Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು 175 ಅಂಗಡಿಗಳು ಇರುವ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ಫ್ಯಾನ್ಸಿ ಸ್ಟೋರ್, ಪ್ಲಾಸ್ಟಿಕ್ ಅಂಗಡಿ ಇವೆಲ್ಲ ಕೂಡ ಹೊತ್ತಿ ಉರಿಯುತ್ತಿವೆ. ವಿನೋದ್ ಎಂಬವರಿಗೆ ಈ ಒಂದು ಕಟ್ಟಡ ಸೇರಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಅಕ್ಕಪಕ್ಕದ ಕಟ್ಟಡಗಳಿಗೂ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಇಡೀ ಏರಿಯಾದಲ್ಲಿ ದಟ್ಟ ಹೊಗೆ ಆವರಿಸಿದೆ. 5 ಅಗ್ನಿಶಾಮಕ ವಾಹನ ದಳ ಸಿಬ್ಬಂದಿಗಳು ಸಹ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಸಹ ಭೇಟಿ ನೀಡಿದ್ದಾರೆ. ಇದೇ ವೇಳೆ ಬೆಂಕಿ ನಂದಿಸುವ ಸಂದರ್ಭದಲ್ಲಿ ನಾಲ್ವರು ಅಗ್ನಿಶಾಮಕ ಸಿಬ್ಬಂದಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ತಗುಲಿದೆ. ಸದ್ಯ ಒಟ್ಟು ಆರು ಅಗ್ನಿಶಾಮಕ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಟ್ಟ ಹೊಗೆಯಿಂದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಉಸಿರಾಟದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬಿವಿಎಂಪಿ ನಿವೃತ್ತ ನೌಕರ ಪರಮೇಶ್ವರಯ್ಯ (63) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಕೋರಮಂಗಲದ ಮನೆಯಲ್ಲಿ ಈ ಒಂದು ಆತ್ಮಹತ್ಯೆ ಘಟನೆ ನಡೆದಿದೆ. ಬಿಬಿಎಂಪಿ ನಿವೃತ್ತ ನೌಕರ ಪರಮೇಶ್ವರಯ್ಯ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದು ಹಾಗೂ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಕೋರಮಂಗಲ ಠಾಣೆಯಲ್ಲಿ ಈ ಕುರಿತು ಯುಡಿಆರ್ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪದ್ಯದಲ್ಲಿ ಕಿರಿಕ್ ನಡೆದಿದೆ. ಕರ್ನಾಟಕದ ಆಟಗಾರನಿಗೆ ಕಾಶ್ಮೀರ ತಂಡದ ನಾಯಕ ಪಾರಸ್ ಡೋಗ್ರಾ ಡಿಚ್ಚಿ ಹೊಡೆದಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿ ನಗರದ ರಾಜನಗರದಲ್ಲಿ ಕೆಎಸ್ಸಿ ಸ್ಟೇಡಿಯಂ ನಲ್ಲಿ ಇಂದು ರಣಜಿ ಫೈನಲ್ ಪಂದ್ಯ ನಡೆಯುತ್ತಿದೆ. ಕರ್ನಾಟಕದ ಅನೀಶ್ ಗೆ ಕಾಶ್ಮೀರ ತಂಡದ ನಾಯಕ ಪಾರಸ್ ಡೋಗ್ರಾ ಡಿಚ್ಚಿ ಹೊಡೆದಿರುವ ಘಟನೆ ನಡೆದಿದೆ ಹುಬ್ಬಳ್ಳಿಯಲ್ಲಿ ಇಂದು ರಣಜಿ ಫೈನಲ್ ಪದ್ಯ ನಡೆಯುತ್ತಿತ್ತು. ಕರ್ನಾಟಕದ ಅನಿಶ್ ಎಂಬ ಆಟಗಾರರಿಗೆ ಕಾಶ್ಮೀರದ ಪರಸ್ ಡೋಗ್ರಾ ಡಿಚ್ಚಿ ಹೊಡೆಯುವಂತಹ ದೃಶ್ಯ ಇದೀಗ ವೈರಲ್ ಆಗಿದೆ. ಈ ವೇಳೆ ಮಧ್ಯಪ್ರವೇಶದ ಅಂಪೈರ್ ಮತ್ತು ರೆಫ್ರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸುವಂತಹ ಪ್ರಯತ್ನ ಮಾಡಿದ್ದಾರೆ. ಮಧ್ಯಾಹ್ನದ ವಿರಾಮದ ನಂತರ ಕರ್ನಾಟಕದ ಪ್ರಸಿದ್ಧ ಕೃಷ್ಣ ಅವರು ಬಾಡಿ ಮಾಡುತ್ತಿದ್ದರು ಈ ವೇಳೆ ಕಾಶ್ಮೀರದ ನಿರಂತರವಾಗಿ ಎರಡು ಮೂರು ಬೌಂಡರಿ ಹೊಡೆಯುತ್ತಾರೆ ಇವಡೆ ಎರಡು ತಂಡದ ಆಟಗಾರರ ನಡುವೆ ಹೀಟ್ ಮೂಮೆಂಟ್ ನಡೆದಿದ್ದು, ಪರಸ್ ಡವ್ಗ್ರಾ ಟಿಕೆಟ್ ತೆಗೆಯಲು…

Read More

ಯಾದಗಿರಿ : ಯಾದಗಿರಿಯ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಗಾಂಧಿ ಹಾಗೂ ಮೊದಲ ಪ್ರಧಾನಿ ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ವಿವಾದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಮಹಿಳೆಯರು ಮರಣ ಹೊಂದಿದ್ದರು, ಗೃಹಲಕ್ಷ್ಮಿ ಯೋಜನೆಯ ಹಣ ಪಡೆದಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ, ಇದೀಗ ಮರಣ ಹೊಂದಿದ ಫಲಾನುಭವಿಗಳ ಮನೆಯ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಪಡೆದುಕೊಳ್ಳಲು ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಧು ಹೆಚ್.ಸಿ ತಿಳಿಸಿದ್ದಾರೆ. ಮರಣ ಹೊಂದಿದ ಫಲಾನುಭವಿಗಳ ಹೆಸರಿಗೆ ಹಣ ವರ್ಗಾವಣೆಯಾಗುವುದನ್ನು ತಡೆದು, ಮನೆಯ ಮುಂದಿನ ಯಜಮಾನಿಯರು ಈ ಬಗ್ಗೆ ಮಾಹಿತಿ ನೀಡಿ ಹೊಸ ಅರ್ಜಿ ಸಲ್ಲಿಸಬೇಕು. ಮರಣ ಹೊಂದಿದ ವ್ಯಕ್ತಿಯ ಜೀವಂತ ಪ್ರಮಾಣ ಪತ್ರದ ಬಗ್ಗೆ ಸದ್ಯಕ್ಕೆ ಆತಂಕ ಬೇಡ; ಸರ್ಕಾರದ ಮುಂದಿನ ಆದೇಶದಂತೆ ಕ್ರಮ ಕೈಗೊಳ್ಳಲಾಗುವುದು.2,044 ಫಲಾನುಭವಿಗಳನ್ನು ಐಟಿ/ಜಿಎಸ್‌ಟಿ ವ್ಯಾಪ್ತಿಯಡಿ ಪರಿಗಣಿಸಲಾಗಿದ್ದು, 42 ಫಲಾನುಭವಿಗಳ ಎನ್‌ಪಿಸಿಐ (NPCI) ಬಾಕಿ ಇದೆ. ಹೌದು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯು ಮರಣ ಹೊಂದಿದ ಸಂದರ್ಭದಲ್ಲಿ, ಅವರ ಕುಟುಂಬದ ಸದಸ್ಯರು ಯೋಜನೆಯ ಲಾಭವನ್ನು ಮುಂದುವರಿಸಲು ಅವಕಾಶವಿದೆ.ಈ ಬಗ್ಗೆ ಸರ್ಕಾರವು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು…

Read More

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಿಡಿದಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Read More

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ಇದೀಗ ಮಹಾ ಎಡವಟ್ಟು ಆಗಿದೆ. ಹೌದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿಯೇ ಅಂಗನವಾಡಿ ಮಕ್ಕಳಿಗೆ ಅವಧಿ ಮೀರಿದ ಆಹಾರ ವಿತರಣೆ ಮಾಡಲಾಗುತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ಅಂಗನವಾಡಿಯಲ್ಲಿ ಮಕ್ಕಳಿಗೆ ಅವಧಿ ಮೀರಿದ ಮಿಲ್ಲೆಟ್ ಲಡ್ಡು ಪೂರೈಕೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಧಿಕಾರಿಗಳ ನಿರ್ಲಕ್ಷದಿಂದ ಈ ಒಂದು ಎಡವಟ್ಟು ಆಗಿದೆ. ಮಕ್ಕಳ ಆರೋಗ್ಯದ ಜೊತೆಗೆ ಅಧಿಕಾರಿಗಳು ಚೆಲ್ಲಾಟ ಆಡುತ್ತಿದ್ದಾರೆ ಎಕ್ಸ್ಪೈರ್ ಆದಂತಹ ಫುಡ್ ಸಪ್ಲೈ ಮಾಡಿದ್ದಾರೆ. ಪೌಷ್ಟಿಕಾಂಶ ಉದ್ದೇಶಕ್ಕೆ ಬುಲೆಟ್ ಲಡ್ಡು ಪೂರೈಕೆ ಮಾಡಲಾಗುತ್ತಿತ್ತು. ಆದರೆ ಪೌಷ್ಟಿಕಾಂಶವನ್ನು ಒದಗಿರಿಸಬೇಕಾದಂತಹ ಆಹಾರವೇ ಮಕ್ಕಳ ಆರೋಗ್ಯಕ್ಕೆ ಕುತ್ತು ತಂದಿದೆ. ಈ ಒಂದು ಅಕ್ರಮವನ್ನು ಹೋರಾಟಗಾರ್ತಿ ಕಸ್ತೂರಿಬಾವಿ ಬಯಲಿಗೆಳಿದಿದ್ದಾರೆ. ಅಧಿಕಾರಿಗಳ ನಿರ್ಲಕ್ಷದಿಂದ ಈ ಒಂದು ಅಕ್ರಮ ಬಯಲಾಗಿದೆ. ಕಳೆದ 2025 ನವೆಂಬರ್ ನಲ್ಲಿ ಎಕ್ಸ್ಪೈರ್ ಆದಂತಹ ಮಿಲ್ಲೆಟ್ ಲಡ್ಡುವನ್ನು ಇದೀಗ ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ. ಮಕ್ಕಳ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಮರ್ಡರ್ ಆಗಿದ್ದು 29 ವರ್ಷದ ಯುವಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಂದ ಬಳಿಕ ದುಷ್ಕರ್ಮಿಗಳು ಶವವನ್ನು ರಸ್ತೆಯ ಬದಿಯಲ್ಲಿ ಬಿಸಾಕಿ ಹೋಗಿದ್ದಾರೆ. ಹುಬ್ಬಳ್ಳಿಯ ರಾಷ್ಟ್ರೀಯ ದಾರಿಯಲ್ಲಿ ಕಿರಾತಕರು ಶವ ಎಸೆದಿದ್ದಾರೆ. ಗದಗ ರಸ್ತೆಯ ಐಟಿಸಿ ಗೌಡನ್ ಸಮೀಪವಿರುವ ಹೆದ್ದಾರಿಯಲ್ಲಿ ಯುವಕನ ಶವ ಬಿಸಾಕಿದ್ದಾರೆ. ಮಂಜುನಾಥ ಗಾಣಿಗೇರ (29) ಹತ್ಯೆಯಾದ ಯುವಕ ಎಂದು ತಿಳಿದುಬಂದಿದೆ. ಮೃತ ಮಂಜುನಾಥ್ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಬೇರೆ ಕಡೆ ಕೊಲೆ ಮಾಡಿ ನಂತರ ಗುರುತು ಸಿಗದಂತೆ ರಸ್ತೆಯ ಮೇಲೆ ಬಿಸಾಕಿ ಹೋಗಿದ್ದಾರೆ ರಸ್ತೆಯಲ್ಲಿ ಹೋಗುತ್ತಿದ್ದವರಿಂದ ಪೊಲೀಸರಿಗೆ ಮಾಹಿತಿ ಹೋಗುತ್ತದೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸುತ್ತಿದ್ದಾರೆ. ಹತ್ಯೆಗೈದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಇದೀಗ ಬಲೆ ಬೀಸಿದ್ದಾರೆ.

Read More

ಚಿತ್ರದುರ್ಗ : ಮೊಬೈಲ್ಗೆ ಟೆಂಪರ್ ಗ್ಲಾಸ್ ಗಾಗಿ ಜಗಳ ನಡೆದಿದ್ದು ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕು ಇರಿಲಾಗಿದೆ. ಅನ್ಯಕೋಮಿನ ಯುವಕನಿಂದ ಅಂಗಡಿ ಮಾಲೀಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಚಿತ್ರದುರ್ಗದ ಜಿಲಾಸ್ಪತ್ರೆ ಬಳಿ ಸಂತೆ ಮೈದಾನ ಬಳಿಯ ಮೊಬೈಲ್ ಅಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ.ಅನ್ಯಕೋಮಿನ ಯುವಕನೊಬ್ಬ ಮೊಬೈಲ್ಗೆ ಟೆಂಪರ್ ಕ್ಲಾಸ್ ವಿಚಾರವಾಗಿ ಗಲಾಟೆ ಆಗಿದೆ. ಈ ವೇಳೆ ಅಂಗಡಿ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿದಿರುವ ಘಟನೆ ನಡೆದಿದೆ. ಘಟನೆ ಖಂಡಿಸಿ ಚಿತ್ರದುರ್ಗದ ಜಿಲ್ಲಾಸ್ಪತ್ರೆ ಬಳಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮೊಬೈಲ್ ಸ್ಕ್ರೀನ್ ಗಾರ್ಡ್ ಬದಲಿಸಲು ಅನ್ಯಕೊಮಿನ ಯುವಕ ಮೊಬೈಲ್ ಶಾಪ್ ಗೆ ಬಂದಿದ್ದಾನೆ. ಬೇರೆ ಬ್ರಾಂಡ್ ಸ್ಕ್ರೀನ್ ಗಾರ್ಡಿಗೆ ಅಂಗಡಿ ಮಾಲೀಕ ವಿಕ್ರಂ ಹೆಚ್ಚುವರಿ ಹಣ ಕೇಳಿದ್ದಾರೆ. 100 ರೂಪಾಯಿ ಹೆಚ್ಚುವರಿ ಹಣ ಕೇಳಿದ್ದ ವಿಕ್ರಂ ಚೌದರಿ, ಇಲ್ಲವಾದರೆ ಹಣ ವಾಪಸ್ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ. ಹೆಚ್ಚುವರಿ ಹಣ ಕೇಳಿದಕ್ಕೆ ಜಗಳ ಮಾಡಿ…

Read More

ಬೆಂಗಳೂರು : ಬೆಂಗಳೂರಿನ ಬನಶಂಕರಿಯಲ್ಲಿರುವ ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗಳು ವ್ಯಾಪಾರಿಗೆ ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ್ದ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಬಂಧಿತ ಆರೋಪಿಗಳು. ಬನಶಂಕರಿಯಲ್ಲಿರುವ ಜಿಎಸ್‌ಟಿ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಇಬ್ಬರೂ ಆರೋಪಿಗಳು ಹೊರಗುತ್ತಿಗೆ ಆಧಾರದಲ್ಲಿ ಹೌಸ್‌ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಸಿಎಲ್‌ಟಿಎಸ್ ಹಾಗೂ ಇಂಟಲಿಜೆನ್ಸ್ ಅಧಿಕಾರಿಗಳಂತೆ ನಕಲಿ ಐಡಿ ಕಾರ್ಡ್‌ಗಳನ್ನ ಮಾಡಿಸಿಕೊಂಡಿದ್ದ ಆರೋಪಿಗಳು, ಜನವರಿ 10ರಂದು ಪೀಣ್ಯದಲ್ಲಿ ಓರ್ವ ಗುಟ್ಕಾ ವ್ಯಾಪಾರಿಯನ್ನ ಬೆದರಿಸಿ 5 ಲಕ್ಷ ವಸೂಲಿ ಮಾಡಿದ್ದರು. ಆರೋಪಿತರ ಕಾರ್ಯವೈಖರಿ ಬಗ್ಗೆ ಅನುಮಾನಗೊಂಡ ಕಚೇರಿ‌ ಅಧಿಕಾರಿಗಳು ಫೆಬ್ರವರಿ 17ರಂದು ಅವರು ವಾಸವಿದ್ದ ಕಚೇರಿಯ ಕೊಠಡಿಯಲ್ಲಿ ತಪಾಸಣೆ ನಡೆಸಿದ್ದರು. ಪರಿಶೀಲನೆ ಸಂದರ್ಭದಲ್ಲಿ ನಕಲಿ ಐಡಿ ಕಾರ್ಡ್‌ಗಳು, ಸರ್ಚ್ ವಾರೆಂಟ್ ಪ್ರತಿಗಳು ಪತ್ತೆಯಾಗಿವೆ. ಕೂಡಲೇ ಜಿಎಸ್‌ಟಿ ಅಧಿಕಾರಿಗಳು ಬನಶಂಕರಿ…

Read More