Subscribe to Updates
Get the latest creative news from FooBar about art, design and business.
Author: kannadanewsnow05
ಅಮೇರಿಕಾ : ಅಮೇರಿಕಾದಲ್ಲಿ ಬೆಚ್ಚಿ ಬೀಳಿಸೋ ಂ ಘಟನೆಯೊಂದು ನಡೆದಿದ್ದು, ಪ್ಯಾರಾಮರಿಬೊ, ಸುರಿನಾಮ್ (ಎಪಿ) – ಸುರಿನಾಮ್ನ ರಾಜಧಾನಿ ಪ್ಯಾರಾಮರಿಬೊದ ಹೊರಗೆ ನಡೆದ ಚಾಕು ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಭಾನುವಾರ ಮುಂಜಾನೆ ಸುರಿನಾಮ್ನ ಕಾಮೆವಿಜ್ನೆಯಲ್ಲಿ ವ್ಯಕ್ತಿಯೊಬ್ಬ ಕ್ರೂರವಾಗಿ ಇರಿದು ಐದು ಮಕ್ಕಳು ಸೇರಿದಂತೆ ಒಂಬತ್ತು ಜನರನ್ನು ಕ್ರೂರವಾಗಿ ಕೊಂದ ಆಘಾತಕಾರಿ ಅಪರಾಧ ಘಟನೆ ಇದು. ಪರಮಾರಿಬೊ ಪೊಲೀಸರು ಶಂಕಿತನ ಮೇಲೆ ಗುಂಡು ಹಾರಿಸಬೇಕಾಯಿತು, ಆತನ ಕಾಲುಗಳಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಬಂಧಿಸಿ ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ಸಂಸ್ಥೆಯೊಂದು ವರದಿ ಮಾಡಿರುವ ಪ್ರಕಾರ, ಶಂಕಿತನನ್ನು ಫೈರಿಂಗ್ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 27 ರ ಶನಿವಾರದಿಂದ ಡಿಸೆಂಬರ್ 28 ರ ಭಾನುವಾರದವರೆಗೆ ರಾತ್ರಿಯ ವೇಳೆ, ಒಬ್ಬ ಪುರುಷ ವ್ಯಕ್ತಿ ನಾಲ್ವರು ವಯಸ್ಕರು ಮತ್ತು ಐದು ಮಕ್ಕಳನ್ನು ತೀಕ್ಷ್ಣವಾದ ವಸ್ತುವಿನಿಂದ ಹೊಡೆದು ಕೊಂದಿದ್ದಾನೆ. ಆರನೇ ಮಗು ಮತ್ತು…
ವಿಜಯಪುರ : ಕನ್ನೆರಿ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೀಶ ನಿರ್ಬಂಧ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ನಿರ್ಬಂಧ ಹಿನ್ನೆಲೆಯಲ್ಲಿ ಕನ್ನೆರಿ ಶ್ರೀಗಳು ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಸಜ್ಜಾಗಿದ್ದಾರೆ ಬಸವೇಶ್ವರ ಹಿಂದೂ ಸಮಾವೇಶದ ಮೂಲಕ ಸ್ವಾಗತಕ್ಕೆ ಸಿದ್ಧತೆ ನಡೆಸಲಾಗಿದ್ದು ರಮಾನಂದ ಮಠದ ಶಂಕರಾನಂದ ಶ್ರೀಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ ಶಿರೂರಿನ ರಮಾನಂದ ಮಠದ ಶಂಕರಾನಂದಾಶ್ರೀ ಬೈಕ್ ರ್ಯಾಲಿ, ಕುಂಭಮೇಳ ಮತ್ತು ಬೃಹತ್ ಮೆರವಣಿಗೆ ಮೂಲಕ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಬಬಲೇಶ್ವರ ಹೊರವಲಯದಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಮಠಾಧೀಶರು ಹಾಗೂ 25,000ಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಅಕ್ಟೋಬರ್ 16ರಿಂದ ಡಿಸೆಂಬರ್ 14ರ ವರೆಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಕನ್ನೆರಿ ಮಠದ ಶ್ರೀಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಲಿಂಗಾಯತ ಸ್ವಾಮೀಜಿಗಳಿಗೆ ಅವಾಚ್ಯವಾಗಿ ಮಾತನಾಡಿದ್ದಾರೆ ಎಂದು ನಿರ್ಬಂಧ ವಿಧಿಸಿತ್ತು. ಇದರ ಹಿಂದೆ ಸಚಿವ ಎಂಬಿ ಪಾಟೀಲ್ ಇದ್ದಾರೆ ಎಂದು ಕನ್ನೇರಿ ಮಠದ ಶ್ರೀಗಳು ಗಂಭೀರವಾಗಿ ಆರೋಪಿಸಿದ್ದರು. ಇಂದು…
ಹಾವೇರಿ : ರಾಜ್ಯ ರಾಜಕೀಯ, ಸಿಎಂ ಬದಲಾವಣೆ ಪ್ರಕೃತಿ ವಿರೋಪ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹಾವೇರಿ ನಗರದಲ್ಲಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಹಾಲುಮತ ಸಮಾಜ ದೈವಿ ಬಲ ಉಳ್ಳ ಪುರಾತನ ಮತ. ಹಾಲುಮತದಿಂದ ಅಧಿಕಾರ ಬಿಡಿಸಿಕೊಳ್ಳೋದು ಕಷ್ಟ ಅಂತ ಕೋಡಿಮಠ ಸ್ವಾಮೀಜಿ ಮಾರ್ಮಿಕವಾಗಿ ನುಡಿದಿದ್ದಾರೆ. ಭಾರತೀಯ ಪರಂಪರೆಯಲ್ಲಿ ಜ್ಯೋತಿಷ್ಯಕ್ಕೆ ಮಹತ್ವದ ಸ್ಥಾನವಿದೆ. ಈ ಹಿಂದೆ ವ್ಯಾಪಾಸ್ಥರು, ಸಂಕ್ರಾಂತಿ ಫಲ ಕೇಳ್ತಿದ್ರು. ಉದ್ಯಮಿಗಳು ರಾಜಮಹಾರಾಜರು ಸಂಕ್ರಾಂತಿ ಭವಿಷ್ಯ ನಂಬ್ತಿದ್ರು ಅಂತ ಹೇಳಿದ್ದಾರೆ. ಇನ್ನು ರಾಜ್ಯ ರಾಜಕೀಯದ ಕುರಿತಂತೆಯೂ ಕೋಡಿ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಜೆಟ್ ಆಗೋವರೆಗೆ ಸಿಎಂ ಕುರ್ಚಿಗೆ ಏನೂ ತೊಂದರೆ ಇಲ್ಲ ಅಂತ ಸ್ವಾಮೀಜಿ ಹೇಳಿದ್ದಾರೆ. ಬಜೆಟ್ ಬಳಿಕ ಅವರಾಗೇ ಬಿಟ್ಟರೆ ಬೇರೆಯವರಿಗೆ ಸಿಎಂ ಆಗೋ ಯೋಗ ಇದೆ ಅಂತಲೂ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಡಿಸೆಂಬರ್ ತಿಂಗಳ ನಂತರ ಇನ್ನೂ ಸಾವು ನೋವು ಜಾಸ್ತಿ ಆಗುತ್ತೆ ಎಂದಿದ್ದಾರೆ. ಅಂಬಲಿಯು ಹಳಸೀತು, ಕಂಬಳಿಯು ಹಾಸೀತು…
ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ಚಿನ್ನಾಭರಣ ಶೋ ರೂಂನಲ್ಲಿ ಹಾಡಹಗಲೇ ದರೋಡೆಕೋರರು ಸಿಬ್ಬಂದಿಗೆ ಗನ್ ತೋರಿಸಿ 5-6 ಕೆ.ಜಿ. ಚಿನ್ನಾಭರಣ ಮತ್ತು ವಜ್ರಾಭರಣಗಳನ್ನು ದರೋಡೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಬೈಪಾಸ್ ರಸ್ತೆಯಲ್ಲಿನ ಸೈ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಂನಲ್ಲಿ ನಿನ್ನೆ ಈ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 12.30ಕ್ಕೆ 2 ಬೈಕ್ನಲ್ಲಿ ಆಗಮಿಸಿದ 5 ದರೋಡೆ ಕೋರರು ಕೃತ್ಯ ಎಸಗಿದ್ದಾರೆ. ಎಲ್ಲರ ಕೈಯಲ್ಲೂ ಗನ್ ಇತ್ತು. ಒಬ್ಬ ಹೆಲೈಟ್ ಧರಿಸಿದ್ದರೆ, ಮಿಕ್ಕವರು ಮಳಿಗೆಯೊಳಗೆ ಬಂದ ನಂತರ ಮಾಸ್ಕ್ ಧರಿಸಿದ್ದರು. ಮಳಿಗೆಯ ವ್ಯವಸ್ಥಾಪಕ ಅಜ್ಜರ್ ಊಟಕ್ಕೆ ತೆರಳಿದ್ದ ವೇಳೆ ಆಗಮಿಸಿದ ದರೋಡೆ ಕೋರರು, ಮಳಿಗೆ ಯಲ್ಲಿ ಚಿನ್ನ ಖರೀದಿಸುತ್ತಿದ್ದ ಗ್ರಾಹಕರನ್ನು ಸುಮ್ಮನೆ ಕೂರಲು ತಿಳಿಸಿದರು. ನಂತರ, ಎಲ್ಲಾ 18 ಸಿಬ್ಬಂದಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ. ದರೋಡೆಕೋರರ ಪೈಕಿ ಇಬ್ಬರು ಚಿನ್ನಾಭರಣಗಳನ್ನು ಬ್ಯಾಗಿನಲ್ಲಿ ತುಂಬಿಸಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ ನಾಡುತ್ತಿದ್ದರು. ಕ್ಷಣಮಾತ್ರದಲ್ಲಿ ಚಿನ್ನಾಭರ ಣಗಳನ್ನು ತುಂಬಿಕೊಂಡ ದರೋಡೆಕೋರರು…
ಬೆಂಗಳೂರು : ಕನ್ನಡ ಪರ ರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಶಾಲೆ ಉಳಿಸುವ ಬಗ್ಗೆ ತಜ್ಞರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದೂ ಅವರು ಹೇಳಿದ್ದಾರೆ. ನಿನ್ನೆ ಕನ್ನಡ ಹೋರಾಟಗಾರರ ಸಮಿತಿಯಿಂದ ನಗರದ ಅರಮನೆ ಮೈದಾನದಲ್ಲಿ ನಡೆದ ಜನರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ನಾಡು, ನುಡಿ, ನೆಲ-ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ವಿಚಾರದಲಿ ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕನ್ನಡಕ್ಕಾಗಿ, ನೆಲ-ಜಲಕ್ಕೆ ಹೋರಾಡಿದವರ ಮೇಲಿನ ಪ್ರಕರಣ ಸಾಕಷ್ಟಿವೆ. ಅವನ್ನು ಹಿಂಪಡೆವ ಸಂಬಂಧ ಸಂಪುಟ ಉಪಸಮಿತಿ ರಚನೆಯಾಗಿದೆ ಎಂದು ತಿಳಿಸಿದರು. ಉಪ ಸಮಿತಿಗೆ ಗೃಹಸಚಿವ ಪರಮೇಶ್ವರ್ ಅವರ ನೇತೃತ್ವ ಇದೆ. ಅದರ ಸಭೆಯನ್ನು ಶೀಘ್ರ ಕರೆದು ಪ್ರಕರಣ ವಾಪಸ್ ಪಡೆಯುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಕನ್ನಡ ಮಾಧ್ಯಮದ ಶಾಲೆಗಳು ಉಳಿಯಬೇಕು, ಕನ್ನಡದಲ್ಲಿ ಕಲಿಕೆಯ ವಿಚಾರಕ್ಕೆ ನಾನು ಪರವಾಗಿದ್ದೇನೆ. ಹಳ್ಳಿಗಳಲ್ಲೂ ಈಗ ಇಂಗ್ಲಿಷ್ ಶಾಲೆಗಳು…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಹೋರಾಟಗಾರರ ಸಮಿತಿ ಯಿಂದ ಭಾನುವಾರ ಅರಮನೆ ಮೈದಾನ ದಲ್ಲಿ ನಡೆದ ಜನ ರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು, ಅನ್ಯಜಾತಿಯ ಯುವಕನನ್ನು ವಿವಾಹ ಆಗಿದ್ದ ಕಾರಣಕ್ಕೆ ತಂದೆಯೊಬ್ಬರು ಗರ್ಭಿಣಿ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದ ರಾಮಯ್ಯ, ಹುಬ್ಬಳ್ಳಿ ಸೇರಿ ಇತರೆಡೆ ನಡೆದ ಮರ್ಯಾದಾ ಹತ್ಯೆ ಕುರಿತ ವಿಚಾರ ಗಮನಕ್ಕಿದೆ. ಇದರ ತಡೆಗೆ ಕಾನೂನು ಜಾರಿಗೊಳಿಸಲು ಒತ್ತಾಯವಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಮಾನ್ಯ ಪಾಟೀಲ್ ಎಂಬಾಕೆ ಯನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದ. ಕುಟುಂಬದ ಮರ್ಯಾದೆ ಹಾಳು ಮಾಡಿದ್ದಾಳೆ ಎಂದು ಗರ್ಭಿಣಿ ಪುತ್ರಿಯನ್ನೇ…
ಬೆಂಗಳೂರು : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿಗೃಹಲಕ್ಷ್ಮಿಯೋಜನೆ ಪ್ರಮುಖವಾಗಿದ್ದು, ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಇದರ ಉದ್ದೇಶ.ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ. ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ! ಹೌದು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ. ಆದರೆ, ಕೆಲವೊಮ್ಮೆ ಎರಡು ತಿಂಗಳು, ಮೂರು ತಿಂಗಳಾದರೂ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ. ಇಂತಹ ಸಂದರ್ಭದಲ್ಲಿಫಲಾನುಭವಿ ಮಾತ್ರವಲ್ಲದೆ, ಮನೆಯ ಬಹುತೇಕ ಸದಸ್ಯರು…
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ IG ಮತ್ತು ಡಿಜಿಪಿ ಖಡಕ್ ಆದೇಶವನ್ನು ಮಾಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯು ಮದ್ಯಪಾನದ ಪರಿಣಾಮವಾಗಿ ಜನಸಮೂಹದ ಮನಸ್ಥಿತಿಯು ತೀವ್ರಗೊಳ್ಳುವ ಸಾಧ್ಯತೆ ಇರುತ್ತದೆ. ಮದ್ಯಪಾನವು ಜನರ ವಿವೇಕಶಕ್ತಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಸಂಕೋಚತಾ/ಹಿಂಜರಿಕಾ ಮನೋಭಾವವನ್ನು ಮೀರುವಂತೆ ಮಾಡುತ್ತದೆ. ಕೌಂಟ್ಡೌನ್ಗಳು ಮತ್ತು ಸಂಭ್ರಮದ ಕ್ಷಣಗಳಿಂದ ಉಂಟಾಗುವ ಉಲ್ಲಾಸವು ಜನಸಮೂಹದಲ್ಲಿ ಸಾಮೂಹಿಕ ಪ್ರೇರೇಪಣೆಯನ್ನು ಸೃಷ್ಟಿಸಿ, ದಟ್ಟ ಗುಂಪಿನೊಳಗಿರುವ ಕಾರಣ ಯಾವ ನಡೆಗೂ ಅಪಾಯವಿಲ್ಲವೆಂಬ ತಪ್ಪು ಕಲ್ಪನೆಯನ್ನು ಉಂಟುಮಾಡುತ್ತದೆ ಎಂದಿದ್ದಾರೆ. ವೇದಿಕೆಗಳಲ್ಲಿ ಜನಸ್ತೋಮದ ಹರಿವು ಅಥವಾ ಪಟಾಕಿ ಸಿಡಿಸುವಂತಹ ಪ್ರದರ್ಶನಗಳು ಮುಂತಾದ ಹಲವು ಕಾರಣಗಳಿಂದಾಗಿ ಅಪ್ರಜ್ಞಾತ್ಮಕ ವರ್ತನೆಗಳು ಕಂಡುಬರುತ್ತವೆ. ಜನಸಮೂಹದ ಹರಿವನ್ನು ಒಮ್ಮೆಲೇ ಪ್ರೇರೇಪಿಸಿ ಅಪಾಯಕರ ಅಲೆಗಳಂತೆ ರೂಪುಗೊಳ್ಳಬಹುದಾದಂತಹ ಸಂಗೀತದ ತೀವ್ರತೆಯ ಘಟನಾವಳಿಗಳನ್ನು ಪೊಲೀಸ್ ಅಧಿಕಾರಿಗಳು ಗಮನಿಸಬೇಕಿದೆ. ಪಟಾಕಿ ಸಿಡಿಯುವಲ್ಲಿ ವಿಳಂಬವಾದರೆ ನಿರಾಶೆ ಉಂಟಾಗಿ, ಜನಸಮೂಹದ ಸಂಭ್ರಮವು ತಕ್ಷಣವೇ ಅಸಹನೆ ಮತ್ತು ಕೋಪಕ್ಕೆ ತಿರುಗುವ…
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಇದೀಗ ರಾಜ್ಯ ಸರ್ಕಾರ ಬೇರೆ ಕಡೆ ವಸತಿ ಕಲ್ಪಿಸಲು ಮುಂದಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಹೌದು, ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿ ಮನೆ ಸಿಗಲಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಸಂತ್ರಸ್ತರಿಗೆ ವಸತಿ ಕಲ್ಪಿಸಲಾಗಿದೆ. 180 ಮನೆಗಳನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಆದರೆ ಹೋರಾಟಗಾರರು 250 ಮನೆಗಳನ್ನು ಕೇಳಿದ್ದರು. ಇದೀಗ ವಸತಿ ಇಲಾಖೆಯಿಂದ 180 ಮನೆ ನೀಡಲು ಒಪ್ಪಿಗೆ ನೀಡಲಾಗಿದೆ. ಅಷ್ಟೆ ಅಲ್ಲದೇ ರಿಜಿಸ್ಟರ್ ಮಾಡಿಕೊಡುವುದಾಗಿಯೂ ಕೂಡ ರಾಜ್ಯ ಸರ್ಕಾರ ಭರವಸೆ ನೀಡಿದೆ. ಶೀಘ್ರದಲ್ಲಿಯೇ ನಿವಾಸಿಗಳನ್ನು ಅಲ್ಲಿಗೆ ಶಿಫ್ಟ್ ಮಾಡಲಿದೆ. ಈ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಕೋಲಾರ : ಆಸ್ತಿಗಾಗಿ ಹೆತ್ತ ತಾಯಿಯ ಮೇಲೆ ಮಗನಿಂದಲೇ ಹಲ್ಲೆ ನಡೆಸಿರುವ ಘಟನೆ ದೇವರ ಸಮುದ್ರ ಗ್ರಾಮದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯ ಸಮುದ್ರ ಗ್ರಾಮದಲ್ಲಿ ನಾರಾಯಣಮ್ಮ ಮೇಲೆ ಪಾಪಿ ಮಗ ಸುಬ್ರಮಣ್ಯ ಹಲ್ಲೆ ಮಾಡಿದ್ದಾನೆ. ಫ್ಲೋರ್ ಮಿಲ್ ಹಾಗೂ ಮನೆ ತನಗೆ ಬೇಕು ಎಂದು ಪುತ್ರ ಸುಬ್ರಮಣ್ಯ ತಾಯಿಯ ಮೇಲೆ ಹಲ್ಲೆ ಮಾಡಿದ್ದಾನೆ. ಆಸ್ತಿಗೋಸ್ಕರ ನಾರಾಯಣನ ಮೇಲೆ ಸುಬ್ರಮಣ್ಯ ಪದೇ ಪದೇ ಹಲ್ಲೆ ಮಾಡಿದ್ದಾನೆ.ಈ ವಿಚಾರವಾಗಿ ದೂರು ನೀಡಿದ್ದರು ಸಹ ಪೊಲೀಸರು ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು, ಮುಳಬಾಗಿಲು ಗ್ರಾಮಾಂತರ ಪೊಲೀಸರ ವಿರುದ್ಧ ಆರೋಪ ಕೇಳಿ ಬಂದಿದೆ. ನಾರಾಯಣಮಗೆ ನಾಲ್ಕು ಗಂಡು ಓರ್ವ ಪುತ್ರಿ ಇದ್ದು, ಅದರಲ್ಲಿ ಸುಬ್ರಮಣ್ಯ ತಾಯಿಯ ಮೇಲೆ ಹಲ್ಲೆ ಮಾಡಿದ್ದಾನೆ.














