Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಬಿಜೆಪಿ ಐಟಿ ಸೆಲ್ ಮತ್ತು ಪ್ರತಾಪ್ ಸಿಂಹ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಗೆ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ಇದೀಗ ದೂರು ಸಲ್ಲಿಸಲಾಗಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ ನೇತೃತ್ವದಲ್ಲಿ ಮುಖಂಡರು ದೂರು ನೀಡಿದ್ದಾರೆ. ಕಮಿಷನ್ ಮಸೂಲಿ, ವರ್ಗಾವಣೆ ದಂಧೆ ಸಚಿವ ಯತೀಂದ್ರ ಎಂದು ಪೋಸ್ಟ್ ಹಾಕಿದ್ದರು. ಯತೀಂದ್ರ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿ ಪೋಸ್ಟ್ ಹಂಚಿಕೊಂಡಿದ್ದರು. ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ಇದೀಗ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಕೆಯಾಗಿದೆ.
ನವದೆಹಲಿ : ಆಳಂದದಲ್ಲಿರುವ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ಶಿವರಾತ್ರಿ ಹಬ್ಬದಂದು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ನಿನ್ನೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ, ದರ್ಗಾದ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಸಹ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ ನೀಡಿದೆ.ಸುಪ್ರೀಂಕೋರ್ಟ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ತಡೆ ನೀಡಲು ನಿರಾಕರಿಸಿದೆ ಅರ್ಜಿ ಹಿಂಪಡೆಯಲು ದರ್ಗಾದ ಪರ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಇದೆ ವೇಳೆ ಸೂಚನೆ ನೀಡಿತು. ಸಂವಿಧಾನದ 32ನೇ ವಿಧಿ ಇರುವುದು ಇಂತಹ ಉದ್ದೇಶಕ್ಕೆ ಅಲ್ಲ ಎಂದು ದರ್ಗಾದ ಪರರಿದಾರರಿಗೆ ಸುಪ್ರೀಂ ಕೋರ್ಟ್ ತಿಳಿಸಿತು. ರಾಜ್ಯ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಆಳಂದದಲ್ಲಿರುವ ದರ್ಗಾದಲ್ಲಿ ಪೂಜೆ ಅವಕಾಶ ಕಲ್ಪಿಸಿದೆ. ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಅವಕಾಶ ಕಲ್ಪಿಸಿದೆ. ಶಿವರಾತ್ರಿ ಹಬ್ಬದಂದು ಪೂಜೆಗೆ ಅವಕಾಶ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ…
ಬೆಂಗಳೂರು : ಬೆಂಗಳೂರು ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಬೇಸಿಗೆಯಲ್ಲಿ ಕಾವೇರಿ ನೀರು ಪೋಲು ಮಾಡಿದರೆ ಜಲಮಂಡಳಿಯಿಂದ 5000 ದಂಡ ವಿಧಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರು ಜಲಮಂಡಳಿ ಬೇಸಿಗೆ ಕಾಲದಲ್ಲಿ ಆಗುವ ನೀರಿನ ಸಮಸ್ಯೆಯನ್ನ ಬಗೆಹರಿಸಲು ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಅದರ ಜೊತೆಗೆ ನೀರಿನ ಅಭಾವ ಆಗೋದು ಡೌಟ್. ಒಂದು ವೇಳೆಯಾದ್ರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳೋದಕ್ಕೆ ಜಲಮಂಡಳಿ ಮುಂದಾಗಿದೆ. ಕಾವೇರಿ ನೀರಿನಲ್ಲಿ ಬೈಕ್, ಕಾರು ತೊಳೆಯೋದು, ನೀರನ್ನ ಬೇಕಾಬಿಟ್ಟಿ ಪೋಲು ಮಾಡಿದ್ರೇ ಜಲಮಂಡಳಿ ದಂಡ ಹಾಕಲು ಕೂಡ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ವೀಕ್ಷಕರು ಮತ್ತು ಬ್ಲೂಫೋರ್ಸ್ ಕೂಡ ಕಾರ್ಯಚರಣೆ ಮಾಡಲಿದೆ. ಜನರು ಜೀವ ಜಲವನ್ನ ವ್ಯರ್ಥ ಮಾಡದೇ ಸರಿಯಾಗಿ ಬಳಕೆ ಮಾಡಿದ್ರೇ ಜಲಕ್ಷಾಮವಾಗೋದು ಕಡಿಮೆ ಜೊತೆಗೆ ದಂಡ ಕಟ್ಟುವ ಪ್ರಮೇಯವೂ ಬರಲ್ಲ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದಾಪುರ ಠಾಣೆ ಪೋಲೀಸರು ಇದೀಗ ಬೆಂಗಳೂರಿನ 56ನೇ ACMM ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಕೋರ್ಟಿಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ನಲ್ಲಿ 9 ಆರೋಪಿಗಳ ಹೆಸರು ಉಲ್ಲೇಖ ಮಾಡಿದ್ದಾರೆ. ಪ್ರಕರಣ ಸಂಬಂಧ 129 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಇದೀಗ ನ್ಯಾಯಾಲಯಕ್ಕೆ 1328 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ, ಇಂದು ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ಹಾಗೂ ವಾಗ್ವಾದ ನಡೆಯಿತು. ಹೌದು ಇಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಟೌನ್ ಹಾಲ್ ಬಳಿ ವಿವಿಧ ಕಾರ್ಮಿಕ ಸಂಘಟನೆಗಳು ಧರಣಿ ನಡೆಸಿದರು. ಧರಣಿ ಮಾಡಲು ಎರಡು ಲಾರಿಗಳಲ್ಲಿ ಕಾರ್ಮಿಕರು ಬಂದಿದ್ದರು. ಈ ವೇಳೆ ಪೊಲೀಸರು ಧರಣಿಗೆ ಮುಂದಾದ ಕಾರ್ಮಿಕರನ್ನು ತಡೆದರು. ಇಲ್ಲಿ ಧರಣಿಗೆ ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ಪೊಲೀಸರು ವಿರುದ್ಧ ಪ್ರತಿಭಟನಾ ನಿರತ ಕಾರ್ಮಿಕರು ಆಕ್ರೋಶ ಹೊರ ಹಾಕಿದರು. ಕಾರ್ಮಿಕರು ಮತ್ತು ಪೊಲೀಸರ ನಡುವೆ ವಾಗ್ವಾದ ನೂಕಾಟ ತಳಾಟ ನಡೆಯಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ…
ಇಂದಿನ ವಾತಾವರಣದಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚುತ್ತಿದೆ. ಒಳ್ಳೆಯದಕ್ಕೆ ಖರ್ಚು ಮಾಡಿದರೆ ಖರ್ಚು ಮಾಡುವುದು ದೊಡ್ಡ ಮಾನಸಿಕ ನ್ಯೂನತೆಯಲ್ಲ. ಆದರೆ ನಮ್ಮ ಹಣವನ್ನು ಅನಗತ್ಯ ವಿಷಯಗಳಿಗೆ ಮತ್ತು ವೈದ್ಯಕೀಯ ವೆಚ್ಚಗಳಿಗೆ ವ್ಯರ್ಥ ಮಾಡುವುದನ್ನು ಮುಂದುವರೆಸಿದರೆ, ಅದು ನಮಗೆ ಅನಾನುಕೂಲವನ್ನು ಉಂಟುಮಾಡುತ್ತದೆ. ಈ ಪರಿಸ್ಥಿತಿಯನ್ನು ಎಷ್ಟರ ಮಟ್ಟಿಗೆ ಬದಲಾಯಿಸಬಹುದು ಎಂಬುದು ತಿಳಿದಿಲ್ಲ. ಆದರೆ ಆದಾಯವನ್ನು ಹೆಚ್ಚಿಸುವುದರಿಂದ ವೆಚ್ಚವನ್ನು ಕಡಿಮೆ ಮಾಡಬಹುದು, ಆದರೆ ಖರ್ಚು ಮಾಡದಿರುವುದು ಅಸಾಧ್ಯ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ 1 ರೂಪಾಯಿ ಖರ್ಚನ್ನೂ 1000 ರೂಪಾಯಿಗಳಾಗಿ ಪರಿವರ್ತಿಸಲು ನಾವು ಏನು ಮಾಡಬೇಕೆಂದು ತಿಳಿಯಬಹುದು . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು…
ಬೆಂಗಳೂರು : ಬೆಂಗಳೂರಲ್ಲಿ ರೋಡ್ ರೇಜ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮತ್ತೊಂದು ರೋಡ್ ರೇಜ್ ಪ್ರಕರಣ ವರದಿಯಾಗಿದೆ. ಕ್ಯಾಮೆರಾದಲ್ಲಿ ರೋಡ್ ರೇಜಿನ ಭಯಾನಕ ದೃಶ್ಯ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರು ಚಾಲಕನಿಂದ ಅಟ್ಟಹಾಸ ಮೆರೆದಿದ್ದು, ಕಾರಿನ ಬಾನೆಟ್ ಮೇಲೆ ಎಳೆದೊಯ್ದು ಅಟ್ಟಹಾಸ ಮೆರೆದಿದ್ದಾನೆ. ಸುಮಾರು 1 ಕಿಲೋಮೀಟರ್ ದೂರದವರೆಗೆ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಎಳೆದೋಯ್ದು ದರ್ಪ ತೋರಿದ್ದಾನೆ. ನಂಜುಂಡ ಎಂಬ ಚಾಲಕ ಗೂಡ್ಸ್ ಹಣದಲ್ಲಿ ಹೂವು ಸಾಗಿಸುತ್ತಿದ್ದ. ಟ್ರಿನಿಟಿ ಜಂಕ್ಷನ್ ಬಳಿ ಬಲ ತಿರುವು ಪಡೆಯುವಾಗ ಗಲಾಟೆ ಆಗಿದೆ ನಂಜುಂಡನಿಗೆ ಕಾರು ಚಾಲಕ ಸುರೇಶ್ ಅವಾಚ್ಯವಾಗಿ ನಿಂದಿಸಿದ್ದಾನೆ. ಹಿಂದೆ ಬಂದ ಕಾರು ಚಾಲಕ ಸುರೇಶ್ ನಿಂದ ಅವಾಚ್ಯವಾಗಿ ನಿಂದನೆ ಮಾಡಿದ್ದಾನೆ. ನಂತರ ಸಿವಿ ಜಂಕ್ಷನ್ ಬಳಿ ಮತ್ತೆ ಇಬ್ಬರ ಮಧ್ಯೆ ಗಲಾಟೆ ಆಗಿದೆ ಅವಾಚ್ಯ ಪದ ಬಳಕೆ ಪ್ರಶ್ನಿಸಿದ್ದ ಗೂಡ್ಸ್ ಚಾಲಕ ನಂಜುಂಡ. ಆ ಸಂದರ್ಭದಲ್ಲಿ ವ್ಯಕ್ತಿ ಎದುರುಗಡೆ ಇದ್ದಾನೆ ಎನ್ನುವುದನ್ನು ಕೇರ್ ಮಾಡದೆ ಆತನನ್ನು ಕಾರಿನ ಬಾನೆಟ್ ಮೇಲೆ…
BREAKING : ಸುಪ್ರೀಂ ಕೋರ್ಟ್ ನಲ್ಲೂ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಹೆಚ್ಚಿತು ಬಂಧನದ ಭೀತಿ!
ನವದೆಹಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಅದರ ಬದನಲ್ಲೇ ನಿನ್ನೆ ಭೈರತಿ ಬಸವರಾಜ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರು. ಇದೀಗ ಸುಪ್ರೀಂ ಕೋರ್ಟ್ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ. ವಿಚಾರಣೆಯ ವೇಳೆ ನಿಯಮಿತ ಜಾಮೀನುಗೆ ಅರ್ಜಿ ಹಾಕಿ ಎಂದು ಸುಪ್ರೀಂ ಕೋರ್ಟ್ ಇದೆ ವೇಳೆ ತಿಳಿಸಿತು. ಹಾಗಾಗಿ ಶಾಸಕ ಭೈರತಿ ಬಸವರಾಜ ಮತ್ತಷ್ಟು ಬಂಧನದ ಭೀತಿ ಎದುರಾಗಿದೆ ಈಗಾಗಲೇ CID ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ…
ನವದೆಹಲಿ : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಅಸ್ಸಾಂ ಮತ್ತು ಬೇರೆ ಬೇರೆ ರಾಜ್ಯಗಳ ಚುನಾವಣೆಗಳ ಕುರಿತು ಚರ್ಚೆ ಮಾಡಿದ್ದೇವೆ. ನಮಗೆ ಇರುವಂತಹ ಎಲ್ಲಾ ವರದಿಗಳನ್ನು ಕೂಡ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಚರ್ಚೆ ಮಾಡಿದ್ದೇವೆ ಎಂದರು. ನಾನು ಒಳಗಡೆ ಯಾರ ಜೊತೆ ಏನು ಮಾತಾಡಿದೆ ಎನ್ನುವುದರ ಕುರಿತು ಬೀದಿಯಲ್ಲಿ ನಿಂತು ರಾಜಕಾರಣ ಮಾಡಲು ಆಗಲ್ಲ ನಾವು ನಮ್ಮ ವರಿಷ್ಠರ ಭೇಟಿ ಮಾಡಿದ್ದೇವೆ ಏನು ಮಾತನಾಡಬೇಕು ಮಾತನಾಡಿದ್ದೇವೆ. ಎಲ್ಲ ವಿಚಾರಗಳನ್ನು ತಿಳಿಸಲೇಬೇಕಲ್ವಾ ಹಾಗಾಗಿ ತಿಳಿಸಿದ್ದೇನೆ. ಏನು ಬೇಕು ಅದೆಲ್ಲರ ಕುರಿತು ಮಾತನಾಡಿದ್ದು…
ನವದೆಹಲಿ : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಅಸ್ಸಾಂ ಮತ್ತು ಬೇರೆ ಬೇರೆ ರಾಜ್ಯಗಳ ಚುನಾವಣೆಗಳ ಕುರಿತು ಚರ್ಚೆ ಮಾಡಿದ್ದೇವೆ. ನಮಗೆ ಇರುವಂತಹ ಎಲ್ಲಾ ವರದಿಗಳನ್ನು ಕೂಡ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಚರ್ಚೆ ಮಾಡಿದ್ದೇವೆ ಎಂದರು. ನಾನು ಒಳಗಡೆ ಯಾರ ಜೊತೆ ಏನು ಮಾತಾಡಿದೆ ಎನ್ನುವುದರ ಕುರಿತು ಬೀದಿಯಲ್ಲಿ ನಿಂತು ರಾಜಕಾರಣ ಮಾಡಲು ಆಗಲ್ಲ ನಾವು ನಮ್ಮ ವರಿಷ್ಠರ ಭೇಟಿ ಮಾಡಿದ್ದೇವೆ ಏನು ಮಾತನಾಡಬೇಕು ಮಾತನಾಡಿದ್ದೇವೆ. ಎಲ್ಲ ವಿಚಾರಗಳನ್ನು ತಿಳಿಸಲೇಬೇಕಲ್ವಾ ಹಾಗಾಗಿ ತಿಳಿಸಿದ್ದೇನೆ. ಏನು ಬೇಕು ಅದೆಲ್ಲರ ಕುರಿತು ಮಾತನಾಡಿದ್ದು…














