Author: kannadanewsnow05

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಹಾದ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಠಾಣೆಯ ಮುಂದೆ ಯುವತಿಯ ತಾಯಿ ರಾಜೇಶ್ವರಿ ಹೇಳಿಕೆ ನೀಡಿದ್ದು, ಆರಪಿ ಸಮೀರ್ ಜಿಮ್ ನಲ್ಲಿ ನನ್ನ ಮಗಳಿಗೆ ಏನೇನೋ ಕುಡಿಸಿ ವಿಡಿಯೋ ಮಾಡಿಕೊಂಡು ಬ್ಲಾಕ್ ಅಂಡ್ ಮಾಡುತ್ತಿದ್ದಾನೆ. ಅಲ್ಲದೆ ನಿಮ್ಮ ಮಗಳನ್ನು ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ನಮ್ಮ ಮಗಳಿಗೆ ಸಮೀರ್ ಅನ್ಯಾಯ ಮಾಡಿದ್ದಾನೆ ನಾವು ನಮ್ಮ ಮಗಳನ್ನು ಜಿಮ್ಮಿಗೆ ಕಳುಹಿಸುತ್ತಿದೆವು. ಜಿಮ್ ನಲ್ಲಿ ಡ್ರಿಂಕ್ಸ್ ನಲ್ಲಿ ಏನೇನು ಹಾಕಿ ಕುಡಿಸಿದ್ದಾರೆ ನಮ್ಮ ಮಗಳಿಗೆ ಸಮೀರ್ ಬ್ಲಾಕ್ ಮೇಲ್ ಮಾಡಿದ್ದಾನೆ. ನಿಮ್ಮ ಮಗಳನ್ನು ಕತ್ತರಿಸಿ ಸೂಟ್ಕೇಸ್ ನಲ್ಲಿ ಹಾಕಿಸುತ್ತೇನೆ ಮೂರು ಜನರಿಂದ ರೇಪ್ ಮಾಡಿಸುತ್ತೇನೆ ಅಂತ ಹೆದರಿಸಿದ್ದಾನೆ. ಅಷ್ಟೆ ಅಲ್ಲದೇ ನಮ್ಮ ಮನೆಗೆ ಬಂದು ಸಮೀರ್ ಮನೆಯವರು ಗಲಾಟೆ ಮಾಡಿದ್ದಾರೆ. ನಮ್ಮ ಮಗಳನ್ನು ಲವ್ ಜಿಹಾದ್ ನಲ್ಲಿ ಸಿಲುಕಿಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲೆ ಮಾಡುತ್ತಿದ್ದಾರೆ. ತಂಗಿ, ತಂಗಿ ಎಂದು ಮಗಳಿಗೆ ಅನ್ಯಾಯ ಮಾಡಿದ್ದಾರೆ ಗಂಭೀರವಾದ…

Read More

ಬೆಂಗಳೂರು : ಮದುವೆ ಆಗುತ್ತೇನೆ ಎಂದು ನಂಬಿಸಿ ದೈಹಿಕ ಸಂಬಂಧ ಹೊಂದಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಆರೋಪಿಗೆ ಮದುವೆ ಆಗಬೇಕು ಎಂಬ ಷರತ್ತು ವಿಧಿಸಿದ 20 ದಿನಗಳ ಜಾಮೀನು ನೀಡಿದೆ. ಆರೋಪಿ ಬಿಡುಗಡೆಗೆ ಕಾರಾಗೃಹಕ್ಕೆ ಆದೇಶ ನೀಡಿದ್ದು, ಮದುವೆಯಾದ ಬಳಿಕ ಪ್ರಮಾಣ ಪತ್ರ ಸಲ್ಲಿಸಲು ಆರೋಪಿಗೆ ಸೂಚನೆ ನೀಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಿತ್ರ ಸಂಗತಿಗಳನ್ನು ಗಮನಿಸಿದ ನಂತರ ಆರೋಪಿ, ಸಂತ್ರಸ್ತೆಯನ್ನು ಮದುವೆ ಆಗಬೇಕಿರುವುದರಿಂದ ಆತನಿಗೆ ಮಧ್ಯಂತರ ಜಾಮೀನು ನೀಡುವುದು ಸೂಕ್ತವೆಂಬ ತೀರ್ಮಾನಕ್ಕೆ ಬರಲಾಗಿದೆ. ಹಾಗಾಗಿ ಆತನನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕಾರಾಗೃಹದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುತ್ತಿದೆ ಎಂದು ಆದೇಶಿಸಿದೆ. ಜಾಮೀನು ಕೋರಿ ಮಂಡ್ಯ ಜಿಲ್ಲೆಯ ಹುಲ್ಲಗಾಲದ ಮಹದೇವ್‌ ಅಲಿಯಾಸ್‌ ಮಾದೇವ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಅರ್ಜಿದಾರರಿಗೆ ಏ.2ರಿಂದ ಏ.24 ರವರೆಗೆ ಜಾಮೀನು ನೀಡಲು ಆದೇಶಿಸಿದೆ. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಆರೋಪಿ ಏ.24ರೊಳಗೆ ಸಂತ್ರಸ್ತೆಯನ್ನು ವಿವಾಹವಾಗಬೇಕು ಮತ್ತು ಆನಂತರ ಮದುವೆ ನೋಂದಾಯಿಸಿದ ಪ್ರಮಾಣಪತ್ರ…

Read More

ಬೆಂಗಳೂರು : SSLC ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ತೃತೀಯ ಭಾಷೆ ಭಾಷಾವೈವಿಧ್ಯತೆ ಮತ್ತು ಬೌದ್ಧಿಕ ಬೆಳವಣಿಗೆಗೆ ಮುಖ್ಯ. ಗ್ರೇಡಿಂಗ್ ಶೈಕ್ಷಣಿಕ ಪ್ರಾಮುಖ್ಯತೆ ಮತ್ತು ವಿದ್ಯಾರ್ಥಿಗಳ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳವನ್ನು ಅವರು ಪತ್ರಮುಖೇನ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ. SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್‌ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಮಾಡಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಶಿಕ್ಷಣದ ಮೇಲೆ ಬೀರುವ ಪರಿಣಾಮ ಬಗ್ಗೆ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಯುವತಿಯನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದೆ ಹಿಂದೂ  ಸಂಘಟನೆಗಳು ಗಲಾಟೆ ನಡೆಸಿದ್ದು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿಯ ವಿಜಯನಗರದಲ್ಲಿರುವ ಸಮೀರ್ ಪೊಲೀಸರ ವಶದಲ್ಲಿ ಇದ್ದಾನೆ. ಇನ್ನೊಂದು ಕಡೆ ಯುವತಿಯ ಮನೆಗೆ ನುಗ್ಗಿದ ಯುವಕನ ಸಂಬಂಧಿಕರು ಗಲಾಟೆ ಮಾಡಿದ್ದಾರೆ ಸಮೀರ್ ನನ್ನು ಅಪಹರಣ ಮಾಡಿದ್ದಾರೆ ಎಂದು ಯುವಕನ ಮನೆಯವರು ಗಲಾಟೆ ಮಾಡಿದ್ದಾರೆ. ಯುವತಿ ಮನೆಯವರ ಮೇಲೆ ಹಲ್ಲೆ ಮಾಡಿದ ಆರೋಪಗಳು ಬಂದಿದ್ದು ಹುಬ್ಬಳ್ಳಿ ನಗರದ ವಿಕಾಸ ನಗರದಲ್ಲಿರುವ ಯುವತಿಯ ಮನೆಗೆ ಗಲಾಟೆ ಮಾಡಿದ್ದಾರೆ. ಇವತ್ತಿಗೆ ಸಮೀರ್ ಒಂದರಲ್ಲಿ ಪರಿಚಯನಾಗಿದ್ದ ನನ್ನ ಮಗ ಮತ್ತು ಯುವತಿ ಇಬ್ಬರು ಕಾಲೇಜ್ ಫ್ರೆಂಡ್ಸ್ ಕಳೆದ ಮೂರು ವರ್ಷಗಳಿಂದ ಅವರು ಹೋರಾಡುತ್ತಿದ್ದರು ನಮ್ಮ ಮಗ ಹಾಗೂ ಯುವತಿಯ ನಡುವೆ ಪ್ರೀತಿ ಇರಲಿಲ್ಲ ಇಂದು ಏಕಾಏಕಿ ಬಂದು ನಮ್ಮ ಮಗನಿಗೆ ಹೊಡೆದಿದ್ದಾರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಯುವಕ…

Read More

ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ಥಳೀಯ ಉತ್ಪಾದನೆಗೆ ಉತ್ತೇಜನ ನೀಡಲು ಮತ್ತು ಆಮದನ್ನು ಕಡಿಮೆ ಮಾಡಲು ವಿದೇಶಿ ಬ್ರಾಂಡೆಡ್ ಔಷಧಗಳ ಮೇಲೆ 100% ಸುಂಕ (Tariff) ವಿಧಿಸುವ ಸುಳಿವು ನೀಡಿದ್ದಾರೆ. ಈ ನಿರ್ಧಾರದಿಂದಾಗಿ ಭಾರತ ಸೇರಿದಂತೆ ಹಲವು ದೇಶಗಳ ಫಾರ್ಮಾ ಕಂಪನಿಗಳಿಗೆ ಭಾರಿ ಹೊಡೆತ ಬೀಳುವ ಸಾಧ್ಯತೆಯಿದೆ. ಇದು ಅಮೆರಿಕದಲ್ಲಿನ ಬ್ರಾಂಡೆಡ್ ಔಷಧಗಳ ಬೆಲೆ ಏರಿಕೆಗೆ ಕಾರಣವಾಗುವುದಲ್ಲದೆ, ಜಾಗತಿಕ ಔಷಧ ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆಗಳಿಗೆ ನಾಂದಿ ಹಾಡಲಿದೆ. ಪೇಟೆಂಟ್ ಹೊಂದಿರುವ ಮತ್ತು ಬ್ರಾಂಡೆಡ್ ಔಷಧಗಳನ್ನು ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಕಂಪನಿಗಳ ಮೇಲೆ 100% ಸುಂಕ ವಿಧಿಸುವ ಕಾರ್ಯಾದೇಶಕ್ಕೆ ಸಹಿ ಹಾಕಿದ್ದಾರೆ. ಔಷಧ ತಯಾರಿಕಾ ಕಂಪನಿಗಳು ತಮ್ಮ ಉತ್ಪಾದನಾ ಘಟಕಗಳನ್ನು ಅಮೆರಿಕಕ್ಕೆ ಸ್ಥಳಾಂತರಿಸುವಂತೆ ಒತ್ತಡ ಹೇರುವುದು, ಔಷಧಗಳಿಗಾಗಿ ಚೀನಾ ಅಥವಾ ಇತರ ದೇಶಗಳ ಮೇಲೆ ಅವಲಂಬಿತವಾಗುವುದನ್ನು ಕಡಿಮೆ ಮಾಡುವುದು ಮತ್ತು ಅಮೆರಿಕದ ಒಳಗೇ ಉದ್ಯೋಗ ಹಾಗೂ ಉತ್ಪಾದನೆಯನ್ನು ಹೆಚ್ಚಿಸುವುದು ಈ ನೀತಿಯ ಮುಖ್ಯ ಗುರಿಯಾಗಿದೆ. ಒಂದು ಕಂಪನಿಯು ತನ್ನ…

Read More

ನವದೆಹಲಿ : ವಿಮೆ ಕಂಪನಿಯಿಂದ ಬರುವ ಹಣಕ್ಕೆ ಆಸೆಪಟ್ಟು ಚಾರಣಿಗರಿಗೆ ನೀಡುವ ಆಹಾರದಲ್ಲಿ ವಿಷ ಹಾಕಿ, ಟ್ರೆಕ್ಕಿಂಗ್‌ಗೆಂದು ಹೋದವರ ಜೀವವನ್ನು ಅಪಾಯಕ್ಕೆ ಒಡ್ಡಿ, ವಿಮಾ ಕಂಪನಿಗಳಿಂದ ಕೋಟಿ ಕೋಟಿ ಕಕ್ಕಿಸುತ್ತಿದ್ದ ನೇಪಾಳದ ದೊಡ್ಡ ವಂಚಕರ ಜಾಲವೊಂದು ಇದೀಗ ಬಯಲಾಗಿದೆ. ಹೌದು ಚಾರಣಿಗರ ಊಟದಲ್ಲಿ ವಿಷವಿಕ್ಕಿ, ಅವರನ್ನು ಅಸ್ವಸ್ಥರಾಗುವಂತೆ ಮಾಡಿ, ವಿಮೆ ಹಣವನ್ನು ಟ್ರೆಕ್ಕಿಂಗ್ (Trekking) ಆಯೋಜಿಸುತ್ತಿದ್ದ ಶೆರ್ಪಾ ಕಂಪನಿ ದೋಚುತ್ತಿತ್ತು. ಈ ಸಂಬಂಧ ಟ್ರೆಕ್ಕಿಂಗ್ ಕಂಪ, ಹೆಲಿಕಾಪ್ಟರ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ 32 ಜನರ ವಿರುದ್ಧ ನೇಪಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಚಾರಣಿಗರಿಗೆ ನೆರವು ನೀಡಬೇಕೆಂದು ಉದ್ದೇಶದಿಂದ ಶೆರ್ಪಾಗಳು(ಮಾರ್ಗದರ್ಶಕ) ಅವರೊಂದಿಗೆ ಹೋಗುತ್ತಿದ್ದರು. ಈ ವೇಳೆ ಅವರ ಊಟದಲ್ಲಿ ಕಿಂಗ್ ಸೋಡಾ ಬೆರೆಸುತ್ತಿದ್ದರು. ಇದನ್ನು ತಿನ್ನುತ್ತಿದ್ದಂತೆ ಜನರ ಹೊಟ್ಟೆಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದನ್ನು ಶೆರ್ಪಾಗಳು, ಎತ್ತರದಿಂದಾಗಿ ಉಂಟಾದ ಅಸ್ವಸ್ಥತೆ ಎಂಬಂತೆ ಬಿಂಬಿಸಿ, ಹೆಲಿಕಾಪ್ಟರ್‌ಗಳ ಮೂಲಕ ಸ್ಥಳಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದರು. ಮೊದಲೇ ಗಾಬರಿಗೊಂಡಿರುವ ಚಾರಣಿಗರು ಇದಕ್ಕೊಪ್ಪದೆ ಬೇರೆ ದಾರಿ ಇರುತ್ತಿರಲಿಲ್ಲ. ಪರ್ವತದ…

Read More

ಬೀದರ್ : ಬೀದರ್ ಜಿಲ್ಲೆಯ ಯೂಟ್ಯೂಬರ್ ಸಲ್ಮಾನ್ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಕೆಲ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ ಏನು? ಯೂಟ್ಯೂಬರ್ ಸಲ್ಮಾನ್ ಖಾನ್ ಎಂಬ ಯುವಕ, ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಗುಂಟಿ ಸೇರಿದಂತೆ ಕೆಲ ಪೊಲೀಸ್ ಸಿಬ್ಬಂದಿಯಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದೇನೆಂದು ಆರೋಪಿಸಿ, ಪೇಸ್‌ಬುಕ್ ಲೈವ್‌ನಲ್ಲೇ ಮಾತ್ರೆಗಳು ನುಂಗಿ ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ಘಟನೆ ಬೀದರ್ ಜಿಲ್ಲೆಯಲ್ಲಿ ಯೂಟ್ಯೂಬರ್ ಆತ್ಮಹತ್ಯೆ ಯತ್ನ ಪ್ರಕರಣವು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸಲ್ಮಾನ್ ಖಾನ್ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಸಮಾಜದ ವಿವಿಧ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರು. ಆದರೆ, ಈ ವಿಡಿಯೋಗಳ ವಿಷಯವಸ್ತು ಸಮಾಜದಲ್ಲಿ ಶಾಂತಿ ಕೆದಕುವಂತಿದೆ ಎಂದು ಹೇಳಿ, ಶಾಂತಿ ಸಭೆ ಇದೆ ಎಂದು ಕಛೇರಿಗೆ ಕರೆಸಿ…

Read More

ಚಾಮರಾಜನಗರ : ಪ್ರೇಮಿಗಳು ಇಬ್ಬರು ಹಬ್ಬಕ್ಕೆ ಎಂದು ಊರಿಗೆ ಬಂದಿದ್ದಾರೆ ಈ ವೇಳೆ ಮನೆಯಲ್ಲಿ ಮದುವೆಗೆ ಒಪ್ಪದ ಕಾರಣ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಹಾಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೀಣ್ಯಂ ಗ್ರಾ. ಪಂ. ವ್ಯಾಪ್ತಿಯ ನಾಗೇಂದ್ರ(21), ಪಾಲಾರ್ ಗ್ರಾಮದ ನದಿಯಾ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು‌. ಪೊನ್ನಾಚಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಹಬ್ಬ ನಡೆಯುತ್ತಿತ್ತು. ಈ ಹಬ್ಬಕ್ಕೆ ನಾಗೇಂದ್ರನ ತಾತ ಶಿವಮಾದಯ್ಯ ಅವರ ಮನೆಗೆ ನಾಗೇಂದ್ರ, ನದಿಯಾ ಕಳೆದ ಮೂರು ದಿನಗಳ ಹಿಂದೆ ಆಗಮಿಸಿ‌ ಉಳಿದುಕೊಂಡಿದ್ದರು. ಈ ನಡುವೆ ನದಿಯಾ ತಂದೆ ಮಹಾದೇವ್ ಮಲೆ ಮಹದೇಶ್ವರ ಬೆಟ್ಟದ ಠಾಣೆಗೆ ಮಗಳು ಕಾಣೆಯಾಗಿದ್ದಾಳೆಂದು ದೂರು ಕೂಡ ಕೊಟ್ಟಿದ್ದರು. ನಿನ್ನೆ ತಡರಾತ್ರಿ ನದಿಯಾ ಮತ್ತು ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸರು, ವಿಧಿ ವಿಜ್ಞಾನ ತಂಡದ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಮರ್ಡರ್ ಆಗಿದ್ದು, ಹಣಕಾಸಿನ ವಿಚಾರಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿ ಮೇಲೆ ಹಲ್ಲೆ ಮಾಡಿ ಆಕೆಯ ಕುತ್ತಿಗೆಗೆ ಕಾಲಿನಿಂದ ಹಿಸುಕಿ ಹತ್ಯೆ ಮಾಡಿದ ಆರೋಪದಡಿ ಪತಿಯನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವ್ಯ (35) ಎಂಬುವರನ್ನು ಹತ್ಯೆ ಮಾಡಿರುವ ಆರೋಪದಡಿ ಧರಿಯಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಬೆಳಗಾವಿ ಮೂಲದ ಕಾವ್ಯ 15 ವರ್ಷಗಳ ಹಿಂದೆ ಧರಿಯಪ್ಪನೊಂದಿಗೆ ಮದುವೆಯಾಗಿದ್ದರು. ನಾಗಸಂದ್ರದ ರುಕ್ಮಿಣಿ ನಗರದಲ್ಲಿ ಕುಟುಂಬ ವಾಸವಾಗಿತ್ತು. ನಿನ್ನೆ ಮಧ್ಯಾಹ್ನ ಹಣಕಾಸಿನ ವಿಚಾರಕ್ಕಾಗಿ ಗಲಾಟೆಯಾಗಿದೆ. ಜಗಳ ಮಿತಿ ಮೀರಿದ್ದು, ಪತ್ನಿ ಮೇಲೆ ಹಲ್ಲೆ ಮಾಡಿ ಕಾಲಿನಿಂದ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ತನ್ನ ಅಣ್ಣನಿಗೆ 2 ಲಕ್ಷ ಕೊಡುವ ಸಲುವಾಗಿ ಹಣವನ್ನು ಮನೆಯಲ್ಲಿಸಿದ್ದ. ಈ ವಿಚಾರ ತಿಳಿದು ಪತಿಯೊಂದಿಗೆ ಪತ್ನಿ ಜಗಳವಾಡಿದ್ದರು. ಅಲ್ಲದೇ, ಕೆಲ ತಿಂಗಳಿಂದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜಗಳವಾಗಿತ್ತು. ಸಂಬಂಧಿಕರು ಮಧ್ಯ ಪ್ರವೇಶಿಸಿ ಗಲಾಟೆ…

Read More

ಕೊಡಗು : ಕಕ್ಕಬೆ ಗ್ರಾಮದಲ್ಲಿ ಟ್ರೇಕ್ಕಿಂಗ್ ಗೆ ತೆರಳಿದ್ದ ಯುವತಿ ಏಕಾಏಕಿ ನಾಪತ್ತೆಯಾಗಿದ್ದಾಳೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬೆ ಗ್ರಾಮದಲ್ಲಿ ನಿನ್ನೆ ಕೇರಳ ಮೂಲದ ಯುವತಿ ಶರಣ್ಯ ಜಿ ಎಸ್ ಎನ್ನುವ ಯುವತಿ ಟ್ರೇಕ್ಕಿಂಗ್ ಗೆ ತಿಳಿದಾಗ ನಾಪತ್ತೆಯಾಗಿದ್ದಾಳೆ. ತಡಿಯಂಡಮೋಲ್ ಬೆಟ್ಟಕ್ಕೆ ಟ್ರೇಕ್ಕಿಂಗ್ ಗೆ ತೆರಳಿದಾಗ ಶರಣ್ಯ ನಾಪತ್ತೆಯಾಗಿದ್ದಾಳೆ. ಶರಣ್ಯ ಜಿ ಎಸ್ ಕೇರಳ ಯುವತಿಯಾಗಿದ್ದು ಖಾಸಗಿ ಹೋಮ್ ಸ್ಟೇ ನಲ್ಲಿ ತಂಗಿದ್ದಳು. ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು ಸಿಬ್ಬಂದಿ ಬೇರೆಯವರ ಜೊತೆ ಕಳುಹಿಸಿದ್ದರು. ಸಂಜೆಯಾದರೂ ಶರಣ್ಯ ಆಗದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಶರಣ್ಯ ಗಾಗಿ ಪೊಲೀಸರು ಅರಣ್ಯ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More