Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಭಾರಿ ಆತಂಕ ಮತ್ತು ಸೃಷ್ಟಿಸಿದೆ. ಮಲೇಶಿಯಾದಿಂದ ಹೈದರಾಬಾದ್ಗೆ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಏರ್ ಏಷ್ಯಾ ಸಂಸ್ಥೆಯ ವಿಮಾನಕ್ಕೆ ಈ ಬೆದರಿಕೆ ಬಂದಿರುವುದು ಭದ್ರತಾ ಸಿಬ್ಬಂದಿಯನ್ನು ತೀವ್ರ ಆತಂಕಕ್ಕೆ ತಳ್ಳಿದೆ. ವಿಮಾನದಲ್ಲಿ ಬಾಂಬ್ ಇಡಲಾಗಿದ್ದು, ಅದನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣದ ಮುಖ್ಯ ಕಚೇರಿಗೆ ಅಧಿಕೃತ ಇ-ಮೇಲ್ (E-mail) ಮೂಲಕ ಈ ಭೀಕರ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಗಮನಿಸಿದ ತಕ್ಷಣವೇ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ತಕ್ಷಣವೇ ಉನ್ನತ ಮಟ್ಟದ ಅಲರ್ಟ್ ಘೋಷಿಸಿದ್ದಾರೆ. ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಮಾನ ನಿಲ್ದಾಣದ ಭದ್ರತಾ ಪಡೆ (CISF), ಸ್ಥಳೀಯ ಪೊಲೀಸರು ಮತ್ತು ಬಾಂಬ್ ಪತ್ತೆ ಹಾಗೂ ನಾಶಪಡಿಸುವ ದಳ (BDDS) ತಕ್ಷಣವೇ ಕಾರ್ಯಪ್ರವೃತ್ತವಾಗಿವೆ. ವಿಮಾನವು ಸುರಕ್ಷಿತವಾಗಿ…
ಬೆಂಗಳೂರು: ತೀವ್ರ ಬಿಸಿಲಿನಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ಈ ಬಾರಿ ವಾಡಿಕೆಗಿಂತ ಆರು ದಿನ ಮುಂಚಿತವಾಗಿಯೇ ಮುಂಗಾರು ಮಾರುತಗಳು ದೇಶ ಹಾಗೂ ರಾಜ್ಯವನ್ನು ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲಾಖೆಯ ಅಧಿಕೃತ ವರದಿಗಳ ಪ್ರಕಾರ, ಇದೇ ತಿಂಗಳ ಮೇ 26ರಂದು ನೈಋತ್ಯ ಮುಂಗಾರು ಕೇರಳ ಕರಾವಳಿಯನ್ನು ತಲುಪಲಿದ್ದು, ಅದೇ ಸಮಯದಲ್ಲಿ ಕರ್ನಾಟಕಕ್ಕೂ ಮುಂಗಾರು ಮಳೆ ಪ್ರವೇಶಿಸಲಿದೆ. ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ದೇಶಕ್ಕೆ ಎಂಟ್ರಿ ಕೊಡುವ ಮುಂಗಾರು ಮಾರುತಗಳು, ಈ ಬಾರಿ ವಾತಾವರಣದಲ್ಲಿನ ಪೂರಕ ಬದಲಾವಣೆಗಳಿಂದಾಗಿ ಮೇ ತಿಂಗಳ ಕೊನೆಯ ವಾರದಲ್ಲೇ ಸಕ್ರಿಯಗೊಳ್ಳುತ್ತಿವೆ. ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ದಕ್ಷಿಣ ಭಾಗದಲ್ಲಿ ಮುಂಗಾರು ಪ್ರಗತಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಇದು ರಾಜ್ಯದ ರೈತಾಪಿ ವರ್ಗದಲ್ಲಿ ಭರವಸೆಯನ್ನು ಮೂಡಿಸಿದ್ದು, ಕೃಷಿ ಚಟುವಟಿಕೆಗಳಿಗೆ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಳ್ಳಲು ಸಹಕಾರಿಯಾಗಲಿದೆ. ಮತ್ತೊಂದೆಡೆ, ಮುಂಗಾರು ಪ್ರವೇಶಕ್ಕೂ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಉಡುಪಿ : ಬೆಳಗಾವಿಯಲ್ಲಿ ಡಿ ಗೆ ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಬ್ಯಾನರ್ ಹಾಕಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಆದರೆ ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ. ಅವರಿಗೆ ನಾವು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಬೆಳಗಾವಿಯಲ್ಲಿ ಅವರ ಹಾಗೂ ಪುತ್ರನ ಫೋಟೋ ಜೊತೆ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ರಾರಾಜಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ ಎಂದರು. ಕಾರ್ಯಕರ್ತರು ಅಭಿಮಾನದಿಂದ ಬ್ಯಾನರ್ ಹಾಕುತ್ತಾರೆ. ಏನೇ ಇದ್ದರೂ ಕೂಡ ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಚಿವ ಸಂಪುಟದ ಪುನರ್ ರಚನೆ ಸೇರಿದಂತೆ ಎಲ್ಲಾ ವಿಚಾರವನ್ನು ಹೈಕಮಾಂಡ್ಗೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಂಗನವಾಡಿ ಕಾರ್ಯಕರ್ತರಿಂದ ಒಂದು ಸಾವಿರ…
ದಾವಣಗೆರೆ: ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಹತ್ಯೆಯಾದ ದುರ್ದೈವಿಯನ್ನು ಅತಾವುಲ್ಲಾ (46) ಎಂದು ಗುರುತಿಸಲಾಗಿದ್ದು, ಈ ಘಟನೆಯು ಸ್ಥಳೀಯ ವಲಯದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹಳೇ ವೈಷಮ್ಯ, ಹಣದ ಗಲಾಟೆ: ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಭೀಕರ ಕೊಲೆಯ ಹಿಂದೆ ಹಣಕಾಸಿನ ವಿವಾದ ಹಾಗೂ ಹಳೇ ವೈಷಮ್ಯ ಇರುವುದು ಕಂಡುಬಂದಿದೆ. ಭದ್ರಾವತಿ ಮೂಲದ ಶೇಖ್ ದಸ್ತುಗಿರಿ ಹಾಗೂ ಜಬೀವುಲ್ಲಾ ಎಂಬುವವರೊಂದಿಗೆ ಮೃತ ಅತಾವುಲ್ಲಾ ಅವರಿಗೆ ಈ ಹಿಂದೆ ಹಣದ ವಿಚಾರವಾಗಿ ದೊಡ್ಡ ಮಟ್ಟದ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ಸಂಚು ರೂಪಿಸಿದ್ದ ಆರೋಪಿಗಳು ಹಾಗೂ ಅವರ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ತಡರಾತ್ರಿ ಏಕಾಏಕಿ ದಾಳಿ: ಶುಕ್ರವಾರ (ಮೇ 15) ತಡರಾತ್ರಿ ಅತಾವುಲ್ಲಾ ಅವರು ಇದ್ದ ಜಾಗಕ್ಕೆ ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳ ತಂಡವು ಏಕಾಏಕಿ…
ದಾವಣಗೆರೆ : ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಎಂದು ತಿಳಿದುಬಂದಿದೆ. ಈ ಕಿಲಾಡಿ ಗ್ಯಾಂಗ್ ಮೊದಲು ಶ್ರೀಮಂತ ಹಿನ್ನೆಲೆಯುಳ್ಳ ಯುವಕರನ್ನು ಟಾರ್ಗೆಟ್ ಮಾಡುತ್ತಿತ್ತು. ಗ್ಯಾಂಗ್ನ ಸದಸ್ಯೆ ಪಂಚಮಿ (34) ಎಂಬಾಕೆ ಶ್ರೀಮಂತ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಹರಿಹರ ತಾಲೂಕಿನ ಶಿವನಹಳ್ಳಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಜಗದೀಶ, ಗಂಗಾ ಮಲ್ಲೇಶ್ ನಾಯ್ಕ, ವೆಂಕಟೇಶ್ ಹಾಗೂ ಮತ್ತೊಬ್ಬ ಆರೋಪಿ ಧಾವಿಸಿ ಬಂದು ಯುವಕನ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಇಡೀ ಗ್ಯಾಂಗ್ ಅನ್ನು ಜೈಲಿಗಟ್ಟಿದ್ದಾರೆ. ಈ ತಂಡ ಇನ್ನೂ ಹಲವು ಯುವಕರಿಗೆ ವಂಚಿಸಿರುವ ಶಂಕೆ ಇದ್ದು, ತನಿಖೆ ಚುರುಕುಗೊಂಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…
ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಜನಸಾಮಾನ್ಯರ ಬದುಕು ಮತ್ತಷ್ಟು ದುಬಾರಿಯಾಗಲಿದೆ. ವಿದೇಶಿ ವಿನಿಮಯ ಕೊರತೆಯಿಂದ ಹಣದುಬ್ಬರ ಸಮಸ್ಯೆಗಳು ತಲೆದೋರಿದೆ. ಇದರ ಬೆನ್ನಲ್ಲೇ ಹಲವು ಕಾರ್ಮಿಕ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು ಗಿಗ್ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಗಿಗ್ ಕಾರ್ಮಿಕರು ಇಂದು ಐದು ಗಂಟೆಗಳ ಕಾಲ ಮುಷ್ಕರ ನಡೆಸುತ್ತಿದ್ದಾರೆ. ಮಧ್ಯಾಹ್ನ 12:00 ರಿಂದ ಸಂಜೆ 5:00 ರವರೆಗೆ, ಗಿಗ್ ಕಾರ್ಮಿಕರು ತಮ್ಮ ಅಪ್ಲಿಕೇಶನ್ಗಳನ್ನು ಆಫ್ಲೈನ್ನಲ್ಲಿ ಇಡಲಿದ್ದಾರೆ. ಈ ಮೂಲಕ ಗ್ರಾಹಕರು ಆರ್ಡರ್ ಮಾಡಲು, ಡೆಲಿವರಿ ಸಾಧ್ಯವಾಗುವುದಿಲ್ಲ. ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ , ಜೆಪ್ಟೊದಂತಹ ಪ್ಲಾಟ್ಫಾರ್ಮ್ಗಳಲ್ಲಿ ಡೆಲಿವರಿ ಮಾಡುವ ಎಜೆಂಟ್ಗಳು ಮುಷ್ಕರದ ವೇಳೆ ಕಾರ್ಯನಿರ್ವಹಿಸುವುದಿಲ್ಲ. ಎಲ್ಲಾ ಆನ್ಲೈನ್ ಡೆಲಿವರಿ ಎಜೆಂಟ್ಗಳು ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ಮುಷ್ಕರಿಂದ ಆನ್ಲೈನ್ ಡೆಲಿವರಿ ಸೇವೆಗಳು ಸಂಪೂರ್ಣ ಅಸ್ತವ್ಯಸ್ತವಾಗಲಿದೆ. ಗಿಗ್ ಮತ್ತು ಪ್ಲಾಟ್ಫಾರ್ಮ್ ಸೇವಾ ಕಾರ್ಮಿಕರ ಸಂಘ (GIPSWU) ಮುಷ್ಕರ ಘೋಷಣೆ ಮಾಡಿದೆ. ಮುಷ್ಕರದ ವೇಳೆ…
ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಸೇತುವೆಯ ಮೇಲೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮುನಿರಾಬಾದ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಮಿಳುನಾಡು ಮೂಲದ ಟ್ಯಾಂಕರ್ ಚಾಲಕನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನಿನ್ನೆ ಸಂಭವಿಸಿದ ಈ ದುರಂತದಲ್ಲಿ ಒಂದು ವರ್ಷದ ಕಂದಮ್ಮ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದರು. ರಾಷ್ಟ್ರೀಯ ಹೆದ್ದಾರಿ 50 ರ ತುಂಗಭದ್ರಾ ನದಿ ಸೇತುವೆಯ ಮೇಲೆ ಈ ಹೃದಯವಿದ್ರಾವಕ ಘಟನೆ ನಡೆದಿತ್ತು. ಹೊಸಪೇಟೆ ಕಡೆಯಿಂದ ಕೊಪ್ಪಳದತ್ತ ಬರುತ್ತಿದ್ದ ಟ್ರಾಕ್ಟರ್ಗೆ ತಮಿಳುನಾಡು ನೋಂದಣಿಯ ಹಾಲಿನ ಟ್ಯಾಂಕರ್ ಹಿಂಬದಿಯಿಂದ ಅತಿ ವೇಗವಾಗಿ ಬಂದು ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಟ್ರಾಕ್ಟರ್ ಸಂಪೂರ್ಣವಾಗಿ ಜಖಂಗೊಂಡು ಸೇತುವೆಯ ಮೇಲಿಂದ ಕೆಳಗೆ ಉರುಳಿ ಬಿದ್ದಿತ್ತು. ಈ ಭೀಕರ ಅಪಘಾತದಲ್ಲಿ ಟ್ರಾಕ್ಟರ್ನಲ್ಲಿದ್ದ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು. ಮೃತರಲ್ಲಿ ಒಂದು ವರ್ಷದ ಮಗು, ಇಬ್ಬರು ಮಹಿಳೆಯರು ಹಾಗೂ ನಾಲ್ಕು ಜನ ಪುರುಷರು ಸೇರಿದ್ದಾರೆ. ಗಾಯಗೊಂಡ…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ. ರಾಜ್ಯದಾದ್ಯಂತ ವಾಯುಭಾರ ಕುಸಿತದ ಎಫೆಕ್ಟ್: ಬಂಗಾಳಕೊಲ್ಲಿಯ ನೈಋತ್ಯ ಮತ್ತು ಪಶ್ಚಿಮ-ಮಧ್ಯ ಭಾಗದಲ್ಲಿ ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದಾದ್ಯಂತ ಮುಂಗಾರು ಪೂರ್ವ ಮಾರುತಗಳು ಚುರುಕುಗೊಂಡಿವೆ. ಈ ಹವಾಮಾನ ವೈಪರೀತ್ಯದ ನೇರ ಪ್ರಭಾವ ಕರ್ನಾಟಕದ ಮೇಲಾಗುತ್ತಿದ್ದು, ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಬದಲಾದ ಹವಾಮಾನ: ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮೋಡಕವಿದ…
ರಾಯಚೂರು : ರಾಜ್ಯದಲ್ಲಿ ನಕಲಿ ಸಾಧು ಸಂತರ ಹಾವಳಿ ಹೆಚ್ಚಾಗಿದ್ದು, ಸಾಧು ಸಂತರ ಸೋಗಿನಲ್ಲಿ ಬಂದು ಚಿನ್ನ ಹಣ ಲೂಟಿ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಈ ಒಂದು ಕೃತ್ಯ ನಡೆದಿದೆ. ಸಿಂಧನೂರಿನಲ್ಲಿ ಸಾಧುಗಳ ಓಡಾಟ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಸಿಂಧನೂರಿನ ಮೆಡಿಕಲ್ ಶಾಪ್ ಗೆ ಓರ್ವ ಸಾಧು ಬಂದಿದ್ದಾರೆ ನಿಮ್ಮ ಮಕ್ಕಳಿಗೆ ಒಳಿತಾಗಲಿ ಎಂದು ಹೂವು ನೀಡಿದ. ಹೂವಿನ ವಾಸನೆಗೆ ಅಂಗಡಿ ಮಾಲಿಕ ಮೂರ್ಛೆ ಹೋಗಿದ್ದಾನೆ. ಬಳಿಕ ಮಂಕು ಬಡಿದಂತಾಗಿದೆ. ಈ ವೇಳೆ ಸಾಧು ಅಂಗಡಿಯಲ್ಲಿದ್ದ 10 ಹಣವನ್ನು ಕುದು ಅಂಗಡಿ ಮಾಲೀಕ ಹಾಗೂ ಅವನ ಕೈಯಲ್ಲಿದ್ದ ಉಂಗುರವನ್ನು ಕೊಟ್ಟು ಕಳುಹಿಸಿದ್ದಾನೆ. ಸಾಧು ಬಂದು ನನಗೆ ಎರಡು ಹೂ ಕೊಟ್ಟ, ನನಗೆ ಬಾಯಲ್ಲಿ ಮಾತೆ ಬರಲಿಲ್ಲ. ಅವನು ಏನು ಹೇಳುತ್ತಿದ್ದಾನೋ ಅವನ ಮಾತನ್ನು ಪ್ರತಿಯೊಂದು ಕೇಳಿದ್ದೇನೆ. 10 ಸಾವಿರ ಹಣ ಕೊಟ್ಟೆ ನನ್ನ ಕೈಯಲ್ಲಿರುವ ಉಂಗುರನೂ ಕೂಡ ಕೊಟ್ಟೆ. ಅವನು ಏನು ಹೇಳಿದನೋ ಎಲ್ಲವನ್ನು ಕೇಳಿದೆ. ನಾನು…
ಬಿಹಾರ್ : ತಾಯಿಗಿಂತ ದೇವರಿಲ್ಲ ಎನ್ನುವುದನ್ನು ಓದಿದ್ದೇವೆ ಕೇಳಿದ್ದೇವೆ. ಇದೀಗ ಬಿಹಾರದಲ್ಲಿ ತನ್ನ ಜೀವವನ್ನು ಲೆಕ್ಕಿಸದೆ ಇಬ್ಬರು ಮಕ್ಕಳು ಹಾಗು ಆ ತಾಯಿಯ ಜೊತೆಗೆ ಇನ್ನಿಬ್ಬರು ಮಹಿಳೆಯರ ಜೀವಗಳನ್ನು ಒಟ್ಟು ಐವರನ್ನು ಪ್ರಾಣದ ಹಂಗು ತೊರೆದು ಉಳಿಸಿರುವ ಘಟನೆ ವರದಿಯಾಗಿದೆ. ಈ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಬಿಹಾರದಲ್ಲಿ ನಡೆದಿದ್ದು, ಒಬ್ಬ ತಾಯಿ ತನ್ನ ಇಬ್ಬರು ಮಕ್ಕಳನ್ನು ಶಹಪುರ್ ಪಟೋರಿ ರೈಲ್ವೆ ನಿಲ್ದಾಣದ ಬಳಿ ಹಳಿಗಳನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ರೈಲು ಬಂದ ನಂತರ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಉಳಿಸಿಕೊಂಡರು. ವರದಿಗಳ ಪ್ರಕಾರ, ರೈಲು ಅಪಾಯಕಾರಿಯಾಗಿ ತಲೆಯ ಮೇಲೆ ಹಾದುಹೋದಾಗ, ಮೂವರು ಮಹಿಳೆಯರು ತಮ್ಮ ಮಕ್ಕಳನ್ನು ಪ್ಲಾಟ್ಫಾರ್ಮ್ ಅಂಚಿನ ಕೆಳಗೆ (“ಮಲ್ಹಾರ”) ಒತ್ತಿಕೊಂಡು ಕುಳಿತರು. ಈ ಪ್ರಕ್ರಿಯೆಯಲ್ಲಿ ತಾಯಿ ಗಾಯಗೊಂಡರು, ಆದರೆ ಐವರೂ ಬದುಕುಳಿದರು.ತಕ್ಷಣ ಎಲ್ಲರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ತಾಯಿಯ ಈ ಧೈರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. https://twitter.com/alfamarb/status/2055396227009876465?t=ZW9KODeViS2n1JoUuUxFkw&s=19














