Subscribe to Updates
Get the latest creative news from FooBar about art, design and business.
Author: kannadanewsnow05
ಕನಕಪುರ : ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಲ್ಲ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ. ಬಸವರಾಜ ರಾಯರೆಡ್ಡಿ, ಡಿವಿ ಸದಾನಂದ ಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಾನೇನು ಅವರ ವಕ್ತಾರ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಹೈಕಮಾಂಡ್ ಹೇಳಿದ್ಮೇಲೆನೆ ಸಂಪುಟ ಪುನಾರಚನೆ : ಸಿಎಂ ಸ್ಪಷ್ಟನೆ ರಾಜ್ಯದಲ್ಲಿ ನಾಯಕತ್ವ ಜಟಾಪಟಿ ನಡೆಯುತ್ತಿದ್ದರೆ ಮತ್ತೊಂದು ಕಡೆ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಅನ್ನೋದು ಮತ್ತೊಂದು ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಸಿಎಂ ಸಿದರಾಮಯ್ಯ ಯಾರು ಏನೇ ಹೇಳಿದರೂ ಕೂಡ ಕೊನೆಗೆ ಹೈಕಮಾಂಡ್ ಹೇಳಿದ್ಮೇಲೇನೆ ಸಂಪುಟ ಪುನಾರಚನೆ ಆಗಲಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು ಶಾಸಕರು ದೆಹಲಿಗೆ ಹೋಗಲು ಸ್ವತಂತ್ರರು ದೆಹಲಿಗೆ ತೆರಳಿರುವ ಶಾಸಕರು ಏನು ಹೇಳುತ್ತಾರೋ ಹೇಳಲಿ ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಕೇಳಲು…
ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 7.1 ಕೋಟಿ ರೂಪಾಯಿ ಹಣ ರಿಕವರಿ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದರು. ನಮ್ಮ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶೇಕಡ 98.6 ರಷ್ಟು ಹಣ ರಿಕವರಿ ಆಗಿದೆ ದರೋಡೆ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನ ಆಗಿದೆ. ಚೆನ್ನೈ ಆಂಧ್ರ ಪೊಲೀಸರು ಸಹ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಾಗಲೇ ತಂಡಕ್ಕೆ 5 ಲಕ್ಷ ಬಹುಮಾನ ಘೋಷಿಸಲಾಗಿದೆ. ಹೆಚ್ಚುವರಿಯಾಗಿ 2 ಲಕ್ಷ ಬಹುಮಾನ ನೀಡುತ್ತಿದ್ದೇವೆ. ಸದ್ಯ 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದರು.
ಬೆಳಗಾವಿ : ಈ ಹಿಂದೆ 2019 ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಕಾರಣ. ಸಿದ್ದರಾಮಯ್ಯ ಇದಕ್ಕೆ ಕಾರಣ ಅಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಗೋಕಾಕ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕೆಡವಲು ನಾನೇ ಮುಂದಾಳತ್ವ ವಹಿಸಿದ್ದೆ. ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡಿದ್ದಕ್ಕೆ ಸರ್ಕಾರ ಕೆಡವಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದಂತೆ ಸಿದ್ದರಾಮಯ್ಯ ಕಾರಣ ಅಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಪೂರ್ಣ ಬಹುಮತದ ಸರ್ಕಾರ ತರಲು ನಾವೆಲ್ಲರೂ ಗಟ್ಟಿಯಾಗಿ ಕೆಲಸ ಮಾಡಬೇಕು.ಹೈಕಮಾಂಡ್ ನಿರ್ಣಯಕ್ಕೆ ನಾವು ಬದ್ಧರಿದ್ದೇವೆ.ನಾನು ಬಿಜೆಪಿ ಶಾಸಕ. ಕಾಂಗ್ರೆಸ್ನ ಹೊಲಸು ರಾಜಕಾರಣದ ಬಗ್ಗೆ ಬಿಜೆಪಿ ಮಾತನಾಡಬಾರದು. ನಾಯಕತ್ವ ಬದಲಾವಣೆ ಸಂಬಂಧ ಕಾಂಗ್ರೆಸ್ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಟಸ್ಥ ಇರಬೇಕು ಎಂದರು.
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಜಟಾಪಟಿ ನಡೆಯುತ್ತಿದ್ದರೆ ಮತ್ತೊಂದು ಕಡೆ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಅನ್ನೋದು ಮತ್ತೊಂದು ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಸಿಎಂ ಸಿದರಾಮಯ್ಯ ಯಾರು ಏನೇ ಹೇಳಿದರೂ ಕೂಡ ಕೊನೆಗೆ ಹೈಕಮಾಂಡ್ ಹೇಳಿದ್ಮೇಲೇನೆ ಸಂಪುಟ ಪುನಾರಚನೆ ಆಗಲಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು ಶಾಸಕರು ದೆಹಲಿಗೆ ಹೋಗಲು ಸ್ವತಂತ್ರರು ದೆಹಲಿಗೆ ತೆರಳಿರುವ ಶಾಸಕರು ಏನು ಹೇಳುತ್ತಾರೋ ಹೇಳಲಿ ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಕೇಳಲು ನಾವು ಸಿದ್ಧರಿದ್ದೇವೆ. ಎಲ್ಲಾ ಗೊಂದಲಗಳಿಗೆ ಹೈಕಮಾಂಡ್ ಫುಲ್ ಸ್ಟಾಪ್ ಇಡಬೇಕು ಎಂದು ಸಿಎಂ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದರು
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಸ್ಕೂಟಿಯಲ್ಲಿ ತಳ್ಳುತ್ತಿದ್ದ ಯುವತಿ ಒಬ್ಬಳು ಕೆಳಗೆ ಬಿದ್ದಾಗ ಹಿಂದಿನಿಂದ ಬಂದ ಟಿಪ್ಪರ್ ಒಂದು ಆಕೆ ಮೇಲೆ ಹರಿದು ಸಾವನ್ನಪ್ಪಿದ್ದಳು. ಇದೀಗ ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು ರಸ್ತೆಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಲಾರಿ ಎಂದು ಕೆರೆಗೆ ಉರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಕೆರೆಯಲ್ಲಿ ಘಟನೆ ಸಂಭವಿಸಿದೆ. ಕಲಬುರಗಿ ಮೂಲದ ಲಾರಿ ಚಾಲಕ ಮಹೇಶ್ (37) ಕೆರೆಯಲ್ಲಿ ಮುಳುಗಿರುವ ಸಾಧ್ಯತೆಯಿದೆ. ಜಲ್ಲಿ ತುಂಬಿಕೊಂಡು ಬಂದಿದ್ದ 12 ಚಕ್ರದ ಲಾರಿ ಕಳೆದ ರಾತ್ರಿ 11:30ರ ಸುಮಾರಿಗೆ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಅತ್ತಿಬೆಲೆಯಿಂದ ಸರ್ಜಾಪುರ ಮಾರ್ಗವಾಗಿ ಹೋಗುತ್ತಿದ್ದ ಲಾರಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಚಾಲಕನ ಸಮೇತವಾಗಿ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್, ಅಗ್ನಿಶಾಮಕ…
ಅಯೋಧ್ಯೆ : ಅಯೋಧ್ಯೆಯ ಶ್ರೀ ರಾಮಮಂದಿರ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಶ್ರೀರಾಮಮಂದಿರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಡೀ ವಿಶ್ವ ಇಂದು ರಾಮಮಯ ಆಗಿದೆ. ಶ್ರೀರಾಮ ಭಕ್ತರ ಮನಸ್ಸು ಇಂದು ಬಹಳಷ್ಟು ಆನಂದವಾಗಿದೆ. ಅಂದಿನ ಸಂಕಲ್ಪ ಇಂದು ಸಿದ್ಧಿಯಾಗಿದೆ. 500 ವರ್ಷಗಳ ಅಗ್ನಿ ಯಜ್ಞ ಇಂದು ಶಾಂತಗೊಂಡಿದೆ ಭವ್ಯವಾದ ಮಂದಿರದಲ್ಲಿ ಶ್ರೀರಾಮ ವಿರಾಜಮಾನರಾಗಿದ್ದಾರೆ.ಕೇಸರಿ ಧ್ವಜ ಕನಸುಗಳ ಸಾಕಾರದ ಸ್ವರೂಪ. ಶತಮಾನಗಳ ವೇದನೆಗೆ ಇಂದು ಪೂರ್ಣವಿರಾಮ ಸಿಕ್ಕಿದೆ. ಮರ್ಯಾದಾ ಪುರುಷೋತ್ತಮರಾಗಿ ರಾಮ ಅಯೋಧ್ಯೆಗೆ ಬಂದರು. ಶ್ರೀರಾಮ ಮಂದಿರದ ಧರ್ಮಧ್ವಜ ಏಕರೂಪದ ಪ್ರತೀಕವಾಗಿದೆ. 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಪೂರ್ಣಗೊಳ್ಳಲಿದೆ. ಶ್ರೀರಾಮನ ವ್ಯಕ್ತಿತ್ವವನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು ಎಂದು ಹೇಳಿಕೆ ನೀಡಿದರು. ಧರ್ಮ ಸತ್ಯದ ಮೇಲೇ ನಿಂತಿದೆ ಎಂಬ ಸಂದೇಶ ಜಗತ್ತಿನಲ್ಲಿ ಕರ್ಮ ಹಾಗೂ ಕರ್ತವ್ಯದ ಸಂದೇಶ ನೀಡುತ್ತದೆ ಬೇದ ಭಾವ ದೌರ್ಜನ್ಯಗಳ ಅಂತ್ಯದ ಪ್ರತೀಕವಾಗಿದೆ. ವನವಾಸಕ್ಕೆ…
ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ಮೃತ ಯುವಕನನ್ನನು ನರಸಿಂಹರಾಜು (32) ಎಂದು ತಿಳಿದುಬಂದಿದೆ. ಈತ ಮದುವೆಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ ಮಹಿಳೆಯೂ ಆಗಾಗ ಯುವಕನ ಮನೆಗೆ ಬರುತ್ತಿದ್ದಳು. ಕಳೆದ ಶನಿವಾರ ಆ ಮಹಿಳೆ ನರಸಿಂಹರಾಜು ಮನೆಯಲ್ಲಿ ಇದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಬಂದಿದ್ದಾರೆ. ಬಳಿಕ ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ರಸ್ತೆಯಲ್ಲಿ ನಾಲ್ಕೈದು ಜನ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಕೂಡಲೇ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ…
ಅಯೋಧ್ಯೆ : ಅಯೋಧ್ಯೆಯ ಶ್ರೀ ರಾಮಮಂದಿರ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಶ್ರೀರಾಮಮಂದಿರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜಾರೋಹಣ ನೆರವೇರಿಸಿದ್ದಾರೆ. ಮೋದಿ ಅವರು ಶ್ರೀ ರಾಮಲಲ್ಲಾ ದೇವಾಲಯದ ಮೇಲ್ಭಾಗದಲ್ಲಿ, ಅಂದರೆ ಮುಖ್ಯ ಶಿಖರದ ಮೇಲೆ ಔಪಚಾರಿಕವಾಗಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ. ಬಲರಾಮನ ತ್ಯಾಗದ ನಂತರ, ಇದು ದೇವಾಲಯ ನಿರ್ಮಾಣ ಪೂರ್ಣಗೊಂಡ ಬಲವಾದ ಸಂಕೇತವಾಗಿ ನಿಲ್ಲುತ್ತದೆ. ಅಯೋಧ್ಯೆಯ ಸಂಪೂರ್ಣ ರಾಮ ಮಂದಿರವು ಹಬ್ಬದ ನೋಟವನ್ನು ಪಡೆದುಕೊಂಡಿದೆ. ಈ ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಭಕ್ತರು ಮತ್ತು ಆಹ್ವಾನಿತರು ಅಯೋಧ್ಯೆಯನ್ನು ತಲುಪಿದ್ದಾರೆ. ಧ್ವಜದ ವಿಶೇಷತೆಗಳೇನು? ತಿಳಿಯಿರಿ ಶಿಖರದ ಮೇಲೆ ಸ್ಥಾಪಿಸಲಾದ 42 ಅಡಿ ಎತ್ತರದ ಧ್ವಜಸ್ತಂಭವನ್ನು 360 ಡಿಗ್ರಿ ತಿರುಗುವಂತೆ ವಿನ್ಯಾಸಗೊಳಿಸಲಾಗಿದೆ. ಧ್ವಜವು ಕೇಸರಿ ಬಣ್ಣ ಹಾಗೂ ತ್ರಿಕೋನಾಕೃತಿಯಲ್ಲಿದೆ. 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದೆ. ಇದರ ಮೇಲೆ ಸೂರ್ಯ, ‘ಓಂ’ ಹಾಗೂ ಕೋವಿದಾರ ಮರವನ್ನು ಚಿತ್ರಿಸಲಾಗಿದೆ. ಸೂರ್ಯನ ಚಿತ್ರ ರಾಮನ ವಂಶವಾದ ಸೂರ್ಯವಂಶವನ್ನು ಸೂಚಿಸುತ್ತದೆ.…
ಬೆಂಗಳೂರು : ತೀವ್ರ ಪೈಪೋಟಿ ನಡುವೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಹಾಗೂ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಅಂತ್ಯಗೊಂಡು ಪರಿಶೀಲನೆ ವೇಳೆ ಬ್ರಿಜೇಶ್ ಬಣದ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯುತ್ತಿದ್ದಂತೆ ಹಿರಿಯ ಆಟಗಾರರು ವೆಂಕಟೇಶ್ ಪ್ರಸಾದ್ಗೆ ಬೆಂಬಲ ನೀಡಿದ್ದರು. ಮಾಜಿ ಕ್ರಿಕೆಟಿಗ, ಮಾಜಿ ಕೆಎಸ್ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿದಂತೆ ಹಲವರು ಬೆಂಬಲ ನೀಡಿದ್ದರು. ಶಾಂತಕುಮಾರ್ ಅವರು 200 ರೂ. ಸಬ್ಸ್ಕ್ರಿಪ್ಶನ್ ಫೀಸ್ ಕಟ್ಟಿಲ್ಲದ ಕಾರಣ ಅರ್ಜಿ ತಿರಸ್ಕೃತವಾಗಿದೆ. ಹೀಗಾಗಿ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ ಆಗಿದ್ದಾರೆ. ಹಾಗಾಗಿ ಬ್ರಿಜೇಶ್ ಪಾಟೇಲ್ ಬಣಕ್ಕೆ ತೀವ್ರ ಮುಖಭಂಗವಾಗಿದೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಗೇಮಿಂಗ್ ಆ್ಯಪ್ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್ ಖಾತೆ, ಬಾಂಡ್ಗಳು ಮತ್ತು ಮ್ಯೂಚುವಲ್ ಫಂಡ್ಗಳನ್ನು ಜಪ್ತಿ ಮಾಡಿದ್ದಾರೆ. ಹೌದು ಬೆಂಗಳೂರು, ಗುರ್ಗಾವ್ನಲ್ಲಿನ ಗೇಮಿಂಗ್ ಆ್ಯಪ್ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಮಾರು 505 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿ, ಬಾಂಡ್ಗಳು ಮತ್ತು ಮ್ಯೂಚುವಲ್ ಫಂಡ್ಗಳನ್ನು ಇಡಿ ವಶಪಡಿಸಿಕೊಂಡಿದೆ. ವಿಂಜೋ ಗೇಮ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ. ಗೇಮಿಂಗ್ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗರಿದಮ್ಗಳು ಮತ್ತು ಸಾಫ್ಟ್ವೇರ್ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರ ಸರ್ಕಾರವು ‘ಪ್ರಮೋಷನ್ ಅಂಡ್ ರೆಗ್ಯುಲೇಷನ್ ಆಫ್ ಆನ್ಲೈನ್ ಗೇಮಿಂಗ್ ಆ್ಯಕ್ಟ್ -…














