Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಯುವತಿಯನ್ನು ಅಪಹರಿಸುವ ಯತ್ನದಲ್ಲಿ ಕಿಡಿಗೇಡಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಾಗೇಶ್ವರಿ (55) ಚಿಕಿತ್ಸೆ ಫಲಿಸದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಮಾರ್ಚ್ 25ರಂದು ಆಡುಗೋಡಿಯ ಮನೆಯಲ್ಲಿ ಮಾಗೇಶ್ವರಿ ಅವರಿಗೆ ಚಾಕು ಇರಿಯಲಾಗಿತ್ತು. ಮಾಗೇಶ್ವರಿಯ ಸಹೋದರ ಸಂಬಂಧಿ ಕಿರಣ್ ಮತ್ತು ಅವರ ಕಡೆಯವರು ಚಾಕುವಿನಿಂದ ಹಲ್ಲೆಗೈದು ಪರಾರಿಯಾಗಿದ್ದರು. ಮಾಗೇಶ್ವರಿಯ ಮೊಮ್ಮಗಳನ್ನು ಅಪಹರಿಸುವ ಯತ್ನದಲ್ಲಿ ಈ ಘಟನೆ ನಡೆದಿತ್ತು. ಮಾಗೇಶ್ವರಿಯ ಅಣ್ಣನ ಮಗನಾಗಿದ್ದ ಕಿರಣ್ಗೆ ಮದುವೆಯಾಗಿದ್ದರೂ ಸಹ ಆಕೆಯ ಮೊಮ್ಮಗಳ ಜೊತೆಗೆ ವಾಸಿಸುತ್ತಿದ್ದ. ಕೆಲ ದಿನಗಳ ಹಿಂದೆ ಕಿರಣ್ನನ್ನು ತೊರೆದು ಬಂದು ಅಜ್ಜಿ ಮಾಗೇಶ್ವರಿಯೊಂದಿಗೆ ಆಡುಗೋಡಿಯಲ್ಲಿ ವಾಸವಿದ್ದಳು. ಆದರೆ ಮಾರ್ಚ್ 25ರಂದು ಯುವತಿಯನ್ನು ಹುಡುಕಿಕೊಂಡು ಬಂದಿದ್ದ ಕಿರಣ್ ಮತ್ತವನ ಕಡೆಯವರು, ಬಲವಂತವಾಗಿ ಆಕೆಯನ್ನು ಅಪಹರಿಸಿಕೊಂಡು ಹೋಗಲು ಯತ್ನಿಸಿದ್ದರು. ಆ ಸಂದರ್ಭದಲ್ಲಿ ತಡೆಯಲು ಬಂದ ಮಾಗೇಶ್ವರಿಗೆ ಚಾಕುವಿನಿಂದ ಹಲ್ಲೆ ಮಾಡಿ, ಇರಿದು ಪರಾರಿಯಾಗಿದ್ದರು. ಈ ಸಂಬಂಧ ಹತ್ಯೆ ಯತ್ನ ಪ್ರಕರಣ ದಾಖಲಾಗಿದೆ. ಈಗಾಗಲೇ ಕಿರಣ್, ಮಣಿವಣ್ಣನ್, ಮಣಿರಾಜ್ ಹಾಗೂ ಅಭಿಷೇಕ್…
ಮುಂಬೈ : ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಶಾ ಭೋಸ್ಲೆ ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರಿಳೆದಿದ್ದಾರೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಇದೀಗ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರು ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು, ಅಕ್ಕನಂತೆಯೇ ಅದ್ಭುತ ಗಾಯಕಿ ಆಗಿದ್ದಾರೆ. ಎಂಟು ದಶಕಗಳಿಂದಲೂ ಗಾಯಕ ಕ್ಷೇತ್ರದಲ್ಲಿರುವ ಆಶಾ ಭೋಸ್ಲೆ ಈ ವರೆಗೆ ಸಾವಿರಾರು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಹಲವಾರು ಲೈವ್ ಶೋಗಳನ್ನು ನೀಡಿದ್ದಾರೆ. ಹಲವು ಸಿಂಗಿಂಗ್ ರಿಯಾಲಿಟಿ ಶೋಗಳಿಗೆ ಜಡ್ಜ್ ಸಹ ಆಗಿದ್ದಾರೆ. ಆಶಾ ಭೋಸ್ಲೆ ಅವರು ತಮ್ಮ 90ನೇ ವಯಸ್ಸಿನಲ್ಲೂ ಸಹ ಲೈವ್ ಸಿಂಗಿಂಗ್ ಶೋಗಳನ್ನು ನೀಡುತ್ತಿದ್ದರು.…
ಕಲಬುರ್ಗಿ : ಸಂವಿಧಾನ ಬದಲಾಯಿಸಲು ಹೊರಟವರ ಕೈಗಳನ್ನು ಕತ್ತರಿಸಿ ಅಂತ ಹೇಳಬೇಕಾಗುತ್ತದೆ. ನಮ್ಮವರು ಚುನಾವಣೆಗೆ ನಿಲ್ಲಬೇಕು ಇಲ್ಲ ಅಂದ್ರೆ ತಲೆ ಮೇಲೆ ಮಲ ಹೊರಬೇಕಾಗುತ್ತೆ ಎಂದು ಕಲಬುರ್ಗಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ಕೆಲವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಅವರದ್ದು ವೈದಿಕ ಸನಾತನ ಧರ್ಮ, ನಮ್ಮದು ನೈತಿಕ ಸನಾತನ ಧರ್ಮ. ಯಾವ ರಾಜಕೀಯ ಪಕ್ಷ ಅಂತ ನಾನು ಹೇಳಲು ಹೋಗಲ್ಲ. ಯಾವ ರಾಷ್ಟ್ರೀಯ ಪಕ್ಷ ಅಂತ ಕೂಡ ನಾನು ಹೇಳಲು ಹೋಗಲ್ಲ. ಇಂತಹ ಸಮಯದಲ್ಲಿ ನಾವು ಮೆರವಣಿಗೆ ಮಾಡಿಕೊಂಡು ಇರಬಾರದು ಹಾಕಿಕೊಂಡು ಇರದೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ. 2029 ಚುನಾವಣೆಯಲ್ಲಿ ಬಹುಮತ ಪಡೆದು ಸಂವಿಧಾನ ಬದಲಾವಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ನಮ್ಮವರು ಅಧ್ಯಯನ ಮಾಡಬೇಕು, ಚುನಾವಣೆಯಲ್ಲಿ ನಿಲ್ಲಬೇಕು ಇಲ್ಲ ಅಂದರೆ ತಲೆಯ ಮೇಲೆ ಮಲ ಹೊರಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಪರೋಕ್ಷವಾಗಿ ಆರ್ ಎಸ್…
ಕಲಬುರ್ಗಿ : ಸಂವಿಧಾನ ಬದಲಾಯಿಸಲು ಹೊರಟವರ ಕೈಗಳನ್ನು ಕತ್ತರಿಸಿ ಅಂತ ಹೇಳಬೇಕಾಗುತ್ತದೆ ಎಂದು ಕಲಬುರ್ಗಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ಕೆಲವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಅವರದ್ದು ವೈದಿಕ ಸನಾತನ ಧರ್ಮ, ನಮ್ಮದು ನೈತಿಕ ಸನಾತನ ಧರ್ಮ. ಯಾವ ರಾಜಕೀಯ ಪಕ್ಷ ಅಂತ ನಾನು ಹೇಳಲು ಹೋಗಲ್ಲ. ಯಾವ ರಾಷ್ಟ್ರೀಯ ಪಕ್ಷ ಅಂತ ಕೂಡ ನಾನು ಹೇಳಲು ಹೋಗಲ್ಲ. ಇಂತಹ ಸಮಯದಲ್ಲಿ ನಾವು ಮೆರವಣಿಗೆ ಮಾಡಿಕೊಂಡು ಇರಬಾರದು ಹಾಕಿಕೊಂಡು ಇರದೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ. 2029 ಚುನಾವಣೆಯಲ್ಲಿ ಬಹುಮತ ಪಡೆದು ಸಂವಿಧಾನ ಬದಲಾವಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ನಮ್ಮವರು ಅಧ್ಯಯನ ಮಾಡಬೇಕು, ಚುನಾವಣೆಯಲ್ಲಿ ನಿಲ್ಲಬೇಕು ಇಲ್ಲ ಅಂದರೆ ತಲೆಯ ಮೇಲೆ ಮಲ ಹೋರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪರೋಕ್ಷವಾಗಿ ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ನಟ ಅಶೋಕ್ ವಾಗ್ದಾಳಿ ನಡೆಸಿದರು.
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಭಾರಿ ತಾಪಮಾನ ಏರಿಕೆ ಆಗಿದ್ದು, ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಕಲ್ಬುರ್ಗಿ ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಬಿಸಿಲಿನಿಂದ ಜನ ಬಸವಳಿದಿದ್ದಾರೆ. ಇದೀಗ ಹವಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕಲ್ಬುರ್ಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಆಗುವ ಸಾಧ್ಯತೆ ಇದೆ ಎಂದಿದೆ. ಕಳೆದ 24 ಗಂಟೆಯಲ್ಲಿ ಚಿಕ್ಕಮಂಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗಿದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್, ಬಿಜಾಪುರದಲ್ಲಿ 40 , ರಾಯಚೂರಲ್ಲಿ 39, ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಕರ್ನಾಟಕದ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸುಮಾರು 35 ರಿಂದ 37 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೂಡಾ ಗರಿಷ್ಠ ಉಷ್ಣಾಂಶ 35 ರಿಂದ 37 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ…
ಧಾರವಾಡ : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಉಪನಗರ ಠಾಣೆ ಪೊಲೀಸರು, ಒಟ್ಟು 8 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಐವರು ಕೊಲೆ ಆರೋಪಿಗಳು ಮತ್ತು ಕೊಲೆಗೆ ಸಂಚು ರೂಪಿಸಿದ್ದ ಮೂವರನ್ನು ಧಾರವಾಡ ಉಪನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಮತ್ತೊರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಮನೆಗೆ ನುಗ್ಗಿ ವೈರೋಜ್ ಪಠಣನನ್ನ ಆರೋಪಿಗಳು ಭೀಕರವಾಗಿ ಕೊಲೆ ಮಾಡಿದ್ದರು 9 ಜನರಿದ್ದ ಗ್ಯಾಂಗ್ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಫೈರೋಜ್ ಕೊಲೆ ನಡೆದಿತ್ತು. ಕೊಲೆ ಬಳಿಕ ಒಂಬತ್ತು ಆರೋಪಿಗಳು ಧಾರವಾಡ ಬೆಳಗಾವಿ ಗಡಿಯಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಮೂರು ತಂಡಗಳ ರಚನೆ ಮಾಡಲಾಗಿತ್ತು. ಉಪ್ಪಿನ ಬೆಟಗೇರಿಯ ಸಂಬಂಧಿಕರ ಮನೆಯಲ್ಲಿದ್ದ ಆರೋpiಗಳನ್ನು ಬಂಧಿಸಲಾಗಿದೆ. A1ಮಹಮ್ಮದ್ ಶಾ ಸಂಬಂಧಿಕರ ಮನೆಯಲ್ಲಿ ಆರೋಪಿಗಳು ಇದ್ದರು ತಡರಾತ್ರಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗ : ಇತ್ತೀಚೆಗೆ ಹುಲಿಕಲ್ ಘಾಟ್ ನಲ್ಲಿ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಹಾಗಾಗಿ ಹುಲಿಕಲ್ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧ ಅನ್ವಯವಾಗಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಹೌದು ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್ನ ಹೇರ್ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುವ ವಾಹನಗಳು, ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ತೆರಳಬೇಕು. ಇನ್ನು ತೀರ್ಥಹಳ್ಳಿಯಿಂದ ಯಡೂರು, ಹುಲಿಕಲ್ ಮಾರ್ಗವಾಗಿ ತೆರಳುವವರು ತೀರ್ಥಹಳ್ಳಿ-ಯಡೂರು, ಮಾಸ್ತಿಕಟ್ಟೆ- ಕಾನುಗೋಡು-ನಗರ-ಕೊಲ್ಲೂರು…
ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ಪತ್ನಿಯ ಕಣ್ಣೆದುರೇ ನರಳಿ ಪತಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಮಿಳುನಾಡಿಗೆ ಸಾವಿಗೆ ಹೋಗಿ ಹಿಂದಿರುಗಿದ್ದ ವ್ಯಕ್ತಿ ಇದೀಗ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.ಪತ್ನಿ ಜಯಶ್ರೀ ಕಣ್ಣು ಎದುರೇ ನರಳಿ ಪತಿ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರು-ಮೈಸೂರು ಸ್ಯಾಟಲೈಟ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಸ್ಯಾಟಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಈ ಒಂದು ದುರಂತ ಸಂಭವಿಸಿದ್ದು, ಮೃತರನ್ನ ಶ್ಯಾಮ್ ದೊರೆ (45) ಎಂದು ತಿಳಿದುಬಂದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಲಾಟ್ ಮೇಲ್ವಿಚಾರಕ ಕಾರು ರಿವರ್ಸ್ ತೆಗೆಯುವಾಗ ಘಟನೆ ಸಂಭವಿಸಿದೆ. ಅಲ್ಲೇ ನಿಲ್ಲಿಸಿದ ಬ್ಲಡ್ ಬ್ಯಾಂಕ್ ಬಸ್ ಬಳಿ ಶಾಮ್ ದೊರೆ ನಿಂತಿದ್ದರು. ಕಾರು ಚಾಲಕನ ಬೇಜವಾಬ್ದಾರಿತನಕ್ಕೆ ಶ್ಯಾಮ್ ದೊರೆ ಬಲಿಯಾಗಿದ್ದಾರೆ. ತಮಿಳುನಾಡಿಗೆ ಸಾವಿಗೆ ಹೋಗಿ ಹಿಂದುರುಗಿದಾಗ ಈ ಒಂದು ಘಟನೆ ಸಂಭವಿಸಿದೆ. ಬ್ಲಡ್ ಬ್ಯಾಂಕ್ ಬಸ್ ಹಾಗು ಕಾರು ನಡುವೆ ಸಿಲುಕಿ ಶ್ಯಾಮ್ ದೊರೆ ಸಾವನಪ್ಪಿದ್ದಾರೆ. ಸುಂಕದಕಟ್ಟೆಯ…
ಬೆಂಗಳೂರು : ಬೆಂಗಳೂರಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಕಾಮುಕನೊಬ್ಬ ಶಿಕ್ಷಕಿ ಒಬ್ಬರನ್ನು ಪರಿಚಯ ಮಾಡಿಕೊಂಡಿದ್ದಾನೆ. ಈ ವೇಳೆ ನನಗೆ ಕ್ಯಾನ್ಸರ್ ಇದೆ ಹಾಗಾಗಿ ಸಾಯೋ ಮುನ್ನ ನಿನ್ನ ಬೆತ್ತಲೆ ವಿಡಿಯೋ ಮಾಡಿ ಕಳುಹಿಸು ಎಂದಿದ್ದಾನೆ. ಇದೀಗ ಕಾಮುಕ ಇದೇ ವಿಡಿಯೋ ಇಟ್ಟುಕೊಂಡು ಶಿಕ್ಷೆಗೆ ಬ್ಲ್ಯಾಕ್ಮೇಲ್ ಮಾಡಿದ್ದು ಸದ್ಯ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಕಾಮುಕನೊಬ್ಬ ಇನ್ಟಾಗ್ರಾಂನಲ್ಲಿ ಶಿಕ್ಷಕಿಯೊಂದಿಗೆ ಸ್ನೇಹ ಬೆಳಸಿ ಆಕೆಗೆ ಟಾರ್ಚ್ರ್ ನೀಡಿದ ಪ್ರಕರಣ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಶಿಕ್ಷಕಿಗೆ ಮೆಸೇಜ್ ಮಾಡಿದ್ದ ಯುವಕ, ನಾನು ನಿನ್ನ ಕ್ಲಾಸ್ಮೇಟ್ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ನನಗೆ ಕ್ಯಾನ್ಸರ್ ಇದೆ, ನಿನ್ನ ಜೊತೆ ದೈಹಿಕ ಸಂಬಂಧ ಬೆಳೆಸಬೇಕು. ಇದು ನನ್ನ ಕೊನೆ ಆಸೆ ಎಂದಿದ್ದ. ಕಾಮುಕನ ಆಸೆಗೆ ಶಿಕ್ಷಕಿ ಒಪ್ಪಿರಲಿಲ್ಲ. ಈ ವೇಳೆ ಯುವಕ ನಾನು ಕೆಲವೇ ದಿನ ಬದುಕಿರುತ್ತೇನೆ. ಬೆತ್ತಲೆ ವಿಡಿಯೋ ಆದ್ರೂ ಕಳಿಸು ಎಂದಿದ್ದ. ಇದಕ್ಕೆ ಒಪ್ಪಿದ್ದ ಶಿಕ್ಷಕಿ ಬೆತ್ತಲೆಯ ವಿಡಿಯೋ ಕಳಿಸಿದ್ದಳು. ಬಳಿಕ ಹಣ ಕೊಡು, ನೇರವಾಗಿ ಸಿಗು,…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಜೊತೆ ಸೇರಿ, ಕೂಲ್ಡ್ರಿಂಕ್ಸ್ ನಲ್ಲಿ ನಿದ್ರೆ ಮಾತ್ರೆ ಹಾಕಿ, ಸಿಲಿಂಡರ್ ನಿಂದ ತಲೆ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ಈ ಕೊಲೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್ನಿಂದ ತಲೆ ಮತ್ತು ಎದೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದರು ಎಂಬುದು ಗೊತ್ತಾಗಿದೆ. ಮಾರ್ಚ್ 6ರಂದು ಸಂಜೆ 4ಕ್ಕೆ ಮನೆಯಿಂದ ಅವಿನಾಶ್ ಕ್ಲಿನಿಕ್ಗೆ ಹೋಗಿದ್ದರು. ಈ ವೇಳೆ ಥೆರಪಿ ಮಾಡಿಸಿಕೊಳ್ಳಲೆಂದು ಆರೋಪಿ ಕೈಲಾಶ್ ಕೂಡ ಕ್ಲಿನಿಕ್ಗೆ ತೆರಳಿದ್ದ. ಹೋಗುವಾಗ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ…













