Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು: ಬಜೆಟ್ನಲ್ಲಿ ಕಾಲೇಜು ಚುನಾವಣೆ ನಡೆಸುವ ಕುರಿತು ಘೋಷಣೆಯಾಗುತ್ತಿದ್ದಂತೆ ಕರಾವಳಿಯ ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಚುನಾವಣಾ ಕಾವು ಏರತೊಡಗಿದೆ. ಆದರೆ, ಈ ಸಂಭ್ರಮದ ನಡುವೆಯೇ ವಿದ್ಯಾರ್ಥಿ ಸಂಘಟನೆಗಳ ನಡುವೆ ಭಾರಿ ಸಂಘರ್ಷ ಏರ್ಪಟ್ಟಿದ್ದು, ಕ್ಯಾಂಪಸ್ ಅಂಗಳ ಈಗ ರಣರಂಗವಾಗಿ ಮಾರ್ಪಟ್ಟಿದೆ. ಬಜೆಟ್ನಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಹಸಿರು ನಿಶಾನೆ ಸಿಕ್ಕಿದ್ದೇ ತಡ, ಮಂಗಳೂರಿನ ಪ್ರಮುಖ ಕಾಲೇಜುಗಳಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ತಮ್ಮ ಅಸ್ತಿತ್ವ ಪ್ರದರ್ಶಿಸಲು ಮುಂದಾಗಿವೆ. ಈ ವೇಳೆ ಪೋಸ್ಟರ್ ಅಂಟಿಸುವ ವಿಚಾರ ಹಾಗೂ ಪ್ರಚಾರದ ಹಮ್ಮುವಿಕೆ ಕುರಿತು ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ…
ಬೆಂಗಳೂರು : ಕಳೆದ ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿ ಆಗದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಪರದಾಟ ನಡೆಸಬೇಕಾದ ಪ್ರಸಂಗ ಉದ್ಭವಿಸಿದೆ. ತಿಂಗಳ ಆರಂಭದಲ್ಲಿಯೇ ಜಮೆ ಆಗುತ್ತಿದ್ದ ವೇತನ ಇಲ್ಲಿಯವರೆಗೂ ಜಮೆ ಆಗಿಲ್ಲ. ಹೀಗಾಗಿ ಸಾವಿರಾರು ಮಂದಿ ಪೊಲೀಸ್ ಸಿಬ್ಬಂದಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ತಿಂಗಳ ಮೊದಲ ವಾರದಲ್ಲೇ ಸಿಗಬೇಕಿದ್ದ ವೇತನ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇದರಿಂದಾಗಿ ಕೆಳಹಂತದ ಸಿಬ್ಬಂದಿ ತಮ್ಮ ಸಂಸಾರ ನಿರ್ವಹಣೆ, ಮಕ್ಕಳ ಶಾಲಾ ಫೀಸು ಮತ್ತು ಬ್ಯಾಂಕ್ ಇಎಂಐ (EMI) ಪಾವತಿಸಲು ಪರದಾಡುವಂತಾಗಿದೆ. ಸಂಬಳ ವಿಳಂಬಕ್ಕೆ ಪ್ರಮುಖ ಕಾರಣಗಳೇನು? ಹೆಚ್.ಆರ್.ಎಂ.ಎಸ್ (HRMS) ತಾಂತ್ರಿಕ ದೋಷ: ಸರ್ಕಾರಿ ನೌಕರರ ವೇತನ ಪ್ರಕ್ರಿಯೆ ನಡೆಯುವ ಸಾಫ್ಟ್ವೇರ್ನಲ್ಲಿ ಆಗಾಗ ಉಂಟಾಗುವ ತಾಂತ್ರಿಕ ಸಮಸ್ಯೆಗಳಿಂದ ವೇತನ ಬಿಡುಗಡೆ ವಿಳಂಬವಾಗುತ್ತಿದೆ. ಬಜೆಟ್ ಹಂಚಿಕೆ ಮತ್ತು ಅನುದಾನ: ಆರ್ಥಿಕ ವರ್ಷದ ಅಂತ್ಯ ಅಥವಾ ಆರಂಭದಲ್ಲಿ ಹೊಸ ಅನುದಾನದ ಹಂಚಿಕೆಯಲ್ಲಿ ಆಗುವ ವಿಳಂಬವು…
ಬೆಂಗಳೂರು : ಇರಾನ್ ಇಸ್ರೇಲ್ ಹಾಗೂ ಅಮೆರಿಕ ನಡುವೆ ಯುದ್ಧ ಹಿನ್ನೆಲೆಯಲ್ಲಿ ಇದೀಗ ದೇಶದಲ್ಲಿ ಸಿಲಿಂಡರ್ ಕೊರತೆ ಕಾಣುತ್ತಿದ್ದು ರಾಜ್ಯದಲ್ಲೂ ಇದರ ಪರಿಣಾಮ ಬೀರಿದೆ ಈ ವಿಚಾರವಾಗಿ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಮಾತನಾಡಿದ್ದು ಯಾವ ಡಿಸ್ಟ್ರಿಬ್ಯೂಟರ್ ಕೂಡ ಒಂದು ತಿಂಗಳಲ್ಲಿ ಒಂದು ಸಿಲಿಂಡರ್ ಕೊಡೋದಕ್ಕೆ ಇಲ್ಲ ಅಂತ ಹೇಳುವ ಹಾಗಿಲ್ಲ. ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಮಧ್ಯಪ್ರದೇಶದಿಂದ ಹೆಚ್ಚಾಗಿ ಅನಿಲ ಆಮದು ಆಗುತ್ತಿತ್ತು. ಯುದ್ಧ ನಿಂತರೆ ಸಮಸ್ಯೆ ಇಲ್ಲ ಆದರೆ ಮುಂದುವರೆದರೆ ಕೊರತೆ ಉಂಟಾಗಲಿದೆ. ಅವಶ್ಯಕತೆ ಇರುವಾಗ ಮಾತ್ರ ಸಿಲಿಂಡರ್ ಬಳಸಬೇಕು ಒಂದು ಸಿಲಿಂಡರ್ ಕೊಡಲು ಕೇಂದ್ರ ಸರ್ಕಾರ ಹೇಳಿದೆ. ಸಿಲಿಂಡರ್ ವಿತರಕರು ಒಂದು ತಿಂಗಳಲ್ಲಿ ಒಂದು ಸಿಲಿಂಡರ್ ಕೊಡಲು ಇಲ್ಲ ಅಂತ ಹೇಳೋ ಹಾಗಿಲ್ಲ. ಬ್ಲಾಕ್ ಮಾರ್ಕೆಟ್ ಮಾಡಕ್ಕಾಗಲ್ಲ ಬ್ಲಾಕ್ ಮೇಲ್ ಮಾಡಿದರೂ ಕೂಡ ಅಂಥವರ ವಿರುದ್ಧ ಕ್ರಮ…
ಬೆಂಗಳೂರು : ಅಮೇರಿಕಾ ಇಸ್ರೇಲ್ ಹಾಗು ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಕಚ್ಚಾ ತೈಲ LPG ಮೇಲೆ ಯಾವ ರೀತಿ ಪರಿಣಾಮ ಆಗ್ತಿದೆ ಗೊತ್ತಿದೆ. ಪಿಎಂ ಮೋದಿ ಗ್ರಾಹಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದಾರೆ ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ನವರು ಪ್ರತಿಭಟನೆ ಮಾಡುತ್ತಾರೆ ಅಂದರೆ, ಅವರು ಬೌಧಿಕ ವಾಗಿ ಎಷ್ಟು ದಿವಾಳಿಯಾಗಿದ್ದಾರೆ ಗೊತ್ತಾಗುತ್ತೆ. ರಾಜ್ಯ ಸರ್ಕಾರ ಇನ್ನು ಪೊಲೀಸ್ ಬಂದಿದೆ ಸಂಬಳವನ್ನೇ ಕೊಟ್ಟಿಲ್ಲ. ಸಂಬಳ ನೀಡಿಲ್ಲ ಅಂದರೆ ರಾಜ್ಯದ ದಿವಾಳಿಯಾಗಿದೆ ಎಂದು ಗೊತ್ತಾಗಿದೆ. ಸಿಎಂ ಸಿದ್ದರಾಮಯ್ಯ ಎಲ್ಲವನ್ನು ಕುಳಿತಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಬೆಂಗಳೂರು : ಹೆಣ್ಣುಭ್ರೂಣ ಹತ್ಯೆಯು ಸಾಂವಿಧಾನಾತ್ಮಕ ಮೌಲ್ಯಗಳಿಗೆ ಮಾಡುವ ಅವಮಾನ ಎಂದಿರುವ ಹೈಕೋರ್ಟ್, ಲಿಂಗ ಪರೀಕ್ಷೆ ಬಳಿಕ ಗರ್ಭಪಾತ ಮಾಡಿದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.ಪ್ರಕರಣದಲ್ಲಿ ಆರೋಪಿಗಳಾಗಿದ್ದ ಶಾರದಮ್ಮ, ಅವರ ಪತಿ ದಾಸೇಗೌಡ ಮತ್ತು ಡಾ.ಶಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೆಣ್ಣು ಭ್ರೂಣ ಹತ್ಯೆ ಕೇವಲ ಕಾನೂನುಬಾಹಿರ ಅಪರಾಧವಲ್ಲದೇ, ನೈತಿಕ ಸಮಾಜದ ಮೇಲೆ ಬಿದ್ದ ಕಳಂಕವಾಗಿದ್ದು, ಸಂವಿಧಾನಾತ್ಮಕ ಮೌಲ್ಯಗಳನ್ನು ಅವಮಾನ ಮಾಡುವಂತದ್ದಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಲಿಂಗ ಪರೀಕ್ಷೆ ನಡೆಸಿ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ಪ್ರಕರಣದ ಹಿನ್ನೆಲೆ ಚನ್ನಪಟ್ಟಣ ತಾಲೂಕಿನ ಚನ್ನಕೇಶವ ಮತ್ತು ಅವರ ಪತ್ನಿ ಹರ್ಷಿತಾ ಮೂರನೇ ಮಗುವಿಗೆ ಗರ್ಭಿಣಿಯಾಗಿದ್ದರು. ಅವರಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದ ಕಾರಣ, ಗರ್ಭದಲ್ಲಿರುವ ಮಗುವಿನ ಲಿಂಗ ತಿಳಿದುಕೊಳ್ಳಲು ಅವರು ಯತ್ನಿಸಿದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದ ಕಾರಣ ಸಂಬಂಧಿಕರಾದ ಶಾರದಮ್ಮ ಮತ್ತು ದಾಸೇಗೌಡ ಅವರ ಸಹಾಯದಿಂದ…
ಬೆಂಗಳೂರು : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ ಇಡೀ ಜಗತ್ತಿನಾದ್ಯಂತ ಬಹುದೊಡ್ಡ ಪರಿಣಾಮ ಬಿರಿದು ಅದರಲ್ಲೂ ಭಾರತದಲ್ಲಿ ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಗ್ಯಾಸ್ ಸಿಲಿಂಡರ್ ಕೂಡ ಇದೀಗ ಸಿಗುವುದು ಕಷ್ಟವಾಗಿದೆ. ಹೌದು ಈ ಒಂದು ಯುದ್ಧದ ಬಿಸಿ ರಾಜ್ಯದ ಹಲವು ಪ್ರಸಿದ್ಧ ದೇವಸ್ಥಾನಗಳಿಗೂ ತಟ್ಟಿದೆ. ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ರಾಜಧಾನಿ ಬೆಂಗಳೂರಿನ ಧಾರ್ಮಿಕ ಕೇಂದ್ರಗಳ ಮೇಲೂ ಪರಿಣಾಮ ಬೀರುವಂತಾಗಿದೆ. ಇದರ ಪರಿಣಾಮವಾಗಿ ದೇವಾಲಯಗಳಲ್ಲಿ ಭಕ್ತರಿಗೆ ವಿತರಿಸಲಾಗುತ್ತಿದ್ದ ಅನ್ನಪ್ರಸಾದ ಸೇವೆಯಲ್ಲೂ ವ್ಯತ್ಯಯ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ಅನ್ನಪ್ರಸಾದ ವಿತರಿಸುವ ವ್ಯವಸ್ಥೆ ಇದೆ. ಸಾಮಾನ್ಯ ದಿನಗಳಲ್ಲಿ ಸುಮಾರು 3 ಸಾವಿರದಿಂದ 4 ಸಾವಿರ ಭಕ್ತರು ಪ್ರಸಾದ ಸ್ವೀಕರಿಸುತ್ತಾರೆ. ವಿಶೇಷವಾಗಿ ಶುಕ್ರವಾರ ಮತ್ತು ಮಂಗಳವಾರದಂದು ಭಕ್ತರ ಸಂಖ್ಯೆ ಹೆಚ್ಚಾಗಿ 4 ಸಾವಿರದಿಂದ 5 ಸಾವಿರದವರೆಗೆ ತಲುಪುತ್ತದೆ. ಭಕ್ತರಿಗಾಗಿ ದೇವಾಲಯದಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು…
ಗದಗ : ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ರಹಸ್ಯ ಇದೀಗ ಬಯಲಾಗಿದೆ. ಜನವರಿ 10 ರಂದು 465 ಗ್ರಾಂ ಚಿನ್ನದ ನಿಧಿ ಪತ್ತೆಯಾಗಿತ್ತು. ರಿತ್ತಿ ಕುಟುಂಬ ಮನೆಯ ಪಾಯ ತೆಗೆಯುವಾಗ ನಿಧಿ ಪತ್ತೆಯಾಗಿತ್ತು. ಪುರಾತನ ನಿಧಿ ದರ ಸುಮಾರು 8 ಕೋಟಿ ಮೌಲ್ಯದಾಗಿದೆ. ಈಗಿನ ಚಿನ್ನದ ದರಕ್ಕೆ ಹೋಲಿಸಿದರೆ 10ಪಟ್ಟು ಹೆಚ್ಚಳವಾಗಿದ್ದು ಕಲ್ಯಾಣ ಚಾಲುಕ್ಯರು ವಿಜಯನಗರ ಅರಸರ ಕಾಲದ ಆಭರಣಗಳು ಇವು ಎಂದು ಸರ್ಕಾರ ರಚಿಸಿದ್ದ ತಜ್ಞರ ತಂಡದಿಂದ ಇದೀಗ ನಿಧಿ ರಹಸ್ಯ ಬಯಲಾಗಿದೆ. ಆಭರಣಗಳಿಗೆ ಬೆಲೆ ಕಟ್ಟಲು ಆಗಲ್ಲ ಎಂದು ತಜ್ಞರು ತಿಳಿಸಿದ್ದು 500 ರಿಂದ 600 ವರ್ಷಗಳ ಹಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಹೆಣ್ಣು ದೇವರಿಗೆ ಹಾಕುವ ಚಿನ್ನದ ಆಭರಣಗಳು ಇವು ಎಂದು ತಜ್ಞರು ತಿಳಿಸಿದ್ದಾರೆ ಗದಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಜ್ಞರ ತಂಡ ಪರಿಶೀಲನೆ ನಡೆಸಿತ್ತು. ಎಂ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ತಜ್ಞರು ಪರಿಶೀಲನೆ ನಡೆಸಿದ್ದರು. ಎಂಎಸ್ ಕೃಷ್ಣಮೂರ್ತಿ ಪುರಾತತ್ವ ಶಾಸ್ತ್ರಜ್ಞ ಮತ್ತು ಸಮಿತಿಯ ಮುಖ್ಯಸ್ಥರಾಗಿದ್ದಾರೆ ಖಜಾನೆಯಲ್ಲಿ…
ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ವಿಜಯಪುರ ನಗರದಲ್ಲಿ ಕೃಷ್ಣ ಪ್ಯಾಲೇಸ್ ಹೋಟೆಲ್ , ಸಂಪೂರ್ಣವಾಗಿ ಸುಟ್ಟು ಬೆಂಕಿಗೆ ಆಹುತಿಯಾಗಿತ್ತು. ಇದೀಗ ಶಾರ್ಟ್ ಸರ್ಕ್ಯೂಟ್ನಿಂದ ಹೋಟೆಲ್ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್ವೊಂದರಲ್ಲ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹೋಟೆಲ್ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ರಸ್ತೆಯ ಇಳಿಜಾರಿನ ತಿರುವಿನಲ್ಲಿ ಚಿರತೆ ತಡೆಗೋಡೆ ಪಕ್ಕದಲ್ಲಿ ಕೂತಿತ್ತು. ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆ ಇರುವ ದೃಶ್ಯ ಸೆರೆಯಾಗಿದೆ. ಶಿವರಾತ್ರಿ ಜಾತ್ರೆಯ ವೇಳೆ ಚಿರತೆ ಪಾದಯಾತ್ರೀಕನನ್ನು ಕೊಂದು ತಿಂದಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ.
ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಸದ್ಯ ಭಾರತದಲ್ಲಿ ಗ್ಯಾಸ್ ಸಿಲೆಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಇದೀಗ ಬೆಂಗಳೂರಲ್ಲಿ ದೊಡ್ಡ ದೊಡ್ಡ ಹೋಟೆಲ್ ಗಳೆಲ್ಲ ಬಂದ್ ಆಗಿವೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಈ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಪಾತ್ರ ಬರೆದಿದ್ದಾre ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ ದೇಶೀಯ ಎಲ್ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ಕೊರತೆಯ ಕುರಿತು ನಾನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ. ಈ ಆದೇಶದಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಹೋಟೆಲ್ಗಳು, ಮೆಸ್ಗಳು, ಹಾಸ್ಟೆಲ್ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳ ಕಾರ್ಯಚಟುವಟಿಕೆಗೆ ತೀವ್ರ ಅಡಚಣೆಯಾಗಿದೆ. ಆದ್ದರಿಂದ, ವಾಣಿಜ್ಯ ಎಲ್ಪಿಜಿಯ ಸಮರ್ಪಕ ಪೂರೈಕೆಯನ್ನು ಪುನಃಸ್ಥಾಪಿಸಲು ತುರ್ತಾಗಿ…














