Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಲ್ಲಿ, ಅಡುಗೆ ಮಾಡುವ ವಿಚಾರವಾಗಿ ಸ್ನೇಹಿತರ ಮಧ್ಯೆ ಗಲಾಟೆ ಆಗಿ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಅಡುಗೆ ಮಾಡುವ ವಿಚಾರಕ್ಕೆ ಗಲಾಟೆಯಾಗಿ ಪತಿಯಿಂದ ಪತ್ನಿಯ ಭೀಕರ ಕೊಲೆ ಆಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತುರೆಮಣೆಯಿಂದ ಹೊಡೆದು ತಿಮ್ಮಮ್ಮ (65) ಎನ್ನುವ ಪತ್ನಿಯನ್ನು ಪತಿ ರಂಗಯ್ಯ ಕೊಲೆ ಮಾಡಿದ್ದಾನೆ. ಮತ್ತಿಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.ಕೊಲೆ ಮಾಡಿದ ನಂತರ ಆರೋಪಿ ರಂಗಯ್ಯ ತಿರುಪತಿಗೆ ಪರಾರಿ ಆಗಲು ಯತ್ನಿಸಿದ್ದಾನೆ.ಈ ವೇಳೆ ಪೊಲೀಸರು ರಾಮನಗರದಲ್ಲಿ ಆರೋಪಿ ರಂಗಯ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳಿಕೆ ನೀಡಿದ್ದರು. ಬಳಿಕ ಆ ಒಂದು ಹೇಳಿಕೆ ನಾನು ತಮಾಷೆಯಾಗಿ ಹೇಳಿದ್ದೇನೆ ಎಂದು ಹೇಳಿಕೆಯಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಚಿವ ಪರಮೇಶ್ವರ್ ಬಳಿಕ ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2013ರಲ್ಲಿ ಇದ್ದಂತೆ ಸಿಎಂ ಈ ಬಾರಿ ಇಲ್ಲ ಅನ್ನೋ ಹೇಳಿಕೆ ವಿಚಾರವಾಗಿ, ಏನು ಮಾಡುವುದು ಪವರ್ ಸೆಂಟರ್ಗಳು ಜಾಸ್ತಿ ಆಗಿವೆ. 2013 ರಿಂದ 18 ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು ಮೂರು ಲೆಕ್ಕ ಎಷ್ಟಾದರೂ ಹಾಕಿಕೊಳ್ಳಿ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಪವರ್ ಸೆಂಟರ್ ಜಾಸ್ತಿಯಾಗಿದ್ದರಿಂದ ಜಂಜಾಟ ಹೆಚ್ಚಾಗಿದೆ. ಸಿಎಂ ರಾಜ್ಯಾದ್ಯಂತ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಡುತ್ತಿದ್ದಾರೆ…
BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ ಎಂಬ ವಿಚಾರವಾಗಿ ಅಂತಹ ಭಾರಿ ಬದಲಾವಣೆ ಏನು ಆಗಲ್ಲ ಆದರೆ ಸ್ವಲ್ಪ ಬದಲಾವಣೆ ಆದರೆ ಆಗಬಹುದು ಭಾರಿ ಬದಲಾವಣೆಯ ರೀತಿ ಆಗುತ್ತದೆ ಅಂತ ಏನು ಅನಿಸುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇನ್ನು ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಅಸಮಾಧಾನ ಹೊರ ಹಾಕಿರುವ ವಿಚಾರವಾಗಿ, ರಾಜು ಕಾಗೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೇವಲ ಅನುದಾನ ವರ್ಗಾವಣೆಗೆ ಅಸಮಾಧಾನ ಅಂತ ಏನಿಲ್ಲ. ನೀರಾವರಿ ಯೋಜನೆಗಳ ಬಗ್ಗೆಯೂ ಬಹಳಷ್ಟು ಬಾರಿ ಹೇಳಿದ್ದಾರೆ. ನಾವು ನೀರಾವರಿ ಅನುದಾನ ವಿಚಾರವಾಗಿ ಮಾಹಿತಿ ನೀಡಿದ್ದೇವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿ ಸಿಎಂ ಸಿದ್ದರಾಮಯ್ಯ ಮಾತನಾಡಬಹುದು ಎಂದರು. ನೀರಾವರಿ ಇಲಾಖೆಯಲ್ಲಿ 26,000 ಕೋಟಿ ಅನುದಾನವಿದೆ. ಎಲ್ಲವನ್ನು ಸರಿಪಡಿಸಲು ಹೈಕಮಾಂಡ್ ನಾಯಕರು ಹೇಳಿದರು. ವೈಯಕ್ತಿಕವಾಗಿ ಶಸ್ತ್ರ ತ್ಯಾಗ ಏನಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು ಸುಮ್ಮನೆ ಹಿಡಿಯಬಾರದು. ಅಸಮಾಧಾನ…
ಬೆಂಗಳೂರು : ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಂಬರುವ ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಹಕಾರ ಸಚಿವರಾದಂತಹ ಕೆ.ಎನ್ ರಾಜಣ್ಣ ಅವರು ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ಅಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು.
ಮೈಸೂರು : ಮೈಸೂರಲ್ಲಿ ಭಾರಿ ದುರಂತ ಒಂದು ತಪ್ಪಿದ್ದು, ಮಾದೇಗೌಡನಹುಂಡಿ ಬಳಿ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾದೇಗೌಡನಹುಂಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಜಮೀನಿಗೆ ಉರುಳಿದೆ. ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. KSRTC ಬಸ್ ನಲ್ಲಿದ್ದ 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದ ಕುರಿತಂತೆ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ನಿನ್ನೆ ತಾನೆ ಪಾಟ್ನಾದಲ್ಲಿ ಢಾಬಾ ಮಾಲಿಕಾ ಸೇರಿದಂತೆ ಮೂವರನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೆ ಇದೀಗ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನ ಹವಳಗಾ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಅಪರಿಚಿತ ವ್ಯಕ್ತಿಯೊಬ್ಬ, ಸಾರ್ವಜನಿಕರ ಎದುರೇ ವ್ಯಕ್ತಿ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡಿದ್ದಾನೆ. ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್ಗಳಲ್ಲಿ ಸರಿಯಾಗಿದ್ದು, ಸದ್ಯ ಘಟನಾ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದಾರೆ. ಕತ್ತು ಕೊಯ್ದುಕೊಂಡ ಬಳಿಕ ವ್ಯಕ್ತಿಗೆ ತಕ್ಷಣ ಸ್ಥಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅಪರಿಚಿತ ವ್ಯಕ್ತಿಯ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ಇನ್ನು ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಮುಂಗಾರು ಅಬ್ಬರ ಜೋರಾಗಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಬೆಳಗಾವಿ, ಉತ್ತರ ಕನ್ನಡ, ದಕ್ಷಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಡ್ಯ, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹೆಚ್ಚು ಮಳೆ ಸುರಿಯುತ್ತಿರುವ ಕಾರಣ ಕುಶಾಲನಗರ ಹೊರತುಪಡಿಸಿ, ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ…
ಬೆಂಗಳೂರು : ಕುಟುಂಬದವರಿಗೆ ಮೋಸ ಮಾಡಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಸಚಿವ ಡಿ.ಸುಧಾಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಇದೀಗ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೌದು ಪರಿಶಿಷ್ಟ ಕುಟುಂಬದ ಜಮೀನು ಕಬಳಿಸಿ, ಅವರ ಮೇಲೆ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿ ಆದೇಶಿಸಿದೆ. ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಸೆವನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್ನ ನಿರ್ದೇಶಕರೂ ಆಗಿರುವ ಡಿ.ಸುಧಾಕರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿದ್ದು, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ನಡೆಯುತ್ತಿದ್ದ…
ಬೆಂಗಳೂರು : ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ ಬಳಕೆ ಮತ್ತು ಮಾರಾಟ ಮಾಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದೀಗ ಕುಂಕುಮ, ಪ್ಯಾರಾಸಿಟಮಲ್ ಬಳಕೆಗೆ ಬಳಕೆಗೆ ಯೋಗ್ಯವಲ್ಲ ಎಂಬ ವರದಿ ಕುರಿತು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯ ನೀಡಿದ್ದು, ಯಾವ ಬ್ಯಾಚ್ ಫೇಲಾಗಿದೆ ಅದನ್ನು ವಾಪಸ್ ಪಡೆಯಲಾಗುತ್ತದೆ.ಆಹಾರ ಸುರಕ್ಷತಾ ಔಷಧ ನಿಯಂತ್ರಣದಿಂದ ಹಿಂಪಡೆಯಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.…
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸ್ಕೂಲ್ ಬಸ್ ಭೀಕರವಾಗಿ ಅಪಘಾತಕ್ಕೆ ಈಡಾಗಿದೆ. ಓವರ್ ಸ್ಪೀಡ್ ನಲ್ಲಿ ಚಾಲಕ ಸ್ಕೂಲ್ ಬಸ್ ಚಲಾಯಿಸಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಹೋಟೆಲ್ ಗೆ ನುಗ್ಗಿರುವ ಘಟನೆ ಮಾದನಾಯಕನಹಳ್ಳಿ ಲಕ್ಷ್ಮಿಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಹೌದು ಇಂದು ಮಕ್ಕಳನ್ನು ಕರೆದುಕೊಂಡು ಚಾಲಕ ಶಾಲಾ ಬಸ್ ಓವರ್ ಸ್ಪೀಡ್ ಆಗಿ ಚಲಾಯಿಸುತ್ತಿದ್ದ ಈ ವೇಳೆ ನಿಯಂತ್ರಣ ಕಳೆದುಕೊಂಡು ಎದುರುಗಡೆ ಇದ್ದ ಐಷರ್ ವಾಹನಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿ ಬಸ್ ಹೋಟೆಲ್ ಗೆ ನುಗ್ಗಿದೆ. ಇವಳೆ ಬಸ್ ನಲ್ಲಿ ಇದ್ದ ಹಲೋ ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಬಸ್ನಲ್ಲಿದ್ದ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.