Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹುಳಿಮಾವು ಜಾತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಕೋದಂಡ ರಾಮಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಜಾತ್ರೆ ನಡೆಯುತ್ತಿತ್ತು. ಪಲ್ಲಕ್ಕಿ ನೋಡುತ್ತಾ ನಿಂತಿದೆ ಯುವಕನಿಗೆ ಟ್ರ್ಯಾಕ್ಟರ್ ಗುದ್ದಿದೆ. ಬನಶಂಕರಿ ನಿವಾಸಿ ಅಕ್ಷತ್ (27) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ ಎಂದು ತಿಳಿದುಬಂದಿದೆ. ಸ್ನೇಹಿತರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಲು ಅಕ್ಷತ್ ಬಂದಿದ್ದ. ಜಾತ್ರೆ ನೋಡಿಕೊಂಡು ಹೋಗೋಣ ಎಂದು ಅಲ್ಲಿಯೇ ಉಳಿದುಕೊಂಡಿದ್ದ. ಆದರೆ ಮದುವೆಗೂ ಮುನ್ನವೇ ಟ್ರ್ಯಾಕ್ಟರ್ ಹರಿದು ಅಕ್ಷತ್ ಸಾವನಪ್ಪಿದ್ದಾನೆ. ದುರ್ಘಟನೆ ನಡೆದರೂ ಕೂಡ ದೇವಾಲಯ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ. ಟ್ರಾಕ್ಟರ್ ಚಾಲಕನ ಅಜಾಗರೂಪತೆಯಿಂದ ಈ ಒಂದು ಘಟನೆ ನಡೆದಿದೆ. ಘಟನೆ ಬಳಿಕ ಟ್ರಾಕ್ಟರ್ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರಿ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ವಿಚಾರಣೆ ನಡೆಸಿ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟಿಸುವುದಾಗಿ ಇದೆ ವೇಳೆ ತಿಳಿಸಿತು. ಇಂದು ವಿಚಾರಣೆ ನಡೆಯಿಸಿದ ಕೋರ್ಟ್ ವಾದ ಪ್ರತಿ ವಾದಗಳನ್ನು ಆಲಿಸಿ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ್ಠಿಸಲಾಗುವುದು ಎಂದು ತಿಳಿಸಿತು. 2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರ‍್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು. ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಎ-15 ಆಗಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿಗಳು ಕೂಡಾ ಇದರಲ್ಲಿ ತಳಕು ಹಾಕಿಕೊಂಡಿದ್ದಾರೆ. ಇನ್ನು ಈ ಕೊಲೆ ನಡೆದಿದ್ದಾದರೂ ಏಕೆ ಎನ್ನುವುದಕ್ಕೆ ಸಿಬಿಐ ಹಲವು ಸಾಕ್ಷಿ ನ್ಯಾಯಾಲಯದ ಮುಂದೆ ಇಟ್ಟಿದೆ. ಪ್ರಕರಣ…

Read More

ದಾವಣಗೆರೆ : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಇಂದು ಮತದಾನ ಆರಂಭವಾಗಿದ್ದು, ಈಗಾಗಲೇ ಮತಗಟ್ಟೆಗೆ ಬಂದು ಮತದಾರರು ಮತ ಚಲಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಿಂದ ನೀತಿ ಉಲ್ಲಂಘನೆ ಆಗಿದ್ದು, ಬಿಜೆಪಿ ಮುಖಂಡರು ಪಲಾವ್ ಹಂಚಿಕೆ ಮಾಡಿದ್ದಾರೆ. ಹೌದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತಗಟ್ಟೆ ಸಂಖ್ಯೆ 195 ರ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಶೇಖರಪ್ಪ ಬಡಾವಣೆಯ ಮತಗಟ್ಟೆ ಸಂಖ್ಯೆ 195 ರಲ್ಲಿ ಶಾಮಿಯಾನ ಹಾಕಿ ಮತದಾರರಿಗೆ ಪಲಾವ್ ಹಂಚಿಕೆ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರು ಮತದಾರರಿಗೆ ಪಲಾವ್ ಹಂಚಿಕೆ ಮಾಡಿದ್ದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

Read More

ಮಂಗಳೂರು : ಮಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದ್ದು, ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಪುತ್ರನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ದೊರಕಿದೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯ ಬೆನ್ನು ಬಿದ್ದ ಪೊಲೀಸರಿಗೆ ಐವರು ಡ್ರಗ್ ಪೆಡ್ಲರ್ ವಿದ್ಯಾರ್ಥಿಗಳು ಇದರಲ್ಲಿ ಇರುವುದು ತಿಳಿದು ಬಂದಿದೆ. ಮಂಗಳೂರು ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಹಾಸ್ಟೆಲ್‌ನಲ್ಲಿ ಇರದೇ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದರು‌. ಈ ಐವರೂ ಗಾಂಜಾವನ್ನು ಬಾಡಿಗೆ ಕೊಠಡಿಯಲ್ಲೇ ಸಣ್ಣ ಪೊಟ್ಟಣವನ್ನಾಗಿ ಮಾಡಿ ಅಲ್ಲಿಂದಲೇ ಮಾರಾಟ ಮಾಡುತ್ತಿದ್ದರು. ಆರು ವಿವಿಧ ಕಾಲೇಜುಗಳ 40 ಮಂದಿ ವಿದ್ಯಾರ್ಥಿಗಳು ಹಾಗೂ ಬೇರೆ 10 ಮಂದಿ ಇವರ ಗಾಂಜಾ ಖರೀದಿದಾರರ ಪಟ್ಟಿಯಲ್ಲಿದ್ದರು. ಗಾಂಜಾ ಖರೀದಿ ಮಾಡುವ ಎಲ್ಲರನ್ನೂ, ಅವರ ಪೋಷಕರನ್ನು…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಈ ಒಂದು ಹಂಪಿ ಎಕ್ಸ್ಪ್ರೆಸ್ ರೈಲು ಸಂಚರಿಸುತ್ತಿತ್ತು. ಬಳ್ಳಾರಿ ಗಡಿಭಾಗದ ಹಗರಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ ಅದೃಷ್ಟವಶತ್ ಘಟನೆಯಲ್ಲಿ ಯಾವುದೇ ರೀತಿ ಪ್ರಾಣಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು, ಏ.9: ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದ ಹಾಗೂ ಚಂದ್ರದ್ರೋಣ ಪರ್ವತದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಈ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಎಂ.ಸ್ಟ್ರೈಪ್ಸ್ ನಂತಹ ಆಪ್ ರೀತಿಯಲ್ಲೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್ ನಲ್ಲಿ ಈ ಆಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ, ಹೀಗಾಗಿ ಆಪ್ ಅಭಿವೃದ್ಧಿಗೆ ಕ್ರಮವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಅರಣ್ಯ ಸಚಿವರು ನಿರ್ದೇಶಿಸಿದ್ದಾರೆ. ಇದರ ಜೊತೆಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ…

Read More

ಚಾಮರಾಜನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದೆ. ಅದರಲ್ಲೂ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಕೂಡ ಒಂದು ಇದೀಗ ಚಾಮರಾಜನಗರದಲ್ಲಿ ಪುರುಷ ಪ್ರಯಾಣಿಕನಿಗೆ ಶಕ್ತಿ ಯೋಜನೆ ಟಿಕೆಟ್ ನೀಡಿ ಕಂಡಕ್ಟರ್ ಯಡವಟ್ಟು ಮಾಡಿದ್ದಾರೆ. ಹೌದು ಚಾಮರಾಜನಗರದಿಂದ ಮಾದಾಪುರ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಂದ 10 ರೂಪಾಯಿ ಹಣ ಪಡೆದ ಕಂಡಕ್ಟರ್, ಅವರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡಿದ್ದಾರೆ. ನಿಗದಿತ ಸ್ಟಾಪ್ ಇಲ್ಲ ಎಂದು ಸಬೂಬು ಹೇಳಿ ಈ ರೀತಿ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.ಕೆಎಸ್ಆರ್ ಟಿಸಿ ಕಂಡಕ್ಟರ್ ಒಬ್ಬರು ಪುರುಷ ಪ್ರಯಾಣಿಕರಿಗೆ ಮಹಿಳೆಯರ ಉಚಿತ ಟಿಕೆಟ್ ನೀಡಿರುವ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ನಡೆದಿರುವ ಈ ವಂಚನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು, ಸಾರ್ವಜನಿಕರು ತೀವ್ರ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಗರಣದ ವಿರುದ್ಧ ಕೂಡಲೇ ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ದಾರುಣ ಘಟನೆ ನಡೆದಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ, ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವದೊಂದಿಗೆ 10 ದಿನಗಳ ಕಾಲ ವಾಸವಾಗಿದ್ದರು. ಪತಿ ಸತ್ತಿರುವುದೇ ತಿಳಿಯದ ಆಕೆ, ಕೊಳೆತ ಶವದ ವಾಸನೆಯಿಂದಾಗಿ ಅಕ್ಕಪಕ್ಕದವರು ಗಮನಿಸಿದಾಗ ಈ ಭೀಕರ ಘಟನೆ ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಆದರೆ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥ ಪತ್ನಿಗೆ ತನ್ನ ಪತಿ ಮೃತಪಟ್ಟಿದ್ದಾರೆಂಬ ಎಂಬ ಕನಿಷ್ಠ ಜ್ಞಾನವೂ ಇಲ್ಲ. ಇಂಥ ಪರಿಸ್ಥಿತಿಯಲ್ಲಿ ಪತಿ ಬದುಕಿದ್ದಾರೆ, ಮಲಗಿದ್ದಾರೆಂದೇ ಭಾವಿಸಿ ಪತ್ನಿ ಪತಿಯ ಶವದ ಪಕ್ಕದಲ್ಲೇ 10 ದಿನ ಕಳೆದಿದ್ದಾರೆ ಎಂಬುದು ಎಂಥವರಿಗೂ ದಿಗಿಲು ಹುಟ್ಟಿಸುತ್ತದೆ.. ಮೃತ ಮೋನಿಸ್ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿದ್ದರೆ, ಮಗಳು ದುಬೈನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಮಗ ನಿತ್ಯ ತಾಯಿಗೆ ಫೋನ್ ಮಾಡಿ ಅಪ್ಪನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದನಂತೆ. ಆದರೆ ಪ್ರತಿ ಸಲ ಮಗ ಫೋನ್ ಮಾಡಿ ಅಪ್ಪನ ಬಗ್ಗೆ…

Read More

ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಇಂದು ಹೊರಬೀಳಲಿದೆ. ಮಧ್ಯಾಹ್ನ 3.00 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. https://karresults.nic.in ಲಿಂಕ್​ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್​ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್​ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವರ್ಷ ಮೊದಲ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕ ಪಟ್ಟಿಯು (Marks Card) ಡಿಜಿಲಾಕರ್ (DigiLocker) ಮೂಲಕ ಇಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯವಿರಲಿದೆ. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅಂಕಪಟ್ಟಿಯನ್ನು ಡಿಜಿಲಾಕರ್​​ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವವರು ವಿಡಿಯೋ ಲಿಂಕ್​ https://tinyurl.com/mw84wmh9 ಮೂಲಕ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯು ಸಂಬಂಧಿತ ಕಾಲೇಜುಗಳಿಗೆ 09-04-2026ರ ಮಧ್ಯಾಹ್ನ 3.00 ಗಂಟೆಗೆ ಸಿಗಲಿದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

Read More

ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ ಆಗಿದೆ. ಜಿಲ್ಲೆಯ ಹಲವಡೆ ಮತ್ತೆ ಭೂಕಂಪನದ ಅನುಭವ ಆಗಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ. ಕಳ್ಳ ಕವಟಗಿ, ಬಾಬಾನಗರ ಬಿಜ್ಜರಗಿ, ಸೋಮದೇವರ ಹಟ್ಟಿ ಹಬನೂರು, ಟಕ್ಕಳಿಕೆ ಸೇರಿದಂತೆ ಹಲವಡೆ ಭೂಕಂಪನ ಅನುಭವ ಆಗಿದೆ. ತಿಕೋಟ ತಾಲೂಕಿನ ಗ್ರಾಮದಲ್ಲಿ ಈ ಒಂದು ಭೂಕಂಪನ ನಡೆದಿದ್ದು ಬೆಳಿಗ್ಗೆ 8:21 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅಲ್ಲದೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ ಮಹಾರ ಮಹಾರಾಷ್ಟ್ರದ ಮರಬಗಿ ತಿಕ್ಕುಂಡಿಯಲ್ಲೂ ಭೂಮಿ ಕಂಪಿಸಿವೆ.

Read More