Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ ಶೇಕಡ 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತ ಆಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಆಗಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿದೆ. ಸಿಎಂ ಡಿಸಿಎಂ ಮತ್ತು ಮಂತ್ರಿಗಳು ಶಾಸಕರ ನಡುವೆ ವಿಶ್ವಾಸವಿಲ್ಲ. ಸದನದಲ್ಲಿ ವಿಶ್ವಾಸ ಮತ ಯಾಚಿಸುತ್ತೇವೆ. NDA ಒಕ್ಕೂಟದಲ್ಲೂ ಈ ಬಗ್ಗೆ ಮಾತುಕತೆ ಮಾಡುತ್ತೇವೆ ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆ ಎಳೆಯುತ್ತೇವೆ. ಕುರ್ಚಿ ಉಳಿಸಿಕೊಳ್ಳಲು ಸ್ವಾಮೀಜಿಗಳಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಗೊಂದಲದ ವಾತಾವರಣವನ್ನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೃಷ್ಟಿ ಮಾಡಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಲಾಗಿದೆ ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚಿಸಲು ಮುಂದಾಗಲ್ಲ ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು…
ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೆ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದಲಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಅಲ್ಲದೆ ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟ್ ಬೀಸಿದರು. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ 2028 ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್…
ಬೆಳಗಾವಿ : ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು ಇದರ ಮಧ್ಯ ಸಿದ್ದರಾಮಯ್ಯ ಹಠ ಬಿಟ್ಟು ಡಿಕೆ ಶಿವಕುಮಾರ್ ಗೆ ಕುರ್ಚಿ ಬಿಟ್ಟು ಕೊಡಲಿ. ಒಂದು ವೇಳೆ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟು ಕೊಡದಿದ್ದರೆ ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಹೇಳಿಕೆ ನೀಡಿದರು.. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇಗುಲ ಹಳ್ಳಿಯಲ್ಲಿರುವ ಮಡಿವಾಳೇಶ್ವರ ಮಠದಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಸಹಕರಿಸಿದ್ದಾರೆ ವಚನ ಭ್ರಷ್ಟರಾಗದೆ ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಇಲ್ಲದಿದ್ದರೆ ಸರ್ಕಾರವೇ ಪತನವಾಗಲಿದೆ ನಾನು ಯಾರ ಪರವಾಗಿಯೂ ಇಲ್ಲ ಯಾರ ವಿರುದ್ಧವೂ ಇಲ್ಲ ಮಾನವೀಯತೆ ದೃಷ್ಟಿಯಿಂದ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಮಠದ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ವಿಚಾರವಾಗಿ ಸ್ವಾಮೀಜಿಗಳ ಮಧ್ಯಪ್ರವೇಶ ಸೂಕ್ತ ಅಲ್ಲ. ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸದಲ್ಲಿ ಇರಬೇಕು ರಾಜಕೀಯದಲ್ಲಿ ಮಧ್ಯಪ್ರವೇಶ ಮಾಡುವುದು ಸೂಕ್ತವಲ್ಲ ಅಂದು ಶಾಸಕ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು. ಹೈಕಮಾಂಡ್ ಕರೆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗುತ್ತಾರೆ. ಯಾವ ಉದ್ದೇಶದಿಂದ ಕರೆದಿದ್ದಾರೆ ಅನ್ನೋದು ಗೊತ್ತಾಗಬೇಕು. ಯಾರ್ಯಾರು ಮಾತು ಕೊಟ್ಟಿದಾರೆ ಅನ್ನೋದು ಗೊತ್ತಿಲ್ಲ. ನಮ್ಮ ತೀರ್ಮಾನ ಅಲ್ಲ ಹೈಕಮಾಂಡ್ ತೀರ್ಮಾನ ಅಂತಿಮ ಅಲ್ವಾ? ಪಕ್ಷದಲ್ಲಿ ನೋಟಿಸ್ ಕೊಡುವುದು ಉತ್ತರ ಕೊಡುವುದು ನಿರಂತರ ಪ್ರಕ್ರಿಯೆ. ಯಾವ್ಯಾವ ಸಂದರ್ಭದಲ್ಲಿ ಏನು ನಡೆಯಬೇಕು ಅದು ನಡೆದೇ ನಡೆಯುತ್ತದೆ. ಕಾಂಗ್ರೆಸ್ ನಲ್ಲಿ ಮಾತ್ರ ಅಲ್ಲ ಎಲ್ಲಾ ಪಕ್ಷಗಳಲ್ಲೂ ಅಹಿಂದ ಇದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ಸಿಎಂ ಕಿತ್ತಾಟದ ಮಧ್ಯ ಮಾಜಿ ಸಂಸದೆ ನಟಿ ರಮ್ಯಾ, ಯಾರನ್ನು ಸಿಎಂ ಮಾಡಿದರು ಓಕೆ ಎಲ್ಲಾ ನಾಯಕರಿಗೂ ಅರ್ಹತೆ ಇದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಇದ್ದಾರೆ ಪಕ್ಷದ ಹಿರಿಯ ನಾಯಕರು ಒಂದು ನಿರ್ಧಾರಕ್ಕೆ ಬರುತ್ತಾರೆ ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಇದು ನಾನು ಹೇಳುವಂಥದ್ದಲ್ಲ ಕಾಂಗ್ರೆಸ್ ಹಿರಿಯ ನಾಯಕರು ಕುರಿತು ಚರ್ಚೆ ಮಾಡುವಂತದ್ದು, ಇದರಲ್ಲಿ ನನ್ನ ಹೇಳಿಕೆ ಏನಿಲ್ಲ ಅವರು ಯಾರನ್ನು ಮಾಡುತ್ತಾರೋ ಅವರು ಸಿಎಂ ಆಗಲಿ, ರಾಜ್ಯದಲ್ಲಿ ಸಿಎಂ ಆಗುವ ಅರ್ಹತೆ ಯಾರಿಗೆ ಇದೆ ಅವರನ್ನು ಮಾಡಲಿ. ಪ್ರತಿಯೊಬ್ಬ ನಾಯಕರಿಗೂ ಸಿ ಆಗುವ ಅರ್ಹತೆ ಇದೆ ಯಾರೇ ಸಿಎಂ ಆದರು ಕೂಡ ಒಳ್ಳೆಯದೇ ಎಂದರು.
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಏನು ನಿಲುವು ತೆಗೆದುಕೊಳ್ಳುತ್ತೆ ಎನ್ನುವುದು ಇದೀಗ ಸದ್ಯಕ್ಕೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್ ಖಾತೆಯ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಪೋಸ್ಟ್ ಮಾಡಿದ್ದರು. ಆದರೆ ಈ ಒಂದು ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಇಲ್ಲಾ ನಾನು ಕೊಟ್ಟ ಮಾತು ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ ನಾನು ಯಾವುದೇ ಹಂಚಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇಲ್ಲ ನಾನು ಟ್ವೀಟ್ ನಲ್ಲಿ ಕೊಟ್ಟ ಮಾತು ವಿಚಾರವಾಗಿ ಯಾವುದೇ ಪೋಸ್ಟ್ ಹಂಚಿಕೊಂಡಿಲ್ಲ ಅದು ಒಂದು ಫೇಕ್ ಪೋಸ್ಟ್ ಎಂದು ಸ್ಪಷ್ಟಪಡಿಸಿದರು. ಟ್ವೀಟ್ ನಲ್ಲೇನಿದೆ? ಕುರ್ಚಿ ಕಿತ್ತಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್ ಮಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು…
ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಕರೆದರೆ ಹೋಗುತ್ತೇನೆ ಅಂತ ಮೂರ್ನಾಲ್ಕು ಬಾರಿ ಪುನರುಚ್ಚಿಸಿದರು. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ಹೈಕಮಾಂಡ್ ಕರೆದರೆ ಸಿದ್ದರಾಮಯ್ಯ ಮತ್ತು ನಾನು ಇಬ್ಬರು ಮಾತನಾಡಿಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಕರೆದರೆ ಸಿಎಂ ಹಾಗೂ ನಾನು ಇಬ್ಬರು ಮಾತನಾಡಿಕೊಂಡು ಹೋಗುತ್ತೇವೆ. ಹೈಕಮಾಂಡ್ ಕರೆ ಮಾಡಿದರೆ ದೆಹಲಿಗೆ ತೆರಳುತ್ತೇವೆ ಎಂದರು. ಇನ್ನು ಇಂದು ಬೆಳಿಗ್ಗೆ ಟ್ವೀಟ್ ನಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದ ದೊಡ್ಡ ಶಕ್ತಿ ಅಂತ ಪೋಸ್ಟ್ ಹಾಕಿರುವ ವಿಚಾರವಾಗಿ ಆ ಪೋಸ್ಟ್ ನಾನು ಹಾಕಿಲ್ಲ ಅದು ಫೇಕ್ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೆ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದಲಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಅಲ್ಲದೆ ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟ್ ಬೀಸಿದರು. ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಲಿದ್ದಾರೆ ಎನ್ನಲಾಗಿದೆ. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಕರೆದು ಮಾತನಾಡಲಿದ್ದಾರೆ ಅಂತ ತಿಳಿಸಿದ ಅವರು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ನಾವು ಒಪ್ಪುತ್ತೇವೆ ಅಂತ ಹೇಳಿದರು. ಇನ್ನೂ ಈ…
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಖುರ್ಚಿ ಹಂಚಿಕೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಮಹತ್ವದ ಸಿಹಿ ಸುದ್ದಿಯನ್ನು ನೀಡಿದ್ದಾರೆ. ರಾಜ್ಯದ ರೈತರಿಗೆ ಪ್ರತಿ ಹೆಕ್ಟರ್ ಗೆ 8,000 ಹೆಚ್ಚುವರಿಯಾಗಿ ಬೆಳೆ ಹಾನಿ ಪರಿಹಾರ ಘೋಷಣೆ ಮಾಡಿದರು. ಇದೆ ವೇಳೆ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ ಹೈಕಮಾಂಡ್ ಏನೆ ತೀರ್ಮಾನ ತೆಗೆದುಕೊಂಡರು ಅದಕ್ಕೆ ಬದ್ಧನಾಗಿದ್ದೇನೆ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದು ತಿಳಿಸಿದರು. ಹೈಮಾಂಡ್ ನಿರ್ಧಾರಕ್ಕೆ ನಾನು ಬದ್ದ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದೆಹಲಿಗೆ ತೆರಳುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಎಲ್ಲವನ್ನು ಹೈಕಮಾಂಡ್ ಸಮ್ಮುಖದಲ್ಲಿ ಚರ್ಚಿಸುತ್ತೇನೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಮಾತಾಡ್ತೀನಿ. ಹೈ ಕಮಾಂಡ್ ಜೊತೆ ಕೂತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುತ್ತೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಇರುತ್ತಾರೆ. 3-4 ಪ್ರಮುಖ ನಾಯಕರನ್ನು ಕರೆಸಿ ಚರ್ಚಿಸುತ್ತೇನೆ. ಎಲ್ಲರ ಸಮ್ಮುಖದಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದರು. ಈ ನಡುವೆ ಇಂದು ಮಲ್ಲಿಕಾರ್ಜುನ…
ಬೆಂಗಳೂರು : ರೈತರಿಗೆ ಹೆಚ್ಚುವರಿ ಯಾಗಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ನೀಡಲಾಗುತ್ತಿದ್ದು, ಪ್ರತಿ ಹೆಗ್ಟಗೆ 8,000 ಬೆಳೆ ಹಾನಿ ಪರಿಹಾರ ನೀಡಲಾಗುತ್ತೆ ಎಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಬೆಳೆ ಹಾನಿ ಪರಿಹಾರ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಂಪುಟದ ತೀರ್ಮಾನದಿಂದ ಪ್ರಾಥಮಿಕ ಸಮೀಕ್ಷೆ ಮಾಡಿದ್ದೆವು. ಎಲ್ಲ ಇಲಾಖೆಗಳ ಸಹಕಾರದಿಂದ ಜಂಟಿ ಸಮೀಕ್ಷೆ ಮಾಡಿದ್ದೇವೆ ಈಗಾಗಲೇ ರೈತರಿಗೆ 1018 ಕೋಟಿ ಸಂದಾಯ ಆಗಿದೆ ಆದರೆ ಹೆಚ್ಚುವರಿ ಪರಿಹಾರಕ್ಕಾಗಿ ರೈತರು ಮತ್ತು ಶಾಸಕರು ಮನವಿ ಮಾಡಿದ್ದರು ಹಾಗಾಗಿ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ನೀಡುತ್ತಿದ್ದೇವೆ ಪ್ರತಿಹಾಕ್ಟರಿಗೆ ಹೆಚ್ಚುವರಿಯಾಗಿ 8,000 ಹಣ ನೀಡುತ್ತಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ 14 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಬೆಳೆ ಪರಿಹಾರ ನೀಡಬೇಕು ಎಂದು ರಾಜ್ಯದ ರೈತರು ಆಗ್ರಹಿಸಿದ್ದರು ನಾನು ಸಹ ಕಲಬುರ್ಗಿ ಬೀದರ್ ಮತ್ತು ಯಾದಗಿರಿಗೆ ಹೋಗಿದ್ದೆ ಮೆಕ್ಕೆಜೋಳ ಕಬ್ಬು ತೊಗರಿ ಬೆಳೆ ಹೆಚ್ಚು ನಷ್ಟ ಆಗಿದೆ ಒಳ್ಳೆಯ ಮಳೆಯಾದರೂ…












