Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬಂದೇಯ ಗವಾಕ್ಷಿ ಅಂತ ಅಷ್ಟೇ. ಸಿದ್ದರಾಮಯ್ಯ ಹೋಗಿ ಡಿಕೆ ಶಿವಕುಮಾರ್ ಬಂದ್ರು ಅಷ್ಟೇ 2028 ರಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಅಧಿಕಾರಕ್ಕೆ ಎಂದು ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ ಅದರ ಬಗ್ಗೆ ಆಸಕ್ತಿ ಇಲ್ಲ ಕಾಂಗ್ರೆಸ್ಸಿನ ಕಥೆ ಹೆಂಗಾಗಿದೆ ಎಂದರೆ ಹೋದೆಯಾ ಪಿಶಾಚಿ ಎಂದರೆ ಬಂದೆಯ ಗವಾಕ್ಷಿ ಎಂಬಂತೆ ಆಗಿದೆ. ಕರ್ನಾಟಕದಲ್ಲಿ ದಲಿತರನ್ನು ವೋಟ್ ಮಾಡಿಕೊಂಡು ಇವತ್ತು ಸಿಎಂ ಮಾಡುತ್ತೇವೆ, ನಾಳೆ ಮಾಡುತ್ತೇವೆ ಇನ್ನೊಂದು ಚುನಾವಣೆ ಬಂದರೆ ಮುಖ್ಯಮಂತ್ರಿ ಅಂತ ಮಾಡುತ್ತೇವೆ ಎಂದು ಹೇಳಿ ವಂಚನೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಇರುವ ದಲಿತ ಲೀಡರ್ ಗಳಿಗೆ ತಾಕತ್ತಿಲ್ಲ. ಎಷ್ಟು ದಿನ ವಂಚನೆ ಮಾಡುತ್ತೀರಾ ನಾವು ಮುಖ್ಯಮಂತ್ರಿ ಆಗುತ್ತೇವೆ ಎಂದು ಕೇಳುವ ತಾಕತ್ತು ಇಲ್ಲ. ದಲಿತರಿಗೆ ಕಾಂಗ್ರೆಸ್ ಭಗಣಿಗೂಟ ಇಟ್ಟಿದೆ.…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಈ ಎಲ್ಲಾ ವದಂತಿಗಳನ್ನು ಕಡಾಖಂಡಿತವಾಗಿ ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ಕೇವಲ ಊಹಾಪೋಹ ಎಂದು ಹೇಳುವ ಮೂಲಕ ವಿಷಯಕ್ಕೆ ತಣ್ಣೀರೆರಚಿದ್ದಾರೆ. ಇತ್ತೀಚೆಗೆ ನಡೆದ ಹೈಕಮಾಂಡ್ ನಾಯಕರೊಂದಿಗಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಖ್ಯಮಂತ್ರಿಗಳ ರಾಜೀನಾಮೆ ಕುರಿತು ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ ಎಂದು ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ನಡೆದ ಸಭೆಯು ಕೇವಲ ಮುಂಬರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಕಾರ್ಯತಂತ್ರದ ಬಗ್ಗೆ ಮಾತ್ರ ಆಗಿತ್ತು ಎಂದು ಅವರು ವಿವರಿಸಿದರು. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ನಾಯಕತ್ವ ಬದಲಾವಣೆಯ ಚರ್ಚೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿದ ಸಚಿವರು, ಈ ವಿಷಯದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ “ಪಟ್ಟದ ಪಗಡೆಯಾಟ” ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರು ಮತ್ತು ಶಾಸಕರಿಗೆ ಉಪಹಾರ ಕೂಟವನ್ನು ಆಯೋಜಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದು, ಭೇಟಿಯ ನಂತರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಷರತ್ತು? ಹೈಕಮಾಂಡ್ ನಾಯಕರೊಂದಿಗಿನ ಮಾತುಕತೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಮುಂದೆ ಮಹತ್ವದ ಪ್ರಸ್ತಾಪವೊಂದನ್ನು ಇಟ್ಟಿದ್ದಾರೆ ಎನ್ನಲಾಗಿದೆ. “ಪಕ್ಷದ ಹಿರಿಯ ನಾಯಕರಾಗಿ ನೀವು ಹೇಳಿದಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಆದರೆ, ನನ್ನ ನಂತರ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ಜಿ. ಪರಮೇಶ್ವರ್…

Read More

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ ಎಂಬ ಚರ್ಚೆಗಳು ಜೋರಾಗಿವೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕ ಸಭೆಗಳನ್ನು ನಡೆಸಿದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ರಾಜಕಾರಣದ ಮುಂದಿನ ಭವಿಷ್ಯದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯದಿಂದಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಸರ್ಕಾರದ ವೈಫಲ್ಯ ಒಪ್ಪಿಕೊಂಡ ಹೈಕಮಾಂಡ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಯುವಿಜಯೇಂದ್ರ, “ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯವನ್ನು…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದಂತಿದೆ. ಕಾಂಗ್ರೆಸ್ ಹೈಕಮಾಂಡ್‌ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಬಲವಾದ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಹೈಕಮಾಂಡ್ ಸದ್ಯದಲ್ಲೇ ತೆರೆ ಎಳೆಯಲಿದೆ ಎನ್ನಲಾಗುತ್ತಿದೆ. ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿಗಳು ತಮ್ಮ ಆಪ್ತರು ಹಾಗೂ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಗುರುವಾರ) ಮುಂಜಾನೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸದಸ್ಯರಿಗಾಗಿ ವಿಶೇಷ ಉಪಹಾರಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಅವರು ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಉಪಹಾರಕೂಟದ ಬೆನ್ನಲ್ಲೇ ಮುಖ್ಯಮಂತ್ರಿಗಳು ರಾಜಭವನಕ್ಕೆ ತೆರಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲು ಸಿಎಂ ಕಚೇರಿಯಿಂದ ಈಗಾಗಲೇ ಸಮಯಾವಕಾಶ ಕೋರಲಾಗಿದೆ. ಈ ಭೇಟಿಯ ವೇಳೆ…

Read More

ಮಂಡ್ಯ : ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ನಡೆದಿದೆ. ಹಟ್ನ ಗ್ರಾಮದ ತಾಯಮ್ಮ (60) ಮೃತಪಟ್ಟ ಮಹಿಳೆ. ದೇವರ ಕಾರ್ಯಕ್ಕೆ ನಾಗಮಂಗಲದ ಹೆಗಟಿ ಗ್ರಾಮಕ್ಕೆ ತೆರಳಿದ್ದ ಹಟ್ನ ಗ್ರಾಮದ ಜನರು. ವಾಪಸ್ಸು ಊರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ತಾಯಮ್ಮ ಸ್ಥಳದಲ್ಲೆ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಾಯಗೊಂಡಿರುವ 10 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರ್ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸರಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭಾರತೀಯ ಸನಾತನ ಧರ್ಮ ಮತ್ತು ಸಂಸ್ಕೃತಿಯಲ್ಲಿ ‘ಓಂ’ (ॐ) ಮತ್ತು ‘ಶ್ರೀ’ (ಶ್ರೀ) ಎಂಬ ಎರಡು ಅಕ್ಷರಗಳು ಅತ್ಯಂತ ಪವಿತ್ರ ಹಾಗೂ ಮೂಲಭೂತವಾದ ಚಿಹ್ನೆಗಳಾಗಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಇವೆರಡೂ ಕೇವಲ ಅಕ್ಷರಗಳಲ್ಲ, ಬದಲಿಗೆ ಇಡೀ ಬ್ರಹ್ಮಾಂಡದ ಶಕ್ತಿ, ಸೃಷ್ಟಿ ಮತ್ತು ಮಂಗಲದ ಪ್ರತೀಕಗಳು. ಇವುಗಳ ಬಗ್ಗೆ ಕೂಲಂಕಷವಾದ ವಿವರಣೆ ಇಲ್ಲಿದೆ: ​೧. ಓಂ (ॐ) – ಬ್ರಹ್ಮಾಂಡದ ಮೂಲ ಧ್ವನಿ ​’ಓಂ’ ಅಥವಾ ‘ಓಂಕಾರ’ ಎಂಬುದು ಹಿಂದೂ ಧರ್ಮದ ಅತ್ಯಂತ ಪ್ರಮುಖ ಮತ್ತು ಪ್ರಥಮ ಪ್ರಣವ ಮಂತ್ರವಾಗಿದೆ. ಇದನ್ನು “ಬ್ರಹ್ಮ ಅಕ್ಷರ” ಎನ್ನಲಾಗುತ್ತದೆ. ​ಆಧಾರಗಳು (Scriptural Evidence) ​ಮಾಂಡೂಕ್ಯ ಉಪನಿಷತ್: ಈ ಇಡೀ ಉಪನಿಷತ್ತೇ ಓಂಕಾರದ ಮಹತ್ವವನ್ನು ವಿವರಿಸುತ್ತದೆ. “ಓಮಿತ್ಯೇತದಕ್ಷರಮಿದಂ ಸರ್ವಂ” ಎಂದರೆ,…

Read More

ಬೆಂಗಳೂರು: ಸಿಲಿಕಾನ್ ಸಿಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಗರ್ಭಿಣಿ ಮಹಿಳೆಯೊಬ್ಬರ ಖಾಸಗಿ ದೃಶ್ಯಗಳನ್ನು ಶೌಚಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡಲು ಯತ್ನಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಈ ಕೃತ್ಯ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯ ಕುರಿತು ತೀವ್ರ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ನೀಡಿರುವ 36 ವರ್ಷದ ಗರ್ಭಿಣಿ ಮಹಿಳೆಯು ಮೇ 21ರಂದು ವೈದ್ಯಕೀಯ ತಪಾಸಣೆಗಾಗಿ ಸರ್ಜಾಪುರ ರಸ್ತೆಯ ಈ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಆಸ್ಪತ್ರೆಯ ಶೌಚಾಲಯವನ್ನು ಬಳಸುತ್ತಿ Newದ್ದಾಗ, ಆಸ್ಪತ್ರೆಯ ಸಿಬ್ಬಂದಿಯೊಬ್ಬ ಶೌಚಾಲಯದ ಸುತ್ತಮುತ್ತ ಅನುಮಾನಾಸ್ಪದವಾಗಿ ಓಡಾಡಿದ್ದಾನೆ. ಅಷ್ಟೇ ಅಲ್ಲದೆ, ತನ್ನ ಮೊಬೈಲ್ ಫೋನ್ ಬಳಸಿ ಶೌಚಾಲಯದ ಒಳಗಿನ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸಲು ಯತ್ನಿಸುತ್ತಿರುವುದನ್ನು ಮಹಿಳೆ ತಕ್ಷಣವೇ ಗಮನಿಸಿದ್ದಾರೆ. ತಮ್ಮ ಖಾಸಗಿತನಕ್ಕೆ ಧಕ್ಕೆ ತಂದು, ವಿಡಿಯೋ ಚಿತ್ರೀಕರಿಸುತ್ತಿರುವುದನ್ನು ಅರಿತ ಮಹಿಳೆ ಧೈರ್ಯದಿಂದ…

Read More

ಮಂಡ್ಯ : ಹೆಂಡತಿಯ ಮುಂದೆ ಸ್ಟೇಟಸ್ ತೋರಿಸಲು ಹೋಗಿ ಪೊಲೀಸರ ಕೈಗೆ ತಗಲಾಕ್ಕೊಂಡ ಐನಾತಿ ಪತಿಯೊಬ್ಬ ಇದೀಗ ಪೋಲೀಸರ ಅಥಿತಿಯಾಗಿದ್ದಾನೆ. ಕಿರುಗಾವಲು ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣ ಸಂಬಂಧ ನಾಲ್ವರು ಸರಗಳ್ಳರ ಬಂಧನವಾಗಿದೆ. ಬಂಧಿತರನ್ನ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದ ಗುರು ಪ್ರಸಾದ್ @ಗುರು(36), ರೋಹಿತ್@ಗೆದ್ವಾ(20), ನಂಜೇಗೌಡ@ಕಾಶಿ(19), ಹಾಗೂ ಮಣಿಗೆರೆ ಗ್ರಾಮದ ಮಾದೇಶ@ಮಾದ(20) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಗುರು ಪ್ರಸಾದ್ @ಗುರು ಹೆಂಡತಿಯ ಬಳಿ ಶ್ರೀಮಂತಿಕೆ ತೋರಿಸಲು ಸರಗಳ್ಳತನ ಮಾಡ್ತಿದ್ದ ಐನಾತಿ. ಮಾರ್ಚ್ 30 ರಂದು ಕಿರುಗಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜಮೀನಿನ ಬಳಿ ತೆರಳುವ ಒಂಟಿ ಮಹಿಳೆಯರ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡ್ತಿದ್ದ ಖತರ್ನಾಕ್ ಗಳು. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದ ಎಸ್ಪಿ, ಎಎಸ್ಪಿ ತಿಮ್ಮಯ್ಯ, ಸಿಪಿಐ ಶ್ರೀಧರ್, ನೇತೃತ್ವದಲ್ಲಿ ಕಿರುಗಾವಲು ಪಿಎಸ್ಐ ರವಿಕುಮಾರ್, ಬೆಳಕವಾಡಿ ಪಿಎಸ್ಐ ಪ್ರಕಾಶ್, ಸಿಬ್ಬಂದಿಗಳಾದ ಸುನೀಲ್, ಸಿದ್ದಣ್ಣ,ಹರ್ಷ,ಜಯಂತ್,ಲೋಕೇಶ್ ಸೇರಿದಂತೆ ತಂಡ ರಚನೆಯಾಗಿತ್ತು. ಯಶಸ್ಸಿ ಕಾರ್ಯಾಚರಣೆ ಮೂಲಕ ಆರೋಪಿಗಳ ಬಂಧನವಾಗಿದೆ.…

Read More

ಬೆಂಗಳೂರು : ಮಹಿಳೆ ಎಂಬ ಕಾರಣ ಜಾಮೀನು ನೀಡಲು ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಿಯಕರನ ಜತೆ ಸಂಬಂಧ ಮುಂದುವರಿಸಲು ಅಡ್ಡಿ ಆಗಿದ್ದಕ್ಕೆ ಪತಿಯನ್ನು ಕೊಲೆ ಮಾಡಿಸಿದ ಆರೋಪ ಎದುರಿ ಸುತ್ತಿರುವ ಮಹಿಳೆಗೆ ಬೇಲ್ ಮಂಜೂರು ಮಾಡಲು ನಿರಾಕರಿಸಿದೆ. ಪತಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ನಿವಾಸಿ ಸುನಿತಾ ಎಂಬಾಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾ.ವಿ. ಶ್ರೀಷಾ ನಂದ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಘಟನೆಯ ವಾಸ್ತವಾಂಶ ಪರಿಶೀಲಿಸಿದರೆ, ಮೊದಲ ಆರೋಪಿ ಮತ್ತು ಅರ್ಜಿದಾರ ಮಹಿಳೆ (ಎರಡನೇ ಆರೋಪಿ) ಅಕ್ರಮ ಸಂಬಂಧ ಹೊಂದಿದ್ದರು. ಮೊದಲನೇ ಆರೋಪಿಯು ಅರ್ಜಿದಾರೆಯನ್ನು ಪೋಷಣೆ ಮಾಡುವುದಾಗಿ ಭರವಸೆ ನೀಡಿದ್ದ. ಈ ಇಬ್ಬರು ಜೀವನ ಸಾಗಿಸಲು ಅಡ್ಡಿಯಾಗಿದ್ದಾರೆ ಎಂಬ ಕಾರಣಕ್ಕೆಅರ್ಜಿದಾರೆಯ ಪತಿಯನ್ನು ಕೊಲೆ ಮಾಡಲಾಗಿದೆ. ಪ್ರಕರಣದ ಮುಖ್ಯ ಸಾಕ್ಷಿದಾರರ ವಿಚಾರಣೆ ಬಾಕಿಯಿದೆ. ಹಾಗಾಗಿ, ಈ ಹಂತದಲ್ಲಿ ಆರೋ ಪಿಗೆ ಜಾಮೀನು ನೀಡಲಾಗದು ಎಂದು ಪೀಠ ಹೇಳಿದೆ. ಮಹಿಳೆ ಆಗಿರುವ ಕಾರಣ ಪರಿಗಣಿಸಿ ಜಾಮೀನು ಮಂ…

Read More