Author: kannadanewsnow05

ಬೆಂಗಳೂರು : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಾಗಲಕೋಟೆ ಪೊಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿ ಎಫ್ಐಆರ್ ಕೂಡ ದಾಖಲಿಸಿದ್ದಾರೆ. ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಅಲ್ಲಿ 8 ಜನರನ್ನು ಬಂಧಿಸಲಾಗಿದೆ ಸದ್ಯ ಎಲ್ಲವೂ ಸಹಜ ಸ್ಥಿತಿಯತ್ತ ಮರಳುತ್ತಿದೆ. ಎಲೆಕ್ಷನ್ ಬರುತ್ತದೆಯಲ್ಲ ಆ ರೀತಿ ತಿಮ್ಮಾಪುರವರು ಆ ರೀತಿ ಹೇಳಿಕೆ ನೀಡಿರಬಹುದು ನಾವು ಕೂಡ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಬಿಜೆಪಿ ನಾಯಕರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿ ನಾಯಕರು ಅದನ್ನೇ ಹೇಳಬೇಕಲ್ಲ ಇನ್ನೇನ್ ಮಾಡೋಕಾಗುತ್ತೆ. ನಾವು ಒಂದು ವರ್ಗಕ್ಕೆ ಕಾನೂನು ಸೀಮಿತ ಮಾಡಲ್ಲ ಯಾರೇ ಇದ್ದರೂ ಕೂಡ ಕಾನೂನು ಎಲ್ಲರಿಗೂ ಒಂದೇ ಭಾರತೀಯ ಜನತಾ ಪಾರ್ಟಿಯವರಿಗೆ ಓಲೈಕೆ ಮಾಡುತ್ತಾರೆ ಮೈನಾರಿಟಿ, ದಲಿತ ವರ್ಗಕ್ಕೆ…

Read More

ವಿಜಯಪುರ : ಕಳೆದ ಕೆಲ ತಿಂಗಳುಗಳ ಹಿಂದೆ ಬಳ್ಳಾರಿ ಸಿರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಣಿ ಬಾನಂತಿ ಸಾವು ಪ್ರಕರಣಗಳು ನಡೆದಿದ್ದವು ಇದೀಗ ವಿಜಯಪುರದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಒಬ್ಬರು ಸಾವನಪ್ಪಿದ್ದಾರೆ ಅಲ್ಲದೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಆಗ ತಾನೆ ಹುಟ್ಟಿದ ಮಗು ಕೂಡ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಢವಳಾರ ಗ್ರಾಮದ ನಿವಾಸಿ ಮೈತ್ರಾ ಸುಂಗಠಾಣ (30) ಮೃತ ಬಾಣಂತಿ. ಮೈತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಅವರನ್ನು ಕಾರಿನ ಮೂಲಕ ಮೊದಲು ಯಂಕಂಚಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಲ್ಲಿನ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಕಂಪ್ಲಿ ಕೋಟೆಯ ತುಂಗಭದ್ರಾ ನದಿ ಸೇತುವೆ ಬಳಿ ಕಬ್ಬಿಣದ ಸ್ವಾಗತ ಕಮಾನು ಅಳವಡಿಸುತ್ತಿದ್ದ ಸಂದರ್ಭದಲ್ಲಿ ಸಿಂಗಲ್ ಚೈನ್ ತುಂಡಾಗಿ ಕೆಳಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.ಕಂಪ್ಲಿಯ 4ನೇ ವಾರ್ಡ್ ನಿವಾಸಿ ವೆಲ್ಡಿಂಗ್‌ ಲೇಬ‌ರ್ ಶೇಕ್ಷಾವಲಿ (35) ಮೃತಪಟ್ಟ ದುರ್ದೈವಿ. ತುಂಗಭದ್ರಾ ನದಿ ಸೇತುವೆ ಹತ್ತಿರದಲ್ಲಿರುವ ಸ್ವಾಗತ ಕಮಾನು ನವೀಕರಣ ಕಾರ್ಯ ನಡೆದಿದೆ. ಮಧ್ಯಾಹ್ನದ ಸಮಯದಲ್ಲಿ ಕ್ರೇನ್​ನಿಂದ ಚೈನಿನ ಮೂಲಕ ಕಮಾನನ್ನು ಮೇಲೆತ್ತಿ ಕೂರಿಸುವ ವೇಳೆ ಚೈನ್ ಕಟ್ಟಾಗಿ ಕಮಾನು ಕೆಳಗೆ ಬಿದ್ದಿದೆ. ಕೆಳಗೆ ನಿಂತಿದ್ದ ಶೇಕ್ಷಾವಲಿ ಮೇಲೆ ಕಮಾನು ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಇನಾಯತ್‌ಗೆ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರೀಂ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಂಪ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ…

Read More

ತುಮಕೂರು : ತುಮಕೂರಿನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ದೇವರು ಬಂದಂತೆ ನಾಟಕವಾಡಿ ನವದಂಪತಿಗಳನ್ನು ದೇವಸ್ಥಾನದಿಂದ ಗ್ರಾಮಸ್ಥರು ಹೊರಗಡೆ ಕಳಿಸಿರುವ ಘಟನೆ ವರದಿಯಾಗಿದೆ. ಗೋಣಿ ತುಮಕೂರಿನ ಅರಸಮ್ಮ ದೇಗುಲದಲ್ಲಿ ಈ ಒಂದು ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರು ಗ್ರಾಮದಲ್ಲಿ ನವ ದಂಪತಿಗಳು ದೇಗುಲಕ್ಕೆ ಹೋಗಿದ್ದಾಗ ಗ್ರಾಮಸ್ಥರು ಹೊರ ಕಳುಹಿಸಿದ್ದಾರೆ. ದೇವಾಲಯದ ಒಳಗಿದ್ದ ಮೇಲ್ಜಾತಿ ವ್ಯಕ್ತಿ ದೇವರು ಬಂದಂತೆ ನಟಿಸಿದ್ದಾನೆ. ದೇವಾಲಯಕ್ಕೆ ಬಂದ ದಲಿತ ಕುಟುಂಬವನ್ನು ಹೊರ ಕಳುಹಿಸಿ ಅವಮಾನ ಮಾಡಿದ್ದಾನೆ. ದಲಿತರಿಗೆ ಪ್ರವೇಶವಿಲ್ಲ ಎಂದು ಗದರಿ ನಾರಾಯಣಪ್ಪ ಹೊರ ಕಳುಹಿಸಿದ್ದಾನೆ. ಗ್ರಾಮಸ್ಥರ ನಡವಳಿಕೆಗೆ ಬೇಸತ್ತು ದಂಪತಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಭಂದ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಭಾ, ಕಾಂತಣ್ಣ, ಅಮೂಲ್ಯ, ಪುಟ್ಟೇಗೌಡ ಸೇರಿ ಹಲವರ ವಿರುದ್ಧ FIR ದಾಖಲಾಗಿದೆ. ದೇವರ ಬಂದಂತೆ ನಾಟಕವಾಡಿದ ನಾರಾಯಣಪ್ಪನನ್ನು ಅರೆಸ್ಟ್ ಮಾಡಲಾಗಿದೆ ಉಳಿದ ಆರೋಪಿಗಳಿಗಾಗಿ ತುರುವೇಕೆರೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲೂ ಶಿವಾಜಿ ಮೆರವಣಿಗೆ ವೇಳೆ ಗಲಾಟೆ ನಡೆದಿದೆ ಡ್ಯಾನ್ಸ್ ಮಾಡುವಾಗ ಎಲ್ಲೂ ಸಮುದಾಯದ ನಡುವೆ ಮಾರಮಾರಿ ಆಗಿದೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರಾವುರ್ ಗ್ರಾಮದ ಗೋಕುಲ್ ನಗರದ ಗಣೇಶ್ ಕಟ್ಟಿ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಆಚರಣೆ ಮಾಡಲಾಗಿತ್ತು. ಸೌಂಡ್ ಬಾಕ್ಸ್ ಹಚ್ಚಿ ಡಾನ್ಸ್ ಮಾಡುವಾಗ, ಮತ್ತೊಂದು ಸಮುದಾಯ ಕಿರಿಕ್ ಮಾಡಿದೆ. ಸೌಂಡ್ ಬಾಕ್ಸ್ ಸೌಂಡ್ ಕಡಿಮೆ ಮಾಡಿ ಎಂದಿದ್ದಕ್ಕೆ ಗಲಾಟೆ ಆಗಿದ್ದ. 2 ಸಮುದಾಯದ ಜನ ಕಟ್ಟಿಗೆ ಕಲ್ಲು ಗಳಿಂದ ಗಲಾಟೆ ಮಾಡಿದ್ದಾರೆ. ವಿಡಿಯೋ ಇದೀಗ ವೈರಲ್ ಆಗಿದೆ.ಆದರೆ ಘಟನೆ ಸಂಭಂದ ಯಾವುದೇ ಸಮುದಾಯವಾಗಲಿ ಇದುವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ತಿಳಿದುಬಂದಿದೆ.

Read More

ಗದಗ : ಲಕ್ಕುಂಡಿ ನಿಧಿ ರಹಸ್ಯ ಬೆನ್ನಲ್ಲೇ 2022 ರಲ್ಲಿ ನಡೆದ ಒಂದು ವಂಚನೆ ಇದೀಗ ಬಯಲಾಗಿದೆ. 2022 ರಲ್ಲಿ ನಿಧಿ ಹುಡುಕಿ ಕೊಡುವುದಾಗಿ ವಂಚನೆ ಇದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಉತ್ತರಾಖಂಡನ ಕಾಶಿಪುರದ ಹಜರತ್ ಮೌಲ್ವಿ ಬಂದಿದ ಆರೋಪಿ ಎಂದು ತಿಳಿದುಬಂದಿದೆ. ನಿಧಿ ಪತ್ತೆ ಆಗಿದೆ ಎಂದು ಲಕ್ಕುಂಡಿ ಗ್ರಾಮದಾದ್ಯಂತ ವಿಷಯ ಹಬ್ಬಿತ್ತು. ಜಮೀನು ಮಾಲೀಕರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಾರೆ. ವಿಚಾರಣೆ ಮಾಡಿದಾಗ ನಿಧಿ ಹುಡುಕುವ ಮೋಸದಾಟ ಇದೀಗ ಬಯಲಾಗಿದೆ. ಸಣ್ಣಬಸಪ್ಪ ಮತ್ತು ದೊಡ್ಡಬಸಪ್ಪಗೆ ಹಾಜರತ್ ಮಾಲ್ವಿ, ವಂಚನೆ ಎಸಗಿದ್ದ ಎನ್ನುವುದು ತನಿಖೆಯ ವೇಳೆ ತಿಳಿದುಬಂದಿದೆ. 2022 ರಲ್ಲಿ ಇಬ್ಬರ ಜಮೀನಿನಲ್ಲಿ ನಿಧಿ ಪತ್ತೆಯಾಗಿದೆ ಎಂದು ವದಂತಿ ಹಬ್ಬಿತ್ತು. ಸಣ್ಣ ಬಸಪ್ಪ ಮತ್ತು ದೊಡ್ಡಬಸಪ್ಪ ಎಂಬುವವರ ಜಮೀನಿನಲ್ಲಿ ನಿಧಿಪತ್ತೆಯಾಗಿದೆ ಎಂದು ಹಬ್ಬಿತ್ತು. ಇದೀಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ವಿಚಾರಣೆ ನಡೆಸಿದಾಗ ವಂಚನೆ ಕೃತಿಯ ಬಯಲಾಗಿದೆ ಹಾರೋಡಿ ಗುಂಡಿಯೊಳಗೆ ಹಂಡೆಯಲ್ಲಿ ಚಿನ್ನವಿಟ್ಟು ಹಿತ ನಂಬಿಸಿದ್ದ ನಿಧಿ ಸಿಕ್ಕಿದೆ…

Read More

ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 2 ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27), ರೇಖಾ ಭೋಕೆ ಮೃತ ದುರ್ದೈವಿಗಳು. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ಪುಟ್ಟ ಮಗು ಹಾಗೂ ಮೂವರು ದೊಡ್ಡವರು (ಒಟ್ಟು ನಾಲ್ವರು) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮೆರಾ ಇಟ್ಟ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಬಂದಿತ ನಕಲಿ ಪತ್ರರ ಮೊಬೈಲ್ ಪರಿಶೀಲನೆ ವೇಳೆ ಸುಮಾರು ನೂರಕ್ಕೂ ಹೆಚ್ಚು ಬೆತ್ತಲೆ ವಿಡಿಯೋಗಳು ಇದೀಗ ಪತ್ತೆಯಾಗಿದೆ. ತನಿಖೆ ವೇಳೆ ಈ ಒಂದು ಬೆತ್ತಲೆ ವಿಡಿಯೋಗಳು ಪತ್ತೆಯಾಗಿದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಣ ಕೊಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಬಂಧಿತರಾದ ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಪೊಲೀಸರು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳಾ ಅಧಿಕಾರಿಯೊಬ್ಬರ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿದ್ದ ಆರೋಪಿಗಳು, ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿದ್ದರು. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ.

Read More

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕದ ಸುಪ್ರಸಿದ್ದ ನಂದಿನಿ ಬ್ರಾಂಡ್ ಗಳ ಕುರಿತು ಫೇಕ್ ಸುದ್ದಿಗಳು ಹರಿದಾಡುತ್ತಿದ್ದವು. ಇದೀಗ ಈ ಒಂದು ನಕಲಿ ಉತ್ಪನ್ನಗಳ ತಡೆಗೆ ಕೆಎಂಎಫ್ ಮಾಸ್ಟರ್ ಪ್ಲಾನ್ ಮಾಡಿದ್ದು, ಗ್ರಾಹಕರು ಬಳಸುವ ನಂದಿನಿ ಬ್ರಾಂಡ್ ಅಸಲಿಯೋ ನಕಲಿಯೋ ಎಂದು ತಿಳಿಯಲು ಇದೀಗ ಹೊಸ ಪ್ಲಾನ್ ಸಿದ್ಧಪಡಿಸಿದೆ. ಹೌದು ಕೆಎಂಎಫ್ ಸದ್ಯ ನಂದಿನಿ ಉತ್ಪನ್ನಗಳ ಪ್ಯಾಕೆಟ್ ಮೇಲೆ ಕ್ಯೂಆರ್ ಕೋಡ್ ಅಳವಡಿಕೆ ಮೂಲಕ ಬ್ರ‍್ಯಾಂಡ್ ಶ್ರೇಣಿ ಕಾಪಾಡುವ ಜೊತೆಗೆ ನಕಲಿ ಉತ್ಪನ್ನಗಳ ಹಾವಳಿಗೂ ಬ್ರೇಕ್ ಹಾಕಲು ಮುಂದಾಗಿದೆ. ಆರಂಭಿಕವಾಗಿ ತುಪ್ಪದ ಪ್ಯಾಕೆಟ್ ಮತ್ತು ಬಾಟಲ್‌ಗಳ ಮೇಲೆ ಈ ಕೋಡ್ ಅಳವಡಿಕೆ ಮಾಡಿದೆ. ತುಪ್ಪ ಕ್ವಾಲಿಟಿ ಅಥವಾ ಅಸಲಿತನವನ್ನ ಪರೀಕ್ಷೆ ಮಾಡಬೇಕಿದ್ರೆ ನೇರವಾಗಿ ಕೋಡ್‌ನ್ನ ಒಮ್ಮೆ ಸ್ಕ್ಯಾನ್ ಮಾಡಿ, ನಂಬರ್ ಹಾಕಿದ್ರೆ, ಒಟಿಪಿ ಬರಲಿದೆ. ಇದನ್ನ ಎಂಟರ್ ಮಾಡಿದ ಕೂಡಲೇ ಆ ತುಪ್ಪದ ಸಂಪೂರ್ಣ ಮಾಹಿತಿ ನಿಮ್ಮ ಫೋನ್‌ನಲ್ಲಿ ಸಿಗಲಿದೆ. ಎಲ್ಲಿ ತಯಾರಾಗಿದೆ. ಯಾವಾಗ ತಯಾರಿಕಾ ಜಾಗದಿಂದ ಮಾರುಕಟ್ಟೆಗೆ ಬಂದಿದೆ.…

Read More