಾನ್ ಬಾರದಿದ್ದರೆ ಭೀಕರವಾಗಿ ದಾಳಿ ಆಗುತ್ತದೆ ಎಂದು ಮಾರ್ನಿಂಗ್ ಕೊಟ್ಟಿದ್ದಾರೆ. ಇರಾನ್ ಅಮೆರಿಕ ಯುದ್ಧ ನಡೆಯುತ್ತಿರುವ ಹಿನೆಲೆಯಲ್ಲಿ ಇಂದು ಪಾಕಿಸ್ತಾನದಲ್ಲಿ ಇರಾನ್ ಅಮೆರಿಕದ ನಡುವೆ ಶಾಂತಿಮಾತಕದ ನಡೆಯಲಿದೆ. ಪಾಕಿಸ್ತಾನದ ಇಸ್ಲಾಮಬಾದ್ ನಲ್ಲಿ ಈ ಒಂದು ಶಾಂತಿ ಮಾತುಕತೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಸ್ಲಾಮಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ನಗರದಲ್ಲಿ ಸೆಕ್ಯೂರಿಟಿ ಟೈಟ್…

Read More