Author: kannadanewsnow05

ಬೆಂಗಳೂರು : ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ಗ್ಯಾರಂಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತದೆ, ಖಜಾನೆ ಖಾಲಿಯಾಗುತ್ತದೆ ಎಂದು ಟೀಕಿಸುತ್ತಾರೆ. ಆದರೆ ಜನರ ಖಾತೆಗೆ ನೇರವಾಗಿ ಹಣ ತಲುಪುದರಿಂದ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಅಂದರೆ 2023ರ ಮಾರ್ಚ್ ವರೆಗೆ 530000 ಕೋಟಿಗೂ ಹೆಚ್ಚು ಸಾಲ ಮಾಡಿದ್ದರೆ, ನಮ್ಮ ಕಾಂಗ್ರೆಸ್ ಸರ್ಕಾರ, ಕಳೆದ ನಾಲ್ಕು ವರ್ಷದಲ್ಲಿ 256000 ಕೋಟಿ ರೂ. ಸಾಲ ಮಾಡಿದೆ. ಅಂತೆಯೇ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದಾಗ ದೇಶದ ಮೇಲೆ 53.11 ಲಕ್ಷ ಕೋಟಿ ಸಾಲವಿತ್ತು. ಈಗ 218 ಲಕ್ಷ ಕೋಟಿ ಸಾಲವಿದೆ, ಅಂದರೆ ಪ್ರಧಾನಿ ಮೋದಿಯವರ 12 ವರ್ಷದ ಅಧಿಕಾರದ ಅವಧಿಯಲ್ಲಿ 165 ಲಕ್ಷ ಕೋಟಿಯಷ್ಟು ಸಾಲ ಮಾಡಿದ್ದಾರೆ.…

Read More

ವಿಜಯಪುರ : ಯಾವಾಗಲೂ ವಿವಾದಿತ ಹೇಳಿಕೆಗೆ ಖ್ಯಾತರಾಗಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಇದೀಗ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಾಹಾಕ್ತೇನೆ. ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಿತ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಹನುಮ ಜಯಂತಿ. ಆಂಜನೇಯನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ ಅಂತ ಹೇಳಲ್ಲ. ಅವರಾಗಿಯೇ ಅಪ್ಪ, ಮಗನ ಕೈ ಬಿಟ್ಟು ನನ್ನನ್ನು ಬಿಜೆಪಿಗೆ (BJP) ಬನ್ನಿ ಅಂತಾ ಕರೆಯುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ ತರಹ ರಾಜ್ಯಭಾರ ಮಾಡುತ್ತೇನೆ. ಸಿಎಂ ಆದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಅಲ್ಪಸಂಖ್ಯಾತ ಪಟ್ಟಿಯಿಂದ ಮುಸ್ಲಿಮರನ್ನು ಹೊರಹಾಕುತ್ತೇನೆ. ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡ್ತೆನೆ. ವೀರಣ್ಣ ಚರಂತಿಮಠ ಅವರು…

Read More

ಹಾವೇರಿ : ರಾಜ್ಯದಲ್ಲಿ ಸಿಲಿಂಡರ್ ಅಭಾವದಿಂದ ಜನರು ಸೌದೆ ಒಲೆ ಮೊರೆ ಹೋಗಿದ್ದಾರೆ. ಆದರೆ ಶಾಲೆ ಅಡುಗೆ ಕೋಣೆ ಬೀಗ ಮರಿದು ಕಿಡಿಗೇಡಿಗಳು ಸಿಲಿಂಡರ್ ಗಳನ್ನು ಕದ್ದು ತೆಗೆದು ಕೊಂಡು ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ಶ್ರೀಕಾಂತ್ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ ಶಾಲೆ ಸಿಲಿಂಡರ್ ಗಳನ್ನು ಕಳ್ಳತನ ಮಾಡಲಾಗಿದೆ ಸಿಲಿಂಡರ್ ಬಳಸಲಾಗುತ್ತಿತ್ತು ಆದರೆ ಸಿಲಿಂಡರ್ ಕೊರತೆ ಎದ್ದು ಕಾಣುತ್ತಿದ್ದರಿಂದ ಕಳ್ಳರು ಬಿಸಿ ಊಟಕ್ಕೆ ಬಳಸುತ್ತಿದ್ದ ಸಿಲಿಂಡರ್ ಗಳನ್ನು ಕದ್ದು ಒಯ್ದಿದ್ದಾರೆ. ಘಟನೆ ಕುರಿತಂತೆ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಮಗು ಸತ್ತಿದ್ದಕ್ಕೆ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ. ಹೌದು ಬಚ್ಚಲು ಮನೆಯ ನೀರಿನ ಬಕೆಟ್ ನಲ್ಲಿ ಮುಳುಗಿ ಮಗು ಸಾವನ್ನಪ್ಪಿದೆ. ಮಗುವಿನ ಸಾವು ಕಂಡು ತಾಯಿ ಪ್ರತಿಭಾ (29) ಕೂಡ ನೇಣಿಗೆ ಶರಣಾಗಿದ್ದಾರೆ. ಚಂದ್ರಾ ಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. 11 ತಿಂಗಳ ಗಂಡು ಮಗು ಅಗಸ್ತ್ಯ ಬಕೆಟ್ ನೀರಲ್ಲಿ ಮುಳುಗಿ ಸಾವನ್ನಪ್ಪಿದೆ. ತಾಯಿ ಮಗ ಇಬ್ಬರೆ ಮನೆಯಲ್ಲಿ ಇದ್ದಾಗ ಘಟನೆ ನಡೆದಿದೆ. ಗಂಡ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ಹೋಗಿದ್ದರು. ಪ್ರತಿಭಾ ಹಾಗು ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ರು. ಮಗು ಸಾವು ಕಂಡು ಪ್ರತಿಭಾ ಕೂಡ ಸಾವನ್ನಪ್ಪಿದ್ದು ದೃಢವಾಗಿದೆ. ಪಕ್ಕದಲ್ಲಿ ಪ್ರತಿಭಾ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಪಕ್ಕದಲ್ಲೇ 15 ಮಾತ್ರೆ ಶೀಟ್ ಇತ್ತು. ಅದನ್ನ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ ತರಲು ಹೋದಾಗ ಈ ಘಟನೆ…

Read More

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನದಲ್ಲಿ ಐಷಾರಾಮಿ ಬದುಕು ಮತ್ತು ಆರ್ಥಿಕ ಸಮೃದ್ಧಿಯನ್ನು ಬಯಸುವುದು ಸಹಜ. ಆದರೆ ಹಲವು ಬಾರಿ ಕಠಿಣ ಪರಿಶ್ರಮದ ಹೊರತಾಗಿಯೂ, ಜಾತಕದಲ್ಲಿನ ಗ್ರಹಗತಿಗಳ ದೋಷ ಅಥವಾ ದುರ್ಬಲ ಸ್ಥಾನಗಳಿಂದಾಗಿ ವ್ಯಕ್ತಿ ಸಾಲದ ಸುಳಿಯಲ್ಲಿ ಸಿಲುಕುತ್ತಾನೆ ಅಥವಾ ಆರ್ಥಿಕವಾಗಿ ಕುಸಿಯುತ್ತಾನೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರು ಮತ್ತು ಶುಕ್ರ ಗ್ರಹಗಳು ಒಬ್ಬ ವ್ಯಕ್ತಿಯನ್ನು ಬಡವನಿಂದ ರಾಜನನ್ನಾಗಿ ಮಾಡುವ ಶಕ್ತಿಯನ್ನು ಹೊಂದಿವೆ. ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಅನುಸರಿಸಬೇಕಾದ ಪ್ರಮುಖ ಜ್ಯೋತಿಷ್ಯ ಪರಿಹಾರಗಳು ಇಲ್ಲಿವೆ. ಆರ್ಥಿಕ ಲಾಭಕ್ಕೆ ಕಾರಣವಾಗುವ ಗ್ರಹಗಳು…

Read More

ಬೆಂಗಳೂರು : ಸಾರಿಗೆ ಸಂಸ್ಥೆಯ ನೌಕರರು ಈ ಹಿಂದೆ ನಡೆಸಿದ ಸರಣಿ ಮುಷ್ಕರಗಳ ವೇಳೆ ಕನಿಷ್ಠ ಶೇ. 25ರಷ್ಟು ವೇತನ ಹೆಚ್ಚಳ ಮಾಡಲೇಬೇಕೆಂದು ಸರ್ಕಾರಕ್ಕೆ ಪಟ್ಟು ಹಿಡಿದಿದ್ದರು. ದಶಕಗಳಿಂದ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಈ ಬಾರಿ ಪರಿಹಾರ ಸಿಗಲೇಬೇಕು ಎಂಬುದು ನೌಕರರ ಆಶಯವಾಗಿದೆ. ಸದ್ಯ ನೌಕರರ ತೀವ್ರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಅವರ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಸಾರಿಗೆ ಕ್ಷೇತ್ರದಲ್ಲಿನ ಅತೃಪ್ತಿಯನ್ನು ಶಮನ ಮಾಡಲು ಮುಂದಾಗಿದೆ. ಹೌದು ರಾಜ್ಯ ಸಾರಿಗೆ ಸಂಸ್ಥೆಯ ಲಕ್ಷಾಂತರ ನೌಕರರು ದಶಕಗಳಿಂದ ನಡೆಸುತ್ತಾ ಬಂದಿರುವ ಸುದೀರ್ಘ ಹೋರಾಟಕ್ಕೆ ಕಾಲ ಸನ್ನಿಹಿತವಾಗಿದೆ. ಈ ಬಾರಿಯ ಬಜೆಟ್ ಘೋಷಣೆಯಂತೆ ನೌಕರರ ವೇತನ ಹೆಚ್ಚಳದ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಸಾರಿಗೆ ಲೋಕದಲ್ಲಿ ಹೊಸ ಸಂಚಲನ ಮೂಡಿದೆ. ಸಾರಿಗೆ ನೌಕರರ ವೇತನ ಹೆಚ್ಚಳದ ಸಾಧಕ-ಬಾಧಕಗಳ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲು ಕೆಎಸ್‌ಆರ್‌ಟಿಸಿ (KSRTC) ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂಪಾಷ ಅವರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಕರೆಯಲಾಗಿದೆ. ಬರುವ ಏಪ್ರಿಲ್ 6ರಂದು ನೌಕರರ ವಿವಿಧ…

Read More

ಮೈಸೂರು : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಶ್ರಮವಹಿಸಿದ್ದಾರೆ. ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ ಅಪರಾಧ ಪ್ರಕರಣ ಕಡಿಮೆ ಮಾಡಬಹುದು ಎಂದು ಬೆಂಗಳೂರಿನ ಕೋರಮಂಗಲ ಕೆಎಸ್ಆರ್ಪಿ ಮೈದಾನದಲ್ಲಿ ಆಯೋಜನೆ ಮಾಡಿದ್ದ ಪೊಲೀಸ್ ಧ್ವಜ ಕಾರ್ಯಕ್ರಮದಲ್ಲಿ 158 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮುಖ್ಯಮಂತ್ರಿ ಪದಕ ಪಡೆದ 158 ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಪೊಲೀಸರು ದಿನದ 24 ಗಂಟೆಯೂ ಕೂಡ ಕೆಲಸ ಮಾಡುತ್ತಾರೆ. ಮಾದಕ ವಸ್ತು ಪ್ರಕರಣಗಳು ಹೆಚ್ಚಾಗುತ್ತಿವೆ ಪೊಲೀಸರಿಗೆ ಗೊತ್ತಿಲ್ಲದೆ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ನಡಿಯಲ್ಲ. ಹಾಗಾಗಿ ಪೊಲೀಸರು ಸರಿಯಾಗಿ ಕೆಲಸ ಮಾಡಬೇಕು. ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಪೆಕ್ಟರ್ಸ್ ಒಳ್ಳೆ ರೀತಿ ಕೆಲಸ ಮಾಡಿದರೆ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಬಹುದು ಹಾಗಾಗಿ ತಂತ್ರಜ್ಞಾನವನ್ನು ಪೊಲೀಸರು ಸರಿಯಾಗಿ ಬಳಸಿಕೊಳ್ಳಿ ಪೊಲೀಸ್ ಧ್ವಜ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು .

Read More

ಬೆಂಗಳೂರು : ಬೆಂಗಳೂರಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಮಗು ಸತ್ತಿದ್ದಕ್ಕೆ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ. ಹೌದು ಬಚ್ಚಲು ಮನೆಯ ನೀರಿನ ಬಕೆಟ್ ನಲ್ಲಿ ಮುಳುಗಿ ಮಗು ಸಾವನ್ನಪ್ಪಿದೆ. ಮಗುವಿನ ಸಾವು ಕಂಡು ತಾಯಿ ಪ್ರತಿಭಾ (29) ಕೂಡ ನೇಣಿಗೆ ಶರಣಾಗಿದ್ದಾರೆ. ಚಂದ್ರಾ ಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. 11 ತಿಂಗಳ ಗಂಡು ಮಗು ಅಗಸ್ತ್ಯ ಬಕೆಟ್ ನೀರಲ್ಲಿ ಮುಳುಗಿ ಸಾವನ್ನಪ್ಪಿದೆ. ತಾಯಿ ಮಗ ಇಬ್ಬರೆ ಮನೆಯಲ್ಲಿ ಇದ್ದಾಗ ಘಟನೆ ನಡೆದಿದೆ. ಗಂಡ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ಹೋಗಿದ್ದರು. ಪ್ರತಿಭಾ ಹಾಗು ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ರು. ಮಗು ಸಾವು ಕಂಡು ಪ್ರತಿಭಾ ಕೂಡ ಸಾವನ್ನಪ್ಪಿದ್ದು ದೃಢವಾಗಿದೆ. ಪಕ್ಕದಲ್ಲಿ ಪ್ರತಿಭಾ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಪಕ್ಕದಲ್ಲೇ 15 ಮಾತ್ರೆ ಶೀಟ್ ಇತ್ತು. ಅದನ್ನ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ ತರಲು ಹೋದಾಗ ಈ ಘಟನೆ…

Read More

ಮಂಡ್ಯ : ಇಂದು ಮಂಡ್ಯದಲ್ಲಿ ವಿಶ್ವ ಹಿಂದೂ ಪರಿಷತ್ ನಿಂದ ಶೋಭಯಾತ್ರೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ನಗರದಲ್ಲಿ ಹಾಕಿದ್ದ ಕೇಸರಿ ಬಾವುಟ ಹಾಗು ಬಂಟಿಂಗ್ಸ್ ತೆರವು ಮಾಡಲಾಯಿತು. ಅನುಮತಿ ಪಡೆಯದ ಹಿನ್ನೆಲೆ, ನಗರಸಭೆ ಸಿಬ್ಬಂದಿಗಳು ಕೇಸರಿ ಬಾವುಟ, ಬಂಟಿಂಗ್ಸ್ ತೆರವು ಮಾಡಿದರು.ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬಾವುಟ ತೆರವುಗೋಳಿಸಿದ್ದಾರೆ. ಇಂದು ಸಂಜೆ ಮಂಡ್ಯದಲ್ಲಿ ಬೃಹತ್ ಶೋಭಯಾತ್ರೆ ಹಮ್ಮಿಕೊಳ್ಳಲಾಗಿದೆ. ಬಾವುಟ ತೆರವುಗೋಳಿಸಿದ್ದಕ್ಕೆ ಹಿಂದೂ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.

Read More

ನವದೆಹಲಿ : ಇರಾನ್‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೆರಿಕದ ಪ್ರಜೆಗಳನ್ನು ಉದ್ದೇಶಿಸಿ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಏರಿಕೆಯಾಗಿದೆ. ಟ್ರಂಪ್‌ ವಿಷಯನ್ನು ಪ್ರಸ್ತಾಪ ಮಾಡುತ್ತಿದ್ದಂತೆ ತೈಲ ರಫ್ತು ಮಾಡುವ ಒಪೆಕ್‌ ರಾಷ್ಟ್ರಗಳ ಬ್ರೆಂಟ್‌ ಕಚ್ಚಾತೈಲದ ಬೆಲೆ 4.5% ಏರಿಕೆಯಾಗಿದೆ. ಒಂದು ಬ್ಯಾರೆಲ್‌ ಕಚ್ಚಾ ತೈಲದ ದರ 106.42 ಡಾಲರ್‌ಗೆ (9,930 ರೂ.) ತಲುಪಿದೆ. ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್(WTI) ದರ 4% ಏರಿಕೆಯಾಗಿ 104.24 ಡಾಲರ್‌ನಲ್ಲಿ (9,732 ರೂ.) ವ್ಯವಹಾರ ನಡೆಸುತ್ತಿದೆ. ಯುದ್ಧವು ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಕೊನೆಗೊಳ್ಳಲಿದ್ದು, ಆ ನಂತರ ತೈಲ ಬೆಲೆಗಳು ಕಲ್ಲಿನಂತೆ ಕೆಳಕ್ಕೆ ಬೀಳಲಿವೆ. ಹಾರ್ಮುಜ್ ಜಲಸಂಧಿಯ ಮೂಲಕ ಬರುವ ತೈಲದ ಅಗತ್ಯ ಅಮೆರಿಕಕ್ಕಿಲ್ಲ. ಅಲ್ಲಿಂದ ತೈಲ ಪಡೆಯುವ ಇತರ ದೇಶಗಳೇ ಅದರ ರಕ್ಷಣೆಯ ಜವಾಬ್ದಾರಿ ಹೊರಬೇಕು. ತೈಲ ಬಿಕ್ಕಟ್ಟು ಎದುರಿಸುತ್ತಿರುವ ಮಿತ್ರರಾಷ್ಟ್ರಗಳು ತಮಗೆ ಬೇಕಾದ ತೈಲವನ್ನು ತಾವೇ ಹಾರ್ಮೋಜ್ ಜಲಸಂಧಿಯಿಂದ ಪಡೆದುಕೊಳ್ಳಲು ಧೈರ್ಯ ತೋರಬೇಕು ಎಂದು…

Read More