Author: kannadanewsnow05

ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಕೊಲೆ ನಡೆದಿದ್ದು, ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದ ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಹೆಚ್.ಬಿ. ಕಾಲೋನಿಯಲ್ಲಿ ನಡೆದಿದೆ. ಡಾ. ರಮೇಶ್ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದು ತಿಳಿದುಬಂದಿದೆ. ಕಳೆದ ಐದು ತಿಂಗಳ ಹಿಂದಷ್ಟೇ ಕೊಲೆಯಾದ ವೈದ್ಯ ರಮೇಶ್ ಅವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಸೋಮವಾರ (ಇಂದು) ಶಿರಸಿ ತಾಲೂಕಿನ ಮಂಜಗುಣಿಯಲ್ಲಿ ವೈದ್ಯ ರಮೇಶ್​ ಅವರು ತಮ್ಮ ಪತ್ನಿಯ ತಂಗಿಯ ಜೊತೆಯಲ್ಲಿಯೇ ಮದುವೆ ಆಗುವವರಿದ್ದರು. ಒಬ್ಬರೇ ಇರುತ್ತಿದ್ದ ವೈದ್ಯ ರಮೇಶ್​ ಮನೆಗೆ ಸಂಬಂಧಿಕರು ಬಂದಿದ್ದರು. ಈ ವೇಳೆ ಅವರು ಬಾಗಿಲು ತೆರೆದಿಲ್ಲ. ಹೀಗಾಗಿ ಬಾಗಿಲು ಒಡೆದು ತೆಗೆದಾಗ ಕೊಲೆಯಾದ ವಿಷಯ ಬೆಳಕಿಗೆ ಬಂದಿದೆ. ಇನ್ನು, ವೈದ್ಯರ ಒಬ್ಬ ಮಗ ಬೆಂಗಳೂರಿನಲ್ಲಿ ಹಾಗೂ ಇನ್ನೋರ್ವ ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕೋರ್ಸ್​ ಓದುತ್ತಿದ್ದಾರೆ. ಮದುವೆಯ ಕಾರಣ ಮನೆಗೆ ಬಂಗಾರದ ಆಭರಣಗಳನ್ನು ವೈದ್ಯ ರಮೇಶ್…

Read More

ಚಿಕ್ಕಮಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕುಣಗಳ್ಳಿ ನಿವಾಸಿ ರಾಮಕೃಷ್ಣ ಬರ್ಬರವಾಗಿ ಹತ್ಯೆಯಾದ ವ್ಯಕ್ತಿ. ಸುರಪುರ ಗ್ರಾಮದ ಮಲ್ಲಿಕಾರ್ಜುನನಿಂದ ಕೊಲೆ ಆಗಿದೆ. ರಾಮಕೃಷ್ಣ ಕೊಲೆ ಮಾಡಿದ ಬಳಿಕ ಮಲ್ಲಿಕಾರ್ಜುನ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ರಾಮಕೃಷ್ಣ ಪದೇ ಪದೇ ತನ್ನ ವಿರುದ್ಧ ದೂರು ನೀಡುತ್ತಿದ್ದ ಹಾಗಾಗಿ ಕೊಲೆ ಮಾಡಿದ್ದಾಗಿ ತಪ್ಪೋಪ್ಪಿಕೊಂಡಿದ್ದಾನೆ.

Read More

ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ಹೆಸರಘಟ್ಟದ ಬೆನಕ ಚೌಟ್ರಿ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಾಮಾಕ್ಷಿಪಾಳ್ಯ ನಿವಾಸಿ ವೃದ್ಧ  ನಾಗರಾಜ್ (60) ಎಂದು ತಿಳಿದುಬಂದಿದೆ. BMTC ಬಸ್ ನೆಲಮಂಗಲದಿಂದ ಹೆಸರಘಟ್ಟ ಮಾರ್ಗವಾಗಿ ಯಲಹಂಕಕ್ಕೆ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಾಭಸಕ್ಕೆ ಗಂಭೀರ ಗಾಯಗೊಂಡು ನಾಗರಾಜ್ ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರೆ. ಸ್ಥಳಕ್ಕೆ ಸೋಲದೇವನಹಳ್ಳಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೂ, ಬಸ್ ಸಮೇತ ಚಾಲಕ ನರಸಿಂಹಮೂರ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ

Read More

ಬೀದರ್ : ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್, ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಯುವಕನನ್ನು ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್ ಎಂದು ಗುರುತಿಸಲಾಗಿದೆ. ಕಳೆದ ಹಲವು ತಿಂಗಳಿಂದ ಮೃತ ಸಮೀರ್ ಕಮಲನಗರ ಪಟ್ಟಣದ ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದನು. ಬಿಸಿಲಿನ ತಾಪ ತಾಳಲಾರದೇ ತಲೆ ಸುತ್ತು ಬಿದ್ದು ಸಮೀರ್ ಮೃತನಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಪ್ರಕರಣದ ವಿವರಗಳು: ಮೃತ ಯುವಕ: ಮೊಹ್ಮದ್ ಸಮೀರ್ (20 ವರ್ಷ). ಮೂಲ: ಉತ್ತರ ಪ್ರದೇಶ ರಾಜ್ಯದ ನಿವಾಸಿ. ಸ್ಥಳ: ಕಮಲನಗರದ ರಸ್ತೆ ಬದಿ. ಸಾವಿನ ಶಂಕೆ: ಪ್ರಸ್ತುತ ಬೀದರ್ ಜಿಲ್ಲೆಯಾದ್ಯಂತ ತೀವ್ರವಾದ ಬಿಸಿಲಿದ್ದು, ಉಷ್ಣಾಂಶವು ಅಧಿಕವಾಗಿದೆ. ಯುವಕನು ಈ ಬಿಸಿಲಿನ ತಾಪವನ್ನು ತಾಳಲಾರದೆ (Heatstroke) ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸ್ ಕ್ರಮ: ಸ್ಥಳಕ್ಕೆ ಭೇಟಿ ನೀಡಿದ…

Read More

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಶೀತಲ ಸಮರ ಈಗ ಸ್ಫೋಟಗೊಂಡಿದೆ. ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿ ಸಿ ಆರ್ ಇ (DCRE) ಎಸ್‌ಪಿ ಕಾಶಿನಾಥ್ ಅವರು ಡಿಜಿಪಿ ಸಲೀಂ ಅವರಿಗೆ ಗಂಭೀರ ಆರೋಪಗಳಿರುವ ಪತ್ರ ಬರೆಯುವ ಮೂಲಕ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಎಸ್‌ಪಿ ಕಾಶಿನಾಥ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. “ನನಗೆ ಕೇವಲ 30 ನಿಮಿಷಗಳ ಕಾಲಾವಕಾಶ ನೀಡಿ, ಈ ಐಪಿಎಸ್ ಅಧಿಕಾರಿಯ ಎಲ್ಲಾ ಕರ್ಮಕಾಂಡಗಳನ್ನು ನಿಮ್ಮ ಮುಂದೆ ಬಯಲು ಮಾಡುತ್ತೇನೆ” ಎಂದು ಡಿಜಿಪಿಯವರಿಗೆ ಬರೆದ ಪತ್ರದಲ್ಲಿ ಸವಾಲು ಹಾಕಿದ್ದಾರೆ. ವಿವಾದದ ಹಿನ್ನೆಲೆ ಪತ್ರ ಸಮರ: ಡಿ ಸಿ ಆರ್ ಇ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಎಸ್‌ಪಿ ಕಾಶಿನಾಥ್ ಅವರು ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ತಿಳಿದುಬಂದಿದೆ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದ ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು…

Read More

ಮಂಡ್ಯ : ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳು ಗಾಂಜಾ ಡ್ರಗ್ಸ್ ಸಿಗರೇಟ್ ಸೇರಿದಂತೆ ಇತರೆ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ಪೊಲೀಸ ಅಧಿಕಾರಿಗಳು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು ಆದರೆ ಇದೀಗ ಮಂಡ್ಯದ ಕಾರಾಗೃಹದಲ್ಲೂ ಕೂಡ ಗಾಂಜಾ ಹಾಗೂ ಮೊಬೈಲ್ ಗಳು ಪತ್ತೆಯಾಗಿವೆ. ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಕೈದಿಗಳ ಕಳ್ಳಾಟ ಇದೀಗ ಬಯಲಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಕದೀಮರು ಪ್ಲಾಸ್ಟಿಕ್ ಸುತ್ತಿದಂತಹ ಬಾಲ್ ಅನ್ನು ಕಾಂಪೌಂಡ್ ಒಳಗಡೆ ಎಸೆದಿದ್ದಾರೆ. ಚೆಂಡು ಒಳಗಡೆ ಮೊಬೈಲ್ ಮತ್ತು ಗಾಂಜಾ ಇಟ್ಟಿದ್ದಾರೆ. ಬಳಿಕ ಈ ಬಾಲನ್ನು ಕೈದಿ ನಾಗ ಎಂಬಾತ ಎತ್ತಿಕೊಂಡಿದ್ದಾನೆ.ಎಲ್ಲಾ ಚಲನವಲನಗಳನ್ನು ಜೈಲಾಧಿಕಾರಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿದ್ದಾರೆ. ನಂತರ ನಾಗನ ಸೆಲ್ ಪರಿಶೀಲನೆ ಮಾಡಿದ ಬಾಲ್ ಓಪನ್ ಮಾಡಿದಾಗ ಹತ್ತು ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್ ಪತ್ತೆಯಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು : ಮಧ್ಯ ಪ್ರಾಚ್ಯ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು ಈ ಒಂದು ಯುದ್ಧದ ಪರಿಣಾಮ ರೈತರ ಮೇಲೆ ಬೀರಿದೆ. ಹೌದು ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಈರುಳ್ಳಿ ಬೆಲೆಯ ದರ ಇದೀಗ ಪಾತಾಳಕ್ಕೆ ಕುಸಿದಿದ್ದು, ರೈತರು ಇದೀಗ ಕಣ್ಣೀರು ಹಾಕುತ್ತಿದ್ದಾರೆ. ಹೌದು ಸೊಲ್ಲಾಪುರ ಸೇರಿ ಮಹಾರಾಷ್ಟ್ರ ಈರುಳ್ಳಿ ವಿದೇಶಕ್ಕೆ ರಫ್ತಾಗದ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಬೆಳೆದ ಈರುಳ್ಳಿ ಬೇಡಿಕೆ ಕುಸಿತವಾಗುತ್ತಿದೆ. ಹೊರ ರಾಜ್ಯಗಳ ಖರೀದಿದಾರರು, ದಲ್ಲಾಳಿಗಳು ಬಾರದ ಹಿನ್ನೆಲೆ ಬೆಲೆ ಕುಸಿಯುತ್ತಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 600 ರಿಂದ 800 ರೂಪಾಯಿಗೆ ಕ್ವಿಂಟಾಲ್ ಈರುಳ್ಳಿ ಮಾರಾಟವಾಗುತ್ತಿದೆ. ಎಕರೆಗೆ 50 ರಿಂದ 60 ಸಾವಿರ ರೂ. ಖರ್ಚು ಮಾಡಿ ಈರುಳ್ಳಿ ಬೆಳೆದ ರೈತರ ಕಣ್ಣಲ್ಲಿ ನೀರು ಬರುತ್ತಿದೆ. ಮಾರುಕಟ್ಟೆಗೆ ಈರುಳ್ಳಿ ಸಾಗಣೆ ಮಾಡುವ ವೆಚ್ಚವೂ ಸಹ ವಾಪಸ್ ಬರುತ್ತಿಲ್ಲ ಅಂತ ರೈತರ ಅಳಲು ತೋಡಿಕೊಂಡಿದ್ದಾರೆ. ಕಡಿಮೆ ಗುಣಮಟ್ಟದ ಈರುಳ್ಳಿಯನ್ನ ಕೇಳುವವರೇ ಇಲ್ಲದ ಪರಸ್ಥಿತಿ ಎದುರಾಗಿದೆ. ತರಕಾರಿ ಮಾರುಕಟ್ಟೆಯಲ್ಲಿ 100 ರೂಪಾಯಿಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಅವರ ಪುತ್ರ ನಲಪಾಡ್ ಮನೆಯ ಮೇಲೆ ಇಡಿ ದಾಳಿ ಮಾಡಿದೆ. ಬೆಂಗಳೂರಿನ 17 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ ಕಾಂಗ್ರೆಸ್ ಶಾಸಕರಾಗಿರುವ ಹರೀಶ್ ಮನೆಯ ಮೇಲೆ ಇಡೀ ದಾಳಿ ಮಾಡಿದ್ದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ದಾಳಿ ನಡೆಸಿದೆ.ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗಿ ಸಂಕಷ್ಟ ತಂದೊಡ್ಡಿದೆ. ಇಂದು ಬೆಳ್ಳಂಬೆಳಿಗ್ಗೆ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರ ನಿವಾಸಗಳು ಸೇರಿದಂತೆ ಬೆಂಗಳೂರಿನ ಒಟ್ಟು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

Read More