Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದಂಧೆಕೋರರ ವಿರುದ್ಧ ಸಮರ ಮುಂದುವರೆಸಿರುವ ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಗಳಿಂದ 10.59 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರು ವಿದೇಶಿ ಪ್ರಜೆಗಳೂ ಸೇರಿದಂತೆ ಒಟ್ಟು 15 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿವಿಧ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಸೆನೆಗಲ್ ಪ್ರಜೆಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಬಂಧಿತ ಆರೋಪಿಯಾಗಿದ್ದು, 29 ಎಲ್‌ಎಸ್‌ಡಿ ಮಾತ್ರೆಗಳು, 546 ಗ್ರಾಂ ಎಂಡಿಎಂಎ, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್ ಹಾಗೂ 27 ಎಲ್‌ಎಸ್‌ಡಿ ಸ್ಟ್ರಿಪ್ಸ್ ಸೇರಿದಂತೆ 1.5 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕ್ರೀಡಾ ವೀಸಾ ಪಡೆದು ಭಾರತಕ್ಕೆ ಬಂದು ಮಾದಕ ದಂಧೆಯಲ್ಲಿ ತೊಡಗಿದ್ದ ದಕ್ಷಿಣ ಆಫ್ರಿಕಾ ಮೂಲದ ಕೊರ್ಲಿ ಡೇನಿಯಲ್‌ ಎಂಬಾತನನ್ನು ಗೋವಿಂದಪುರ ಠಾಣೆ…

Read More

ಹಾವೇರಿ : ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಬಗ್ಗೆ ಸಭೆ ಕರೆಯುತ್ತೆವೆ ಎಂದು ಹಾವೇರಿಯಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.ಹಾವೇರಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಸಭೆ ಕರೆಯಬೇಕು. ತರಗತಿಗೆ ಒಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕು ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಸಚಿವರಿಗೆ ಕೇಳುತ್ತೇನೆ. ಶಿಕ್ಷಕರ ನೇಮಕ ಮಾಡದಿದ್ದರೆ ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ? ಎಸ್‍ಎಸ್‍ಎಲ್‍ಸಿಯಲ್ಲಿ ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡುತ್ತೀರಿ? ಶಿಕ್ಷಕರ ನೇಮಕಾತಿ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡುತ್ತೇನೆ. ಸರ್ಕಾರ ಎಲ್ಲಾ ನ್ಯೂನ್ಯತೆ ಸರಿಪಡಿಸಲಿ. ಎಮ್ಮಿಯನ್ನು ನೀರಿನಲ್ಲಿ ಮಲಗಿಸಿ ಬೆಲೆ ಕಟ್ಟುವುದು ಬೇಡ ಎಂದು ಅಸಮಾಧಾನ ಹೊರಹಾಕಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಹಾಸ್ಟೆಲಿನ 14ನೇ ಮಹಡಿಯಿಂದ ಬಿದ್ದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿ ಬಳಿ ಇರುವ ವಿಶ್ವವಿದ್ಯಾಲಯದಲ್ಲಿ ಈ ಒಂದು ಘಟನೆ ನಡೆದಿದೆ. ಸರ್ಜಾಪುರದ 20 ವರ್ಷದ ನಯನಾ ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ನಯನಾ ಕಟ್ಟಡದ 14ನೇ ಮಹಡಿಯಿಂದ ಬಿದ್ದು ನಯನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಬಿದ್ದು ಒದ್ದಾಡುತ್ತಿದ್ದರು, ಆಂಬುಲೆನ್ಸ್ ಹಾಗು ಪೊಲೀಸರು ಸ್ಥಳಕ್ಕೆ ಬಾರದೆ ಇದ್ದಿದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ಮೈಲುಗಲ್ಲಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಇಶಾ ಫೌಂಡೇಶನ್ ನಿಂದ ಬೆಂಗಳೂರು ಕಡೆಗೆ ಯುವಕ ಯುವತಿ ತೆರಳುತ್ತಿದ್ದರು. ಅಪಘಾತದ ಸ್ಥಳಕ್ಕೆ ಸಂಚಾರಿ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಕೂಡ ಬಂದಿಲ್ಲ ಗಂಟೆಗಳ ಬಳಿಕ ಇಬ್ಬರನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ವಿರುದ್ಧ ಅಪಪ್ರಚಾರದ ಪ್ರಕರಣವನ್ನು ರದ್ದುಗೊಳಿಸುವ ಮೂಲಕ, ರಿಲೀಫ್ ನೀಡಿದೆ. ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಅವರ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿದೆ. ಅಂದಹಾಗೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದಂತ ಕರಪ್ಷನ್ ರೇಟ್ ಕಾರ್ಡ್ ಜಾಹೀರಾತು ಸಂಬಂಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅರ್ಜಿಯನ್ನು ವಿಚಾರಣೆ ನಡೆಸಿ ಪ್ರಕರಣ ರದ್ದುಪಡಿಸಿದೆ.

Read More

ಮಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೇಳಿಕೆ ನೀಡಿದರು. SIT ಅಂತಿಮ ವರದಿಯನ್ನು ಕೋರ್ಟಿಗೂ ಸಲ್ಲಿಸಬೇಕಿದೆ ಅಂತಿಮ ವರದಿ ನೀಡುವವರೆಗೆ ಯಾವುದೇ ನಿರ್ಧಾರಕ್ಕೆ ಬರುವುದಿಲ್ಲ. ಅಂತಿಮ ವರದಿ ನೀಡುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ಬುರುಡೆ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ವರದಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಸದನದೊಳಗೆ ಮತ್ತು ಸದಾನಂದ ಹೊರಗೆ ಪ್ರತಿಕ್ರಿಯಿಸಿದ್ದೇನೆ. ಎಸ್ಐಟಿ ಅಂತಿಮ ವರದಿ ಬಂದ ನಂತರ ಕ್ಯಾಬಿನೆಟ್ ನಲ್ಲಿ ಇಡುತ್ತೇವೆ. ಕ್ಯಾಬಿನೆಟ್ ನಲ್ಲಿ ನಿರ್ಧರಿಸಿದ ನಂತರ ಬಹಿರಂಗಗೊಳಿಸುವ ಕೆಲಸ ನಡೆಯುತ್ತೆ ಎಂದು ತಿಳಿಸಿದರು.

Read More

ಚಾಮರಾಜನಗರ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದದಲ್ಲಿ ಸಂಭವಿಸಿದೆ. ಬಸ್ತಿಪುರದ ಕಾಲುವೆಯ ಬಳಿ 45 ವರ್ಷದ ಆನಂದ ಎಂಬಾತ ಕುಡಿದ ನಶೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಎಣ್ಣೆ ಏಟಲ್ಲಿ ರಂಪಾಟ ಮಾಡಿ ಆನಂದ್ ಪೆಟ್ರೋಲ್ ಸುರಿದುಕೊಂಡಿದ್ದ. ತನ್ನ ಮೈ ಮೇಲೆ ಪೆಟ್ರೋಲ್ ಸುರಿದು ಆನಂದ್ ಬೆಂಕಿ ಹಚ್ಚಿಕೊಂಡಿದ್ದ. ಬೆಂಕಿಯ ಉರಿ ತಾಳಲಾರದೆ ಆನಂದ್ ಮತ್ತೆ ಕಾಲುವೆಗೆ ಹಾರಿದ್ದಾನೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯ ಆನಂದನೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ ಆನಂದನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಶಿಫ್ಟ್ ಮಾ

Read More

ಬೆಂಗಳೂರು : ಸಾರಿಗೆ ಸಿಬ್ಬಂದಿ ಬೆಂಗಳೂರು ಚಲೋ ಮತ್ತು ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಇದೀಗ BMTC ಎಂ.ಡಿ ನೋ ವರ್ಕ್ ನೋ ಪೇ ಆದೇಶ ಜಾರಿ ಮಾಡಿದ್ದಾರೆ. ಕರ್ತವ್ಯಕ್ಕೆ ಗೈರಾಗುವ ಬಿಎಂಟಿಸಿ ಸಿಬ್ಬಂದಿಗೆ ಆದೇಶ ಜಾರಿ ಮಾಡಿದ್ದಾರೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಕೆ ಬಿ ಶಿವಕುಮಾರ್ ಈ ಒಂದು ಆದೇಶ ಹೊರಡಿಸಿದ್ದಾರೆ. ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಿಬ್ಬಂದಿಗಳು ಮುಷ್ಕರ ಹಾಗೂ ಬೆಂಗಳೂರು ಚಲೋ ಸಿದ್ದತೆ ಮಾಡಿಕೊಂಡಿದ್ದ ಸಾರಿಗೆ ಸಿಬ್ಬಂದಿಗಳಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.

Read More

ಬೆಂಗಳೂರು : ಮಹಿಳೆಯರು ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾಕ್ಟರ್ ಎಂ. ಎ ಸಲೀಂ ಆದೇಶ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನಡೆದ ಪ್ರಕರಣವನ್ನು ಉಲ್ಲೇಖಿಸಿ ಈ ಒಂದು ಆದೇಶ ಹೊರಡಿಸಿದ್ದು, ನೊಂದ ಮಹಿಳೆಯರು ಹಾಗೂ ಅಪ್ರಾಪ್ತರ ವಿಳಾಸ ಗೌಪ್ಯತೆಗೆ ಡಾಕ್ಟರ್ ಎಂ.ಎ ಸಲೀಂ ಸೂಚನೆ ನೀಡಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕೂಡ ಗೌಪ್ಯತೆ ಕಾಪಾಡುವಂತೆ ಸೂಚಿಸಿದ್ದಾರೆ. ಮೂಲ ದೂರು ಅರ್ಜಿಯನ್ನು ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ವಿಳಾಸ ಹಾಗೂ ಗುರುತು ಇರಬೇಕು. ದೂರು ಸ್ವೀಕರಿಸಿದ ನಂತರ ಠಾಣಾಧಿಕಾರಿಯ ಅಥವಾ ತನಿಕಾಧಿಕಾರಿ ಗೌಪ್ಯತೆ ಕಾಪಾಡಲು ಮೂಲ ಹೆಸರು ಬದಲಾಯಿಸಬೇಕು. ಬದಲಾವಣೆಯ ಬಳಿಕ ನ್ಯಾಯಾಲಯಕ್ಕೆ ದೂರು ನೀಡಬೇಕು ಮತ್ತು ಬದಲಿ ಹೆಸರು ಇರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ. ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಐಜಿ, ಡಿಸಿಪಿ ಸಲೀಂ ಆದೇಶ ಹೊರಡಿಸಿದ್ದಾರೆ.ಎಫ್ ಐ ಆರ್ ನಲ್ಲಿ ಹೆಸರು…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಆಸ್ತಿಗಾಗಿ ತಂದೆಯನ್ನೇ ಇಬ್ಬರು ಪಾಪಿ ಪುತ್ರರು ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಇಂದಿರಾನಗರದ ದೂಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳಿಂದ ಹಲ್ಲೆಗೊಳಗಾಗಿದ್ದ ತಂದೆ ಮುನಿಕೃಷ್ಣ (70) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುತ್ರರಾದ ಮೋಹನ್ ಕುಮಾರ್, ಗಜೇಂದ್ರ ಎಂಬುವರು ಆಸ್ತಿಗಾಗಿ ತಂದೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಿದ ಬಳಿಕ ಆರೋಪಿಗಳಾದ…

Read More