Subscribe to Updates
Get the latest creative news from FooBar about art, design and business.
Author: kannadanewsnow05
ಕನಕಪುರ: ರಾಮನಗರ ಜಿಲ್ಲೆಯ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅದೇ ಆಸ್ಪತ್ರೆಯಲ್ಲಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ. ಕೇವಲ ಎರಡು ದಿನಗಳ ಅಂತರದಲ್ಲಿ ನಡೆದ ಈ ಸರಣಿ ಆತ್ಮಹತ್ಯೆಗಳು ಇಡೀ ನಗರದಲ್ಲಿ ಸಂಚಲನ ಮೂಡಿಸಿವೆ. ವೈದ್ಯನ ಸಾವು ತಂದ ಆಘಾತ: ಮೊದಲಿಗೆ ಆಸ್ಪತ್ರೆಯ ವೈದ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವೈದ್ಯರ ಈ ದಿಢೀರ್ ನಿರ್ಧಾರದಿಂದ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದರು. ಆದರೆ ಈ ಸಾವಿನ ನೋವು ಮಾಯುವ ಮುನ್ನವೇ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ಅದೇ ದಾರಿ ತುಳಿದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಕ್ರಮ ಸಂಬಂಧದ ಶಂಕೆ: ಮೂಲಗಳ ಪ್ರಕಾರ, ಮೃತ ವೈದ್ಯ ಮತ್ತು ನರ್ಸ್ ನಡುವೆ ಅಕ್ರಮ ಸಂಬಂಧವಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ. ವೈದ್ಯರ ಸಾವಿನಿಂದ ತೀವ್ರ ಮನನೊಂದಿದ್ದ ನರ್ಸ್, ಮಾನಸಿಕ ಖಿನ್ನತೆಗೆ ಒಳಗಾಗಿ ಈ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.…
ಬೆಂಗಳೂರು : ಜೂನ್ 14ರಿಂದ 24ರ ವರೆಗೆ ಜಿಬಿಎ ಚುನಾವಣೆ ಫಿಕ್ಸ್ ಮಾಡುವಂತೆ ಜಿಬಿಎ ಸೂಚಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ತಿಳಿಸಿದ್ದು, GBA ಚುನಾವಣೆ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಚುನಾವಣೆಗೆ ಸಂಬಂಧಪಟ್ಟ ಪ್ರಕ್ರಿಯೆ ಮುಗಿಸಿದ್ದೇವೆ. ಮಳೆ ಮತ್ತು ಶಾಲೆ ಕಾಲೇಜು ಸ್ಯಾನ್ಸನ್ ಗಮನಿಸಿ ದಿನಾಂಕ ನಿಗದಿ ಆಗಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ಮಾಹಿತಿ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 14ರಿಂದ ಜೂನ್ 24ರ ಒಳಗಾಗಿ ಒಂದು ಡೇಟ್ ಹೇಳಲು ಸೂಚನೆ ನೀಡಿದ್ದೇವೆ ಒಂದು ದಿನಾಂಕ ಹೇಳಿ ಅಂತ ಸೂಚನೆ ಕೊಟ್ಟಿದ್ದೇವೆ. ಈ ಅಂತರದಲ್ಲಿಯೇ GBA ಚುನಾವಣೆ ದಿನಾಂಕ ಘೋಷಣೆ ಆಗಬೇಕು ಕೆಲವೇ ದಿನಗಳಲ್ಲಿ ಜಿಬಿಎ ಚುನಾವಣೆಗೆ ಅಂತಿಮ ದಿನಾಂಕ ತಿಳಿಸುತ್ತೇವೆ. ಮುಂದೂಡಿಕೆ ಮಾಡುವ ಅಧಿಕಾರ ಸುಪ್ರೀಂ ಕೋರ್ಟ್ ಗೆ ಮಾತ್ರ ಇದೆ. ಜೂನ್ 30ರ ಒಳಗಾಗಿ ಜಿಬಿಎ ಚುನಾವಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ನಿಗದಿತ ಕಾಳಮಿತಿಯಲ್ಲಿ ಚುನಾವಣೆ…
BIG NEWS : ಜೈಲಲ್ಲಿ ಅರಳಿದ ಪ್ರೇಮ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!
ಮಧ್ಯಪ್ರದೇಶ : ಸಾಮಾನ್ಯವಾಗಿ ಜೈಲು ಎಂದರೆ ಶಿಕ್ಷೆ, ಕತ್ತಲೆ ಮತ್ತು ಕಠಿಣ ನಿಯಮಗಳ ನೆನಪಾಗುತ್ತದೆ. ಆದರೆ ಮಧ್ಯಪ್ರದೇಶದ ಸತ್ನಾ ಕೇಂದ್ರ ಕಾರಾಗೃಹವು ಇತ್ತೀಚೆಗೆ ಅತ್ಯಂತ ಅಪರೂಪದ ಮತ್ತು ಅಚ್ಚರಿಯ ಮದುವೆಗೆ ಸಾಕ್ಷಿಯಾಗಿದೆ. ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಧರ್ಮೇಂದ್ರ ಸಿಂಗ್ ಎಂಬ ಕೈದಿಯನ್ನು, ಸಹಾಯಕ ಪೊಲೀಸ್ ಅಧೀಕ್ಷಕಿ (ASP) ಫಿರೋಝಾ ಖಾಟೂನ್ ಅವರು ವಿವಾಹವಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪ್ರೇಮ ಕಥೆ ಆರಂಭವಾಗಿದ್ದು ಧರ್ಮೇಂದ್ರ ಸಿಂಗ್ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕಾಲದಲ್ಲಿ. ಧರ್ಮೇಂದ್ರ ಸಿಂಗ್ ಒಬ್ಬ ಸುಶಿಕ್ಷಿತ ವ್ಯಕ್ತಿಯಾಗಿದ್ದು, ಜೈಲಿನಲ್ಲಿದ್ದ ಅವಧಿಯಲ್ಲಿ ತನ್ನ ನಡವಳಿಕೆಯಿಂದ ಎಲ್ಲರ ಮೆಚ್ಚುಗೆ ಪಾತ್ರನಾಗಿದ್ದ ಎನ್ನಲಾಗಿದೆ. ಇದೇ ಸಮಯದಲ್ಲಿ ಸತ್ನಾ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಿರೋಝಾ ಖಾಟೂನ್ ಅವರಿಗೆ ಧರ್ಮೇಂದ್ರನ ವ್ಯಕ್ತಿತ್ವ ಮತ್ತು ಆತನ ಮೇಲಿದ್ದ ಸುಳ್ಳು ಆರೋಪಗಳ ಬಗ್ಗೆ ಸಹಾನುಭೂತಿ ಮೂಡಿತ್ತು ಎಂದು ಹೇಳಲಾಗುತ್ತಿದೆ. ಕಾಲಕ್ರಮೇಣ ಇವರಿಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿದೆ. ಧರ್ಮೇಂದ್ರ ಸಿಂಗ್ ಕೊಲೆ ಪ್ರಕರಣವೊಂದರಲ್ಲಿ…
ತಮಿಳುನಾಡು : ತಮಿಳುನಾಡಲ್ಲಿ ಸರ್ಕಾರ ರಚನೆ ಕಸರತ್ತು ಮದ್ಯ, ದೊಡ್ಡ ಹೈಡ್ರಾಮಾವೇ ನಡೆದಿದೆ. ರಾಜ್ಯಪಾಲರ ವಿರುದ್ಧ ಟಿವಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ದಳಪತಿ ವಿಜಯ್ ಬೆಂಬಲಿಗರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಲೋಕಭವನದ ಎದುರು ಟಿ ವಿ ಕೆ ಕಾರ್ಯಕರ್ತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ವೇಳೆ ಟಿವಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ರಾಜ್ಯಪಾಲರ ನಿಲುವಿನಿಂದ ಅಸಮಾಧಾನಗೊಂಡಿರುವ ಟಿವಿಕೆ ಕಾರ್ಯಕರ್ತರು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ರಾಜಭವನದ (ಲೋಕಭವನ) ಮುಂಭಾಗದಲ್ಲಿ ಹೈಡ್ರಾಮಾವೇ ನಡೆದಿದ್ದು, ದಳಪತಿ ವಿಜಯ್ ಅವರ ಬೆಂಬಲಿಗನೊಬ್ಬ ಎಲ್ಲರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸರ್ಕಾರ ರಚನೆಯ ಪ್ರಕ್ರಿಯೆಯಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಅಥವಾ ಪಕ್ಷಪಾತ ಮಾಡುತ್ತಿದ್ದಾರೆ ಎಂಬುದು ಕಾರ್ಯಕರ್ತರ ಮುಖ್ಯ ಆರೋಪವಾಗಿದೆ. ತಮ್ಮ ನಾಯಕ ವಿಜಯ್ ಅವರಿಗೆ ಸಿಗಬೇಕಾದ ರಾಜಕೀಯ ಮನ್ನಣೆಯ ವಿಚಾರದಲ್ಲಿ…
ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಠಾಣೆಯಲ್ಲೇ ಕೀ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿ ಮೂರು ದಿನ ಚಿಕಿತ್ಸೆ ಕೊಡಿಸಿದ್ದಾರೆ. ಇದರ ಜೊತೆಗೆ 10 ಕೆ.ಜಿ ಬಾಳೆಹಣ್ಣನ್ನೂ ತಿನ್ನಿಸಿದ್ದು, ಕೊನೆಗೂ ಹರಸಾಹಸಪಟ್ಟು ಕೀ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ಹಿನ್ನೆಲೆ ಮತ್ತು ಬಂಧನ ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್ ರಾಮು (24) ಎಂಬ ಯುವಕ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋದ ಬಗ್ಗೆ ಏಪ್ರಿಲ್ 24ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದರು. ಈ ಸಂಬಂಧ ಆತನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಕೀ ನುಂಗಿ ಆತ್ಮಹತ್ಯೆಗೆ ಯತ್ನ ವಿಚಾರಣೆಯ ಸಮಯದಲ್ಲಿ ಪೊಲೀಸರ ಕಣ್ಣು ತಪ್ಪಿಸಿದ ಕಾರ್ತಿಕ್, ಸಿಕ್ಕ ಅವಕಾಶವನ್ನು ಬಳಸಿಕೊಂಡು ಪೊಲೀಸ್ ಠಾಣೆಯಲ್ಲಿದ್ದ ಕೀಯನ್ನು ನುಂಗಿದ್ದಾನೆ. ಆರೋಪಿ ಕೀ ನುಂಗಿರುವುದನ್ನು ಗಮನಿಸಿದ ಪೊಲೀಸರು…
ಬೆಂಗಳೂರು : ಆರ್ಸಿಬಿ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರಿಸಿದ ವಿಚಾರದಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಇದು ಸಂಪೂರ್ಣವಾಗಿ ಬಿಸಿಸಿಐ ಮತ್ತು ಫ್ರಾಂಚೈಸಿಯ ವಾಣಿಜ್ಯ ನಿರ್ಧಾರವಾಗಿದ್ದು, ಭದ್ರತಾ ಕೊರತೆಯ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಸಿಬಿ ಮತ್ತು ಬಿಸಿಸಿಐ ನಡುವಿನ ಒಪ್ಪಂದಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಪಂದ್ಯವನ್ನು ಸ್ಥಳಾಂತರಿಸುವುದು ಸಂಪೂರ್ಣವಾಗಿ ಅವರ ನಿರ್ಧಾರ. ಟಿಕೆಟ್ ಹಾಗೂ ವಾಣಿಜ್ಯ ಉದ್ದೇಶಗಳಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಣುತ್ತದೆ ಎಂದು ಹೇಳಿದರು. ಪಂದ್ಯವನ್ನು ಭದ್ರತಾ ಕಾರಣಗಳಿಂದ ಶಿಫ್ಟ್ ಮಾಡಲಾಗಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ ಸಚಿವ ಡಾ.ಜಿ. ಪರಮೇಶ್ವರ , ಭದ್ರತೆಯ ಯಾವುದೇ ಕೊರತೆ ಇಲ್ಲ. ಕಳೆದ ವರ್ಷ ನಡೆದ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಕುನ್ಹಾ ವರದಿ ಆಧಾರವಾಗಿ ಹಲವು ಬದಲಾವಣೆಗಳನ್ನು ಮಾಡಿದ್ದೇವೆ. ಕಡಿಮೆ ಸಮಯದಲ್ಲಿಯೇ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ ಎಂದರು.
ಚಿಕ್ಕಮಗಳೂರು : ಆಟವಾಡುವಾಗ ಕಾಫಿ ತೋಟದಲ್ಲಿ ಮಗು ನಾಪತ್ತೆಯಾಗಿತ್ತು. ಇದೀಗ 12 ಗಂಟೆಗಳ ಕಾರ್ಯಾಚರಣೆ ನಡೆಸಿ ಇದೀಗ ಪೊಲೀಸರು ಮಗುವನ್ನು ಪತ್ತೆಹಚ್ಚಿದ್ದಾರೆ. ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗುರು ಗ್ರಾಮದಲ್ಲಿ ನಿನ್ನೆ ಸಂಜೆ ಆಟವಾಡುವಾಗ ಒಂದುವರೆ ವರ್ಷದ ಮಗು ನಾಪತ್ತೆಯಾಗಿತ್ತು. ಮಧ್ಯಪ್ರದೇಶದ ಮೂಲದ ಗೋನು ಮತ್ತು ಸೋನು ದಂಪತಿಯ ಗಂಡು ಮಗು ನಾಪತ್ತೆಯಾಗಿತ್ತು. ಟಿ ಎಸ್ಸ್ಟೇಟ್ ನಲ್ಲಿ ಗುರು ಮತ್ತು ಸೋನು ದಂಪತಿ ಕೆಲಸಕ್ಕೆ ಬಂದಿದ್ದರು. ಮಗು ನಾಪತ್ತೆಯಾದ ಬಳಿಕ ಮೂಡಿಗೆರೆ ಸಿಪಿಐ ಬಾಳೂರು ಪಿಎಸ್ಐ ನೇತ್ರತ್ವದಲ್ಲಿ ಶೋಧ ಕಾರ್ಯ ನಡೆದಿದ್ದು ಮೂರು ಮಕ್ಕಳ ಜೊತೆಗೆ ಆಟವಾಡುತ್ತಿದ್ದಾಗ ಮಗು ತೋಟಕ್ಕೆ ಹೋಗಿದೆ. ಇಂದು ಬೆಳಗ್ಗೆ ತೋಟದಲ್ಲಿ ಪೊಲೀಸರು ಮಗುವನ್ನು ಪತ್ತೆ ಹಚ್ಚಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪಳ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಬಹುದೊಡ್ಡ ಸರ್ಕಸ್ ನಡೆದಿದ್ದು, ಇದರ ಮಧ್ಯ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ದೊಡ್ಡ ಅಪಾಯ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆದರೆ ಕರ್ನಾಟಕವನ್ನು 10 ಬಾರಿ ಮಾರಾಟ ಮಾಡುತ್ತಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಒಂದು ಬಾರಿ ಕರ್ನಾಟಕವನ್ನು ಮಾರಾಟ ಮಾಡಿದ್ದಾರೆ. ಡಿಕೆ ಶಿವಕುಮಾರ್ 10 ಬಾರಿ ಕರ್ನಾಟಕ ಮಾರಾಟ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಾರಿಗೆ ಸಂಸ್ಥೆಯ ಬಸ್ಸೊಂದು ಭೀಕರ ಅಪಘಾತಕ್ಕೆ ಈಡಾಗಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಚಲಿಸುತ್ತಿದ್ದ ಬಸ್ಸಿನ ಆಕ್ಸೆಲ್ (Axle) ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 20ಕ್ಕೂ ಹೆಚ್ಚು ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವಿವರ: ದಾವಣಗೆರೆಯಿಂದ ಬಸವಪಟ್ಟಣದ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್, ಮರಬನಹಳ್ಳಿ ತಲುಪುತ್ತಿದ್ದಂತೆ ತಾಂತ್ರಿಕ ದೋಷದಿಂದಾಗಿ ಬಸ್ಸಿನ ಆಕ್ಸೆಲ್ ತುಂಡಾಗಿದೆ. ತಕ್ಷಣವೇ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಪ್ರಯಾಣಿಕರು ದಿಕ್ಕಾಪಾಲಾಗಿ ಬಿದ್ದಿದ್ದಾರೆ. ಘಟನಾ ಸ್ಥಳದಲ್ಲಿ ಕಿರುಚಾಟ ಮತ್ತು ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ. ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…














