Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಿರಿಯ ನಾಗರಿಕರನ್ನೇ ಗುರಿಯಾಗಿಸಿಕೊಂಡು ಜಾಲ ಹೆಣೆದಿದ್ದ ಸೈಬರ್ ವಂಚಕರು, ವೃದ್ಧೆಯೊಬ್ಬರನ್ನು ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ದೈತ್ಯ ‘ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಐವರು ಅಂತಾರಾಜ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಗೌರವ್ ಕುಮಾರ್, ಓಂ ಪ್ರಕಾಶ್ ಸೇರಿದಂತೆ ಐವರು ಎಂದು ಗುರುತಿಸಲಾಗಿದೆ. ತಿಂಗಳುಗಳ ಕಾಲ ನಡೆದ ಕಳ್ಳಾಟ ಬೆಂಗಳೂರಿನ ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ನಾರಾಯಣ್ ಎಂಬ ವೃದ್ಧೆಯೇ ಈ ಕೋಟ್ಯಂತರ ರೂಪಾಯಿ ವಂಚನೆಗೆ ಒಳಗಾದ ದುರ್ದೈವಿ. ಸೈಬರ್ ಖದೀಮರು ಕಳೆದ ಜನವರಿ ತಿಂಗಳಿನಿಂದಲೇ ಈ ವೃದ್ಧೆಯನ್ನು ತಮ್ಮ ಡಿಜಿಟಲ್ ಜಾಲದಲ್ಲಿ ಸಿಲುಕಿಸಿದ್ದರು. ಕಾನೂನು ಬಾಹಿರ ಚಟುವಟಿಕೆ ಅಥವಾ ತನಿಖೆಯ ಹೆಸರಿನಲ್ಲಿ ವೃದ್ಧೆಯನ್ನು ಹೆದರಿಸಿ, ‘ಡಿಜಿಟಲ್ ಅರೆಸ್ಟ್’ ಮಾದರಿಯಲ್ಲಿ ಮನೆಯಲ್ಲೇ ಬಂಧಿಯಾಗುವಂತೆ ಮಾಡಿದ್ದರು. ಬಂಧನದ ಭೀತಿಯಲ್ಲಿದ್ದ ವೃದ್ಧೆಯಿಂದ ಹಂತ ಹಂತವಾಗಿ ಬರೋಬ್ಬರಿ 24…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಸಿಸಿಎಚ್ ಕೋರ್ಟ್‌ನಿಂದ ನಗರದ 59ನೇ ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಪ್ರಕರಣದ ಕನಿಷ್ಠ ಪ್ರಮುಖ 60 ಪ್ರಮುಖ ಸಾಕ್ಷಿ ಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಕಡ್ಡಾಯವಾಗಿ ಮುಗಿಸಬೇಕು ಸುಪ್ರೀಂಕೋರ್ಟ್‌ ನಿರ್ದೇಶನ ಹಿನ್ನೆಲೆಯಲ್ಲಿ ಜೂ.1ರಿಂದ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ. ಎಂಬ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಆದೇಶದ ಅನ್ವಯ, ಪ್ರಕರಣದ ತ್ವರಿತಗತಿ ವಿಚಾರಣೆ ನಡೆಸುವ ಹಾಗೂ ಆರೋಪಿಗಳಿಗೆ ಒದಗಿಸಬೇಕಾದ ಕನಿಷ್ಠ ಸೌಲಭ್ಯಗಳ ಮಾರ್ಗಸೂಚಿಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಸುಜಾತಾ ಎಂ.ಸಾಮ್ರಾಣಿ ಅವರು ಕೊಲೆ ನ್ಯಾಯಾಲಯ ನಿರ್ಧರಿಸಲಿದೆ. ನ್ಯಾ. ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದು ಹೊರಗಿರುವ 5 ಆರೋಪಿಗಳ ಜಾಮೀನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾ ರಣೆ ನಡೆಸಿರುವ ಹೈಕೋರ್ಟ್, ಸದ್ಯ ತನ್ನ ತೀರ್ಪು ಕಾಯ್ದಿರಿಸಿದೆ.…

Read More

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ ಯುಜಿ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಹೊರಬಿದ್ದಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯು ರದ್ದಾಗಿದ್ದು, ಜೂನ್ 21ರಂದು ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಬರೆಯಲಿರುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಜೂನ್ 21ರ ಪರೀಕ್ಷೆಯ ದಿನದಂದು ರಾಜ್ಯದ ನೀಟ್ ಅಭ್ಯರ್ಥಿಗಳಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಸಚಿವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರದ ನಿರ್ಧಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳು ಈಗಾಗಲೇ ತೀವ್ರ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾರೆ. ಈಗ ಮತ್ತೆ ಮರು ಪರೀಕ್ಷೆ ಬರೆಯಬೇಕಾಗಿ ಬಂದಿರುವುದು ಅವರಿಗೆ ಆರ್ಥಿಕ ಹಾಗೂ ದೈಹಿಕವಾಗಿಯೂ ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ, ಮರು ಪರೀಕ್ಷೆ ಬರೆಯುವ ರಾಜ್ಯದ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಬಾಕ್ಸಿಂಗ್​ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದೆ. ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಗೆ ಕಳೆದ 4 ತಿಂಗಳುಗಳಿಂದ ನಿರಂತರ ಕಿರುಕುಳ ನೀಡುತ್ತಿರುವ ಆರೋಪ 50 ವರ್ಷ ವಯಸ್ಸಿನ ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿಬಂದಿದೆ. ನೊಂದ ಬಾಲಕಿಯ ತಾಯಿ ನೀಡಿರುವ ದೂರಿನ ಅನ್ವಯ ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.​ ಬಾಕ್ಸಿಂಗ್ ಸ್ಪರ್ಧೆಗಾಗಿ ಚೆನ್ನೈನಲ್ಲಿದ್ದ ಬಾಲಕಿಯನ್ನು, ಮೇ 17ರಂದು ತನ್ನ ಕೋಣೆಗೆ ಕರೆಸಿಕೊಂಡಿದ್ದ ಆರೋಪಿ, ಆಕೆಯ ಪ್ರತಿರೋಧದ ನಡುವೆಯೂ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮೊದಲು ಬೆಂಗಳೂರಿನ ಕ್ರೀಡಾಂಗಣದಲ್ಲಿಯೂ ಇದೇ ರೀತಿ ಅನುಚಿತ ವರ್ತನೆಯ ಘಟನೆಗಳು ನಡೆದಿವೆ. ಆದರೆ, ಆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಸುಮ್ಮನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕತ್ತು ಕೊಯ್ದುಕೊಂಡು ಯುವಕ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆಯಷ್ಟೇ ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಈ ಒಂದು ಘಟನೆ ಬೆಂಗಳೂರಿನ ಅಶೋಕ್ ನಗರದಲ್ಲಿ ನಡೆದಿದೆ. ನಿನ್ನ ಬೆಳಿಗ್ಗೆ ಗೌತಮ್ (28) ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ತಾನೇ ರಿಯ್ಯಾಬ್ ಸೆಂಟರ್ ನಿಂದ ಗೌತಮ್ ಬಂದಿದ್ದ. ಮೇಲ್ ನೋಟಕ್ಕೆ ಕೊಲೆ ಆಗಿರಬಹುದು ಎಂದು ಅನುಮಾನ ಇತ್ತು. ಆದರೆ ಯುವಕ ಗೌತಮ್ ಆತ್ಮಹತ್ಯೆ ಮಾಡಿಕೊಂಡಿರುವುದು ಇದೀಗ ಪತ್ತೆಯಾಗಿದೆ. ಸದ್ಯ ಅಶೋಕನಗರ ಠಾಣೆ ಪೊಲೀಸರು ಯುಡಿಆರ್ ದಾಖಲೆಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರಕ್ಕೆ ಒಂದು ಪರೀಕ್ಷೆ ಮಾಡುವ ಯೋಗ್ಯತೆ ಇಲ್ಲ ನನ್ನ ಇಲಾಖೆಯಲ್ಲಿ ಒಂದೇ ಒಂದು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ಕಳೆದ ಮೂರು ವರ್ಷದಿಂದ ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಉತ್ತರ ಕೊಡಬೇಕಾಗುತ್ತದೆ ಅಂತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಒಂದು ವಾರ ಓಡಿ ಹೋಗಿದ್ದರು. ಧರ್ಮೇಂದ್ರ ಪ್ರಧಾನ ಬಳಿ ಬರಲಿ ಸೋರಿಕೆ ಇಲ್ಲದೆ ಪರೀಕ್ಷೆ ಹೇಗೆ ಮಾಡೋದು ಅಂತ ಹೇಳಿ ಕೊಡುತ್ತೇನೆ. ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನ್ ಗೆ ಹೇಳಿ ಕೊಡುತ್ತೇನೆ ನೀಟ್ ಪರೀಕ್ಷೆಯಲ್ಲಿ 96 ಪ್ರತಿಶತ ಹಿಂದುಳಿದ ವರ್ಗಗಳ ಮಕ್ಕಳಿದ್ದಾರೆ ಅವರ ಕಾಲಿನ ಕೆಳಗೆ ಬಿಜೆಪಿ ನೌಕಲಿ ಆಗಲಾದರೂ ಬುದ್ದಿ ಬರುತ್ತೆ ಎಂದು ಬೆಂಗಳೂರಿನಲ್ಲಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು…

Read More

ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಅವರಿಗೆ ಅದು ನಿಜ. ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ. ಇದೆ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು. ರಾಜ್ಯದ ಜನರು ಮತ ಕೊಟ್ಟಿದ್ದಾರೆ ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ. ನಮಗೆ ವೋಟ್ ಹಾಕಿದ ಜನರ ಋಣವನ್ನು ತೀರಿಸಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಕೆವಿ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು. ಇನ್ನೂ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿರುದ್ಧ ಸಚಿವ ಮಧು…

Read More

ಕೋಲಾರ : ಮಹಿಳೆಯ ಖಾಸಗಿ ಫೋಟೋ ಮತ್ತು ವಿಡಿಯೋ ಮಾಡುವುದಾಗಿ ಬೆದರಿಕೆ ಒಡ್ಡಿ ಹಣ ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ವಸೂಲಿ ಮಾಡಿದ್ದು, ಯುವಕನ ಬ್ಲ್ಯಾಕ್ ಮೇಲ್ ಜಿಂದಗಿ ಮನನೊಂದ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಕೋಲಾರ ತಾಲೂಕಿನ ಛತ್ರಕೋಡಿ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಜಿನಿ (28) ಎಂದು ತಿಳಿದು ಬಂದಿದೆ. ಬೇಗ್ಲಿಗಣಜೇನಹಳ್ಳಿಯ ಶ್ರೀಕಾಂತನ ಕಿರುಕುಳಕ್ಕೆ ಬಲಿಯಾದ ರಜನಿ ಹಲವು ದಿನಗಳಿಂದ ರಜನಿಗೆ ಬೆದರಿಕೆ ಹಾಕಿ ಹಣ ಮತ್ತು ಆಭರಣ ವಸೂಲಿ ಮಾಡಿದ್ದಾನೆ. ಮಾಂಗಲ್ಯ ಸರ ಒಡವೆಗಳು ಸೇರಿದಂತೆ 30 ರಿಂದ 40 ಲಕ್ಷ ಹಣ ವಸೂಲಿ ಮಾಡಿದ್ದಾನೆ. ಶ್ರೀಕಾಂತ್ ಈಗಾಗಲೇ ಇಬ್ಬರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಶ್ರೀಕಾಂತ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬದ ಸದಸ್ಯರು ಆಗ್ರಹಿಸಿದ್ದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಚೀನಾದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಪ್ರದೇಶವಾದ ಶಾಂಕ್ಸಿ ಪ್ರಾಂತ್ಯದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ವರದಿ ಮಾಡಿವೆ. ಗಣಿಯ ಆಳದಲ್ಲಿ ಸಿಲುಕಿರುವ ಇತರ ಕಾರ್ಮಿಕರ ಪತ್ತೆಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ. 201 ಕಾರ್ಮಿಕರ ರಕ್ಷಣೆ: ಅಪಘಾತ ಸಂಭವಿಸಿದ ಕರಾಳ ಸಮಯದಲ್ಲಿ ಸುಮಾರು 247 ಕಾರ್ಮಿಕರು ಗಣಿಯ ನೆಲದಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಫೋಟದ ತೀವ್ರತೆಯ ನಡುವೆಯೂ ರಕ್ಷಣಾ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ಹೊರತರಲು ಯಶಸ್ವಿಯಾಗಿದ್ದಾರೆ. ಸದ್ಯ ಗಣಿಯೊಳಗೆ ಸಿಲುಕಿರುವ ಉಳಿದ ಕಾರ್ಮಿಕರನ್ನು ಬದುಕಿಸಲು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕಟ್ಟುನಿಟ್ಟಿನ ಆದೇಶ: ಘಟನೆಯ ಗಂಭೀರತೆಯನ್ನು ಪರಿಗಣಿಸಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ತುರ್ತು ಆದೇಶ ಹೊರಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡ-ಪೋಕರಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಭದ್ರತೆಗೆ ಧಕ್ಕೆ ತರುವಂತಹ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ನಗರದ ಹೃದಯಭಾಗದಲ್ಲಿ ತಡರಾತ್ರಿ ಉಬರ್ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ಗ್ಯಾಂಗ್‌ ಒಂದು ಭೀಕರವಾಗಿ ಹಲ್ಲೆ (ಡೆಡ್ಲಿ ಅಟ್ಯಾಕ್) ನಡೆಸಿದ್ದು, ಈ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ರಸ್ತೆಯಲ್ಲೇ ಎಳೆದಾಡಿ ಹಿಗ್ಗಾಮುಗ್ಗ ಥಳಿತ ನಿನ್ನೆ ರಾತ್ರಿ ಬೆಂಗಳೂರಿನ ಡಬಲ್ ರೋಡ್‌ (Double Road) ಜಂಕ್ಷನ್‌ನಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಉಬರ್ ಕಾರು ಚಾಲಕ ಎಂದಿನಂತೆ ತನ್ನ ಕರ್ತವ್ಯದಲ್ಲಿದ್ದಾಗ ಮಾರ್ಗಮಧ್ಯೆ ಹೊಂಚು ಹಾಕಿ ಕುಳಿತಿದ್ದ ನಾಲ್ಕೈದು ಜನರಿದ್ದ ಪುಂಡರ ಗ್ಯಾಂಗ್ ಕಾರನ್ನು ತಡೆದಿದೆ. ಅಷ್ಟಕ್ಕೇ ನಿಲ್ಲದ ದುಷ್ಕರ್ಮಿಗಳು, ಕಾರಿನ ಒಳಗಡೆ ಕುಳಿತಿದ್ದ ಚಾಲಕನನ್ನು ಬಲವಂತವಾಗಿ ಹೊರಗೆ ಎಳೆದು ಹಾಕಿ, ಯಾವುದೇ ಕರುಣೆಯಿಲ್ಲದೆ ಹಿಗ್ಗಾಮುಗ್ಗವಾಗಿ ಥಳಿಸಲು ಪ್ರಾರಂಬಿಸಿದ್ದಾರೆ. ಯುವತಿಯನ್ನು ಕೆಳಗಿಳಿಸಿ ದುಷ್ಕೃತ್ಯ ಘಟನೆ ನಡೆದ ಸಮಯದಲ್ಲಿ ಕಾರಿನಲ್ಲಿ ಯುವತಿಯೊಬ್ಬರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲಕನ ಮೇಲೆ ಮುಗಿಬಿದ್ದ ಗ್ಯಾಂಗ್, ಕಾರಿನಲ್ಲಿದ್ದ ಯುವತಿಯನ್ನು ಕೆಳಗೆ…

Read More