Author: kannadanewsnow05

ಬಾಗಲಕೋಟೆ : ನಿನ್ನೆ ತಾನೆ ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಆ ಘಟನೆ ಮಾಸುವ ಮುನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 40 ವರ್ಷದ ವಿಚ್ಛೇದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಅತ್ಯಾಚಾರ ಎಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಕಾಮುಕರು ಮಹಿಳೆಯನ್ನು ಬಿಟ್ಟು ಹೋಗಿದ್ದಾರೆ, ಜನವರಿ 5 ರಂದು ನಡೆದಿರುವ ಘಟನೆ ಇದು ಈಗ ತಡವಾಗಿ ಬೆಳಕಿಗೆ ಬಂದಿದೆ. ಆಂಬುಲೆನ್ಸ್ ಗೆ ಕರೆ ಮಾಡಿ ತಕ್ಷಣ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಂತ್ರಸ್ತೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಸೋದರಿಯ ಮೇಲಿನ ದೌರ್ಜನ್ಯ ನೆನೆದು ಸಹೋದರ ರವಿ…

Read More

ಬೆಂಗಳೂರು : ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದೆ.ಕೂಲಿ ಕಾಲೋನಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಕಳೆದ ರಾತ್ರಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ರಾತ್ರಿ 2 ಗಂಟೆ ಸುಮಾರಿಗೆ ಘಟನೆಯಲ್ಲಿ 11 ಮನೆಗಳಿಗೆ ಹಾನಿಗಳಾಗಿದ್ದು 11ಕ್ಕೂ ಹೆಚ್ಚು ಬೈಕ್ ಗಳು ಹಾಗೂ ಗೂಡ್ಸ್ ಆಟೋಗಳು ಬೆಂಕಿಗೆ ಸುಟ್ಟು ಸಂಪೂರ್ಣವಾಗಿ ಕರಕಲಾಗಿವೆ. ಕಿಡಿಗೇಡಿಗಳು ಈ ಒಂದು ಕೃತಿ ಹರಿದಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು : ನನ್ನ ಬಂಡೆ ಬಂಡೆ ಅಂತ ಕರೀತಾರೆ.ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಎಂದು ಬೆಂಗಳೂರಿನ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಷಾರಾಗಿರಿ ನೀವು ವ್ಯವಹಾರ ಮಾಡುವಾಗ ಯಶಸ್ಸು ಮುಖ್ಯ. ನನ್ನನ್ನು ಬಂಡೆ ಅಂತ ಕರೆಯುತ್ತಾರೆ ಆದರೆ ಬಂಡೆ ಮುಂದೆ ಆಕೃತಿ ಆಗುತ್ತದೆ. ನಾನು ಚಿಕ್ಕವನು ಆಗಿರಬಹುದು ಆದರೆ ಅನುಭವ ಇದೆ ನನ್ನ ಜಾತಿ ಅವರೇ ನನ್ನನ್ನು ಟೀಕೆ ಮಾಡುತ್ತಿದ್ದಾರೆ ಹಿಂದೆ ಮುಂದೆಯಿಂದ ಚಾಕು ಹಾಕುತ್ತಿದ್ದಾರೆ ಎಚ್ ಡಿ ಕುಮಾರಸ್ವಾಮಿ ಜೊತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಆದರೆ ಅವರೇ ನನಗೆ ಚಾಕು ಹಾಕಿದ್ದಾರೆ ಅಂತ ಹೇಳಿದ್ದಾರೆ ಸಕ್ಸಸ್ ಸ್ಟೋರಿಯಲ್ಲಿ ಶ್ರಮ ಮತ್ತು ಟೀಕೆ ಇದ್ದೇ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬಂಡೆ ಪ್ರಕೃತಿ ಕಡೆದರೆ…

Read More

ಬೆಂಗಳೂರು : ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಎಂದು ಬೆಂಗಳೂರಿನ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಷಾರಾಗಿರಿ ನೀವು ವ್ಯವಹಾರ ಮಾಡುವಾಗ ಯಶಸ್ಸು ಮುಖ್ಯ. ನನ್ನನ್ನು ಬಂಡೆ ಅಂತ ಕರೆಯುತ್ತಾರೆ ಆದರೆ ಬಂಡೆ ಮುಂದೆ ಆಕೃತಿ ಆಗುತ್ತದೆ. ನಾನು ಚಿಕ್ಕವನು ಆಗಿರಬಹುದು ಆದರೆ ಅನುಭವ ಇದೆ ನನ್ನ ಜಾತಿ ಅವರೇ ನನ್ನನ್ನು ಟೀಕೆ ಮಾಡುತ್ತಿದ್ದಾರೆ ಹಿಂದೆ ಮುಂದೆಯಿಂದ ಚಾಕು ಹಾಕುತ್ತಿದ್ದಾರೆ ಎಚ್ ಡಿ ಕುಮಾರಸ್ವಾಮಿ ಜೊತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಆದರೆ ಅವರೇ ನನಗೆ ಚಾಕು ಹಾಕಿದ್ದಾರೆ ಅಂತ ಹೇಳಿದ್ದಾರೆ ಸಕ್ಸಸ್ ಸ್ಟೋರಿಯಲ್ಲಿ ಶ್ರಮ ಮತ್ತು ಟೀಕೆ ಇದ್ದೇ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಆಧುನಿಕ ಜಗತ್ತಿನಲ್ಲಿ ಅದರಲ್ಲೂ ಯುವತಿಯರು ಶಾರ್ಟ್ ಬಟ್ಟೆ ಧರಿಸಿ ಫ್ಯಾಷನ್ ಮಾಡುವುದು ಸಹಜ. ಆದರೆ ಬೆಂಗಳೂರಿನಲ್ಲಿ ಯುವತಿ ಅಮಾನವೀಯವಾಗಿ ವರ್ತನೆ ತೋರಿದ್ದು, ಬಟ್ಟೆ ವಿಚಾರಕ್ಕೆ ಬುದ್ದಿ ಹೇಳಿದ ಹೋಂ ಗಾರ್ಡ್ ನನ್ನೇ ಯುವತಿ ಥಳಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಮೋಹಿನಿ ಎಂಬ ಯುವತಿ ಮಹಿಳಾ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾಳೆ. ಲಕ್ಷ್ಮೀನರಸಮ್ಮ ಹಲ್ಲೆಗೊಳಗಾದ ಹೋಂ ಗಾರ್ಡ್ ಎಂದು ತಿಳಿದುಬಂದಿದ್ದು ಬೆಂಗಳೂರಿನ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿ ಮೋಹಿನಿ ಶಾರ್ಟ್ ಬಟ್ಟೆಗಳನ್ನು ಧರಿಸಿ ಓಡಾಡುತ್ತಿದ್ದಳು. ಯುವತಿಯನ್ನು ನೋಡಿ ಕೆಲ ಯುವಕರು ಚುಡಾಯಿಸುತ್ತಿದ್ದರು. ರಸ್ತೆಯಲ್ಲಿ ಪುಂಡರು ಪೀಡಿಸುತ್ತಿರುವುದನ್ನು ಕಂಡು ಹೋಂಗಾರ್ಡ್ ಲಕ್ಷ್ಮೀನರಸಮ್ಮ ಯುವಿಗೆ ಕರೆದು ವಿಚಾರಿಸಿದ್ದಾರೆ. ಶಾರ್ಟ್ ಬಟ್ಟೆಗಳನ್ನು ಧರಿಸಿ ಹೀಗೆ ಓಡಾಡಬೇಡ. ಸರಿಯಾಗಿ ಬಟ್ಟೆ ಹಾಕಿಕೊಳ್ಳುವಂತೆ ಬುದ್ಧಿ ಹೇಳಿದ್ದಾರೆ. ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಯುವತಿ ಹೋಂ ಗಾರ್ಡ್ ಗೆ ಮನಬಂದಂತೆ ಹೊಡೆದು ಹಲ್ಲೆ ನಡೆಸಿದ್ದಾಳೆ. ಅಷ್ಟೆ ಅಲ್ಲದೇ ನಡು…

Read More

ಬೆಂಗಳೂರು : ರಾಜ್ಯ ಬಜೆಟ್ ಮಂಡನೆಗೆ ಇದೀಗ ಸರ್ಕಾರ ಚಿಂತನೆ ನಡೆಸಿದ್ದು, ಮಾರ್ಚ್‌ ತಿಂಗಳಿನಲ್ಲಿ ಬಜೆಟ್‌ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದ ನಡುವೆಯೂ ಸಿದ್ದರಾಮಯ್ಯ ದಾಖಲೆ ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನ ಈಗಾಗಲೇ ಮಂಡಿಸಿದ್ದು, ಮಾರ್ಚ್‌ 6ರಂದು ಮಂಡಿಸುವ ಬಜೆಟ್‌ 17ನೇ ಬಜೆಟ್‌ ಆಗಲಿದೆ. ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

Read More

ಧಾರವಾಡ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಆದರೆ ಈ ಸಾವು ಅಂಡಮಾನ್ ನಲ್ಲಿ ನಡೆದಿದೆ. ಹೌದು ಅಂಡಮಾನ್ ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಕೆಸಿಡಿ ಕಾಲೇಜ್‌ನ ಅಸಿಸ್ಟೆಂಟ್ ಪ್ರೊಫೆಸರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಎಸ್.ಅನ್ನಪೂರ್ಣ ಎಂದು ಗುರುತಿಸಲಾಗಿದೆ. ಅವರು ಅರ್ಥಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್‌ನ ಫೋರ್ಟ್‍ಬ್ಲೇರ್‌ಗೆ ಹೋಗಿದ್ದರು. ಕಳೆದ ರಾತ್ರಿ ಅನ್ನಪೂರ್ಣ ಅಸ್ವಸ್ಥರಾಗಿದ್ದರು. ಸ್ಥಳೀಯ ಆಸ್ಪತ್ರೆಗೆ ಅನ್ನಪೂರ್ಣರನ್ನು ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ಅವರ ಶವವನ್ನು ಧಾರವಾಡಕ್ಕೆ ತರಲು ಕುಟುಂಬಸ್ಥರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರ ಶವ ನಗರಕ್ಕೆ ತರುವ ಸಾಧ್ಯತೆ ಇದೆ.

Read More

ಹಾಸನ : ಹಾಸನದಲ್ಲಿ ಭೀಕರವಾದ ಕೊಲೆಯಾಗಿದ್ದು ತಂದೆಯನ್ನೇ ರಾಡ್ ನಿಂದ ಹೊಡೆದು ಮಗ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಪಿತ ಮಗನೊಬ್ಬ ತನ್ನ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸತೀಶ್ (60) ಎಂದು ಗುರುತಿಸಲಾಗಿದೆ. ಪುತ್ರ ರಂಜಿತ್ (28) ತಂದೆಯನ್ನು ಕೊಲೆಗೈದವ. ತಾಯಿ ಮತ್ತು ಮಗ ಕೆ.ಆರ್.ನಗರದಲ್ಲಿ ನೆಲೆಸಿದ್ದರು. ಇದೇ ವಿಷಯಕ್ಕೆ ತಂದೆ-ಮಗನ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಶನಿವಾರ ರಾತ್ರಿ ಗಲಾಟೆ ವಿಕೋಪಕ್ಕೆ ಹೋಗಿದೆ. ಕೋಪಗೊಂಡ ರಂಜಿತ್‌ ಸ್ಟೀಲ್‌ ರಾಡ್‌ನಿಂದ ತಂದೆಯ ತಲೆಗೆ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ತಂದೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ಗದಗ ಜಿಲ್ಲೆಯ ಲಕ್ಕುಂಡಿ ಎಂಬ ಗ್ರಾಮದಲ್ಲಿ ಮನೆ ಕಟ್ಟಡದ ಪಾಯ ತೆಗೆಯುವ ವೇಳೆ ಹೊನ್ನಿನ ನಿಧಿ ಪತ್ತೆಯಾಗಿದೆ. ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ತಾಯಿ, ಮಗನಿಗೆ ಸನ್ಮಾನ ಮಾಡಲಾಗಿದೆ. ಸದ್ಯ ಚಿನ್ನಾಭರಣ ಪುರಾತತ್ವ ಇಲಾಖೆ ಕೈಸೇರಿದ್ದು ಪುರಾತತ್ವ ಇಲಾಖೆಯ ಅಧಿಕ್ಷಕ ರಮೇಶ್ ಮೂಲಿಮನಿಯವರು ಇದು ನಿಧಿಯಲ್ಲ ಎಂದು ಹೇಳಿಕೆ ನೀಡಿದ್ದು ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೌದು ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಲ ಕುಡಿಯಲಿ ಪರಿಶೀಲನೆ ನಡೆಸಿದ ಹೋರಾತತ್ವ ಇಲಾಖೆ ಅಧಿಕ ರಮೇಶ್ ಮೂಲಿಮನಿ ಈ ಒಂದು ಹೇಳಿಕೆ ನೀಡಿದ್ದು ಅಲ್ಲಿ ಸಿಕ್ಕಿರುವುದು ನಿಧಿಯಲ್ಲ ಅಂತ ಪರಿಶೀಲಿಸಿದ ಬಳಿಕ ಹೇಳಿಕೆ ನೀಡಿದ್ದಾರೆ. ಅಧಿಕಾರಿ ಹೇಳಿಕೆ ನೀಡಿದ ಬೆನ್ನೆಲೆ ಮಾಲೀಕರು ಹಾಗೂ ಗ್ರಾಮಸ್ಥರು ನಿಧಿಯಲ್ಲ ಅಂದರೆ ನಮ್ಮ ಚಿನ್ನ ನಮಗೆ ಕೊಡಿ ಪುರಾತತ್ವ ಇಲಾಖೆ ಅಧಿಕಾರಿಯೇ ಹೇಳಿಕೆ ನೀಡಿದಾಗ ನಮ್ಮ ಚಿನ್ನ ನಮಗೆ ವಾಪಸ್ ಕೊಡಿ ಅಂತ ಕುಟುಂಬ ಹಾಗೂ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Read More

ಬೆಳಗಾವಿ : ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳ ವೈದ್ಯರಾಗಿರುವ ಡಾ.ರಾಹುಲ್ ವಿಠಲ ಬಂಟಿ ಅವರ ಮನೆಯಲ್ಲಿ ಗಾಂಜಾ ದೊರೆತಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಠಾಣೆ ಪೊಲೀಸರು ಡಾ.ರಾಹುಲ್ ಬಂಟಿ ಅವರ ಶಿವಬಸವ ನಗರದ ಮನೆ ಮೇಲೆ ದಾಳಿ ಮಾಡಿದಾಗ 134 ಗ್ರಾಂ ಗಾಂಜಾ ಸಿಕ್ಕಿದೆ. ಅಷ್ಟೇ ಅಲ್ಲದೇ, ವೈದ್ಯ ಗಾಂಜಾ ಸೇವಿಸಿರುವ ವಿಚಾರವೂ ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಗಾಂಜಾ ಜಪ್ತಿ ಮಾಡಿಕೊಂಡಿರುವ ಮಾಳಮಾರುತಿ ಪೊಲೀಸರು ಡಾ.ರಾಹುಲ್ ಬಂಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನೋಟಿಸ್ ನೀಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Read More