Author: kannadanewsnow05

ಬೆಂಗಳೂರು : ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲದಿದ್ದರೂ, ಪೊಲೀಸರು ಬಂಧಿಸುತ್ತಿರುವುದಕ್ಕೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಬೆಳವಣಿಗೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಅತ್ಯಾಚಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಹೊಕ್ಕಳ್ಳಿ ಗ್ರಾಮದ ನಿವಾಸಿ ಎಚ್‌.ಜಿ. ಗಂಗ (29) ಎಂಬಾತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೊಲೀಸರ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಆರೋಪಿ ಪರ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೂರು ದಾಖಲಿಸುವಲ್ಲಿ ದೂರುದಾರೆ 1 ವರ್ಷ 3 ತಿಂಗಳು ವಿಳಂಬ ಮಾಡಿದ್ದಾರೆ ಎಂದು ನ್ಯಾಯಪೀಠದ…

Read More

ಚೈನ್ನೈ : ತಮಿಳುನಾಡು ರಾಜಕೀಯದಲ್ಲಿ ಇದೀಗ ಕ್ಷಿಪ್ರವಾದ ರಾಜಕೀಯ ಬೆಳವಣಿಗೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು, ಡಿಎಂಕೆ ಪಕ್ಷ ಸೇರಿದ್ದಾರೆ. ಹೌದು ಜಯಲಲಿತ ಆಪ್ತ ಪನ್ನೀರ್ ಸೆಲ್ವಂ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಮ್ಮುಖದಲ್ಲಿ ಡಿಎಂಕೆ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಬಾವುಟ ನೀಡಿ ಸ್ಟಾಲಿನ್ ಅವರು ಸೆಲ್ವಂ ಅವರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.ಚೆನ್ನೈನ ಡಿಎಂಕೆ ಪಕ್ಷದ ಕಚೇರಿಯಲ್ಲಿ ಈ ಒಂದು ಕಾರ್ಯಕ್ರಮ ನಡೆದಿದೆ. ಮಾಜಿ ಸಿಎಂ ಪನೀರ್ ಸೆಲ್ವಂ ಅವರ ಜೊತೆಗೆ ಹಲವರು ಕೂಡ ಡಿಎಂಕೆ ಪಕ್ಷ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಜಯಲಲಿತ ಅವರ ಮೆಚ್ಚಿನ ಶಿಷ್ಯ ಆಗಿದ್ದ ಪನ್ನೀರ್ ಸೆಲ್ವಂ, ಎರಡು ಬಾರಿ ಜಯಲಲಿತ ಸೂಚನೆಯಂತೆ ಸಿಎಂ ಆಗಿದ್ದರು. ಭ್ರಷ್ಟಾಚಾರ ಆರೋಪ ಬಂದಿದ್ದಾಗ ಸಿಎಂ ಆಗಿದ್ದರು. ಇದೀಗ ಜಯಲಲಿತಾ ಅವರ ವಿರೋಧಿ ಪಡೆ ಯನ್ನು ಪನ್ನೀರ್ ಸೇಲ್ವಮ್ ಸೇರ್ಪಡೆಯಾಗಿದ್ದಾರೆ. ಮೂರು ಬಾರಿ ತಮಿಳುನಾಡು ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಒಂದು ಬಾರಿ ಉಪ ಮುಖ್ಯಮಂತ್ರಿ ಕೂಡ ಆಗಿದ್ದರು ಎಐಡಿಎಂಕೆಯಿಂದ ಪನ್ನೀರ್ ಸೆಲ್ವಂ…

Read More

ಮಂಗಳೂರು : ಮಂಗಳೂರಿನಲ್ಲಿ ಚೈನ್ ಲಿಂಕ್ ಹೆಸರಿನಲ್ಲಿ ವಂಚನೆ ಎಸಲಾಗಿದೆ. ಉದ್ಯೋಗ ನೀಡುತ್ತೇವೆ ಎಂದು ಹೇಳಿ ನೂರಾರು ವಿದ್ಯಾರ್ಥಿಗಳಿಗೆ ಇದೀಗ ವಂಚನೆಗೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ವೆಕ್ಸಾನ್ ಹೆಸರಿನ ಕಂಪನಿಯಿಂದ ಈ ಒಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. BMP PVT LTD ಕಂಪನಿ ಹೆಸರಿನಲ್ಲಿ ಜಾಹೀರಾತು ನೀಡಿ ವಂಚನೆ ಎಸಲಾಗಿದೆ. ವಂಚನೆ ವಿಚಾರ ತಿಳಿದು ಪೊಲೀಸರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮಂತೆ ಬೇರೆ ಯಾರಿಗೂ ಮೋಸ ಆಗಬಾರದು. ಬ್ಲೇಡ್ ಕಂಪನಿಯನ್ನು ಬಂದ್ ಮಾಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಾಗಿದ್ದರೂ ಕೂಡ ವೆಕ್ಸನ್ ಕಂಪನಿ ಇನ್ನೂ ಕೂಡ ಕಾರ್ಯಾಚರಣೆ ನಡೆಸುತ್ತಿದೆ. ಕುದ್ರೋಳಿ ಬಳಿಯ ಬಿರ್ವ ಕಾಂಪ್ಲೆಕ್ಸ್ ಮೂರನೇ ಫ್ಲೋರ್ನಲ್ಲಿ ಕಂಪನಿ ಕಾರ್ಯಾಚರಣೆ ನಡೆಸುತ್ತಿದೆ. ಈ ವಂಚನೆ ಹೇಗೆ ನಡೆಯುತ್ತದೆ? ಆಮಿಷ: “ಪಾರ್ಟ್ ಟೈಮ್ ಕೆಲಸ”, “ಕಡಿಮೆ…

Read More

ಬೆಂಗಳೂರು: ‘ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ’ ಎಂಬ ತಮ್ಮ ಹೇಳಿಕೆಯು ವಿವಿಧ ರೀತಿಯ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಅದಕ್ಕೆ ಸಮಜಾಯಿಷಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾ‌ರ್, ‘ಹೊರೆಯಾದರೂ ಅವುಗಳನ್ನು ನಿಲ್ಲಿಸುವುದಿಲ್ಲ ಮತ್ತು ಪರಿಷ್ಕರಣೆಯನ್ನೂ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ನಿಜ, ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ, ಪರಿಷ್ಕರಣೆಯನ್ನೂ ಮಾಡುವುದಿಲ್ಲ’ ಎಂದು ಪುನರುಚ್ಚರಿಸಿದರು. ಅವರ ಹೇಳಿಕೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: 1. ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಗ್ಯಾರಂಟಿ ಯೋಜನೆಗಳು ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆಯಾಗುತ್ತಿವೆ ಎಂಬ ಟೀಕೆಗಳು ಕೇಳಿಬರುತ್ತಿದ್ದರೂ, ಯಾವುದೇ ಕಾರಣಕ್ಕೂ ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜನರ ಹಿತದೃಷ್ಟಿಯಿಂದ ಇವು ಮುಂದುವರಿಯಲಿವೆ ಎಂಬುದು ಅವರ ಭರವಸೆ. 2. ಪರಿಷ್ಕರಣೆಯೂ ಇಲ್ಲ (No Revision) ಕೆಲವು ದಿನಗಳಿಂದ “ಅರ್ಹರಲ್ಲದವರನ್ನು ಕೈಬಿಡಲಾಗುವುದು” ಅಥವಾ “ಯೋಜನೆಯ ಮಾನದಂಡಗಳನ್ನು ಬದಲಾಯಿಸಲಾಗುವುದು” ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ, ಸದ್ಯಕ್ಕೆ ಯೋಜನೆಗಳ ಸ್ವರೂಪದಲ್ಲಿ ಯಾವುದೇ ಪರಿಷ್ಕರಣೆ ಅಥವಾ ಬದಲಾವಣೆ…

Read More

ಹಾವೇರಿ : 8500 ಲಂಚ ಸ್ವೀಕರಿಸುತ್ತಿದ್ದ ವಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹಾವೇರಿ ತಾಲೂಕಿನ ನೆಗಳೂರಿನಲ್ಲಿ ವಿಐ ಫಕ್ಕೀರೆಶ್ ಬಾರ್ಕಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನೆಗಳೂರಿನ ಕಚೇರಿಯಲ್ಲಿ ಬಸಾಪುರದ ರೈತ ಕರಿಯಲ್ಲಪ್ಪ ಕೆಸರಳ್ಳಿಯಿಂದ ಈತ 8500 ಲಂಚ ಸ್ವೀಕರಿಸಿದ್ದಾನೆ. ಖಾತೆ ಬದಲಾವಣೆ ಮಾಡಿಕೊಡಲು 63,000 ಲಂಚಕ್ಕೆ ಮೊದಲು ಬೇಡಿಕೆ ಇಟ್ಟಿದ್ದ. ಮೊದಲು 30,000 ಲಂಚ ಪಡೆದಿದ್ದ. ಫಕ್ಕೀರೇಶ ಬಾರ್ಕಿ, ಇಂದು 8,500 ಲಂಚ ಪಡೆಯುವಾಗ ಸಿಗಿ ಬಿದ್ದಿದ್ದಾನೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತ್ರತ್ವದಲ್ಲಿ ಈ ಒಂದು ದಾಳಿ ನಡೆದಿದೆ.

Read More

ಕೇರಳ : ಬಹು ವಿವಾದಿತ ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಈ ಸಿನಿಮಾದ ಟೀಸರ್ ವಿವಾದ ಸ್ವರೂಪ ಪಡೆದುಕೊಂಡಿತ್ತು. ಒತ್ತಾಯಪೂರ್ವಕವಾಗಿ ಗೋಮಾಂಸ ಸೇವನೆ ಮಾಡಿಸುತ್ತಿರುವ ದೃಶ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಹಿನ್ನೆಲೆ ಕೇರಳ ಸ್ಟೋರಿ 2 ಸಿನಿಮಾವು ಕೇರಳ ರಾಜ್ಯದ ವಾಸ್ತವಾಂಶವನ್ನು ತಪ್ಪಾಗಿ ಪ್ರತಿನಿಧಿಸುತ್ತಿದೆ ಮತ್ತು ಇದು ಕೇರಳದ ಕೋಮು ಸಾಮರಸ್ಯವನ್ನು ಭಂಗಗೊಳಿಸಬಹುದು ಎಂದು ಅರ್ಜಿದಾರರು ವಾದಿಸಿದ್ದರು. ಇದೀಗ ವಿಚಾರಣೆಯಲ್ಲಿ ಈ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಫೆಬ್ರವರಿ 27ರಂದು ದಿ ಕೇರಳ ಸ್ಟೋರಿ 2 ಚಿತ್ರವನ್ನು ರಿಲೀಸ್ ಮಾಡುವುದಕ್ಕೆ ಸಿನಿಮಾ ತಂಡ ಮುಂದಾಗಿತ್ತು. ಆದರೆ ಇದೀಗ ಸಿನಿಮಾ ತಂಡಕ್ಕೆ ಭಾರೀ ಮುಖಭಂಗವಾಗಿದೆ. ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ…

Read More

ಯಾದಗಿರಿ : ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದು, ಇದೀಗ ವಿಡಿಯೋದಲ್ಲಿ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ವಿಡಿಯೋ ಹೇಳಿಕೆಯನ್ನು ಮಲ್ಲಿಕಾರ್ಜುನ ಮುತ್ಯ ಬಿಡುಗಡೆ ಮಾಡಿದ್ದಾರೆ. ಭಕ್ತರು ಯಾರು ಆತಂಕ ಪಡಬೇಡಿ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ಎಲ್ಲಿಗೂ ಹೋಗಿಲ್ಲ ಇಲ್ಲೇ ಇದ್ದೇನೆ. ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವಿದೆ ಹೀಗಾಗಿ ಆಮಂತ್ರಣ ಪತ್ರಿಕೆ ನೀಡಲು ಬಂದಿದ್ದೇನೆ. ಮಠಕ್ಕೆ ಪೊಲೀಸರು ಬಂದು ಹೋಗಿದ್ದು ಗೊತ್ತಾಗಿದೆ. ಪೊಲೀಸರು ಯಾವಾಗ ಕರೆದರೂ ಕೂಡ ಹೋಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅಜ್ಞಾತ ಸ್ಥಳದಿಂದಲೇ ವಿಡಿಯೋ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ ಘಟನೆ: ಈತ ತಾನು ದೈವಪ್ರೇರಿತ ಅಥವಾ ಆಧ್ಯಾತ್ಮಿಕ ಶಕ್ತಿ ಹೊಂದಿರುವವನು ಎಂದು ಬಿಂಬಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಈ ನಂಬಿಕೆಯನ್ನೇ ಬಳಸಿಕೊಂಡು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಈತನ ಮೇಲಿದೆ. ಪೊಲೀಸ್ ದೂರು: ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕಾನೂನು ಕ್ರಮಗಳು ಪೋಕ್ಸೋ ಕಾಯ್ದೆ (POCSO…

Read More

ಸಾಮಾನ್ಯವಾಗಿ ಸ್ಯಾಂಡಲ್ ವುಡ್ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಹೊಸ ಸಿನಿಮಾ ಶುಕ್ರವಾರದಂದು ಬಿಡುಗಡೆ ಆಗುತ್ತೆ. ಶುಕ್ರವಾರದಂದೆ ಥಿಯೇಟರ್ ನಲ್ಲಿ ಯಾಕೆ ಸಿನಿಮಾ ರಿಲೀಸ್ ಮಾಡುತ್ತಾರೆ? ಅದರ ಹಿಂದಿನ ಕಾರಣವೇನು? ಇದರ ಹಿಂದೆ ಹಲವು ಇತಿಹಾಸ ಹಾಗೂ ಕೆಲವು ಪ್ರಮುಖ ಕಾರಣಗಳು ಕೂಡ ಇವೆ. ಸಿನಿಮಾಗಳು ಶುಕ್ರವಾರವೇ ಬಿಡುಗಡೆಯಾಗುವುದರ ಹಿಂದೆ ಕುತೂಹಲಕಾರಿ ಇತಿಹಾಸ ಮತ್ತು ವ್ಯವಹಾರಿಕ ತಂತ್ರಗಳಿವೆ. ಈ ಸಂಪ್ರದಾಯವು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ, ಇದು ಜಾಗತಿಕವಾಗಿ ನಡೆದುಬಂದ ಪದ್ಧತಿ. ಇದರ ಸಮಗ್ರ ಮಾಹಿತಿ ಇಲ್ಲಿದೆ: 1. ಇತಿಹಾಸದ ಹಿನ್ನೆಲೆ (History) ಈ ಸಂಪ್ರದಾಯವು ಮೊದಲು ಪ್ರಾರಂಭವಾಗಿದ್ದು ಹಾಲಿವುಡ್‌ನಲ್ಲಿ. 1939ರಲ್ಲಿ ತೆರೆಕಂಡ ವಿಶ್ವಪ್ರಸಿದ್ಧ ಸಿನಿಮಾ ‘ಗಾನ್ ವಿತ್ ದಿ ವಿಂಡ್’ (Gone with the Wind) ಡಿಸೆಂಬರ್ 15, 1939ರ ಶುಕ್ರವಾರದಂದು ಬಿಡುಗಡೆಯಾಯಿತು. ಅಂದಿನಿಂದ ಹಾಲಿವುಡ್‌ನಲ್ಲಿ ಶುಕ್ರವಾರದ ಬಿಡುಗಡೆ ಒಂದು ಸಂಪ್ರದಾಯವಾಗಿ ಬೆಳೆದುಬಂತು. ಭಾರತದಲ್ಲಿ ಮೊದಮೊದಲು ಸಿನಿಮಾಗಳು ವಾರದ ಯಾವುದೇ ದಿನ ಬಿಡುಗಡೆಯಾಗುತ್ತಿದ್ದವು (ಉದಾಹರಣೆಗೆ: 1947ರಲ್ಲಿ ಬಂದ ‘ನೀಲ್ ಕಮಲ್’ ಸೋಮವಾರ ಬಿಡುಗಡೆಯಾಗಿತ್ತು).…

Read More

ಬೆಂಗಳೂರು : ಬೆಂಗಳೂರಿನಲ್ಲಿ 1 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದು, ಕೇರಳ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕೇರಳದ ಮಾದಕ ವಸ್ತು ನಿಗ್ರಹದಿಂದ ಕಾರ್ಯಾಚರಣೆ ನಡೆದಿದ್ದು, ಅಸ್ಸಾಂ ಮೂಲದ ಡ್ರಗ್ ಪೆಡ್ಲರ್ ಧೀರೇಶ ಕುಟುಂ (27) ಎನ್ನುವ ಆರೋಪಿಯನ್ನು ಬಂಧಿಸಲಾಗಿದೆ. ಅಂತರಾಜ್ಯ ಗಾಂಜಾ ಪೆಡ್ಲರನ್ನು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮಲ್ಲಸಂದ್ರದಲ್ಲಿ ಆರೋಪಿಯಿಂದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಸೆರೆಲ್ಯಾಕ್ ಪ್ಯಾಕೆಟ್ ಗಳಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ಕೇರಳ ಪೊಲೀಸರು ದಾಳಿ ಮಾಡಿದ್ದಾರೆ. ರಮೇಶ್ ರೆಡ್ಡಿ ಬಡಾವಣೆಯಲ್ಲಿರುವ ನಿವಾಸದಲ್ಲಿ ಗಾಂಜಾ ಜಪ್ತಿ ಮಾಡಿದ್ದಾರೆ. ಈ ವೇಳೆ 15 ಕ್ಕೂ ಹೆಚ್ಚು ಖಾಲಿಯಾದ ಸರಳ ಪಾಕೆಟ್ಗಳು ಪತ್ತೆಯಾಗಿವೆ. ಆನ್ಲೈನ್ ಫುಡ್ ಡೆಲಿವರಿ ಬಾಯ್ ರೀತಿ ಹಿತ ಡ್ರಗ್ಸ್ ಸರಬರಾಜು ಮಾಡುತ್ತಿದ್ದ. ಕೇರಳದ ಮಲಪುರಂನಲ್ಲಿ ಧೀರೇಶ್ ಸಹಚರರು ಸಿಕ್ಕಿ ಬಿದ್ದಿದ್ದರು. ವಾರದ ಹಿಂದೆ ಒಂದು ಕೆಜಿ ಎಂಡಿಎಂಎ ಸಹಿತ 8 ಆರೋಪಿಗಳನ್ನು ಸೆರೆ…

Read More

ಬೆಂಗಳೂರು : ಇತ್ತೀಚಿಗೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ರಮವಾಗಿ ನುಸುಳಿದ್ದ ಬಾಂಗ್ಲಾದೇಶ, ಪಾಕಿಸ್ತಾನ್ ಪ್ರಜೆಗಳನ್ನು ಪತ್ತೆ ಹಚ್ಚಲಾಗಿತ್ತು. ಇದೀಗ ಬೆಂಗಳೂರಲ್ಲಿ ಪೊಲೀಸರು ಮತ್ತೊಮ್ಮೆ ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಹೌದು ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ನಗರದ ಪೂರ್ವ ವಿಭಾಗದ ರಾಮ ಮೂರ್ತಿನಗರ ಪೊಲೀಸ್​ ಠಾಣೆ ವ್ಯಾಪ್ತಿಯ ಕೆ. ಚನ್ನಸಂದ್ರ ಹಾಗೂ ಕಲ್ಕೆರೆ ಪ್ರದೇಶದ ವಿವಿಧೆಡೆ‌ ಪ್ಲೈವುಡ್ ಅಂಗಡಿ, ಗೋದಾಮು ಹಾಗೂ ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ವಿವಿಧ ಸ್ತರಗಳಲ್ಲಿ ಪೊಲೀಸರು‌ ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ 1 ಸಾವಿರಕ್ಕೂ ಅಧಿಕ ಸಂಶಯಾಸ್ಪದ ವ್ಯಕ್ತಿಗಳ ಆಧಾರ್​ ಕಾರ್ಡ್​, ವಿದ್ಯಾಭ್ಯಾಸ ಮಾಡಿರುವ ಮೂಲ ಅಂಕಪಟ್ಟಿ, ಬ್ಯಾಂಕ್​​ ಖಾತೆ, ಪಾಸ್‌ಪೋರ್ಟ್​ ವಿವಿಧ ದಾಖಲೆಗಳು ಹಾಗೂ ಪೋನ್​ ಕರೆ ಮತ್ತು ಸಕ್ರಿಯರಾಗಿರುವ ವಾಟ್ಸ್ಆಪ್ ಗ್ರೂಪ್‌ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಓರ್ವ ನೈಜೀರಿಯಾ ಪ್ರಜೆ ಸೇರಿದಂತೆ 11 ಜನ ಸಂಶಯಾಸ್ಪದ ಅಕ್ರಮ ನಿವಾಸಿಗಳು‌ ಪತ್ತೆಯಾಗಿದ್ದು, ಆ ವ್ಯಕ್ತಿಗಳ ವಿರುದ್ಧ ಕಾನೂನು…

Read More