Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು ಸದನದಲ್ಲೂ ಕೂಡ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಮತ್ತೆ ಕುರ್ಚಿಯ ವಿಚಾರವಾಗಿ ಜಟಾಪಟಿ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಈಗ ನಾನು ಸಿಎಂ ಆಗಿದ್ದೇನೆ ಮುಂದೇನು ನಾನೇ ಇರುತ್ತೇನೆ ಎಂದು ಮತ್ತೆ ಗುಡುಗಿದ್ದಾರೆ. ಸದನದಲ್ಲಿ ನಾಯಕತ್ವ ವಿಚಾರವಾಗಿ ಚರ್ಚೆ ನಡೆಯುವ ವೇಳೆ ನಾಯಕತ್ವ ಬದಲಾವಣೆ ಇದು ನಮ್ಮ ಪಕ್ಷದ ವಿಚಾರ. ಏನೇ ಇದ್ದರು ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಾನು ಸಿಎಂ ಆಗಿದ್ದೇನೆ ಮುಂದೆಯೂ ನಾನೇ ಇರುತ್ತೇನೆ ಎಂದರು. ಈ ವೇಳೆ ಈಗ ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆ ಮಾಡುತ್ತಿರಲ್ವಾ ಅದನ್ನು ಜಾರಿ ಮಾಡಲು ನೀವೇ ಇರಬೇಕು ಎಂದು ಶಾಸಕ ಸುನೀಲ್ ಕುಮಾರ್ ಹೇಳಿದರು. ಸುನಿಲ್ ಕುಮಾರ್ ಮಾತಿಗೆ ನಾನೇ ಇರುತ್ತೇನೆ ಎಂದು ಸಿಎಂ ಪ್ರತ್ಯುತ್ತರ ನೀಡಿದರು.

Read More

ಮೈಸೂರು : ಮೈಸೂರಲ್ಲಿ ವಿಚಿತ್ರವದ ಘಟನೆಯೊಂದು ನಡೆದಿದ್ದು, ಪತ್ನಿ ಮರ್ಯಾದೆ ಕೊಡ್ಲಿಲ್ಲ ಅಂತ ಕೊಲೆಗೆ ಯತ್ನ ನಡೆದಿರುವ ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಹೆಂಡತಿ ಹತ್ಯೆಗೆ ಪಾಪಿ ಪತಿ ಸುಪಾರಿ ನೀಡಿದ್ದಾನೆ. ಮೈಸೂರಿನ ಬಿಎಂಶ್ರೀ ನಗರದಲ್ಲಿ ಪತಿ ಮಹೇಶ್ ಈ ಒಂದು ಕೃತ್ಯ ಎಸಗಿದ್ದು, ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ಸುಪಾರಿ ಕೊಟ್ಟಿದ್ದಾನೆ. ಭಾಸ್ಕರ್ ಮತ್ತು ಅಭಿಷೇಕಗೆ ಮಹೇಶ್ ಸುಪಾರಿ ನೀಡಿದ್ದಾನೆ. ನಿನ್ನೆ ಮನೆಗೆ ನುಗ್ಗಿದ ಭಾಸ್ಕರ್ ಹಾಗು ಅಭಿಷೇಕ್ ನಾಗರತ್ನ ತಲೆಗೆ ಪಾಪಿಗಳು ಸುತ್ತಿಗೆಯಿಂದ ಹೊಡೆದಿದ್ದಾರೆ. ಮನೆಗೆ ಎಂಟ್ರಿ ಕೊಟ್ಟ ಪಾಪಿಗಳು ಸುತ್ತಿಗೆಯಿಂದ ಹೊಡೆದಿದ್ದಾರೆ. ಬಳಿಕ ಗ್ಯಾಸ್ ಬೈಕ್ ಕತ್ತರಿಸಿ ಬೆಂಕಿ ಇಟ್ಟಿದ್ದಾರೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿ ಅಗ್ನಿ ಅನಾಹುತ ಆಗಿದೆ ಅಂತ ಬಿಂಬಿಸಲು ಯತ್ನಿಸಿದ್ದಾರೆ. ಬಳಿಕ ಇದೀಗ ಗಂಭೀರವಾಗಿ ಗಾಯಕೊಂಡ ನಾಗನೂರು ತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಸುಪಾರಿಕೊಟ್ಟ ಪತಿ ಮಹೇಶ್ ಹಾಗೂ ಆರೋಪಿಗಳಾದ ಭಾಸ್ಕರ್ ಹಾಗೂ ಅಭಿಷೇಕ್ ನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ…

Read More

ಬೆಂಗಳೂರು : ದುಬೈ ನಿಂದ ಸುಮಾರು 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಟಿ ರನ್ಯರಾವ್ ಸೇರಿದಂತೆ ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಅಕ್ರಮ ಬಂಧನವೆಂದು ಬಿಡುಗಡೆ ಕೋರಿ ಮೂವರು ಹೇಬಿಎಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು ಇದೀಗ ಹೈಕೋರ್ಟ್ ಈ ಒಂದು ಅರ್ಜಿಯನ್ನು ವಜಾಗೊಳಿಸಿದೆ. ಹೌದು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯ ರಾವ್ ಗೆ ಸದ್ಯಕ್ಕೆ ರಿಲೀಫ್ ಇಲ್ಲ. ನಟಿ ರನ್ಯಾರಾವ್ ತರುಣ್ ರಾಜ ಹಾಗೂ ಸಾಹಿಲ್ ಜೈನ್ ಅಕ್ರಮ ಬಂಧನವೆಂದು ಬಿಡುಗಡೆ ಕೋರಿ ಹೇಬಿಎಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಮೂರ್ತಿಗಳಾದ ಅನು ಶಿವರಾಮನ್, ವಿಜಯಕುಮಾರ್ ಪಾಟೀಲ್ ಅವರಿದ್ದ ಪೀಠ ಮೂವರು ಆರೋಪಿಗಳ ಅರ್ಜಿಯನ್ನು ವಜಗೊಳಿಸಿ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಅಮಾನವೀಯ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ಅಮಾನವೀಯ ಕೃತ್ಯ ಎಸಗಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಡಿಸೆಂಬರ್ 14ನೇ ತಾರೀಕಿನಂದು ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಈ ವೇಳೆ ಹಿಂದಿನಿಂದ ಬಂದಂತಹ ವ್ಯಕ್ತಿ ಬಾಲಕನಿಗೆ ಕಾಲಿನಿಂದ ಒದ್ದಿದ್ದಾನೆ. ರಂಜಿನ್ ಎನ್ನುವಂತಹ ವ್ಯಕ್ತಿ ಬಾಲಕನಿಗೆ ಓಡಿ ಬಂದು ಓದಿದ್ದಾನೆ. ರಂಜನ್ ಓಡಿಬಂದು ಬಾಲಕನಿಗೆ ಏಕಾಏಕಿ ಒದ್ದಿದ್ದು ಆತ ಹೋಗಿ ಒಂದು ಅಡಿ ದೂರ ಬಿದ್ದಿದ್ದಾನೆ ಬಾಲಕನ ತಾಯಿ ರಂಜನ್ ವಿರುದ್ಧ ದೂರು ದಾಖಲಿಸಿದ್ದಾರೆ. ಬನಶಂಕರಿ ಠಾಣೆ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಇದೇ ವಿಚಾರವಾಗಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಪ್ರತಿಕ್ರಿಯೆ ನೀಡಿದ್ದು ಮಗುವಿನ ಮೇಲೆ ಕ್ರೌರ್ಯ ಎಸಗಿದವನ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಸಂಬಂಧಪಟ್ಟ ಪೊಲೀಸರ ಜೊತೆಗೆ ಈ ಘಟನೆ ಕುರಿತು ಮಾತನಾಡುತ್ತೇನೆ ಈತನ ವಿರುದ್ಧ ಯಾವ ಯಾವ ಕ್ರಮ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಆಟವಾಡುತ್ತಾ ವಿದ್ಯುತ್ ತಂತಿ ತುಳಿದು ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆ ಏಳನೇ ತರಗತಿ ವಿದ್ಯಾರ್ಥಿ ಕೃಷ್ಣಾ ಹೆಗಡೆ (13) ಸಾವನ್ನಪ್ಪಿದ ಬಾಲಕ. ಗುರುವಾರ ಸಂಜೆ ಹಾಸ್ಟೆಲ್​ನಲ್ಲಿರುವ ಕೆಲವು ವಿದ್ಯಾರ್ಥಿಗಳು ಕ್ರಿಕೆಟ್ ಆಟವಾಡುತ್ತಿದ್ದರು. ಮೃತಪಟ್ಟ ವಿದ್ಯಾರ್ಥಿ ಬಾಲ್​ ತರಲು ಹೋದಾಗ ವಿದ್ಯುತ್ ವೈರ್​ ಮೇಲೆ ಕಾಲು ಇಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯುತ್ ವೈರ್​ ಕಟ್ಟಾಗಿ ಬಿದ್ದಿದ್ದನ್ನು ಗಮನಿಸದೆ ಇರುವುದರಿಂದ ಈ ಅವಘಡ ಸಂಭವಿಸಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಳಿಹಾಳ ಗ್ರಾಮದ ಬಾಲಕ ಎರಡು ವರ್ಷಗಳಿಂದ ಹಾಸ್ಟೆಲ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸದಲಗಾ ಠಾಣೆ ಪೊಲೀಸರು​ ಭೇಟಿ ನೀಡಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Read More

ತುಮಕೂರು : ತುಮಕೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ಮೂರು ಕೋಟಿ ಮೌಲ್ಯದ ಜಾಗಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ 25 ವರ್ಷದ ಯುವಕನನ್ನು ತೋಟದಲ್ಲಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದ ಮಧುವನ್ (25) ಕೊಲೆಯಾದ ಯುವಕ. ನಿನ್ನ ತೋಟದಲ್ಲಿ ನಡೆದ ಗಲಾಟೆ ವೇಳೆ ಉದ್ಯಮಿ ಮಹೇಶ್‌ ಹಾಗೂ ಶಫಿವುಲ್ಲಾ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮೆ ಆಗದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಹ ಹೌದು ಎರಡು ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆ ಆಗಿಲ್ಲ ಎಂದು ಸತ್ಯವನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ. ಹೌದು ರಾಜ್ಯದಲ್ಲಿ ನಡೆಯುತ್ತಿದ್ದ ʻಗೃಹಲಕ್ಷ್ಮಿʼ ಜಟಾಪಟಿಗೆ ತಾತ್ಕಾಲಿಕ ತೆರೆ ಬಿದ್ದಂತೆ ಕಾಣ್ತಿದೆ. ಇದೆ ವಿಚಾರವಾಗಿ ಇದೀಗ ರಾಜ್ಯ ಸರ್ಕಾರ ಕೊನೆಗೂ ಒಂದು ಕಂತಿನ ಹಣ ಬಿಡುಗಡೆ ಮಾಡಿದೆ. ಹೊಸವರ್ಷಕ್ಕೂ ಮುನ್ನವೇ ಈ ಹಣ ಮನೆ ಯಜಮಾನಿಯರ ಕೈ ಸೇರಲಿದೆ. 2-3 ತಿಂಗಳಿಗೊಮ್ಮೆ ಮಾತ್ರ ಗೃಹಲಕ್ಷ್ಮಿ ದುಡ್ಡು ಆಕೌಂಟ್ ಬೀಳ್ತಾ ಇತ್ತು. ಫೆಬ್ರವರಿ ಮಾರ್ಚ್ ದುಡ್ಡು ಎಲ್ಲಿ ಹೋಯ್ತು ಗೊತ್ತಿಲ್ಲ.ಆದರೆ ಕೊನೆಗೂ ಸೆಪ್ಟೆಂಬರ್‌ ಕಂತಿನ ಹಣವನ್ನ ಬಿಡುಗೆ ಮಾಡಲಾಗಿದೆ. ಡಿಸೆಂಬರ್‌ 16ರಂದೇ ಆರ್ಥಿಕ ಇಲಾಖೆಯಿಂದ ಸೆಪ್ಟೆಂಬರ್‌ ಕಂತಿನ ಹಣ ಬಿಡುಗಡೆ ಆಗಿದ್ದು, ಹೊಸ ವರ್ಷಕ್ಕೂ ಮುನ್ನವೇ…

Read More

ಮೈಸೂರು : ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಒಂದು ಚಲಿಸುತ್ತಿರುವಾಗಲೇ ಏಕಾಏಕಿ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಆದರೆ ಈ ಒಂದು ಘಟನೆಯಲ್ಲಿ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್​​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ, ಬೆಂಕಿಗೆ ಬಸ್​​ ಆಹುತಿಯಾಗಿದೆ. ಈ ಬಗ್ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ಸದನ ಸಮಿತಿಗೆ ಒಪ್ಪಿಸಲು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ ಮಾಡಿದರು. ಆದರೆ ಸ್ಪೀಕರ್ ಯುಟಿ ಖಾದರ್ ಇದಕ್ಕೆ ಒಪ್ಪಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸಭಾ ತ್ಯಾಗ ಮಾಡಿತು. ಸ್ಪೀಕರ್ ಒನ್ ಸೈಡ್ ಎಂದು ಘೋಷಣೆ ಕೂಗುತ್ತಾ ಪಕ್ಷಗಳು ಸಭಾ ತ್ಯಾಗ ಮಾಡಿದರು. ಇಂದು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು. ಮೊದಲ ದ್ವೇಷ ಭಾಷಣ ತಪ್ಪಿಗೆ 1 ರಿಂದ 7 ವರ್ಷ ಜೈಲು, 50 ಸಾವಿರ ರೂ ದಂಡ. ದ್ವೇಷ ಭಾಷಣ ಪುನರಾವರ್ತನೆಗೆ 2 ವರ್ಷದಿಂದ…

Read More

ಬೀದರ್ : ಬೀದರ್ ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಬಚಾವ್ ಮಾಡಲು ಹೋಗಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ್ ಬಳಿ ನಡೆದಿದೆ. ರಾಷ್ಟಿಯ ಹೆದ್ದಾರಿಯಲ್ಲಿ ವೇಗವಾಗಿ ಕಾರು ಬರುತ್ತಿತ್ತು. ಈ ವೇಳೆ ಏಕಾಏಕಿ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಆಗ ಬೈಕ್ ಸವಾರನ ಬಚಾವ್ ಮಾಡಲು ಹೋಗಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ಒಂದು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸವಕಲ್ಯಾಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More