Author: kannadanewsnow05

ಧಾರವಾಡ : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಉಪನಗರ ಠಾಣೆ ಪೊಲೀಸರು, ಒಟ್ಟು 8 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಐವರು ಕೊಲೆ ಆರೋಪಿಗಳು ಮತ್ತು ಕೊಲೆಗೆ ಸಂಚು ರೂಪಿಸಿದ್ದ ಮೂವರನ್ನು ಧಾರವಾಡ ಉಪನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಮತ್ತೊರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಮನೆಗೆ ನುಗ್ಗಿ ವೈರೋಜ್ ಪಠಣನನ್ನ ಆರೋಪಿಗಳು ಭೀಕರವಾಗಿ ಕೊಲೆ ಮಾಡಿದ್ದರು 9 ಜನರಿದ್ದ ಗ್ಯಾಂಗ್ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಫೈರೋಜ್ ಕೊಲೆ ನಡೆದಿತ್ತು. ಕೊಲೆ ಬಳಿಕ ಒಂಬತ್ತು ಆರೋಪಿಗಳು ಧಾರವಾಡ ಬೆಳಗಾವಿ ಗಡಿಯಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಮೂರು ತಂಡಗಳ ರಚನೆ ಮಾಡಲಾಗಿತ್ತು. ಉಪ್ಪಿನ ಬೆಟಗೇರಿಯ ಸಂಬಂಧಿಕರ ಮನೆಯಲ್ಲಿದ್ದ ಆರೋpiಗಳನ್ನು ಬಂಧಿಸಲಾಗಿದೆ. A1ಮಹಮ್ಮದ್ ಶಾ ಸಂಬಂಧಿಕರ ಮನೆಯಲ್ಲಿ ಆರೋಪಿಗಳು ಇದ್ದರು ತಡರಾತ್ರಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Read More

ಶಿವಮೊಗ್ಗ : ಇತ್ತೀಚೆಗೆ ಹುಲಿಕಲ್ ಘಾಟ್ ನಲ್ಲಿ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಹಾಗಾಗಿ ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧ ಅನ್ವಯವಾಗಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಹೌದು ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುವ ವಾಹನಗಳು, ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ತೆರಳಬೇಕು. ಇನ್ನು ತೀರ್ಥಹಳ್ಳಿಯಿಂದ ಯಡೂರು, ಹುಲಿಕಲ್​​ ಮಾರ್ಗವಾಗಿ ತೆರಳುವವರು ತೀರ್ಥಹಳ್ಳಿ-ಯಡೂರು, ಮಾಸ್ತಿಕಟ್ಟೆ- ಕಾನುಗೋಡು-ನಗರ-ಕೊಲ್ಲೂರು…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ಪತ್ನಿಯ ಕಣ್ಣೆದುರೇ ನರಳಿ ಪತಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಮಿಳುನಾಡಿಗೆ ಸಾವಿಗೆ ಹೋಗಿ ಹಿಂದಿರುಗಿದ್ದ ವ್ಯಕ್ತಿ ಇದೀಗ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.ಪತ್ನಿ ಜಯಶ್ರೀ ಕಣ್ಣು ಎದುರೇ ನರಳಿ ಪತಿ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರು-ಮೈಸೂರು ಸ್ಯಾಟಲೈಟ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಸ್ಯಾಟಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಈ ಒಂದು ದುರಂತ ಸಂಭವಿಸಿದ್ದು, ಮೃತರನ್ನ ಶ್ಯಾಮ್ ದೊರೆ (45) ಎಂದು ತಿಳಿದುಬಂದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಲಾಟ್ ಮೇಲ್ವಿಚಾರಕ ಕಾರು ರಿವರ್ಸ್ ತೆಗೆಯುವಾಗ ಘಟನೆ ಸಂಭವಿಸಿದೆ. ಅಲ್ಲೇ ನಿಲ್ಲಿಸಿದ ಬ್ಲಡ್ ಬ್ಯಾಂಕ್ ಬಸ್ ಬಳಿ ಶಾಮ್ ದೊರೆ ನಿಂತಿದ್ದರು. ಕಾರು ಚಾಲಕನ ಬೇಜವಾಬ್ದಾರಿತನಕ್ಕೆ ಶ್ಯಾಮ್ ದೊರೆ ಬಲಿಯಾಗಿದ್ದಾರೆ. ತಮಿಳುನಾಡಿಗೆ ಸಾವಿಗೆ ಹೋಗಿ ಹಿಂದುರುಗಿದಾಗ ಈ ಒಂದು ಘಟನೆ ಸಂಭವಿಸಿದೆ. ಬ್ಲಡ್ ಬ್ಯಾಂಕ್ ಬಸ್ ಹಾಗು ಕಾರು ನಡುವೆ ಸಿಲುಕಿ ಶ್ಯಾಮ್ ದೊರೆ ಸಾವನಪ್ಪಿದ್ದಾರೆ. ಸುಂಕದಕಟ್ಟೆಯ…

Read More

ಬೆಂಗಳೂರು : ಬೆಂಗಳೂರಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಕಾಮುಕನೊಬ್ಬ ಶಿಕ್ಷಕಿ ಒಬ್ಬರನ್ನು ಪರಿಚಯ ಮಾಡಿಕೊಂಡಿದ್ದಾನೆ. ಈ ವೇಳೆ ನನಗೆ ಕ್ಯಾನ್ಸರ್ ಇದೆ ಹಾಗಾಗಿ ಸಾಯೋ ಮುನ್ನ ನಿನ್ನ ಬೆತ್ತಲೆ ವಿಡಿಯೋ ಮಾಡಿ ಕಳುಹಿಸು ಎಂದಿದ್ದಾನೆ. ಇದೀಗ ಕಾಮುಕ ಇದೇ ವಿಡಿಯೋ ಇಟ್ಟುಕೊಂಡು ಶಿಕ್ಷೆಗೆ ಬ್ಲ್ಯಾಕ್ಮೇಲ್ ಮಾಡಿದ್ದು ಸದ್ಯ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಕಾಮುಕನೊಬ್ಬ ಇನ್ಟಾಗ್ರಾಂನಲ್ಲಿ ಶಿಕ್ಷಕಿಯೊಂದಿಗೆ ಸ್ನೇಹ ಬೆಳಸಿ ಆಕೆಗೆ ಟಾರ್ಚ್‌ರ್‌ ನೀಡಿದ ಪ್ರಕರಣ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದೆ. ಶಿಕ್ಷಕಿಗೆ ಮೆಸೇಜ್‌ ಮಾಡಿದ್ದ ಯುವಕ, ನಾನು ನಿನ್ನ ಕ್ಲಾಸ್‌ಮೇಟ್‌ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ನನಗೆ ಕ್ಯಾನ್ಸರ್‌ ಇದೆ, ನಿನ್ನ ಜೊತೆ ದೈಹಿಕ ಸಂಬಂಧ ಬೆಳೆಸಬೇಕು. ಇದು ನನ್ನ ಕೊನೆ ಆಸೆ ಎಂದಿದ್ದ. ಕಾಮುಕನ ಆಸೆಗೆ ಶಿಕ್ಷಕಿ ಒಪ್ಪಿರಲಿಲ್ಲ. ಈ ವೇಳೆ ಯುವಕ ನಾನು ಕೆಲವೇ ದಿನ ಬದುಕಿರುತ್ತೇನೆ. ಬೆತ್ತಲೆ ವಿಡಿಯೋ ಆದ್ರೂ ಕಳಿಸು ಎಂದಿದ್ದ. ಇದಕ್ಕೆ ಒಪ್ಪಿದ್ದ ಶಿಕ್ಷಕಿ ಬೆತ್ತಲೆಯ ವಿಡಿಯೋ ಕಳಿಸಿದ್ದಳು. ಬಳಿಕ ಹಣ ಕೊಡು, ನೇರವಾಗಿ ಸಿಗು,…

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಜೊತೆ ಸೇರಿ, ಕೂಲ್ಡ್ರಿಂಕ್ಸ್ ನಲ್ಲಿ ನಿದ್ರೆ ಮಾತ್ರೆ ಹಾಕಿ, ಸಿಲಿಂಡರ್ ನಿಂದ ತಲೆ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ಈ ಕೊಲೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ ತಲೆ ಮತ್ತು ಎದೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದರು ಎಂಬುದು ಗೊತ್ತಾಗಿದೆ. ಮಾರ್ಚ್ 6ರಂದು ಸಂಜೆ 4ಕ್ಕೆ ಮನೆಯಿಂದ ಅವಿನಾಶ್ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಥೆರಪಿ ಮಾಡಿಸಿಕೊಳ್ಳಲೆಂದು ಆರೋಪಿ ಕೈಲಾಶ್ ಕೂಡ ಕ್ಲಿನಿಕ್​​ಗೆ ತೆರಳಿದ್ದ. ಹೋಗುವಾಗ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ…

Read More

ಬೆಂಗಳೂರು : ಇತ್ತೀಚಿಗೆ ಚಿಕ್ಕಮಗಳೂರಲ್ಲಿ ಕಂಡಕ್ಟರ್ ಪುರುಷ ಪ್ರಯಾಣಿಕ ನಿಗೆ ಪ್ರಯೋಜನ ಟಿಕೆಟ್ ನೀಡಿದ್ದು, ಭಾರಿ ಚರ್ಚೆಯಾಗಿತ್ತು. ಇದೀಗ ಬೆಂಗಳೂರಲ್ಲಿ ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ಬಿಎಂಟಿಸಿಗೆ ವಂಚಿಸುತ್ತಿದ್ದ ಐವರು ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಅಲ್ಲದೇ ಅಕೌಂಟ್‍ನಲ್ಲಿಯೂ ಸಾವಿರಾರು ರೂ. ಹಣ ಇರುವುದು ಪತ್ತೆಯಾಗಿದೆ. ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಕಂಡಕ್ಟರ್‌ಗಳ ವಂಚನೆ ಬಯಲಾಗಿದೆ. ಸೂರ್ಯನಾರಾಯಣ, ಬೊಮ್ಮಲಿಂಗೇಶ್, ಬ್ರಿಜೇಶ್ ಬಾಬು, ಮೋಹನ್, ಹಾಗು ಎನ್.ಪ್ರಕಾಶ್ ಈ ಐವರನ್ನು ಸಸ್ಪೆಂಡ್ ಮಾಡಲಾಗಿದೆ. ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್‍ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು ಲಪಟಾಯಿಸಿದ ಆರೋಪ ಸಾಬೀತಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಲಕ್ಷಾಂತರ ರೂಪಾಯಿ ವಂಚನೆ ಬಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ದಕ್ಷಿಣಕನ್ನಡ : ವಿವಾಹದ ಮೆಹಂದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಿರ್ವಹಣೆ ಮಾಡಲು ಆರಂಭಿಸಿದ ಯುವಕನೋರ್ವ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ (32) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಸಂಬಂಧಿಕರ ಮದುವೆಯ ಮದರಂಗಿ ಕಾರ್ಯಕ್ರಮದ ಸಂಭ್ರಮ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ನಿರೂಪಣೆ ಮಾಡಲೆಂದು ವೇದಿಕೆಯನ್ನು ಏರಿದಾಗ ಅವರು ಹಠಾತ್ ಕುಸಿದುಬಿದ್ದಿದ್ದಾರೆ. ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ನಡೆದ ಈ ಘಟನೆಯಿಂದ ಆತಂಕಿತರಾದ ಮನೆಯವರು ಕೂಡಲೇ ಸಮೀಪದ ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅದಾಗಲೇ ಮೃತಪಟ್ಟಿರುವ ಕುರಿತು ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ಉಪ್ಪಿಟ್ಗಳ ಮುಂದುವರೆದಿದ್ದು ಇದೀಗ ಹಾಸನದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೀತಿನ ಮೇಲೆ ಏಕಾಏಕಿ ಕಾಡಾನೆ ಒಂದು ದಾಳಿ ಮಾಡಿದ್ದರಿಂದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ಸುಲಿಗೆ ಮಾಡಿದ್ದವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಳಗಾವಿಯಲ್ಲಿ ವೆಂಕದೂತ ಶರತ್ ನಾಯಕ್ ದೇಗಾವತ್ ಶ್ರೀಪಾದ್ ನಾಯಕ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಂತ ಹಂತವಾಗಿ 15.45 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದರು ಕೇಶ ದಾಖಲಿಸಿಕೊಂಡು ಸೈಬರ್ ಕಮಾಂಡ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಘಟನೆಯ ಬಗ್ಗೆ ಬೆಳಗಾವಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ವೆಂಕದೂತ ಶರತ್ ನಾಯಕ್ ಮತ್ತು ದೇಗಾವತ ಶ್ರೀಪಾದ ನಾಯಕರನ್ನು ಬಂಧಿಸಲಾಗಿದೆ ಬಂಧಿತ ಆರೋಪಿಗಳ ಬ್ಯಾಂಕ್ ಅಕೌಂಟ್ ನಿಂದ 2 ಕೋಟಿ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ ತನಿಖೆ ಮುಂದುವರೆದಿದೆ.

Read More

ಕಲಬುರ್ಗಿ : ಐಪಿಎಲ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಎಂದು ಗುರುತಿಸಲಾಗಿದೆ. ಈತ ದಿನಾಲೂ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೇ ಹಲವರ ಬಳಿ ಸಾಲ ಮಾಡಿದ್ದ. ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಗೂರ ಸೇತುವೆ ಬಳಿ ಬೈಕ್ ನಿಲ್ಲಿಸಿ, ಮೊಬೈಲ್ ಇಟ್ಟಿರುವುದು ಪತ್ತೆಯಾಗಿದೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More