Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನ ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ. ಬಳಿಕ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ವಿಡಿಯೋ ಮಾಡಿಟ್ಟುಕೊಂಡು ಬೆದರಿಕೆ ಹಾಕಿದ್ದ. ಇದಾದ ಬಳಿಕ ಬೆದರಿಕೆ ಹಾಕಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಸದ್ಯ ಯುವತಿಯ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಬಿಎನ್ಎಸ್ 64(1), 351, 123 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸದ್ಯ ಸಮೀರ್ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ…
ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದ ರಾಜ್ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕೂಡ ಭಾಗಿಯಾಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಕಾರ್ಯಕ್ರಮ ಮುಗಿದ ನಂತರ, ದಿಂಡೋರಿಯ ದರ್ಗೋಡ್ ಕುಟುಂಬವು ಎರ್ಟಿಗಾ ಕಾರಿನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭೀಕರ ದುರಂತದಲ್ಲಿ ಒಂದೇ ಕುಟುಂಬದ 9 ಜನ ಸಾವನ್ನಪ್ಪಿದ್ದಾರೆ. ಮೃತರನ್ನು ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಖುಷಿ/ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ/ಗುಣವಂತಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ…
ಹಾವೇರಿ : ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಅಪಘಾತಕ್ಕೆ ಈಡಾಗಿದೆ. ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಈ ಕುರಿತು ಎಸ್ಕಾರ್ಟ್ ವಾಹನದ ಚಾಲಕ ಚನ್ನಬಸಪ್ಪ ವಿರುದ್ಧ ದೂರು ದಾಖಲಾಗಿದೆ. ಅತಿ ವೇಗದಿಂದ ಹೋಗಿ ಬಸ್ಸಿಗೆ ಗುದ್ದಿದ್ದಾನೆ ಎಂದು ದೂರು ದಾಖಲಾಗಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಚಾಮರಾಜನಗರ : ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ಮತ್ತು ಆತನ ಗ್ಯಾಂಗ್ ಡ್ರಗ್ಸ್ ಪಾರ್ಟಿ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹೊರವಲಯದಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದಾರೆ. ಕೊಳ್ಳೇಗಾಲದ ಎ1 ಕಾಂಟ್ರಾಕ್ಟರ್ ಫಯಾಜ್ ಖಾನ್ ರೆಸಾರ್ಟ್ ನಲ್ಲಿ ಈ ಪಾರ್ಟಿ ಮಾಡಿದ್ದಾರೆ. ಕಾಂಗ್ರೆಸ್ನ ಪ್ರಭಾವಿ ಶಾಸಕ ಮತ್ತು ಸಚಿವರ ಅತ್ಯಾಪ್ತನಾಗಿರುವ ಫಯಾಜ್ ಖಾನ್ ರೌಡಿಶೀಟರ್ ಜಹೀರ್ ಹಾಗೂ 50ಕ್ಕೂ ಹೆಚ್ಚು ಸಹಚರರು ಈ ಒಂದು ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಪಾರ್ಟಿಯಲ್ಲಿ ಗಾಂಜಾ ಮತ್ತು ಚರಜ್ ಸೇವಿಸಿ ಜಹೀರ್ ಗ್ಯಾಂಗ್ ಮೋಜು ಮಸ್ತಿ ಮಾಡಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ 15 ಜನರ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಂದಿದೆ. ಮೆಡಿಕಲ್ ರಿಪೋರ್ಟ್ ನಲ್ಲಿ 15 ಜನರು ಗಾಂಜಾ ಮತ್ತು ಚರಸ್ ಸೇವಿಸಿರೋದು ದೃಢವಾಗಿದೆ. ಪಾರ್ಟಿಯಲ್ಲಿ ರೌಡಿಶೀಟರ್ ಮತ್ತು ಕುಟುಂಬದ ಸದಸ್ಯರು ಭಾಗಿಯಾಗಿದ್ದರು ಎನ್ನಲಾಗಿದೆ. ಮಹಿಳೆಯರನ್ನು ಮಹಿಳಾ ಸಿಬ್ಬಂದಿಗಳು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಎಲ್ಲಾ ಆರೋಪಿಗಳ ವಿಚಾರಣೆ ನಡೆಯುತ್ತಿದೆ.
ಚಿಕ್ಕಮಗಳೂರು : ಇತ್ತೀಚಿಗೆ 40 ವರ್ಷ ಆದರು ಕೂಡ ಮದುವೆ ಮಾಡಿಲ್ಲ ಎಂದು ಕೋಪದಲ್ಲಿ ಪ್ರತಿಯೊಬ್ಬ ತನ್ನ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ವರದಿಯಾಗಿತ್ತು. ಇದೀಗ ಚಿಕ್ಕಮಗಳೂರಲ್ಲಿ ಮದುವೆಯಾಗದ್ದಕ್ಕೆ ಕುರಿಗಾಹಿ ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಾಹಿ ಯುವಕ ಕುಮಾರ (26)ಮೃತಪಟ್ಟ ದುರ್ದೈವಿ. ಮೂಲತಃ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಕುಮಾರ್, ತಾಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಅವರ ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ…
BIG NEWS : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್ ಮುಲ್ಲಾ ಮೇಲೆ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್
ದಾವಣಗೆರೆ : ಹುಬ್ಬಳ್ಳಿಯಲ್ಲಿ ಜಿಮ್ಟ್ರೈನರ್ ಮತ್ತು ಯುವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದು ಗೃಹ ಸಚಿವಾಚಿ ಪರಮೇಶ್ವರ್ ತಿಳಿಸಿದರು. ದಾವಣಗೆರೆಯಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಹುಬ್ಬಳ್ಳಿಗೆ ಹೊರಟಿದ್ದೇನೆ, ಬರುವುದರೊಳಗೆ ವರದಿ ನೀಡಿ ಎಂದಿದ್ದೇನೆ. ಈ ಪ್ರಕರಣದ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಇಂತಹ ಕೇಸ್ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದರು.
ಕಲಬುರ್ಗಿ : ಭೀಮ ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂದನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಾಲಸಾಬ್ ಪಟೇಲ್ (19) ಸಾವನಪ್ಪಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದಾಗ ಈ ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ತಿರುವು ಸಿಕ್ಕಿದ್ದು ಯುವತಿಗೆ, ಆರೋಪಿ ಸಮೀರ್ ಮುಲ್ಲಾ ಗರ್ಭಪಾತ ಮಾಡಿಸಿರುವ ವಿಷಯ ಬಹಿರಂಗವಾಗಿದೆ. ಹಾಗಾಗಿ ಪೊಲೀಸರು ಈ ಬಗ್ಗೆ ವೈದಿಕ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಹೌದು ಆರೋಪಿ ಸಮೀರ್ ಮತ್ತು ಯುವತಿಯನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸ್ರಿಂದ ವಿಚಾರಣೆಗೆ ಸಿದ್ಧತೆ ನಡೆದಿದೆ. ಸಂತ್ರಸ್ತ ಯುವತಿಯ ಮೇಲೆ ಸಮೀರ್ ಮುಲ್ಲಾ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ ಈ ಹಿನ್ನೆಲೆ ಸಮೀರ್ ಮುಲ್ಲಾನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುತಿಯನ್ನು ಸಮೀರ್ ಮಾಡೆಲ್ ಮಾಡುತ್ತೇನೆ ಎಂದು ಹೇಳಿದ್ದ. ಹಾಗಾಗಿ ನಿತ್ಯ ಜಿಮ್ ಗೆ ಬಾ ಎಂದು ಯುವತಿಗೆ ಹೇಳಿದ್ದ. ಸಮೀರ್ ಮಾತು ಕೇಳಿ ಯುವತಿ ಮಾಡೆಲ್ ಆಗುವ ಕನಸುಕಂಡಿದ್ದಳು. ಇದೇ ಕಾರಣಕ್ಕೆ ಸಮೀರ್ ಮತ್ತು ಯುವತಿ ನಡುವೆ ಆತ್ಮೀಯ ಬೆಳೆದಿತ್ತು. ಅದನ್ನೇ ದುರ್ಬಳಕೆ ಮಾಡಿಕೊಂಡ ಅಂತ ಯುವತಿಯ ಪೋಷಕರು…
ಮೈಸೂರು : ಭೂ ವ್ಯಾಜ್ಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ಕೋರ್ಟ್ ವಾರಂಟ್ ಜಾರಿ ಮಾಡಿ ಆದೇಶಿಸಿದೆ. ಹೌದು ಭೂ ವ್ಯಾಜ್ಯದ ಸಂಬಂಧ ಮೈಸೂರಿನ 1ನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್ ಜಾರಿ ಮಾಡಲಾಗಿದೆ. ಪ್ರಕರಣ ಹಿನ್ನೆಲೆ? ನಗರದ ಕುಂಬಾರ ಕೊಪ್ಪಲಿನ ಸೀತಾರಾಮೇಗೌಡ ಅವರಿಗೆ ಸೇರಿದ್ದ ಹೆಬ್ಬಾಳು ಗ್ರಾಮದ ಸರ್ವೇ ನಂ.155, 159/1 ವ್ಯಾಪ್ತಿಯಲ್ಲಿ ಐದು ಎಕರೆ ಪ್ರದೇಶವನ್ನು 1980 ಸಮಯದಲ್ಲಿ ನಗರ ಭೂ ಮಿತಿ ಕಾಯಿದೆಯಡಿ ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಸೀತಾರಾಮೇಗೌಡ ಅವರ ಮಗ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ಮೈಸೂರಿನ ಒಂದನೇ ಅಪರ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ನಲ್ಲಿ ಅರ್ಜಿದಾರರ ಪರವಾಗಿ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತವು ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಲಯದ ಮೊರೆ ಹೋಗಿತ್ತು. ಹಿರಿಯ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಿ, ಕೆಳ ನ್ಯಾಯಾಲಯದ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ ಗೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸಮೀರ್ ನೀಚ ಕೃತ್ಯ ಇದೀಗ ಬಯಲಾಗಿದೆ. ಸಮೀರ್ ಮುಲ್ಲಾ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಫೋಟೋಗಳು, ಗರ್ಭ ನಿರೋಧಕ ಮಾತ್ರೆಗಳ ಫೋಟೋ, ಸ್ಕಾನಿಂಗ್ ರಿಪೋರ್ಟ್ ಕೂಡ ಪತ್ತೆಯಾಗಿದೆ. ಹುಬ್ಬಳ್ಳಿ ನಗರದ ವಿಜಯನಗರ ನಿವಾಸಿಯಾಗಿರುವ ಸಮೀರ್ ಮತ್ತು ಹಿಂದೂ ಯುವತಿ ಜಿಮ್ನಲ್ಲಿ ಪರಿಚಯವಾಗಿತ್ತು. ಬಳಿಕ ಸಮೀರ್ ಯುವತಿಯೊಂದಿಗೆ ಸಲುಗೆ ಬೆಳೆಸಿದ್ದಾನೆ. ಬಳಿಕ ಯುವತಿಯನ್ನು ಮನೆಗೆ ಕರೆಯಿಸಿಕೊಂಡು ಜ್ಯೂಸ್ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ. ಕೆಲ ದಿನ ನಂತರ ಯುವತಿ ಜೊತೆ ಖಾಸಗಿಯಾಗಿ ಕಳೆದ ಕ್ಷಣಗಳಿದ್ದ ವಿಡಿಯೋ ತೋರಿಸಿ ಬೆದರಿಕೆ ಹಾಕಿದ್ದು, ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಆದರೂ ಇದೆಲ್ಲವನ್ನು ಯುವತಿ ಮನೆಯವರಿಗೆ ಹೇಳಿರಲಿಲ್ಲ. ಆದ್ರೆ ನಿನ್ನೆ (ಏಪ್ರಿಲ್ 02) ಸಂಜೆ ಈ ವಿಚಾರ…













