Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರವು ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ನಿಗಮಗಳ ಲಕ್ಷಾಂತರ ನೌಕರರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದರು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಹಾಗೂ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈ ವೇತನ ಹೆಚ್ಚಳವು ಅತ್ಯಗತ್ಯವಾಗಿತ್ತು. ನೌಕರರ ಸಂಘಟನೆಗಳ ಜೊತೆ ನಡೆಸಿದ ಸುದೀರ್ಘ ಚರ್ಚೆ ಹಾಗೂ ಆರ್ಥಿಕ ಇಲಾಖೆಯ ಸಮ್ಮತಿಯ ನಂತರ, ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ. ಈ ವೇತನ ಹೆಚ್ಚಳದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ಹೆಚ್ಚುವರಿ ಹೊರೆ ಬೀಳಲಿದೆ. ಆದರೂ, ಸಾರಿಗೆ ಸಂಸ್ಥೆಯನ್ನು…

Read More

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಜೂಜಿನ ಅಮಲು ಅದೆಷ್ಟೋ ಕುಟುಂಬಗಳನ್ನು ಬೀದಿಗೆ ತರುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕರುಣಾಜನಕ ಘಟನೆಯೊಂದು ಸಂಭವಿಸಿದೆ. ಬೆಟ್ಟಿಂಗ್ ಚಟಕ್ಕೆ ಬಲಿಯಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ, ಸಾಲ ತೀರಿಸಲಾಗದೆ ಸಾವಿಗೂ ಮುನ್ನ ವಿಡಿಯೋ ಮಾಡಿ ಅಳಲು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನ ಹಿನ್ನೆಲೆ: ಮೃತ ಯುವಕನನ್ನು ತಮಿಳುನಾಡು ಮೂಲದ ಶಿವಕುಮಾರ್ (28) ಎಂದು ಗುರುತಿಸಲಾಗಿದೆ. ಉದ್ಯೋಗದ ಅನ್ವೇಷಣೆಯಲ್ಲಿ ನೆಲಮಂಗಲಕ್ಕೆ ಬಂದಿದ್ದ ಈತ, ಅರಿಶಿನಕುಂಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದನು. ಕಳೆದ ಕೆಲವು ಸಮಯದಿಂದ ಐಪಿಎಲ್ ಪಂದ್ಯಗಳ ಮೇಲೆ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದ ಎನ್ನಲಾಗಿದ್ದು, ಇದೇ ಚಟ ಆತನ ಪ್ರಾಣಕ್ಕೆ ಮುಳುವಾಗಿದೆ. ಸಾವಿಗೂ ಮುನ್ನ ಮನಕಲಕುವ ವಿಡಿಯೋ: ಶಿವಕುಮಾರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಮೊಬೈಲ್‌ನಲ್ಲಿ ವಿಡಿಯೋವೊಂದನ್ನು ಚಿತ್ರೀಕರಿಸಿದ್ದಾನೆ. ವಿಡಿಯೋದಲ್ಲಿ ಅತ್ಯಂತ ಭಾವುಕನಾಗಿ ಮಾತನಾಡುತ್ತಾ, ತನ್ನ ಸಾವಿಗೆ ತಾನೇ ಕಾರಣ ಎಂದು ಒಪ್ಪಿಕೊಂಡಿದ್ದಾನೆ. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡಿರುವುದು…

Read More

ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ಜಾಲದ ವಿರುದ್ಧ ಬೆಂಗಳೂರು ಪೊಲೀಸರ ಸಮರ ಮುಂದುವರೆದಿದೆ. ಅಶೋಕನಗರ, ಮಲ್ಲೇಶ್ವರಂ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅನ್ಯ ರಾಜ್ಯದ ಮೂವರ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಮೊಹಮ್ಮದ್ ಹಮ್ಜಾ ಹಾಗೂ ಯಾಸೀರ್ ಅಹಮದ್, ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಮೊಹಮ್ಮದ್ ಅಫ್ರಾನ್, ಮೊಹಮ್ಮದ್ ಸಬೀತ್ ಹಾಗೂ ಶ್ರೀನಾಥ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ ಒಟ್ಟು 1.28 ಕೋಟಿ ಮೌಲ್ಯದ 3 ಕೆಜಿ 686 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಹೈಡ್ರೋ ಗಾಂಜಾ ಖರೀದಿಸಿ ತರುತ್ತಿದ್ದ ಆರೋಪಿಗಳು ನಗರದಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಲ್ಲೇಶ್ವರಂ ಪೊಲೀಸರಿಂದ ಬಂಧಿಸಲ್ಪಟ್ಟ ಆರೋಪಿಗಳು ಮಡಿವಾಳದಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು. ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದರು.…

Read More

ನವದೆಹಲಿ : ಪಾಕಿಸ್ತಾನದ ಮಾರುಕಟ್ಟೆಯಲ್ಲಿ ಭೀಕರವಾದ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು, 35 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಮಾರುಕಟ್ಟೆಯಲ್ಲಿ ಸ್ಪೋಟ ಕಂಡು 9 ಜನರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇನ್ನು ಗಾಯಗೊಂಡ 35 ಕ್ಕೆ ಹೆಚ್ಚು ಜನರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಯುವ್ಯ ಪಾಕಿಸ್ತಾನದ ಜನದಟ್ಟಣೆಯ ಮಾರುಕಟ್ಟೆಯಲ್ಲಿ ಇಂದು ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೌರಂಗ್ ಬಜಾರ್‌ನಲ್ಲಿ ಸ್ಫೋಟ ಸಂಭವಿಸಿದ್ದು, ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿದಾಗ ಸ್ಥಳೀಯ ನಿವಾಸಿಗಳಲ್ಲಿ ಭಯ ಶುರುವಾಗಿದೆ. ಪ್ರದೇಶದ ದೃಶ್ಯಗಳು ಹಾನಿಗೊಳಗಾದ ಅಂಗಡಿಗಳು, ಮಾರುಕಟ್ಟೆಯಲ್ಲಿ ಹರಡಿರುವ ಅವಶೇಷಗಳು ಮತ್ತು ತೀವ್ರವಾಗಿ ಹಾನಿಗೊಳಗಾದ ವಾಹನವನ್ನು ತೋರಿಸಿವೆ. ತುರ್ತು ಪ್ರತಿಕ್ರಿಯೆ ಸಂಸ್ಥೆ ರೆಸ್ಕ್ಯೂ ಪ್ರಕಾರ, ಸ್ಫೋಟದಲ್ಲಿ ಸುಮಾರು 30 ಜನರು ಗಾಯಗೊಂಡಿದ್ದಾರೆ, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡ ಬಲಿಪಶುಗಳನ್ನು ಚಿಕಿತ್ಸೆಗಾಗಿ ಬನ್ನುವಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು…

Read More

ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಶಪಡಿಸಿಕೊಂಡ ಮಣ್ಣು ಮುಕ್ಕ ಹಾವು ಆರೋಗ್ಯವಾಗಿದ್ದು, ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಹಾವನ್ನು ಯಾವ ಪ್ರದೇಶದಿಂದ ಹಿಡಿದು ತರಲಾಗಿತ್ತು ಹಾಗೂ ಇದರ ಹಿಂದೆ ದೊಡ್ಡ ಜಾಲವಿದೆಯೇ? ಎಂಬ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರ ಇರುವ ಶಂಕೆಯೂ ವ್ಯಕ್ತವಾಗಿದೆ. ಮಣ್ಣು ಮುಕ್ಕ ಹಾವು ಅಪರೂಪದ ಜಾತಿಗೆ ಸೇರಿದೆ. ಇದನ್ನು ಅಕ್ರಮವಾಗಿ ಸಾಗಾಟ ಹಾಗೂ ಮಾರಾಟ ಮಾಡಿದರೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಶಿಕ್ಷೆಯಿದೆ. ಆದರೂ ಕೆಲ…

Read More

ನವದೆಹಲಿ : ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೊಸ ಕೊಂಡಿ ಪತ್ತೆಯಾಗಿದೆ. ಸಿಬಿಐ ಕಾರ್ಯಾಚರಣೆ ನಡೆಸಿ ಪ್ರಮುಖ ಶಂಕಿತನನ್ನು ಬಂಧಿಸಿದೆ. ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ತೀವ್ರಗೊಂಡಿದೆ. ಮೊಬೈಲ್ ದತ್ತಾಂಶಗಳ ಮೂಲಕ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಹಗರಣದಲ್ಲಿ ಇನ್ನೂ ದೊಡ್ಡ ವ್ಯಕ್ತಿಗಳು ಸಿಲುಕುವ ಸಾಧ್ಯತೆ ಇದೆ. ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವಲ್ಲಿ ಅಥವಾ ಹಣಕಾಸಿನ ವ್ಯವಹಾರ ಕುದುರಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ನಾಸಿಕ್‌ನಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಪತ್ರಿಕೆಯು ಕೇವಲ ಒಂದು ರಾಜ್ಯಕ್ಕೆ…

Read More

ನವದೆಹಲಿ: ಮೇ 3 ರಂದು ನಡೆದಿದ್ದ ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ (NEET) ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ವಿಶೇಷ ತನಿಖಾ ತಂಡ (SIT) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್‌ಮೈಂಡ್ ಹಾಗೂ ಓರ್ವ ಎಂಬಿಬಿಎಸ್ ವಿದ್ಯಾರ್ಥಿ ಸೇರಿದಂತೆ ಒಟ್ಟು 40 ಜನರನ್ನು ಬಂಧಿಸಿದೆ. ಬಂಧಿತ ಆರೋಪಿಗಳ ವಿವರ: ಪೊಲೀಸರ ಬಲೆಗೆ ಬಿದ್ದಿರುವ ಪ್ರಮುಖ ಆರೋಪಿಗಳನ್ನು ಮನೀಶ್ ಯಾದವ್ ಮತ್ತು ರಾಕೇಶ್ ಮಾಂಡವ್ರಿಯ ಎಂದು ಗುರುತಿಸಲಾಗಿದೆ. ಬಂಧಿತರ ಗುಂಪಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೂ ಸೇರಿರುವುದು ತನಿಖಾ ತಂಡಕ್ಕೆ ಆಘಾತ ತಂದಿದೆ. ಪರೀಕ್ಷಾ ಅಕ್ರಮದ ಹಿಂದೆ ವ್ಯವಸ್ಥಿತ ಜಾಲವೊಂದು ಕೆಲಸ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಎಲ್ಲರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಾಟ್ಸ್ಅಪ್ ಮೂಲಕ ಪತ್ರಿಕೆ ಹಂಚಿಕೆ: ತನಿಖೆಯ ವೇಳೆ ಬಯಲಾದ ಅತ್ಯಂತ ದಿಗಿಲುಗೊಳಿಸುವ ವಿಷಯವೆಂದರೆ, ಪರೀಕ್ಷೆ ನಡೆಯುವ ಒಂದು…

Read More

ವಿಜಯಪುರ : ವಿಜಯಪುರದಲ್ಲಿ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆದ ಬೆನ್ನಲ್ಲೇ, ಕಿಡಿಗೇಡಿಗಳು ನಾಯಿಗಳಿಗೆ ವಿಷವಿಕ್ಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಲ್ಲಿ ಒಂದು ನಾಯಿ ಸಾವನ್ನಪ್ಪಿದ್ದು, ಎರಡು ನಾಯಿಗಳು ಅಸ್ವಸ್ಥಗೊಂಡಿದ್ದು, ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಶಾಸ್ತ್ರಿ ನಗರದ ಜನ್ನತ್ ಹಾಲ್ ಬಳಿ ಬೀದಿ ನಾಯಿಗಳಿಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆಹಾರದಲ್ಲಿ ವಿಷ ಬೆರೆಸಿ ನಾಯಿಗಳಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಷಪೂರಿತ ಆ ಆಹಾರ ಸೇವಿಸಿದ ಮೂರು ನಾಯಿಗಳ ಪೈಕಿ ಒಂದು ನಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನೆರಡು ನಾಯಿಗಳು ಅಸ್ವಸ್ಥಗೊಂಡಿದ್ದು, ಪ್ರಾಣಿಪ್ರಿಯರು ಅವುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಘಟನೆಗೆ ಮುನ್ನ ವಿಜಯಪುರದ ರಾಜಕುಮಾರ್ ಲೇಔಟ್‌ನಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಗಾಯಗೊಂಡ ಬಾಲಕನ ಘಟನೆ ನಗರಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಕೂಡ ಬೀದಿ ನಾಯಿಗಳ ಸ್ಥಳಾಂತರ ಕಾರ್ಯಕ್ಕೆ ಮುಂದಾಗಿತ್ತು. ಆದರೆ ಇದೇ ವೇಳೆ ನಗರದಲ್ಲಿ…

Read More

ಬೆಂಗಳೂರು : ಬೆಂಗಳೂರಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಸಿಕ್ಕ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಆ ಜಾಗದಲ್ಲಿ ಜಾಗದಲ್ಲಿ ಟೈಮರ್ ಪತ್ತೆ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಎನ್​ಐಎಗೆ ತನಿಖೆ ಮಾಡಲು ಕೊಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದವನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ತನಿಖೆಯೂ ಆಗುತ್ತಿದೆ. ಹೋಗುವ ದಾರಿಯಲ್ಲಿ ಸಿಕ್ಕ ಜಿಲೆಟಿನ್ ಕಡ್ಡಿ ಸೇರಿದಂತೆ ಏನೆಲ್ಲ ಸಿಕ್ಕಿದೆಯೋ ಅದನ್ನು ತನಿಖೆ ಮಾಡಲಾಗುತ್ತಿದೆ ಎಂದರು. ಎನ್​ಐಎ ಕೂಡ ತನಿಖೆ ಮಾಡಲು ಕೇಳಿದ್ದಾರೆ. ಅವರಿಗೂ ತನಿಖೆ ಮಾಡಲು ಕೊಡುತ್ತೇವೆ. ಪ್ರಧಾನಿ ಬರುವ ಕಾರ್ಯಕ್ರಮಕ್ಕೆ ಹೈಲೆವೆಲ್ ಸೆಕ್ಯೂರಿಟಿ ಇರುತ್ತದೆ. ನಾವು ಹಾಗೂ ಕೇಂದ್ರ ಸೆಕ್ಯೂರಿಟಿ ಕೊಡುತ್ತೇವೆ. ರಾಜ್ಯ ಸರ್ಕಾರಕ್ಕೂ ಸೂಚನೆ ಬಂದಿರುತ್ತದೆ. ಭದ್ರತೆ ನೀಡಿರುತ್ತೇವೆ. ಕಾರ್ಯಕ್ರಮಕ್ಕೆ ಬರುವ ಎರಡು ಗಂಟೆ ಮುಂಚೆ ಅಂದರೆ ಬೆಳಗ್ಗೆ 9 ಗಂಟೆಗೆ ಜಿಲೆಟಿನ್ ಕಡ್ಡಿ ಪತ್ತೆ ಹಚ್ಚಿದ್ದಾರೆ. ಇದು…

Read More

ನವದೆಹಲಿ: ಬಾಲಿವುಡ್‌ನ ಖ್ಯಾತ ನಟಿ, ‘ನಾಗಿಣಿ’ ಖ್ಯಾತಿಯ ಮೌನಿ ರಾಯ್ ಅವರ ವೈವಾಹಿಕ ಜೀವನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ. ಮೌನಿ ರಾಯ್ ಮತ್ತು ಅವರ ಪತಿ ಸೂರಜ್ ನಂಬಿಯಾರ್ ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ (Unfollow) ಮಾಡಿರುವುದು ಅಭಿಮಾನಿಗಳಲ್ಲಿ ಆತಂಕ ಮತ್ತು ಕುತೂಹಲವನ್ನು ಮೂಡಿಸಿದೆ. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ದಿಢೀರನೆ ಈ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ರಹಸ್ಯ: ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಜೋಡಿ. ಪ್ರವಾಸದ ಫೋಟೋಗಳು, ಹಬ್ಬದ ಸಂಭ್ರಮ ಹಾಗೂ ಪರಸ್ಪರರ ಮೇಲಿರುವ ಪ್ರೀತಿಯನ್ನು ಫೋಟೋಗಳ ಮೂಲಕ ಹಂಚಿಕೊಳ್ಳುತ್ತಿದ್ದ ಇವರು, ಈಗ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಅಷ್ಟೇ ಅಲ್ಲದೆ, ಈ ಹಿಂದೆ ಹಂಚಿಕೊಂಡಿದ್ದ ಕೆಲವು ಫೋಟೋಗಳು ಡಿಲೀಟ್ ಆಗಿವೆ ಎಂಬ ಸುದ್ದಿಯೂ ಹರಿದಾಡುತ್ತಿದ್ದು, ಇದು ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತಿಗೆ ಪುಷ್ಟಿ ನೀಡುವಂತಿದೆ. ವದಂತಿಗಳಿಗೆ…

Read More