Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಗೆ ಇಂದು (ಗುರುವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಬಿರುಸಿನ ಮತದಾನ ಆರಂಭಗೊಂಡಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಆರಂಭಿಕ ಗಂಟೆಗಳಲ್ಲಿಯೇ ಉತ್ತಮ ಮತದಾನ ದಾಖಲಾಗಿದೆ. ಮೇಲ್ಮನೆ ಚುನಾವಣೆಯ ಕಣ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರಲ್ಲಿ ತಳಮಳ ಸೃಷ್ಟಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಪ್ರಮುಖ ಮೂರೂ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ನಿಂದ ಐದು ಅಭ್ಯರ್ಥಿಗಳು, ಬಿಜೆಪಿಯಿಂದ ಇಬ್ಬರು ಹಾಗೂ ಮೈತ್ರಿಕೂಟದ ಪಾಲುದಾರ ಪಕ್ಷವಾದ ಜೆಡಿಎಸ್ನಿಂದ ಓರ್ವ ಅಭ್ಯರ್ಥಿ ಸೇರಿದಂತೆ ಒಟ್ಟು ಎಂಟು ಜನ ಕಣದಲ್ಲಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಸೀಟುಗಳ ಸಂಖ್ಯೆಗಿಂತ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಚುನಾವಣೆ ಅನಿವಾರ್ಯವಾಗಿದೆ. ಶೇ. 34.78 ರಷ್ಟು ಮತದಾನ ಪ್ರಗತಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ಆರಂಭವಾದಾಗಿನಿಂದ ಶಾಸಕರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿದ್ದಾರೆ. ಲಭ್ಯವಿರುವ ಅಧಿಕೃತ ಮಾಹಿತಿ ಪ್ರಕಾರ, ಬೆಳಿಗ್ಗೆ 11 ಗಂಟೆಯ…
ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ ನಡೆಯಿತು ಕಾಂಗ್ರೆಸ್ಸ್’ನ 5 ಬಿಜೆಪಿಯ 2 ಹಾಗೂ ಜೆಡಿಎಸ್ ನ ಓರ್ವ ಅಭ್ಯರ್ಥಿ ಈ ಒಂದು ಪರಿಷತ್ ಚುನಾವಣೆ ಕಣದಲ್ಲಿ ಇದ್ದಾರೆ. ಇದೀಗ ಬಿಜೆಪಿ ಉಚ್ಛಾಟಿಕ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಹಾಕುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್, ಬಿಜೆಪಿ ಜೆಡಿಎಸ್ ಯಾರು ನನ್ನನ್ನು ಸಂಪರ್ಕಿಸಿಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಕರೆ ಮಾಡಿ ಕರೆಸಿದರು ಅಲ್ಲಿ ನಮ್ಮ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು. ನಾನು ನಮ್ಮ ಕ್ಷೇತ್ರದ ಹಲವಾರು ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ.ಈ ಸಮಸ್ಯೆಗಳನ್ನು ಬಗೆಹರಿಸಿದರೆ ನಾನು ಕೂಡ ನೀವು ಹೇಳಿದಂತ ಅಭ್ಯರ್ಥಿಗೆ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ ಅಂತ ಹೇಳಿದ್ದೇನೆ. ಆಗ ಸಿಎಂ ಹಂತ ಹಂತವಾಗಿ ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಆತ್ಮಸಾಕ್ಷಿಯಾಗಿ ಕಾಂಗ್ರೆಸ್…
ಬೆಂಗಳೂರು, ಜೂನ್ 18: ರಾಜ್ಯ ರಾಜಕಾರಣದ ಪ್ರಮುಖ ವಿದ್ಯಮಾನವೊಂದರಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರ ಸದಾಶಿವನಗರದಲ್ಲಿರುವ ಅಧಿಕೃತ ನಿವಾಸಕ್ಕೆ ದಿಢೀರ್ ಭೇಟಿ ನೀಡಿದರು. ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಏರುಪೇರಿನಿಂದ ಬಳಲುತ್ತಿದ್ದ ಉಪಮುಖ್ಯಮಂತ್ರಿಗಳ ಕ್ಷೇಮ ಸಮಾಚಾರವನ್ನು ವಿಚಾರಿಸಲು ಮುಖ್ಯಮಂತ್ರಿಗಳು ಈ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಆರೋಗ್ಯ ವಿಚಾರಿಸಿದ ಸಿಎಂ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪರಮೇಶ್ವರ ಅವರ ಕುಟುಂಬಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಪರಮೇಶ್ವರ ಅವರೊಂದಿಗೆ ಸುಮಾರು ಹೊತ್ತು ಮಾತುಕತೆ ನಡೆಸಿದ ಮುಖ್ಯಮಂತ್ರಿಗಳು, ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ವೈಯಕ್ತಿಕವಾಗಿ ಮಾಹಿತಿ ಪಡೆದರು. ವಿಶ್ರಾಂತಿ ಪಡೆದು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ ಸಕ್ರಿಯರಾಗುವಂತೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹಾರೈಸಿದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತಿ ಇದೇ ಸಂದರ್ಭದಲ್ಲಿ ರಾಜ್ಯ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸಹ ಉಪಮುಖ್ಯಮಂತ್ರಿಗಳ…
ಬೆಂಗಳೂರು: ವಿಶ್ವದ ಮೂರನೇ ಅತಿದೊಡ್ಡ ವಾಹನ ಉತ್ಪಾದಕ ರಾಷ್ಟ್ರವಾಗಿರುವ ಭಾರತದ ಆಟೋಮೊಬೈಲ್ ವಲಯದಲ್ಲಿ ಮಹತ್ವದ ಮೈಲುಗಲ್ಲೊಂದು ಸೃಷ್ಟಿಯಾಗಿದೆ. ದೇಶದ ಪ್ರಮುಖ ಉಕ್ಕು ಉತ್ಪಾದನಾ ಸಂಸ್ಥೆಯಾದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ ವಾಹನಗಳ ತಯಾರಿಕೆಯಲ್ಲಿ ಬಳಸುವ ಉನ್ನತ ಗುಣಮಟ್ಟದ ‘ಝಾಗ್ನೆಲಿಸ್ ಪ್ರೊಟೆಕ್ಟ್’ ಎಂಬ ಪೇಟೆಂಟ್ ಪಡೆದ ಸ್ಟೀಲ್ ಬ್ರ್ಯಾಂಡ್ ಅನ್ನು ಬುಧವಾರ ಬಿಡುಗಡೆ ಮಾಡಿದೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ಗ್ರಾಹಕರ ಸಮ್ಮುಖದಲ್ಲಿ ಈ ಪ್ರೀಮಿಯಂ ಸ್ಟೀಲ್ ಅನ್ನು ಅನಾವರಣಗೊಳಿಸಲಾಯಿತು. ಇದು ಜಿಂಕ್, ಅಲ್ಯೂಮಿನಿಯಂ ಮತ್ತು ಮೆಗ್ನೀಸಿಯಮ್ ಲೇಪನವನ್ನು ಹೊಂದಿದ್ದು, ವಾಹನಗಳು ಬೇಗನೆ ತುಕ್ಕು ಹಿಡಿಯದಂತೆ ರಕ್ಷಣೆ ನೀಡುವಲ್ಲಿ ಇದು ಸಾಂಪ್ರದಾಯಿಕ ಸ್ಟೀಲ್ಗಿಂತ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿದೆ. ಆಮದಿಗೆ ಬ್ರೇಕ್, ಆತ್ಮನಿರ್ಭರ್ ಭಾರತಕ್ಕೆ ಬೆಂಬಲ! ಇದುವರೆಗೆ ಭಾರತದಲ್ಲಿ ಇಂತಹ ಉನ್ನತ ತಂತ್ರಜ್ಞಾನದ, ತುಕ್ಕು ನಿರೋಧಕ ಸ್ಟೀಲ್ಗಳನ್ನು ವಿದೇಶಗಳಿಂದಲೇ ಆಮದು ಮಾಡಿಕೊಳ್ಳಲಾಗುತ್ತಿತ್ತು. ಪ್ರಸ್ತುತ ಭಾರತದ ಆಟೋಮೊಬೈಲ್ ವಲಯಕ್ಕೆ ಬೇಕಾದ ಶೇ. 8-10 ರಷ್ಟು ಪ್ರೀಮಿಯಂ ಸ್ಟೀಲ್ ವಿದೇಶದಿಂದಲೇ ಬರುತ್ತಿದೆ. ಆದರೆ, ಇದೇ ಮೊದಲ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನಪರಿಷತ್ತಿನ 7 ಸ್ಥಾನಗಳ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಂಗಳೂರಿನ ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಬಿರುಸಿನಿಂದ ಆರಂಭಗೊಂಡಿದೆ. ಈ ಬಾರಿಯ ಚುನಾವಣಾ ಕಣದಲ್ಲಿ ಕಾಂಗ್ರೆಸ್ನಿಂದ 5, ಬಿಜೆಪಿಯಿಂದ 2 ಹಾಗೂ ಜೆಡಿಎಸ್ನಿಂದ ಒಬ್ಬ ಅಭ್ಯರ್ಥಿ ಸೇರಿದಂತೆ ಒಟ್ಟು ಎಂಟು ಜನ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಜಯದ ಲೆಕ್ಕಾಚಾರಗಳು ನಡೆಯುತ್ತಿರುವ ಬೆನ್ನಲ್ಲೇ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೆ, ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಬಿಜೆಪಿಯಿಂದ ಉಚ್ಛಾಟಿತರಾಗಿರುವ ಉತ್ತರ ಕನ್ನಡದ ಶಾಸಕ ಶಿವರಾಂ ಹೆಬ್ಬಾರ್ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ಅಡ್ಡ ಮತದಾನ (ಕ್ರಾಸ್ ವೋಟಿಂಗ್) ಮಾಡಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹಬ್ಬಿವೆ. ಇದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಮ್ಮ ಮತದಾನದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ನ ಏಳು ಸ್ಥಾನಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಬೆಂಗಳೂರಿನ ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಅತ್ಯಂತ ಬಿರುಸಿನಿಂದ ಆರಂಭಗೊಂಡಿದೆ. ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿರುವ ಈ ಚುನಾವಣೆಯಲ್ಲಿ ಒಟ್ಟು ಎಂಟು ಜನ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ತೆರೆಮರೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪ್ರಸ್ತುತ ಕಣದಲ್ಲಿರುವ ಏಳು ಸ್ಥಾನಗಳಿಗಾಗಿ ಎಂಟು ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವುದರಿಂದ ಚುನಾವಣೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷದಿಂದ ಐದು ಅಭ್ಯರ್ಥಿಗಳು ಕಣದಲ್ಲಿದ್ದರೆ, ಪ್ರಮುಖ ವಿರೋಧ ಪಕ್ಷವಾದ ಬಿಜೆಪಿಯಿಂದ ಇಬ್ಬರು ಹಾಗೂ ಮೈತ್ರಿಕೂಟದ ಜೆಡಿಎಸ್ನಿಂದ ಒಬ್ಬ ಅಭ್ಯರ್ಥಿ ಚುನಾವಣಾ ಅಖಾಡದಲ್ಲಿದ್ದಾರೆ. ಹೀಗಾಗಿ ಪ್ರತಿ ಮತವೂ ಇಲ್ಲಿ ನಿರ್ಣಾಯಕವಾಗಿದ್ದು, ಎಲ್ಲಾ ಪಕ್ಷಗಳು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಸರತ್ತು ನಡೆಸುತ್ತಿವೆ. ಜಿ.ಟಿ. ದೇವೇಗೌಡರ ಅಡ್ಡ ಮತದಾನದ ಶಂಕೆ? ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ದೊಡ್ಡ ಬಾಂಬ್ ಸಿಡಿದಂತಾಗಿದೆ. ಜೆಡಿಎಸ್ನ ಹಿರಿಯ ನಾಯಕ ಹಾಗೂ ಶಾಸಕ ಜಿ.ಟಿ.…
ರಾಯಚೂರು : ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಹಬ್ಬದ ಸಾರ್ವಜನಿಕ ಆಚರಣೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ಕರ್ನಾಟಕ ಪೋಲೀಸ್ ಕಾಯ್ದೆ 1963ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. ಹೌದು ಜಿಲ್ಲೆಯ ಸಿಂಧನೂರು, ಮಾನ್ವಿ, ಸಿರವಾರ, ದೇವದುರ್ಗ ಹಾಗೂ ಮಸ್ಕಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಿಸುವುದು ಹಾಗೂ ಸಾರ್ವಜನಿಕವಾಗಿ ಮೆರವಣಿಗೆ ಮಾಡುವುದನ್ನು ಕರ್ನಾಟಕ ಪೋಲೀಸ್ ಕಾಯ್ದೆ 1963ರ ಕಲಂ 35ರನ್ವಯ ನಿಷೇಧಿಸಲಾಗಿದೆ. ಸಾರ್ವಜನಿಕರ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಬುಧವಾರದಿಂದ ಜೂ.26 ರವರೆಗೆ ಆಚರಿಸಲಿರುವ ಮೋಹರಂ ಹಬ್ಬವನ್ನು ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಿಸುವುದು ಹಾಗೂ ಈ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆಯನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಪೂವಿತಾ ಎಸ್. ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಣಿವಾರ, ಉಪ್ಪಳ, ತುರ್ವಿಹಾಳ ಪೊಲೀಸ್…
ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವಂತಹ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಐಟಿ ಕಾರಿಡಾರ್ ವ್ಯಾಪ್ತಿಯ ಪಿಜಿ (ಪೇಯಿಂಗ್ ಗೆಸ್ಟ್) ವಸತಿ ಗೃಹವೊಂದರಲ್ಲಿ ಮಹಿಳೆಯರ ಖಾಸಗಿ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸಲು ಯತ್ನಿಸಿದ ಗಂಭೀರ ಪ್ರಕರಣವೊಂದು ದಾಖಲಾಗಿದೆ. ಜೂನ್ 14 ರಂದು ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಭೋಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆಯ ಸಮಯಪ್ರಜ್ಞೆ ಮತ್ತು ಜಾಗರೂಕತೆಯಿಂದಾಗಿ ಆರೋಪಿಯ ಕೃತ್ಯ ತಕ್ಷಣವೇ ಬಯಲಾಗಿದೆ. ದೂರು ನೀಡಿರುವ ಮಹಿಳೆಯು ಕಳೆದ ಎರಡು ತಿಂಗಳಿಂದ ಭೋಗನಹಳ್ಳಿಯಲ್ಲಿರುವ ಪ್ರಸಿದ್ಧ ಕೋ-ಲಿವಿಂಗ್ ಪಿಜಿಯಲ್ಲಿ ವಾಸಿಸುತ್ತಿದ್ದರು. ಜೂನ್ 14 ರಂದು ಸಂಜೆ ಸುಮಾರು 4:30 ರ ಅವಧಿಯಲ್ಲಿ ಅವರು ಎಂದಿನಂತೆ ತಮ್ಮ ಕೋಣೆಯ ಬಾತ್ರೂಮ್ಗೆ ತೆರಳಿದ್ದಾರೆ. ಈ ವೇಳೆ ಶೌಚಾಲಯದ ಏರ್ವೆಂಟ್ (ವೆಂಟಿಲೇಟರ್) ಭಾಗದಲ್ಲಿ ಅಸಹಜವಾಗಿ ಬಿಳಿ ಬಣ್ಣದ ಐಫೋನ್ ಒಂದನ್ನು ಇಟ್ಟಿರುವುದು ಅವರ ಗಮನಕ್ಕೆ ಬಂದಿದೆ. ಯಾರೋ ತಮ್ಮ ಖಾಸಗಿ ದೃಶ್ಯಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡುತ್ತಿದ್ದಾರೆ ಎಂಬ ಅನುಮಾನ…
ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಹಾಗೂ ಇತರ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ಕಡ್ಡಾಯ ನಿರ್ದೇಶನ ನೀಡಿದೆ. ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರಾದ ಮಠದ್ ಶಿವಮೂರ್ತಿ ದಿವಾಕರ ಅವರು ಜೂನ್ 16, 2026 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಹೊರಗುತ್ತಿಗೆ ನೌಕರರ ಹಿತರಕ್ಷಣೆಗಾಗಿ ಪ್ರಮುಖ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಕಾರ್ಮಿಕ ಇಲಾಖೆಯ ಅಧಿಸೂಚನೆ ಸಂಖ್ಯೆ KAE 106 LWA 2021 (ದಿನಾಂಕ: 28.07.2022) ಪ್ರಕಾರ, ದಿನಾಂಕ 01-04-2026 ರಿಂದ 31-03-2027 ರ ಅವಧಿಗೆ ನಿಗದಿಪಡಿಸಲಾದ ಕನಿಷ್ಠ ವೇತನ ದರಗಳಂತೆಯೇ ಹೊರಗುತ್ತಿಗೆ ಸಿಬ್ಬಂದಿಗಳಿಗೆ ವೇತನ ಪಾವತಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ದಾಖಲೆಗಳ ಪರಿಶೀಲನೆ: ಹೊರಗುತ್ತಿಗೆ ಪೂರೈಸುವ ಸಂಸ್ಥೆಗಳು (Agencies) ನೌಕರರಿಗೆ ನೇಮಕಾತಿ ಆದೇಶ ಪತ್ರ, ಗುರುತಿನ ಚೀಟಿ ಹಾಗೂ ವೇತನ ಪ್ರಮಾಣ ಪತ್ರವನ್ನು ನೀಡಿರುವುದನ್ನು ಖಚಿತಪಡಿಸಿಕೊಂಡ ನಂತರವೇ…
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸೆನ್ಸೇಷನ್ ಸೃಷ್ಟಿಸುವ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಸ್ನೇಹದ ವಿಡಿಯೋಗಳು ಮತ್ತೊಮ್ಮೆ ಮುನ್ನಲೆಗೆ ಬಂದಿವೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಮೆಲೋನಿ ಅವರಿಗೆ ‘ಮೆಲೋಡಿʼ ಚಾಕೊಲೇಟ್ ಗಿಫ್ಟ್ ಕೊಟ್ಟ ವಿಡಿಯೋವೊಂದು ಇಂಟರ್ನೆಟ್ನಲ್ಲಿ ಭಾರೀ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ, ಜಾಗತಿಕ ನಾಯಕರ ಸಮ್ಮುಖದಲ್ಲಿ ಇವರಿಬ್ಬರ ಮತ್ತೊಂದು ಸ್ವಾರಸ್ಯಕರ ಮಾತುಕತೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಪ್ರಸ್ತುತ ಫ್ರಾನ್ಸ್ನ ಏವಿಯನ್-ಲೆ-ಬೈನ್ಸ್ನಲ್ಲಿ ಜಿ7 (G7) ಶೃಂಗಸಭೆ ನಡೆಯುತ್ತಿದ್ದು, ವಿಶ್ವದ ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದವನ್ನು ಸ್ವಾಗತಿಸುವ ನಿಟ್ಟಿನಲ್ಲಿ ಈ 7 ಪ್ರಮುಖ ರಾಷ್ಟ್ರಗಳ ಒಕ್ಕೂಟದ ನಾಯಕರು ಇಲ್ಲಿ ಒಟ್ಟುಗೂಡಿದ್ದಾರೆ. ಈ ಮಹತ್ವದ ಜಾಗತಿಕ ವೇದಿಕೆಯು ಭಾರತ ಮತ್ತು ಇಟಲಿ ಪ್ರಧಾನಿಗಳ ನಡುವಿನ ಮತ್ತೊಂದು ಆತ್ಮೀಯ ಹಾಗೂ ಹಾಸ್ಯಭರಿತ ಕ್ಷಣಕ್ಕೆ ಸಾಕ್ಷಿಯಾಗಿದೆ.…














